AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್ಸಿಬಿ ತಂಡದಿಂದ ಕೊರೊನಾ ಜಾಗೃತಿ ವಿಡಿಯೋ; ಇಂತಹ ಮೌಲ್ಯಗಳಿಂದಲೇ ಕೋಟ್ಯಾಂತರ ಅಭಿಮಾನಿಗಳ ಹೃದಯ ಗೆದ್ದಿರುವುದು

IPL 2021: ಸಾರ್ವಜನಿಕರಲ್ಲಿ ಎಚ್ಚರಿಕೆಯಿಂದ ಇರುವಂತೆ ಮನವಿ ಮಾಡಿಕೊಂಡಿದ್ದಾರೆ. ಜೊತೆಗೆ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಅವಶ್ಯಕತೆ ಇದ್ದಲ್ಲಿ ಮಾತ್ರ ಮನೆಯಿಂದ ಆಚೆ ಹೋಗಿ, ಮರೆಯದೆ ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಆರ್ಸಿಬಿ ತಂಡದಿಂದ ಕೊರೊನಾ ಜಾಗೃತಿ ವಿಡಿಯೋ; ಇಂತಹ ಮೌಲ್ಯಗಳಿಂದಲೇ ಕೋಟ್ಯಾಂತರ ಅಭಿಮಾನಿಗಳ ಹೃದಯ ಗೆದ್ದಿರುವುದು
ಲೆಗ್ ಸ್ಪಿನ್ನರ್ ವನಿಂದು ಹಸರಂಗ ಕಳೆದ ತಿಂಗಳು ಶ್ರೀಲಂಕಾದಲ್ಲಿ ನಡೆದ ಭಾರತ ವಿರುದ್ಧದ ನಿಗದಿತ ಓವರ್​ಗಳಲ್ಲಿ ಸರಣಿಯಲ್ಲಿ ಉತ್ತಮ ನಿರ್ವಹಣೆ ತೋರಿದ್ದರು. ಮೂರು ಟಿ-20 ಪಂದ್ಯಗಳಿಂದ 7 ವಿಕೆಟ್ ಕಬಳಿಸಿದ್ದರು. ಆರ್​ಸಿಬಿಗೆ ಹೆಚ್ಚುವರಿ ಲೆಗ್ ಸ್ಪಿನ್ನರ್ ಅವಶ್ಯತೆ ಇದ್ದ ಹಿನ್ನೆಲೆಯಲ್ಲಿ ಹಸರಂಗಗೆ ಮಣೆಹಾಕಿದೆ.
ಪೃಥ್ವಿಶಂಕರ
|

Updated on: Apr 25, 2021 | 3:59 PM

Share

ಆರ್ಸಿಬಿ.. ಕೋಟ್ಯಾಂತರ ಕ್ರಿಕೆಟ್​ ಅಭಿಮಾನಿಗಳ ಹೃದಯ ಬಡಿತವಾಗಿರುವ ಈ ತಂಡ ತನ್ನ ಆಟದ ಜೊತೆಗೆ ಸಾಮಾಜಿಕ ಕಳಕಳಿಯನ್ನು ಹೊಂದಿದೆ. ಪ್ರತಿ ವರ್ಷವೂ ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ತಾವು ಆಡುವ ಒಂದು ಪಂದ್ಯದಲ್ಲಿ ಹಸಿರು ಜರ್ಸಿಯನ್ನು ತೊಟ್ಟು ಮೈದಾನಕ್ಕಿಳಿಯುತ್ತದೆ. ಈ ಮೂಲಕ ಸಾರ್ವಜನಿಕರಿಗೆ ಪರಿಸರದ ಬಗ್ಗೆ ಅರಿವು ಮೂಡಿಸುವುದೇ ಆರ್ಸಿಬಿಯ ಪರಮ ಗುರಿಯಾಗಿದೆ. ಪ್ರತಿ ವರ್ಷವೂ ಈ ಪದ್ದತಿಯನ್ನು ಆಚರಿಸುತ್ತಾ ಬಂದಿರುವ ಕೊಹ್ಲಿ ಬಳಗ, ಈ ವರ್ಷ ದೇಶದಲ್ಲಿ ಸಾರ್ವಜನಿಕರನ್ನು ಇನ್ನಿಲ್ಲದಂತೆ ಕಾಡಿರುವ ಕೊರೊನಾದ ಬಗ್ಗೆ ಅರಿವನ್ನು ಮೂಡಿಸುವ ವಿಡಿಯೋ ಒಂದನ್ನು ಬಿಡುಗಡೆ ಮಾಡಿದೆ.

ಸಾರ್ವಜನಿಕರಲ್ಲಿ ಎಚ್ಚರಿಕೆಯಿಂದ ಇರುವಂತೆ ಮನವಿ ಆರ್ಸಿಬಿ ಬಿಡುಗಡೆಗೊಳಿಸಿರುವ ಈ ವಿಡಿಯೋದಲ್ಲಿ ತಂಡದ ನಾಯಕ ವಿರಾಟ್​ ಕೊಹ್ಲಿ, ಆರ್ಸಿಬಿ ಆಪತ್ಭಾಂದವ ಎಬಿ ಡಿವಿಲಿಯರ್ಸ್​, ಗ್ಲೇನ್ ಮ್ಯಾಕ್ಸ್​ವೆಲ್, ತಂಡದ ಕೋಚ್, ಕನ್ನಡಿಗ ದೇವದತ್ತ್ ಪಡಿಕಲ್, ಯುಜ್ವೇಂದ್ರ ಚಹಲ್, ಕೊರೊನಾ ಸಾಂಕ್ರಮಿಕ ರೋಗದ ಬಗೆಗೆ ಅರಿವು ಮೂಡಿಸುವ ಮಾತುಗಳನ್ನು ಆಡಿದ್ದಾರೆ. ವಿಡಿಯೋ ಆರಂಭದಲ್ಲಿ ಮಾತಾನಾಡಿರುವ ಕೊಹ್ಲಿ, ಸಾರ್ವಜನಿಕರಲ್ಲಿ ಎಚ್ಚರಿಕೆಯಿಂದ ಇರುವಂತೆ ಮನವಿ ಮಾಡಿಕೊಂಡಿದ್ದಾರೆ. ಜೊತೆಗೆ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಅವಶ್ಯಕತೆ ಇದ್ದಲ್ಲಿ ಮಾತ್ರ ಮನೆಯಿಂದ ಆಚೆ ಹೋಗಿ, ಮರೆಯದೆ ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದು ಮನವಿ ಮಾಡಿಕೊಂಡಿದ್ದಾರೆ.

ನೀವು ಸಹ ವದಂತಿಗಳನ್ನು ಹರಡಬೇಡಿ ಕೊಹ್ಲಿ ನಂತರ ಬರುವ ಉಳಿದ ಆಟಗಾರರೂ ಕೂಡ ಇದೇ ಮಾದರಿಯನ್ನು ಅನುಸರಿಸಿದ್ದಾರೆ. ನಂತರ ವಿಡಿಯೋ ಕೊನೆಗೆ ಮತ್ತೊಮ್ಮೆ ಮನವಿ ಮಾಡಿರುವ ಕೊಹ್ಲಿ, ಯಾವುದೇ ಕಾರಣಕ್ಕೂ ವದಂತಿಗಳಿಗೆ ಕಿವಿಕೊಡಬೇಡಿ, ಜೊತೆಗೆ ನೀವು ಸಹ ವದಂತಿಗಳನ್ನು ಹರಡಬೇಡಿ ಎಂದಿದ್ದಾರೆ. ನಾವೆಲ್ಲರೂ ಸೇರಿ ಕೊರೊನಾದ ವಿರುದ್ಧ ಹೋರಾಡುವ ಎಂದಿದ್ದಾರೆ.

ಸತತ ನಾಲ್ಕು ಪಂದ್ಯಗಳಲ್ಲೂ ಕೊಹ್ಲಿ ಪಡೆ ಗೆಲುವಿನ ಕೇಕೆ ಈ ಐಪಿಎಲ್ ಸೀಸನ್ನಲ್ಲಿ ಆರ್ಸಿಬಿ ಗೆಲುವಿನ ಓಟ ಭರ್ಜರಿಯಾಗಿ ಮುಂದುವರಿದಿದೆ. ಸತತ ನಾಲ್ಕು ಪಂದ್ಯಗಳಲ್ಲೂ ಕೊಹ್ಲಿ ಪಡೆ ಗೆಲುವಿನ ಕೇಕೆ ಹಾಕಿದೆ. ಐಪಿಎಲ್ ಇತಿಹಾಸದಲ್ಲಿ ಇದೆ ಮೊದಲ ಬಾರಿಗೆ, ಸೋಲಿಲ್ಲದ ಸರದಾರರಂತೆ ಮುನ್ನುಗ್ಗುತ್ತಿರುವ ಕೊಹ್ಲಿ ಹುಡುಗ್ರು, ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಮೊದಲ ಪಂದ್ಯದಲ್ಲೇ ಬಲಿಷ್ಟ ಮುಂಬೈ ಮಣಿಸಿದ ಆರ್ಸಿಬಿ, ನಂತರ ಹೈದರಾಬಾದ್, ಕೊಲ್ಕತ್ತಾ ಮತ್ತು ರಾಜಸ್ಥಾನ್ವನ್ನ ಮಣಿಸಿದೆ. ಇಂದು ವಾಂಖೆಡೆ ಮೈದಾನದಲ್ಲಿ ರಾಯಲ್ ಆಟಗಾರರು, ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಮುಖಾಮುಖಿಯಾಗ್ತಿದ್ದಾರೆ.

ಉಭಯ ತಂಡಗಳ ಪ್ಲೆಯಿಂಗ್ 11 ಸಿಎಸ್‌ಕೆ: ರಿತುರಾಜ್ ಗೈಕ್ವಾಡ್, ಫಾಫ್ ಡು ಪ್ಲೆಸಿ, ಡ್ವೇನ್ ಬ್ರಾವೋ, ಸುರೇಶ್ ರೈನಾ, ಅಂಬಾಟಿ ರಾಯುಡು, ರವೀಂದ್ರ ಜಡೇಜಾ, ಎಂಎಸ್ ಧೋನಿ, ಸ್ಯಾಮ್ ಕರಣ್, ಇಮ್ರಾನ್ ತಾಹಿರ್, ಶಾರ್ದುಲ್ ಠಾಕೂರ್, ದೀಪಕ್ ಚಹರ್

ಆರ್‌ಸಿಬಿ: ವಿರಾಟ್ ಕೊಹ್ಲಿ, ದೇವದತ್ತ ಪಡಿಕ್ಕಲ್, ನವದೀಪ್ ಸೈನಿ, ಗ್ಲೆನ್ ಮ್ಯಾಕ್ಸ್‌ವೆಲ್, ಎಬಿ ಡಿವಿಲಿಯರ್ಸ್, ಡಾನ್ ಕ್ರಿಶ್ಚಿಯನ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಹಲ್, ಮೊಹಮ್ಮದ್ ಸಿರಾಜ್, ಕೈಲ್ ಜಾಮಿಸನ್, ಹರ್ಷಲ್ ಪಟೇಲ್.

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ