AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021 Auction CSK Players List: ವಿಸಿಲ್​ ಹೊಡೆಯೋಕೆ ಸಿಎಸ್​ಕೆ ಸೇರಿದ 6 ಆಟಗಾರರು.. ಇಲ್ಲಿದೆ ಚೆನ್ನೈ ಟೀಂ ಫುಲ್​ ಲಿಸ್ಟ್​

IPL CSK Full Squad 2021: ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್‌ನ ಅತ್ಯಂತ ಯಶಸ್ವಿ ಫ್ರಾಂಚೈಸಿಗಳಲ್ಲಿ ಒಂದಾಗಿದೆ. ಮೂರು ಬಾರಿ ಪ್ರಶಸ್ತಿ ಗೆದ್ದಿರುವ ಹೆಗ್ಗಳಿಕೆ ಚೆನ್ನೈಗೆ ಇದೆ.

IPL 2021 Auction CSK Players List: ವಿಸಿಲ್​ ಹೊಡೆಯೋಕೆ ಸಿಎಸ್​ಕೆ ಸೇರಿದ 6 ಆಟಗಾರರು.. ಇಲ್ಲಿದೆ ಚೆನ್ನೈ ಟೀಂ ಫುಲ್​ ಲಿಸ್ಟ್​
ಎಂ.ಎಸ್. ಧೋನಿ
ರಾಜೇಶ್ ದುಗ್ಗುಮನೆ
| Edited By: |

Updated on: Feb 19, 2021 | 6:00 PM

Share

ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (Chennai Super Kings – CSK) ಮೂರು ಬಾರಿ (2010, 2011 ಮತ್ತು 2018) ಐಪಿಎಲ್ ಟ್ರೋಫಿಯನ್ನು ಎತ್ತಿ ಹಿಡಿದಿದೆ. ಆದರೆ, ದುಬೈನಲ್ಲಿ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​ ಹೀನಾಯವಾಗಿ ಸೋತಿತ್ತು! ಈ ಸೋಲಿನಿಂದ ಎಚ್ಚೆತ್ತಿರುವ ಸಿಎಸ್​ಕೆ ತಂಡದ ಕೆಲ ಆಟಗಾರರನ್ನು ರಿಲೀಸ್​ ಮಾಡಿತ್ತು. ಅಷ್ಟೇ ಅಲ್ಲ, ನಿನ್ನೆ ನಡೆದ ಹರಾಜಿನಲ್ಲಿ 6 ಆಟಗಾರರನ್ನು ಖರೀದಿಸಿದೆ. ಹಾಗಾದರೆ, ಚೆನ್ನೈ ತಂಡ ಈಗ ಹೇಗಿದೆ ಎನ್ನುವುದಕ್ಕೆ ಇಲ್ಲಿದೆ ವಿವರ. ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್‌ನ ಅತ್ಯಂತ ಯಶಸ್ವಿ ಫ್ರಾಂಚೈಸಿಗಳಲ್ಲಿ ಒಂದಾಗಿದೆ. ಮೂರು ಬಾರಿ ಪ್ರಶಸ್ತಿ ಗೆದ್ದಿರುವ ಹೆಗ್ಗಳಿಕೆ ಚೆನ್ನೈಗೆ ಇದೆ. ಸ್ಪಾಟ್ ಫಿಕ್ಸಿಂಗ್ ಹಗರಣದಿಂದಾಗಿ ಎರಡು ವರ್ಷಗಳ ಕಾಲ ನಿಷೇಧಕ್ಕೊಳಗಾಗಿದ್ದ ಈ ತಂಡ, ನಿಷೇಧದಿಂದ ವಾಪಾಸ್ಸಾದ ಬಳಿಕ 2018 ರಲ್ಲಿ ಐಪಿಎಲ್ ಪ್ರಶಸ್ತಿಯನ್ನು ಎತ್ತಿ ಹಿಡಿದಿತ್ತು.

ಚೆನ್ನೈ ಈ ಮೊದಲು ಕೇದಾರ್ ಜಾಧವ್, ಮುರಳಿ ವಿಜಯ್, ಹರ್ಭಜನ್ ಸಿಂಗ್, ಪಿಯೂಷ್ ಚಾವ್ಲಾ, ಮೋನು ಸಿಂಗ್, ಶೇನ್ ವ್ಯಾಟ್ಸನ್ ಅವರನ್ನು ತಂಡದಿಂದ ಕೈ ಬಿಟ್ಟಿತ್ತು.

ಎಂ.ಎಸ್.ಧೋನಿ, ಸುರೇಶ್ ರೈನಾ, ಅಂಬಾಟಿ ರಾಯುಡು, ಕೆಎಂ ಆಸಿಫ್, ದೀಪಕ್ ಚಹರ್, ಡ್ವೇನ್ ಬ್ರಾವೋ, ಫಾಫ್ ಡು ಪ್ಲೆಸಿಸ್, ಇಮ್ರಾನ್ ತಾಹಿರ್, ಎನ್ ಜಗದೀಸನ್, ಕರಣ್ ಶರ್ಮಾ, ಲುಂಗಿ ಎನ್‌ಗಿಡಿ, ಮಿಚೆಲ್ ಸಾಂಟ್ನರ್, ರವೀಂದ್ರ ಜಡೇಜಾ, ರುತುರಾಜ್ ಶಾರ್ಕ್ವಾಕ್ ಕರ್ರನ್, ಜೋಶ್ ಹ್ಯಾಝಲ್‌ವುಡ್, ಆರ್ ಸಾಯಿ ಕಿಶೋರ್ ಅವರನ್ನು ತಂಡದಲ್ಲೇ ಉಳಿಸಿಕೊಂಡಿತ್ತು.

ನಿನ್ನೆ ನಡೆದ ಹರಾಜು ಪ್ರಕ್ರಿಯೆಯಲ್ಲಿ ಹೊಸದಾಗಿ 6 ಆಟಗಾರರನ್ನು ಚೆನ್ನೈ ಖರೀದಿ ಮಾಡಿದೆ. ಮೋಯಿನ್​ ಅಲಿ, ಕನ್ನಡಿಗ ಕೆ. ಗೌತಮ್​, ಚೇತೇಶ್ವರ ಪೂಜಾರ, ಎಂ. ಹರಿಕೃಷ್ಣ ರೆಡ್ಡಿ, ಕೆ. ಭಗತ್​ ವರ್ಮ, ಸಿ. ಹರಿ ನಿಶಾಂತ್​ ಅವರನ್ನು ಚೆನ್ನೈ ತನ್ನ ಬಳಗಕ್ಕೆ ಸೇರಿಸಿಕೊಂಡಿದೆ.

ಟೀಂನಲ್ಲಿರುವ ಆಟಗಾರರು.. ಎಂ.ಎಸ್.ಧೋನಿ, ಸುರೇಶ್ ರೈನಾ, ಅಂಬಾಟಿ ರಾಯುಡು, ಕೆಎಂ ಆಸಿಫ್, ದೀಪಕ್ ಚಹರ್, ಡ್ವೇನ್ ಬ್ರಾವೋ, ಫಾಫ್ ಡು ಪ್ಲೆಸಿಸ್, ಇಮ್ರಾನ್ ತಾಹಿರ್, ಎನ್ ಜಗದೀಸನ್, ಕರಣ್ ಶರ್ಮಾ, ಲುಂಗಿ ಎನ್‌ಗಿಡಿ, ಮಿಚೆಲ್ ಸಾಂಟ್ನರ್, ರವೀಂದ್ರ ಜಡೇಜಾ, ರುತುರಾಜ್ ಶಾರ್ಕ್ವಾಕ್ ಕರ್ರನ್, ಜೋಶ್ ಹ್ಯಾಝಲ್‌ವುಡ್, ಆರ್. ಸಾಯಿ ಕಿಶೋರ್ , ಮೋಯಿನ್​ ಅಲಿ, ಕನ್ನಡಿಗ ಕೆ. ಗೌತಮ್​, ಚೇತೇಶ್ವರ ಪೂಜಾರ, ಎಂ. ಹರಿಕೃಷ್ಣ ರೆಡ್ಡಿ, ಕೆ. ಭಗತ್​ ವರ್ಮ, ಸಿ. ಹರಿ ನಿಶಾಂತ್​.

ಇದನ್ನೂ ಓದಿ: K Gowtham: 9.25 ಕೋಟಿಗೆ ಚೆನ್ನೈ ಸೂಪರ್​ ಕಿಂಗ್ಸ್​ ಪಾಲಾದ ಕನ್ನಡಿಗ ಕೆ. ಗೌತಮ್​..

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್