AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021 Suspended: ಐಪಿಎಲ್​​ 2021 ಸ್ಥಗಿತ; ಈ ಬಾರಿ ಯಾರಿಗೂ ಕಪ್​ ಇಲ್ಲ!

IPL 2021: ಒಬ್ಬರಾದ ಮೇಲೊಬ್ಬರು ಆಟಗಾರರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಳ್ಳುತ್ತಿರುವ ಕಾರಣ ಬಿಸಿಸಿಐ ಈ ನಿರ್ಧಾರಕ್ಕೆ ಬಂದಿದ್ದು, ಈ ಬಾರಿಯ ಸರಣಿ ಅರ್ಧಕ್ಕೆ ಮೊಟಕುಗೊಂಡಂತಾಗಿದೆ.

IPL 2021 Suspended: ಐಪಿಎಲ್​​ 2021 ಸ್ಥಗಿತ; ಈ ಬಾರಿ ಯಾರಿಗೂ ಕಪ್​ ಇಲ್ಲ!
ಈ ಬಾರಿ ಕಪ್​ ಯಾರಿಗೂ ಇಲ್ಲ.. ಕೊರೊನಾ ಕಾರಣದಿಂದ ಐಪಿಎಲ್​ ಸ್ಥಗಿತ
Skanda
|

Updated on:May 04, 2021 | 1:44 PM

Share

ಐಪಿಎಲ್​ 2021 ಸರಣಿ ಕೊರೊನಾ ಕಾರಣದಿಂದ ಸ್ಥಗಿತಗೊಂಡಿದೆ. ಒಬ್ಬರಾದ ಮೇಲೊಬ್ಬರು ಆಟಗಾರರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಳ್ಳುತ್ತಿರುವ ಕಾರಣ ಬಿಸಿಸಿಐ ಈ ನಿರ್ಧಾರಕ್ಕೆ ಬಂದಿದ್ದು, ಈ ಬಾರಿಯ ಸರಣಿ ಅರ್ಧಕ್ಕೆ ಮೊಟಕುಗೊಂಡಂತಾಗಿದೆ. ಈ ಬಗ್ಗೆ ಅಧಿಕೃತ ಮಾಹಿತಿ ನೀಡಿರುವ ಬಿಸಿಸಿಐ, ಕೊರೊನಾ ಉಲ್ಬಣಿಸುತ್ತಿರುವ ಕಾರಣದಿಂದ ಸರಣಿಯನ್ನು ನಿಲ್ಲಿಸುವ ತೀರ್ಮಾನಕ್ಕೆ ಬಂದಿರುವುದಾಗಿ ಹೇಳಿದೆ. ನಿನ್ನೆ (ಮಾರ್ಚ್​ 3) ಆರ್​ಸಿಬಿ ಹಾಗೂ ಕೋಲ್ಕತ್ತಾ ನೈಟ್​ ರೈಡರ್ಸ್​ ಪಂದ್ಯ ಆರಂಭವಾಗಬೇಕಿದ್ದ ಕೆಲ ಸಮಯದ ಮುಂಚಿತವಾಗಿ ಕೆಕೆಆರ್​ ತಂಡದ ವರುಣ್​ ಚಕ್ರವರ್ತಿಗೆ ಹಾಗೂ ಸಂದೀಪ್ ವಾರಿಯರ್​ಗೆ ಕೊರೊನಾ ಪಾಸಿಟಿವ್​ ದೃಢಪಟ್ಟಿರುವುದು ವರದಿಯಾಗಿತ್ತು. ಈ ಕಾರಣದಿಂದಾಗಿ ನಿನ್ನೆಯ ಪಂದ್ಯವನ್ನೂ ಮುಂದೂಡಲಾಗಿತ್ತು.

ಆದರೆ, ಅವರಿಬ್ಬರಿಗೆ ಕೊರೊನಾ ಕಾಣಿಸಿಕೊಂಡ ಬೆನ್ನಲ್ಲೇ ಇಂದು (ಮಾರ್ಚ್​ 4) ಡೆಲ್ಲಿ ಕ್ಯಾಪಿಟಲ್ಸ್​ ತಂಡದ ಅಮಿತ್​ ಮಿಶ್ರಾ ಹಾಗೂ ಸನ್​ರೈಸರ್ಸ್​ ತಂಡದ ವೃದ್ಧಿಮಾನ್​ ಸಹಾಗೆ ಸೋಂಕು ತಗುಲಿರುವುದು ಖಚಿತವಾಗಿದೆ. ಜತೆಗೆ, ಚೆನ್ನೈ ಸೂಪರ್​ ಕಿಂಗ್ಸ್​ ತಂಡದ ಬೌಲಿಂಗ್​ ಕೋಚ್ ಎಲ್​.ಬಾಲಾಜಿ ಹಾಗೂ ಬಸ್​ ಕ್ಲೀನರ್​ಗೂ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ.

ಕಳೆದ ಬಾರಿ ಕೊರೊನಾ ಆತಂಕದ ನಡುವೆಯೂ ಯುಎಈನಲ್ಲಿ ಸರಣಿ ಆಯೋಜಿಸಲಾಗಿದ್ದು, ಯಶಸ್ವಿಯಾಗಿ ಪೂರ್ಣಗೊಂಡಿತ್ತು. ಆದರೆ, ಈ ಬಾರಿ ಹೊರದೇಶಗಳಲ್ಲಿ ಆಯೋಜನೆ ಮಾಡಲು ನಿರಾಕರಿಸಿ ಬಯೋ ಬಬ್ಬಲ್​ ಮೂಲಕ ಸುರಕ್ಷಿತವಾಗಿ ಭಾರತದಲ್ಲೇ ಸರಣಿ ಆಯೋಜಿಸಲು ಬಿಸಿಸಿಐ ನಿರ್ಧರಿಸಿತ್ತು. ಅದಕ್ಕಾಗಿ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನೂ ತೆಗೆದುಕೊಂಡು ಪಂದ್ಯಗಳನ್ನು ಆಯೋಜಿಸಿತ್ತು. ಆದರೆ, ಇದೀಗ ಒಬ್ಬೊಬ್ಬರೇ ಆಟಗಾರರಿಗೆ ಸೋಂಕು ಕಾಣಿಸಿಕೊಳ್ಳಲಾರಂಭಿಸಿದ ಕಾರಣ ಬಿಸಿಸಿಐ ಸರಣಿಯನ್ನೇ ಸ್ಥಗಿತಗೊಳಿಸಿದೆ.

ಇದನ್ನೂ ಓದಿ: ಬಿಸಿಸಿಐ ಮಾನ ಆಸ್ಟ್ರೇಲಿಯಾದಲ್ಲಿ ಹರಾಜು! ಆಸಿಸ್​ ಆಟಗಾರನಿಂದ ಹೊರಬಿತ್ತು ಐಪಿಎಲ್​ನಲ್ಲಿ ಕೊರೊನಾ ಸ್ಫೋಟ ವಿಚಾರ 

ಭಾರತೀಯರಿಗಾಗಿ ಮಿಡಿದ ಕ್ರಿಕೆಟಿಗರ ಹೃದಯ! ಈ ಐಪಿಎಲ್​ನಲ್ಲಿ ನನ್ನ ಆಟಕ್ಕೆ ಸಿಗುವ ಅಷ್ಟೂ ಹಣವನ್ನು ಆಮ್ಲಜನಕ ಪೂರೈಕೆಗೆ ನೀಡುತ್ತಿದ್ದೇನೆ; ಧವನ್

Published On - 1:07 pm, Tue, 4 May 21

Follow Us
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ
ಕಾರು ಓಡಿಸುವಾಗ ವ್ಯಕ್ತಿಗೆ ಹೃದಯಾಘಾತ, ಸಿಪಿಆರ್ ನೀಡಿ ಜೀವ ಉಳಿಸಿದ ಪೊಲೀಸ್
ಕಾರು ಓಡಿಸುವಾಗ ವ್ಯಕ್ತಿಗೆ ಹೃದಯಾಘಾತ, ಸಿಪಿಆರ್ ನೀಡಿ ಜೀವ ಉಳಿಸಿದ ಪೊಲೀಸ್
ನಿಮ್ಮ 10 ಕೋಟಿ ರೂ. ಎಲ್ಲಿ ಸಾಕಾಗುತ್ತದೆ
ನಿಮ್ಮ 10 ಕೋಟಿ ರೂ. ಎಲ್ಲಿ ಸಾಕಾಗುತ್ತದೆ