AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021 Auction CSK Players List: ವಿಸಿಲ್​ ಹೊಡೆಯೋಕೆ ಸಿಎಸ್​ಕೆ ಸೇರಿದ 6 ಆಟಗಾರರು.. ಇಲ್ಲಿದೆ ಚೆನ್ನೈ ಟೀಂ ಫುಲ್​ ಲಿಸ್ಟ್​

IPL CSK Full Squad 2021: ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್‌ನ ಅತ್ಯಂತ ಯಶಸ್ವಿ ಫ್ರಾಂಚೈಸಿಗಳಲ್ಲಿ ಒಂದಾಗಿದೆ. ಮೂರು ಬಾರಿ ಪ್ರಶಸ್ತಿ ಗೆದ್ದಿರುವ ಹೆಗ್ಗಳಿಕೆ ಚೆನ್ನೈಗೆ ಇದೆ.

IPL 2021 Auction CSK Players List: ವಿಸಿಲ್​ ಹೊಡೆಯೋಕೆ ಸಿಎಸ್​ಕೆ ಸೇರಿದ 6 ಆಟಗಾರರು.. ಇಲ್ಲಿದೆ ಚೆನ್ನೈ ಟೀಂ ಫುಲ್​ ಲಿಸ್ಟ್​
ಎಂ.ಎಸ್. ಧೋನಿ
ರಾಜೇಶ್ ದುಗ್ಗುಮನೆ
| Edited By: |

Updated on: Feb 19, 2021 | 6:00 PM

Share

ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (Chennai Super Kings – CSK) ಮೂರು ಬಾರಿ (2010, 2011 ಮತ್ತು 2018) ಐಪಿಎಲ್ ಟ್ರೋಫಿಯನ್ನು ಎತ್ತಿ ಹಿಡಿದಿದೆ. ಆದರೆ, ದುಬೈನಲ್ಲಿ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​ ಹೀನಾಯವಾಗಿ ಸೋತಿತ್ತು! ಈ ಸೋಲಿನಿಂದ ಎಚ್ಚೆತ್ತಿರುವ ಸಿಎಸ್​ಕೆ ತಂಡದ ಕೆಲ ಆಟಗಾರರನ್ನು ರಿಲೀಸ್​ ಮಾಡಿತ್ತು. ಅಷ್ಟೇ ಅಲ್ಲ, ನಿನ್ನೆ ನಡೆದ ಹರಾಜಿನಲ್ಲಿ 6 ಆಟಗಾರರನ್ನು ಖರೀದಿಸಿದೆ. ಹಾಗಾದರೆ, ಚೆನ್ನೈ ತಂಡ ಈಗ ಹೇಗಿದೆ ಎನ್ನುವುದಕ್ಕೆ ಇಲ್ಲಿದೆ ವಿವರ. ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್‌ನ ಅತ್ಯಂತ ಯಶಸ್ವಿ ಫ್ರಾಂಚೈಸಿಗಳಲ್ಲಿ ಒಂದಾಗಿದೆ. ಮೂರು ಬಾರಿ ಪ್ರಶಸ್ತಿ ಗೆದ್ದಿರುವ ಹೆಗ್ಗಳಿಕೆ ಚೆನ್ನೈಗೆ ಇದೆ. ಸ್ಪಾಟ್ ಫಿಕ್ಸಿಂಗ್ ಹಗರಣದಿಂದಾಗಿ ಎರಡು ವರ್ಷಗಳ ಕಾಲ ನಿಷೇಧಕ್ಕೊಳಗಾಗಿದ್ದ ಈ ತಂಡ, ನಿಷೇಧದಿಂದ ವಾಪಾಸ್ಸಾದ ಬಳಿಕ 2018 ರಲ್ಲಿ ಐಪಿಎಲ್ ಪ್ರಶಸ್ತಿಯನ್ನು ಎತ್ತಿ ಹಿಡಿದಿತ್ತು.

ಚೆನ್ನೈ ಈ ಮೊದಲು ಕೇದಾರ್ ಜಾಧವ್, ಮುರಳಿ ವಿಜಯ್, ಹರ್ಭಜನ್ ಸಿಂಗ್, ಪಿಯೂಷ್ ಚಾವ್ಲಾ, ಮೋನು ಸಿಂಗ್, ಶೇನ್ ವ್ಯಾಟ್ಸನ್ ಅವರನ್ನು ತಂಡದಿಂದ ಕೈ ಬಿಟ್ಟಿತ್ತು.

ಎಂ.ಎಸ್.ಧೋನಿ, ಸುರೇಶ್ ರೈನಾ, ಅಂಬಾಟಿ ರಾಯುಡು, ಕೆಎಂ ಆಸಿಫ್, ದೀಪಕ್ ಚಹರ್, ಡ್ವೇನ್ ಬ್ರಾವೋ, ಫಾಫ್ ಡು ಪ್ಲೆಸಿಸ್, ಇಮ್ರಾನ್ ತಾಹಿರ್, ಎನ್ ಜಗದೀಸನ್, ಕರಣ್ ಶರ್ಮಾ, ಲುಂಗಿ ಎನ್‌ಗಿಡಿ, ಮಿಚೆಲ್ ಸಾಂಟ್ನರ್, ರವೀಂದ್ರ ಜಡೇಜಾ, ರುತುರಾಜ್ ಶಾರ್ಕ್ವಾಕ್ ಕರ್ರನ್, ಜೋಶ್ ಹ್ಯಾಝಲ್‌ವುಡ್, ಆರ್ ಸಾಯಿ ಕಿಶೋರ್ ಅವರನ್ನು ತಂಡದಲ್ಲೇ ಉಳಿಸಿಕೊಂಡಿತ್ತು.

ನಿನ್ನೆ ನಡೆದ ಹರಾಜು ಪ್ರಕ್ರಿಯೆಯಲ್ಲಿ ಹೊಸದಾಗಿ 6 ಆಟಗಾರರನ್ನು ಚೆನ್ನೈ ಖರೀದಿ ಮಾಡಿದೆ. ಮೋಯಿನ್​ ಅಲಿ, ಕನ್ನಡಿಗ ಕೆ. ಗೌತಮ್​, ಚೇತೇಶ್ವರ ಪೂಜಾರ, ಎಂ. ಹರಿಕೃಷ್ಣ ರೆಡ್ಡಿ, ಕೆ. ಭಗತ್​ ವರ್ಮ, ಸಿ. ಹರಿ ನಿಶಾಂತ್​ ಅವರನ್ನು ಚೆನ್ನೈ ತನ್ನ ಬಳಗಕ್ಕೆ ಸೇರಿಸಿಕೊಂಡಿದೆ.

ಟೀಂನಲ್ಲಿರುವ ಆಟಗಾರರು.. ಎಂ.ಎಸ್.ಧೋನಿ, ಸುರೇಶ್ ರೈನಾ, ಅಂಬಾಟಿ ರಾಯುಡು, ಕೆಎಂ ಆಸಿಫ್, ದೀಪಕ್ ಚಹರ್, ಡ್ವೇನ್ ಬ್ರಾವೋ, ಫಾಫ್ ಡು ಪ್ಲೆಸಿಸ್, ಇಮ್ರಾನ್ ತಾಹಿರ್, ಎನ್ ಜಗದೀಸನ್, ಕರಣ್ ಶರ್ಮಾ, ಲುಂಗಿ ಎನ್‌ಗಿಡಿ, ಮಿಚೆಲ್ ಸಾಂಟ್ನರ್, ರವೀಂದ್ರ ಜಡೇಜಾ, ರುತುರಾಜ್ ಶಾರ್ಕ್ವಾಕ್ ಕರ್ರನ್, ಜೋಶ್ ಹ್ಯಾಝಲ್‌ವುಡ್, ಆರ್. ಸಾಯಿ ಕಿಶೋರ್ , ಮೋಯಿನ್​ ಅಲಿ, ಕನ್ನಡಿಗ ಕೆ. ಗೌತಮ್​, ಚೇತೇಶ್ವರ ಪೂಜಾರ, ಎಂ. ಹರಿಕೃಷ್ಣ ರೆಡ್ಡಿ, ಕೆ. ಭಗತ್​ ವರ್ಮ, ಸಿ. ಹರಿ ನಿಶಾಂತ್​.

ಇದನ್ನೂ ಓದಿ: K Gowtham: 9.25 ಕೋಟಿಗೆ ಚೆನ್ನೈ ಸೂಪರ್​ ಕಿಂಗ್ಸ್​ ಪಾಲಾದ ಕನ್ನಡಿಗ ಕೆ. ಗೌತಮ್​..

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್