ಕೊರೊನಾ ಹೆಮ್ಮಾರಿಗೆ ಐಪಿಎಲ್‌ 2021 ಬಲಿ, ಈ ವರ್ಷದ ಟೂರ್ನಿ ಮಧ್ಯದಲ್ಲಿಯೇ ರದ್ದು
ಕೊರೊನಾ ಹೆಮ್ಮಾರಿಗೆ ಐಪಿಎಲ್‌ 2021 ಬಲಿ, ಈ ವರ್ಷದ ಟೂರ್ನಿ ಮಧ್ಯದಲ್ಲಿಯೇ ರದ್ದು

ಕೊರೊನಾ ಹೆಮ್ಮಾರಿಗೆ ಐಪಿಎಲ್‌ 2021 ಬಲಿ, ಈ ವರ್ಷದ ಟೂರ್ನಿ ಮಧ್ಯದಲ್ಲಿಯೇ ರದ್ದು

ಸಾಧು ಶ್ರೀನಾಥ್​

Updated on: May 04, 2021 | 5:04 PM

ಐಪಿಎಲ್​ 2021 ಸರಣಿ ಕೊರೊನಾ ಕಾರಣದಿಂದ ಸ್ಥಗಿತಗೊಂಡಿದೆ. ಒಬ್ಬರಾದ ಮೇಲೊಬ್ಬರು ಆಟಗಾರರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಳ್ಳುತ್ತಿರುವ ಕಾರಣ ಬಿಸಿಸಿಐ ಈ ನಿರ್ಧಾರಕ್ಕೆ ಬಂದಿದ್ದು, ಈ ಬಾರಿಯ ಸರಣಿ ಅರ್ಧಕ್ಕೆ ಮೊಟಕುಗೊಂಡಂತಾಗಿದೆ.

ಐಪಿಎಲ್​ 2021 ಸರಣಿ ಕೊರೊನಾ ಕಾರಣದಿಂದ ಸ್ಥಗಿತಗೊಂಡಿದೆ. ಒಬ್ಬರಾದ ಮೇಲೊಬ್ಬರು ಆಟಗಾರರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಳ್ಳುತ್ತಿರುವ ಕಾರಣ ಬಿಸಿಸಿಐ ಈ ನಿರ್ಧಾರಕ್ಕೆ ಬಂದಿದ್ದು, ಈ ಬಾರಿಯ ಸರಣಿ ಅರ್ಧಕ್ಕೆ ಮೊಟಕುಗೊಂಡಂತಾಗಿದೆ. ಈ ಬಗ್ಗೆ ಅಧಿಕೃತ ಮಾಹಿತಿ ನೀಡಿರುವ ಬಿಸಿಸಿಐ, ಕೊರೊನಾ ಉಲ್ಬಣಿಸುತ್ತಿರುವ ಕಾರಣದಿಂದ ಸರಣಿಯನ್ನು ನಿಲ್ಲಿಸುವ ತೀರ್ಮಾನಕ್ಕೆ ಬಂದಿರುವುದಾಗಿ ಹೇಳಿದೆ. ನಿನ್ನೆ (ಮಾರ್ಚ್​ 3) ಆರ್​ಸಿಬಿ ಹಾಗೂ ಕೋಲ್ಕತ್ತಾ ನೈಟ್​ ರೈಡರ್ಸ್​ ಪಂದ್ಯ ಆರಂಭವಾಗಬೇಕಿದ್ದ ಕೆಲ ಸಮಯದ ಮುಂಚಿತವಾಗಿ ಕೆಕೆಆರ್​ ತಂಡದ ವರುಣ್​ ಚಕ್ರವರ್ತಿಗೆ ಹಾಗೂ ಸಂದೀಪ್ ವಾರಿಯರ್​ಗೆ ಕೊರೊನಾ ಪಾಸಿಟಿವ್​ ದೃಢಪಟ್ಟಿರುವುದು ವರದಿಯಾಗಿತ್ತು. ಈ ಕಾರಣದಿಂದಾಗಿ ನಿನ್ನೆಯ ಪಂದ್ಯವನ್ನೂ ಮುಂದೂಡಲಾಗಿತ್ತು.

(Ipl 2021 Corona Stumps Ipl 2021 As Bcci Forced To Suspend For This Season Due To Pandemic)

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು