AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arjun Tendulkar: 20 ಲಕ್ಷ ರೂಪಾಯಿಗೆ ಮುಂಬೈ ತಂಡ ಸೇರಿದ ಅರ್ಜುನ್​ ತೆಂಡೂಲ್ಕರ್​!

ಅರ್ಜುನ್​ ತೆಂಡೂಲ್ಕರ್​ ಅವರನ್ನು ಮುಂಬೈ ಇಂಡಿಯನ್ಸ್ ತೆಗೆದುಕೊಳ್ಳುವ ಸಾಧ್ಯತೆಯೂ ಇದೆ ಎಂದು ಹೇಳಲಾಗಿತ್ತು. ಅಂತೆಯೇ, ಅರ್ಜುನ್​ ಹೆಸರು ಬರುತ್ತಿದ್ದಂತೆ ಮುಂಬೈ ಇಂಡಿಯನ್ಸ್​ ಅವರು ಬಿಡ್​ ಮಾಡಿದರು.

Arjun Tendulkar: 20 ಲಕ್ಷ ರೂಪಾಯಿಗೆ ಮುಂಬೈ ತಂಡ ಸೇರಿದ ಅರ್ಜುನ್​ ತೆಂಡೂಲ್ಕರ್​!
ಅರ್ಜುನ್ ತೆಂಡೂಲ್ಕರ್
Follow us
ರಾಜೇಶ್ ದುಗ್ಗುಮನೆ
|

Updated on:Feb 18, 2021 | 8:33 PM

ಸಚಿನ್​ ತೆಂಡೂಲ್ಕರ್​ ಅವರ ಮಗ ಅರ್ಜುನ್​ ತೆಂಡೂಲ್ಕರ್​ ಈ ಬಾರಿಯ ಐಪಿಎಲ್​ 2021 ಹರಾಜು ಪ್ರಕ್ರಿಯೆಗೆ ನೋಂದಣಿ ಮಾಡಿಕೊಂಡಿದ್ದರು. ಹರಾಜಿನಲ್ಲಿ ಅರ್ಜುನ್​ ಅವರನ್ನು ಯಾವ ತಂಡ ತೆಗೆದುಕೊಳ್ಳಲಿದೆ ಎನ್ನುವ ಕುತೂಹಲ ಇತ್ತು. ಎಲ್ಲರೂ ಊಹಿಸಿದಂತೆ ಅರ್ಜುನ್​ ಅವರನ್ನು ಮುಂಬೈ ತಂಡ 20 ಲಕ್ಷ ರೂಪಾಯಿಗೆ ಖರೀದಿ ಮಾಡಿದೆ.

ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಮೂಲಕ ಟಿ20ಗೆ ಅರ್ಜುನ್​ ಕಾಲಿಟ್ಟಿದ್ದರು. ಬೌಲರ್​ ಆಗಿರುವ ಇವರು, ಮುಂಬೈ ಪರ ಆಡಿದ್ದರು. ಹರಿಯಾಣ ವಿರುದ್ಧದ ಪಂದ್ಯದಲ್ಲಿ 34 ರನ್​ ನೀಡಿ ಒಂದು ವಿಕೆಟ್​ ಪಡೆದರೆ, ಪುದುಚೇರಿ ವಿರುದ್ಧ 33 ರನ್​ ನೀಡಿ ಒಂದು ವಿಕೆಟ್​ ಪಡೆದಿದ್ದರು.

ಫೆಬ್ರವರಿ 14 ರಂದು ಮುಂಬೈನಲ್ಲಿ ನಡೆದ 73 ನೇ ಪೊಲೀಸ್ ಆಹ್ವಾನ ಶೀಲ್ಡ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಅರ್ಜುನ್ ತೆಂಡೂಲ್ಕರ್ ಅದ್ಭುತ ಆಟ ಪ್ರದರ್ಶಿಸಿದ್ದರು. ಎ ಗುಂಪಿನ ಎರಡನೇ ಸುತ್ತಿನಲ್ಲಿ 31 ಎಸೆತಗಳಲ್ಲಿ ಅಜೇಯ 77 ರನ್ ಗಳಿಸಿದ ಅವರು ಬೌಲಿಂಗ್​ನಲ್ಲಿ 41 ರನ್‌ಗಳಿಗೆ ಮೂರು ವಿಕೆಟ್ ಪಡೆದಿದ್ದರು.

ಅರ್ಜುನ್​ ತೆಂಡೂಲ್ಕರ್​ ಅವರನ್ನು ಮುಂಬೈ ಇಂಡಿಯನ್ಸ್ ತೆಗೆದುಕೊಳ್ಳುವ ಸಾಧ್ಯತೆಯೂ ಇದೆ ಎಂದು ಹೇಳಲಾಗಿತ್ತು. ಏಕೆಂದರೆ, ಸಚಿನ್​ ತೆಂಡೂಲ್ಕರ್​ ಮುಂಬೈನವರು. ಮುಂಬೈ ಇಂಡಿಯನ್ಸ್​ ಪರವಾಗಿ ಅವರು ಆಡಿದ್ದಾರೆ. ಹೀಗಾಗಿ, ಎಂಐ ಈ ಬಗ್ಗೆ ಆಸಕ್ತಿ ತೋರಿಸುವ ಸಾಧ್ಯತೆ ಇದೆ ಎಂಬುದು ಭಾರೀ ಚರ್ಚೆ ಆಗಿತ್ತು.

ಹರಾಜಿನಲ್ಲಿ ಅರ್ಜುನ್ ಅವರ ಮೂಲ ಬೆಲೆಯನ್ನು 20 ಲಕ್ಷ ರೂಪಾಯಿ ಎಂದು ನಿಗದಿ ಮಾಡಲಾಗಿತ್ತು. ಅರ್ಜುನ್​ ಹೆಸರು ಬರುತ್ತಿದ್ದಂತೆ ಮುಂಬೈ ಇಂಡಿಯನ್ಸ್​ ಅವರು ಬಿಡ್​ ಮಾಡಿದರು. ಉಳಿದ ಯಾವ ತಂಡದವರೂ ಬಿಡ್​ ಮಾಡದ ಕಾರಣ ಅರ್ಜುನ್​ ಮುಂಬೈ ಪಾಲಾದರು.

ಇದನ್ನೂ ಓದಿ: ಟ್ವಿಟರ್​ನಲ್ಲಿ ಅರ್ಜುನ್ ತೆಂಡೂಲ್ಕರ್ ಟ್ರೆಂಡಿಂಗ್ 

Published On - 8:23 pm, Thu, 18 February 21

ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ