AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಧೋನಿ ಅಭಿಮಾನಿಗಳಿಗೆ ಗುಡ್ ನ್ಯೂಸ್: ಇನ್ನೆರೆಡು ವರ್ಷ ಚೆನ್ನೈ ತಂಡವನ್ನ ಮುನ್ನಡೆಸಲಿದ್ದಾರೆ ಮಹೇಂದ್ರ!

IPL 2021: ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅಭಿಮಾನಿಗಳಿಗೆ ಫ್ರಾಂಚೈಸಿ ಶುಭಸುದ್ದಿಯನ್ನ ನೀಡಿದೆ. ಅದೇ, ಧೋನಿ ಇನ್ನೆರೆಡು ವರ್ಷ ಐಪಿಎಲ್ನಲ್ಲಿ ಆಡಲಿದ್ದಾರೆ ಅನ್ನೋದು.

IPL 2021: ಧೋನಿ ಅಭಿಮಾನಿಗಳಿಗೆ ಗುಡ್ ನ್ಯೂಸ್: ಇನ್ನೆರೆಡು ವರ್ಷ ಚೆನ್ನೈ ತಂಡವನ್ನ ಮುನ್ನಡೆಸಲಿದ್ದಾರೆ ಮಹೇಂದ್ರ!
CSK
TV9 Web
| Edited By: |

Updated on: Jul 09, 2021 | 6:26 PM

Share

ಚೆನ್ನೈ ಸೂಪರ್ ಕಿಂಗ್ಸ್ ಅಂದ್ರೆ ಧೋನಿ.. ಧೋನಿ ಅಂದ್ರೆ ಯಲ್ಲೋ ಜೆರ್ಸಿ.. ಹೀಗಾಗಿಯೇ ಧೋನಿಯನ್ನ ಚೆನ್ನೈ ಫ್ಯಾನ್ಸ್ ಪ್ರೀತಿಯಿಂದ ತಲೈವಾ ಅಂತ ಕರೀತಾರೆ. ಆದ್ರೆ, ಧೋನಿ ಪಾಲಿಗೆ ಇದೇ ಕೊನೇ ಐಪಿಎಲ್ ಅನ್ನೋ ಮಾತುಗಳು ಕೇಳಿಬಂದಿದ್ವು.. ಆದ್ರೀಗ ಸಿಎಸ್ಕೆ ಫ್ರಾಂಚೈಸಿ, ಚೆನ್ನೈ ತಂಡದ ಅಭಿಮಾನಿಗಳಿಗೆ ಶುಭ ಸುದ್ದಿಯನ್ನ ನೀಡಿದೆ. ಐಪಿಎಲ್ 14ನೇ ಆವೃತ್ತಿಯ ಮೊದಲಾರ್ಧದಲ್ಲಿ ಎಂ.ಎಸ್.ಧೋನಿ, ಪ್ರದರ್ಶನ ಅಭಿಮಾನಿಗಳಿಗೆ ನಿರಾಸೆ ಮೂಡಿಸಿರೋದಂತೂ ಸುಳ್ಳಲ್ಲ. ಯಾಕಂದ್ರೆ ಆಡಿದ್ದ 7ಪಂದ್ಯಗಳ ಪೈಕಿ ಧೋನಿ 4ಪಂದ್ಯದಲ್ಲಿ ಬ್ಯಾಟಿಂಗ್ ಸಿಕ್ಕಿತ್ತು. ಆದ್ರೆ, ಗೇಮ್ ಫಿನಿಶರ್ ಧೋನಿ ಗಳಿಸಿದ್ದು ಮಾತ್ರ ಕೇವಲ 37ರನ್.

ಎಂ.ಎಸ್.ಧೋನಿ ಈ ಪ್ರದರ್ಶನದಿಂದ ಅಭಿಮಾನಿಗಳು ಬೇಸರಗೊಂಡಿರೋದಂತೂ ಸುಳ್ಳಲ್ಲ. ಅಲ್ಲದೇ, ಮಾಹಿ ಪಾಲಿಗೆ ಇದೇ ಕೊನೆಯ ಐಪಿಎಲ್ ಅನ್ನೋ ಮಾತುಗಳು ಕೇಳಿಬಂದಿದ್ವು.. ಆದ್ರೀಗ, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅಭಿಮಾನಿಗಳಿಗೆ ಫ್ರಾಂಚೈಸಿ ಶುಭಸುದ್ದಿಯನ್ನ ನೀಡಿದೆ. ಅದೇ, ಧೋನಿ ಇನ್ನೆರೆಡು ವರ್ಷ ಐಪಿಎಲ್ನಲ್ಲಿ ಆಡಲಿದ್ದಾರೆ ಅನ್ನೋದು.

ವಯಸ್ಸು 40 ಆದ್ರೂ ಮಹೇಂದ್ರ ಇನ್ನೂ ಫಿಟ್..! ಯಸ್. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಧೋನಿ ಕಳಪೆ ಬ್ಯಾಟಿಂಗ್ ಮಾಡಿದ್ದಾರೆ ನಿಜ. ಆದ್ರೆ, ಚೆನ್ನೈ ಸೂಪರ್ ಕಿಂಗ್ಸ್ ಧೋನಿಯಂತ ನಾಯಕ ಮತ್ತೆ ಸಿಗೋದು ಕನಸಿನ ಮಾತು. ಸಿಎಸ್ಕೆ ಮೂರು ಬಾರಿ ಚಾಂಪಿಯನ್ ಪಟ್ಟವನ್ನ ತಂದುಕೊಟ್ಟಿರೋ ಮಾಹಿ, ಈ ಬಾರಿಯ ಐಪಿಎಲ್ನಲ್ಲೂ ತಂಡವನ್ನ ಅದ್ಭುತವಾಗಿ ಮುನ್ನಡೆಸಿದ್ದಾರೆ. ಈಗಾಗಲೇ 10ಅಂಕಗಳೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರೋ ಚೆನ್ನೈ, ಪ್ಲೇಆಫ್ಗೆ ಎಂಟ್ರಿಕೊಡೋದು ಪಕ್ಕಾ ಆಗಿದೆ..

ಧೋನಿಯ ಮುಂದಿನ ಐಪಿಎಲ್ ಕರಿಯರ್ ಕುರಿತು ಸಿಎಸ್ಕೆ ತಂಡದ ಸಿಒಎ ಕಾಶಿ ವಿಶ್ವನಾಥನ್ ಮಾತನಾಡಿದ್ದು, ಧೋನಿ ಕನಿಷ್ಠ ಇನ್ನೆರೆಡು ವರ್ಷ ಐಪಿಎಲ್ನಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದ್ದಾರೆ. ಮಾಹಿ ಶೇ.100ರಷ್ಟು ಫಿಟ್ ಆಗಿದ್ದಾರೆ. ಅಷ್ಟೇ ಕಠಿಣ ಅಭ್ಯಾಸವನ್ನ ನಡೆಸ್ತಿದ್ದಾರೆ. ಅವರು ತಂಡಕ್ಕೆ ಅತ್ಯಂತ ಮೌಲ್ಯಯುತ ಹಾಗೂ ಪರಿಣಾಮಕಾರಿ ಆಟಗಾರ ಅಂತ, ಕಾಶಿ ವಿಶ್ವನಾಥನ್ ತಿಳಿಸಿದ್ದಾರೆ.

Follow Us
ಕರ್ತವ್ಯ ಲೋಪ ಕೇಸ್​: ಶಾಸಕ ಉಮೇಶ್ ಮೇಟಿ ಸೊಸೆ ಡಾ ಅಂಕಿತಾ ಯರಗಲ್​​ ವಜಾ
ಕರ್ತವ್ಯ ಲೋಪ ಕೇಸ್​: ಶಾಸಕ ಉಮೇಶ್ ಮೇಟಿ ಸೊಸೆ ಡಾ ಅಂಕಿತಾ ಯರಗಲ್​​ ವಜಾ
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ