AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021 Suspended: ಐಪಿಎಲ್​​ 2021 ಸ್ಥಗಿತ; ಈ ಬಾರಿ ಯಾರಿಗೂ ಕಪ್​ ಇಲ್ಲ!

IPL 2021: ಒಬ್ಬರಾದ ಮೇಲೊಬ್ಬರು ಆಟಗಾರರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಳ್ಳುತ್ತಿರುವ ಕಾರಣ ಬಿಸಿಸಿಐ ಈ ನಿರ್ಧಾರಕ್ಕೆ ಬಂದಿದ್ದು, ಈ ಬಾರಿಯ ಸರಣಿ ಅರ್ಧಕ್ಕೆ ಮೊಟಕುಗೊಂಡಂತಾಗಿದೆ.

IPL 2021 Suspended: ಐಪಿಎಲ್​​ 2021 ಸ್ಥಗಿತ; ಈ ಬಾರಿ ಯಾರಿಗೂ ಕಪ್​ ಇಲ್ಲ!
ಈ ಬಾರಿ ಕಪ್​ ಯಾರಿಗೂ ಇಲ್ಲ.. ಕೊರೊನಾ ಕಾರಣದಿಂದ ಐಪಿಎಲ್​ ಸ್ಥಗಿತ
Skanda
|

Updated on:May 04, 2021 | 1:44 PM

Share

ಐಪಿಎಲ್​ 2021 ಸರಣಿ ಕೊರೊನಾ ಕಾರಣದಿಂದ ಸ್ಥಗಿತಗೊಂಡಿದೆ. ಒಬ್ಬರಾದ ಮೇಲೊಬ್ಬರು ಆಟಗಾರರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಳ್ಳುತ್ತಿರುವ ಕಾರಣ ಬಿಸಿಸಿಐ ಈ ನಿರ್ಧಾರಕ್ಕೆ ಬಂದಿದ್ದು, ಈ ಬಾರಿಯ ಸರಣಿ ಅರ್ಧಕ್ಕೆ ಮೊಟಕುಗೊಂಡಂತಾಗಿದೆ. ಈ ಬಗ್ಗೆ ಅಧಿಕೃತ ಮಾಹಿತಿ ನೀಡಿರುವ ಬಿಸಿಸಿಐ, ಕೊರೊನಾ ಉಲ್ಬಣಿಸುತ್ತಿರುವ ಕಾರಣದಿಂದ ಸರಣಿಯನ್ನು ನಿಲ್ಲಿಸುವ ತೀರ್ಮಾನಕ್ಕೆ ಬಂದಿರುವುದಾಗಿ ಹೇಳಿದೆ. ನಿನ್ನೆ (ಮಾರ್ಚ್​ 3) ಆರ್​ಸಿಬಿ ಹಾಗೂ ಕೋಲ್ಕತ್ತಾ ನೈಟ್​ ರೈಡರ್ಸ್​ ಪಂದ್ಯ ಆರಂಭವಾಗಬೇಕಿದ್ದ ಕೆಲ ಸಮಯದ ಮುಂಚಿತವಾಗಿ ಕೆಕೆಆರ್​ ತಂಡದ ವರುಣ್​ ಚಕ್ರವರ್ತಿಗೆ ಹಾಗೂ ಸಂದೀಪ್ ವಾರಿಯರ್​ಗೆ ಕೊರೊನಾ ಪಾಸಿಟಿವ್​ ದೃಢಪಟ್ಟಿರುವುದು ವರದಿಯಾಗಿತ್ತು. ಈ ಕಾರಣದಿಂದಾಗಿ ನಿನ್ನೆಯ ಪಂದ್ಯವನ್ನೂ ಮುಂದೂಡಲಾಗಿತ್ತು.

ಆದರೆ, ಅವರಿಬ್ಬರಿಗೆ ಕೊರೊನಾ ಕಾಣಿಸಿಕೊಂಡ ಬೆನ್ನಲ್ಲೇ ಇಂದು (ಮಾರ್ಚ್​ 4) ಡೆಲ್ಲಿ ಕ್ಯಾಪಿಟಲ್ಸ್​ ತಂಡದ ಅಮಿತ್​ ಮಿಶ್ರಾ ಹಾಗೂ ಸನ್​ರೈಸರ್ಸ್​ ತಂಡದ ವೃದ್ಧಿಮಾನ್​ ಸಹಾಗೆ ಸೋಂಕು ತಗುಲಿರುವುದು ಖಚಿತವಾಗಿದೆ. ಜತೆಗೆ, ಚೆನ್ನೈ ಸೂಪರ್​ ಕಿಂಗ್ಸ್​ ತಂಡದ ಬೌಲಿಂಗ್​ ಕೋಚ್ ಎಲ್​.ಬಾಲಾಜಿ ಹಾಗೂ ಬಸ್​ ಕ್ಲೀನರ್​ಗೂ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ.

ಕಳೆದ ಬಾರಿ ಕೊರೊನಾ ಆತಂಕದ ನಡುವೆಯೂ ಯುಎಈನಲ್ಲಿ ಸರಣಿ ಆಯೋಜಿಸಲಾಗಿದ್ದು, ಯಶಸ್ವಿಯಾಗಿ ಪೂರ್ಣಗೊಂಡಿತ್ತು. ಆದರೆ, ಈ ಬಾರಿ ಹೊರದೇಶಗಳಲ್ಲಿ ಆಯೋಜನೆ ಮಾಡಲು ನಿರಾಕರಿಸಿ ಬಯೋ ಬಬ್ಬಲ್​ ಮೂಲಕ ಸುರಕ್ಷಿತವಾಗಿ ಭಾರತದಲ್ಲೇ ಸರಣಿ ಆಯೋಜಿಸಲು ಬಿಸಿಸಿಐ ನಿರ್ಧರಿಸಿತ್ತು. ಅದಕ್ಕಾಗಿ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನೂ ತೆಗೆದುಕೊಂಡು ಪಂದ್ಯಗಳನ್ನು ಆಯೋಜಿಸಿತ್ತು. ಆದರೆ, ಇದೀಗ ಒಬ್ಬೊಬ್ಬರೇ ಆಟಗಾರರಿಗೆ ಸೋಂಕು ಕಾಣಿಸಿಕೊಳ್ಳಲಾರಂಭಿಸಿದ ಕಾರಣ ಬಿಸಿಸಿಐ ಸರಣಿಯನ್ನೇ ಸ್ಥಗಿತಗೊಳಿಸಿದೆ.

ಇದನ್ನೂ ಓದಿ: ಬಿಸಿಸಿಐ ಮಾನ ಆಸ್ಟ್ರೇಲಿಯಾದಲ್ಲಿ ಹರಾಜು! ಆಸಿಸ್​ ಆಟಗಾರನಿಂದ ಹೊರಬಿತ್ತು ಐಪಿಎಲ್​ನಲ್ಲಿ ಕೊರೊನಾ ಸ್ಫೋಟ ವಿಚಾರ 

ಭಾರತೀಯರಿಗಾಗಿ ಮಿಡಿದ ಕ್ರಿಕೆಟಿಗರ ಹೃದಯ! ಈ ಐಪಿಎಲ್​ನಲ್ಲಿ ನನ್ನ ಆಟಕ್ಕೆ ಸಿಗುವ ಅಷ್ಟೂ ಹಣವನ್ನು ಆಮ್ಲಜನಕ ಪೂರೈಕೆಗೆ ನೀಡುತ್ತಿದ್ದೇನೆ; ಧವನ್

Published On - 1:07 pm, Tue, 4 May 21

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು