AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಧೋನಿ ಅಭಿಮಾನಿಗಳಿಗೆ ಗುಡ್ ನ್ಯೂಸ್: ಇನ್ನೆರೆಡು ವರ್ಷ ಚೆನ್ನೈ ತಂಡವನ್ನ ಮುನ್ನಡೆಸಲಿದ್ದಾರೆ ಮಹೇಂದ್ರ!

IPL 2021: ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅಭಿಮಾನಿಗಳಿಗೆ ಫ್ರಾಂಚೈಸಿ ಶುಭಸುದ್ದಿಯನ್ನ ನೀಡಿದೆ. ಅದೇ, ಧೋನಿ ಇನ್ನೆರೆಡು ವರ್ಷ ಐಪಿಎಲ್ನಲ್ಲಿ ಆಡಲಿದ್ದಾರೆ ಅನ್ನೋದು.

IPL 2021: ಧೋನಿ ಅಭಿಮಾನಿಗಳಿಗೆ ಗುಡ್ ನ್ಯೂಸ್: ಇನ್ನೆರೆಡು ವರ್ಷ ಚೆನ್ನೈ ತಂಡವನ್ನ ಮುನ್ನಡೆಸಲಿದ್ದಾರೆ ಮಹೇಂದ್ರ!
CSK
TV9 Web
| Edited By: |

Updated on: Jul 09, 2021 | 6:26 PM

Share

ಚೆನ್ನೈ ಸೂಪರ್ ಕಿಂಗ್ಸ್ ಅಂದ್ರೆ ಧೋನಿ.. ಧೋನಿ ಅಂದ್ರೆ ಯಲ್ಲೋ ಜೆರ್ಸಿ.. ಹೀಗಾಗಿಯೇ ಧೋನಿಯನ್ನ ಚೆನ್ನೈ ಫ್ಯಾನ್ಸ್ ಪ್ರೀತಿಯಿಂದ ತಲೈವಾ ಅಂತ ಕರೀತಾರೆ. ಆದ್ರೆ, ಧೋನಿ ಪಾಲಿಗೆ ಇದೇ ಕೊನೇ ಐಪಿಎಲ್ ಅನ್ನೋ ಮಾತುಗಳು ಕೇಳಿಬಂದಿದ್ವು.. ಆದ್ರೀಗ ಸಿಎಸ್ಕೆ ಫ್ರಾಂಚೈಸಿ, ಚೆನ್ನೈ ತಂಡದ ಅಭಿಮಾನಿಗಳಿಗೆ ಶುಭ ಸುದ್ದಿಯನ್ನ ನೀಡಿದೆ. ಐಪಿಎಲ್ 14ನೇ ಆವೃತ್ತಿಯ ಮೊದಲಾರ್ಧದಲ್ಲಿ ಎಂ.ಎಸ್.ಧೋನಿ, ಪ್ರದರ್ಶನ ಅಭಿಮಾನಿಗಳಿಗೆ ನಿರಾಸೆ ಮೂಡಿಸಿರೋದಂತೂ ಸುಳ್ಳಲ್ಲ. ಯಾಕಂದ್ರೆ ಆಡಿದ್ದ 7ಪಂದ್ಯಗಳ ಪೈಕಿ ಧೋನಿ 4ಪಂದ್ಯದಲ್ಲಿ ಬ್ಯಾಟಿಂಗ್ ಸಿಕ್ಕಿತ್ತು. ಆದ್ರೆ, ಗೇಮ್ ಫಿನಿಶರ್ ಧೋನಿ ಗಳಿಸಿದ್ದು ಮಾತ್ರ ಕೇವಲ 37ರನ್.

ಎಂ.ಎಸ್.ಧೋನಿ ಈ ಪ್ರದರ್ಶನದಿಂದ ಅಭಿಮಾನಿಗಳು ಬೇಸರಗೊಂಡಿರೋದಂತೂ ಸುಳ್ಳಲ್ಲ. ಅಲ್ಲದೇ, ಮಾಹಿ ಪಾಲಿಗೆ ಇದೇ ಕೊನೆಯ ಐಪಿಎಲ್ ಅನ್ನೋ ಮಾತುಗಳು ಕೇಳಿಬಂದಿದ್ವು.. ಆದ್ರೀಗ, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅಭಿಮಾನಿಗಳಿಗೆ ಫ್ರಾಂಚೈಸಿ ಶುಭಸುದ್ದಿಯನ್ನ ನೀಡಿದೆ. ಅದೇ, ಧೋನಿ ಇನ್ನೆರೆಡು ವರ್ಷ ಐಪಿಎಲ್ನಲ್ಲಿ ಆಡಲಿದ್ದಾರೆ ಅನ್ನೋದು.

ವಯಸ್ಸು 40 ಆದ್ರೂ ಮಹೇಂದ್ರ ಇನ್ನೂ ಫಿಟ್..! ಯಸ್. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಧೋನಿ ಕಳಪೆ ಬ್ಯಾಟಿಂಗ್ ಮಾಡಿದ್ದಾರೆ ನಿಜ. ಆದ್ರೆ, ಚೆನ್ನೈ ಸೂಪರ್ ಕಿಂಗ್ಸ್ ಧೋನಿಯಂತ ನಾಯಕ ಮತ್ತೆ ಸಿಗೋದು ಕನಸಿನ ಮಾತು. ಸಿಎಸ್ಕೆ ಮೂರು ಬಾರಿ ಚಾಂಪಿಯನ್ ಪಟ್ಟವನ್ನ ತಂದುಕೊಟ್ಟಿರೋ ಮಾಹಿ, ಈ ಬಾರಿಯ ಐಪಿಎಲ್ನಲ್ಲೂ ತಂಡವನ್ನ ಅದ್ಭುತವಾಗಿ ಮುನ್ನಡೆಸಿದ್ದಾರೆ. ಈಗಾಗಲೇ 10ಅಂಕಗಳೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರೋ ಚೆನ್ನೈ, ಪ್ಲೇಆಫ್ಗೆ ಎಂಟ್ರಿಕೊಡೋದು ಪಕ್ಕಾ ಆಗಿದೆ..

ಧೋನಿಯ ಮುಂದಿನ ಐಪಿಎಲ್ ಕರಿಯರ್ ಕುರಿತು ಸಿಎಸ್ಕೆ ತಂಡದ ಸಿಒಎ ಕಾಶಿ ವಿಶ್ವನಾಥನ್ ಮಾತನಾಡಿದ್ದು, ಧೋನಿ ಕನಿಷ್ಠ ಇನ್ನೆರೆಡು ವರ್ಷ ಐಪಿಎಲ್ನಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದ್ದಾರೆ. ಮಾಹಿ ಶೇ.100ರಷ್ಟು ಫಿಟ್ ಆಗಿದ್ದಾರೆ. ಅಷ್ಟೇ ಕಠಿಣ ಅಭ್ಯಾಸವನ್ನ ನಡೆಸ್ತಿದ್ದಾರೆ. ಅವರು ತಂಡಕ್ಕೆ ಅತ್ಯಂತ ಮೌಲ್ಯಯುತ ಹಾಗೂ ಪರಿಣಾಮಕಾರಿ ಆಟಗಾರ ಅಂತ, ಕಾಶಿ ವಿಶ್ವನಾಥನ್ ತಿಳಿಸಿದ್ದಾರೆ.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್