AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಆರ್​ಸಿಬಿಗೆ ಸಿಹಿ ಸುದ್ದಿ! ಕೊರೊನಾ ಗೆದ್ದು ಕ್ಯಾಂಪ್ ಸೇರಿದ ದೇವದತ್.. ಮುಂಬೈ ವಿರುದ್ಧದ ಪಂದ್ಯಕ್ಕೆ ಪಡಿಕ್ಕಲ್ ಲಭ್ಯ!

IPL 2021: ಎರಡು ವಾರಗಳ ಹಿಂದೆ ಕೊವಿಡ್ ವರದಿ ಪಾಸಿಟಿವ್ ಬಂದಿತ್ತು. ಇದೀಗ ಎರಡೂ ಟೆಸ್ಟ್ಗಳಲ್ಲೂ ನೆಗೆಟಿವ್ ಬಂದಿದ್ದು, ಆರ್ಸಿಬಿ ತಂಡವನ್ನ ಸೇರಿಕೊಂಡಿದ್ದೇನೆ ಎಂದು ಸಂತಸ ಹಂಚಿಕೊಂಡಿದ್ದಾರೆ.

IPL 2021: ಆರ್​ಸಿಬಿಗೆ ಸಿಹಿ ಸುದ್ದಿ! ಕೊರೊನಾ ಗೆದ್ದು ಕ್ಯಾಂಪ್ ಸೇರಿದ ದೇವದತ್.. ಮುಂಬೈ ವಿರುದ್ಧದ ಪಂದ್ಯಕ್ಕೆ ಪಡಿಕ್ಕಲ್ ಲಭ್ಯ!
ವಿರಾಟ್​ ಕೊಹ್ಲಿ ಜೊತೆ ದೇವದತ್ ಪಡಿಕ್ಕಲ್
ಪೃಥ್ವಿಶಂಕರ
|

Updated on: Apr 08, 2021 | 11:24 AM

Share

ಐಪಿಎಲ್ 14ನೇ ಆವೃತ್ತಿಗೆ ಇನ್ನೊಂದೇ ದಿನ ಮಾತ್ರ ಬಾಕಿ ಇದ್ದು, ಆರ್ಸಿಬಿ ಅಭಿಮಾನಿಗಳ ಪಾಲಿಗೆ ಬಹುದೊಡ್ಡ ಶುಭಸುದ್ದಿ ಸಿಕ್ಕಿದೆ. ಮಾರ್ಚ್ 22ರಂದು ಕೊರೊನಾ ಸೋಂಕಿಗೆ ತುತ್ತಾಗಿದ್ದ ಕನ್ನಡಿಗ ದೇವದತ್ ಪಡಿಕ್ಕಲ್, ತಮ್ಮ ಮನೆಯಲ್ಲೇ ಕ್ವಾರಂಟೈನ್ ಆಗಿದ್ರು. ಆದ್ರೀಗ ಪಡಿಕ್ಕಲ್ಗೆ ನಡೆಸಿದ ಎರಡೂ ಟೆಸ್ಟ್ನಲ್ಲಿ, ನೆಗೆಟಿವ್ ವರದಿ ಬಂದಿದ್ದು, ಆರ್ಸಿಬಿ ಕ್ಯಾಂಪ್ ಸೇರಿಕೊಂಡಿದ್ದಾರೆ. ಈ ಮೂಲಕ ಪಡಿಕ್ಕಲ್ ನಾಯಕ ಕೊಹ್ಲಿಗೆ ಕಗ್ಗಂಟಾಗಿದ್ದ ಆರಂಭಿಕನ ಸ್ಥಾನಕ್ಕೆ ಜೀವ ತುಂಬಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಆರ್ಸಿಬಿ, ಪಡಿಕ್ಕಲ್ ಆರೋಗ್ಯ ಸ್ಥಿತಿ ಉತ್ತಮವಾಗಿದೆ. ಹಾಗೇ ಆಡಲು ಸಿದ್ದರಾಗಿದ್ದಾರೆ ಅಂತಾ ತಿಳಿಸಿದೆ. ಕೊರೊನಾ ಗೆದ್ದಿರೋ ಪಡಿಕ್ಕಲ್, ತಮ್ಮ ಅಭಿಮಾನಿಗಳಿಗೆ ವಿಡಿಯೋ ಸಂದೇಶವನ್ನ ರವಾನಿಸಿದ್ದಾರೆ. ಎರಡು ವಾರಗಳ ಹಿಂದೆ ಕೊವಿಡ್ ವರದಿ ಪಾಸಿಟಿವ್ ಬಂದಿತ್ತು. ಇದೀಗ ಎರಡೂ ಟೆಸ್ಟ್ಗಳಲ್ಲೂ ನೆಗೆಟಿವ್ ಬಂದಿದ್ದು, ಆರ್ಸಿಬಿ ತಂಡವನ್ನ ಸೇರಿಕೊಂಡಿದ್ದೇನೆ ಎಂದು ಸಂತಸ ಹಂಚಿಕೊಂಡಿದ್ದಾರೆ.

ಮುಂಬೈ ವಿರುದ್ಧದ ಪಂದ್ಯಕ್ಕೆ ಪಡಿಕ್ಕಲ್ ಲಭ್ಯ! ಪಡಿಕ್ಕಲ್ಗೆ ಕೊರೊನಾ ಬಂದಾಗ, ಆರಂಭದ ಪಂದ್ಯಗಳನ್ನ ಮಿಸ್ ಮಾಡಿಕೊಳ್ತಾರೆ ಅಂತಾ ಹೇಳಲಾಗ್ತಿತ್ತು. ಆದ್ರೀಗ ಪಂದ್ಯಕ್ಕೆ ಮೂರು ದಿನ ಬಾಕಿ ಇರುವಂತೆಯೇ ದೇವದತ್ ಚೇತರಿಸಿಕೊಂಡಿದ್ದಾರೆ. ಹೀಗಾಗಿ ಏಪ್ರಿಲ್ 9ರಂದು ಮುಂಬೈ ಇಂಡಿಯನ್ಸ್ ವಿರುದ್ಧ ನಡೆಯಲಿರೋ ಉದ್ಘಾಟನಾ ಪಂದ್ಯದಲ್ಲಿ, ಪಡಿಕ್ಕಲ್ ಕಣಕ್ಕಳಿಯೋದು ಬಹುತೇಕ ಪಕ್ಕಾ ಆಗಿದೆ..

ಆರ್ಸಿಬಿ ಆತಂಕ ದೂರ ಮಾಡಿದ ಕನ್ನಡಿಗ ಪಡಿಕ್ಕಲ್! ಆರಂಭಿಕನಾಗಿ ಕ್ಲಾಸ್ ಌಂಡ್ ಮಾಸ್ ಪರ್ಫಾಮೆನ್ಸ್ ನೀಡುವ ಪಡಿಕ್ಕಲ್ಗೆ ಕೊರೊನಾ ಬಂದಿದ್ದು, ನಿಜಕ್ಕೂ ತಂಡದಲ್ಲಿ ಆತಂಕವನ್ನುಂಟು ಮಾಡಿತ್ತು. ಅಲ್ಲದೇ ಪಡಿಕ್ಕಲ್ ಸ್ಥಾನದಲ್ಲಿ ಯಾರನ್ನ ಆರಂಭಿಕನಾಗಿ ಕಣಕ್ಕಿಳಿಸಬೇಕು ಅನ್ನೋ ಬಗ್ಗೆ ಕ್ಯಾಪ್ಟನ್ ಕೊಹ್ಲಿ ತಲೆಕೆಡಿಸಿಕೊಂಡಿದ್ರು. ಆದ್ರೀಗ ಪಡಿಕ್ಕಲ್ಗೆ ನೆಗೆಟಿವ್ ಬಂದಿರೋದು, ತಂಡದ ಉತ್ಸಾಹವನ್ನ ಹೆಚ್ಚಾಗುವಂತೆ ಮಾಡಿದೆ. ಅಲ್ಲದೇ, ಕ್ಯಾಪ್ಟನ್ ಕೊಹ್ಲಿ ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಮಾಡಿದೆ..

ರನ್ ಮಾರುತ ಎಬ್ಬಿಸಲು ಕಿಂಗ್ ಕೊಹ್ಲಿ-ಪಡಿಕ್ಕಲ್ ಸಜ್ಜು ಈ ಬಾರಿಯ ಐಪಿಎಲ್ನಲ್ಲಿ ನಾಯಕ ವಿರಾಟ್ ಕೊಹ್ಲಿ ಹಾಗೂ ಪಡಿಕ್ಕಲ್ ಇನ್ನಿಂಗ್ಸ್ ಅರಂಭಿಸೋದು ಖಚಿತವಾಗಿದೆ. ಕಳೆದ ಸೀಸನ್ನಲ್ಲಿ ಆರಂಭಿಕರಾಗಿ ಯಶಸ್ಸು ಕಂಡಿರುವ ಪಡಿಕ್ಕಲ್-ಕೊಹ್ಲಿ ಜೋಡಿ, ಈ ಆವೃತ್ತಿಯಲ್ಲೂ ರನ್ ಶಿಖರ ಕಟ್ಟಲು ರೆಡಿಯಾಗಿದ್ದಾರೆ. ಅದ್ರಲ್ಲೂ ಲೆಫ್ಟ್ ಹ್ಯಾಂಡ್ ಮತ್ತು ರೈಟ್ ಹ್ಯಾಂಡ್ ಬ್ಯಾಟಿಂಗ್ ಕಾಂಬಿನೇಷನ್, ಎದುರಾಳಿ ತಂಡಕ್ಕೆ ಫೀಲ್ಡಿಂಗ್ ಸೆಟ್ ಮಾಡಲು ಕಷ್ಟವಾಗಲಿದೆ..

ಆರ್ಸಿಬಿ ತಂಡದ ಮತ್ತೊಬ್ಬ ಆಟಗಾರನಿಗೆ ಕೊರೊನಾ ದೃಢ! ಕಳೆದ ಸೀಸನ್ನಲ್ಲಿ ಚೆನ್ನೈ ತಂಡವನ್ನ ಬಿಟ್ಟುಬಿಡದೇ ಕಾಡಿದ್ದ ಕ್ರೂರಿ ಕೊರೊನಾ, ಈ ಬಾರಿ ಐಪಿಎಲ್ನಲ್ಲಿ ಆರ್ಸಿಬಿ ಬೆನ್ನಿಂದೆ ಬಿದ್ದಿದೆ. ಡ್ಯಾಶಿಂಗ್ ಓಪನರ್ ಪಡಿಕ್ಕಲ್ ಬೆನ್ನಲ್ಲೇ, ಇದೀಗ ಮತ್ತೊಬ್ಬ ಆಟಗಾರನಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ ಐಪಿಎಲ್ನಲ್ಲಿ ಸೋಂಕಿತ ಆಟಗಾರರ ಸಂಖ್ಯೆ ನಾಲ್ಕಕ್ಕೇರಿದೆ..

ಆರ್ಸಿಬಿ ತಂಡದ ಆಲ್ರೌಂಡರ್ ಡೇನಿಯಲ್ ಸ್ಯಾಮ್ಸ್ ಸೋಂಕಿಗೆ ತುತ್ತಾಗಿದ್ದಾರೆ. ಸ್ಯಾಮ್ಸ್ಗೆ ಸೋಂಕು ತಗುಲಿರುವುದನ್ನ ಆರ್ಸಿಬಿ ಟ್ವಿಟರ್ ಖಾತೆಯಲ್ಲಿ ತಿಳಿಸಿದೆ. ಆದ್ರೆ, ಆಸಿಸ್ ಮೂಲದ ಕ್ರಿಕೆಟಿಗನಿಗೆ ಕೊರೊನಾದ ಯಾವುದೇ ಗುಣಲಕ್ಷಣಗಳಿಲ್ಲ ಅಂತಾ ಸ್ಪಷ್ಟಪಡಿಸಿದೆ. ಏಪ್ರಿಲ್ 3ರಂದು ಚೆನ್ನೈಗೆ ಬಂದಿಳಿದಿದ್ದ ಸ್ಯಾಮ್ಸ್ಗೆ ಕೊವಿಡ್ ಟೆಸ್ಟ್ ಮಾಡಿದ್ದಾಗ ನೆಗೆಟಿವ್ ಬಂದಿತ್ತು. ಆದ್ರೆ, ಏಪ್ರಿಲ್ 7ರಂದು ನಡೆದ 2ನೇ ಪರೀಕ್ಷೆಯಲ್ಲಿ ಸ್ಯಾಮ್ಸ್ಗೆ ಸೋಂಕು ತಗುಲಿರುವುದು ಖಚಿತವಾಗಿದೆ. ಇನ್ನೂ ಕೊರೊನಾದಿಂದಾಗಿ ಸ್ಯಾಮ್ಸ್ ಮುಂಬೈ ವಿರುದ್ಧದ ಮೊದಲ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ..

ಸೋಂಕಿನ ಲಕ್ಷಣಗಳಿಲ್ಲ ಏಪ್ರಿಲ್ 3ರಂದು ಚೆನ್ನೈ ಹೋಟೆಲ್ನಲ್ಲಿ ಡೇನಿಯಲ್ ಸ್ಯಾಮ್ಸ್ ಪರೀಕ್ಷೆ ಒಳಗಾಗಿದ್ರು. ಆಗ ಕೊವಿಡ್ ವರದಿ ನೆಗೆಟಿವ್ ಬಂದಿತ್ತು. ಆದ್ರೆ ಏಪ್ರಿಲ್ 7ರಂದು ನಡೆದ 2ನೇ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದೆ. ಸ್ಯಾಮ್ಸ್ಗೆ ಸೋಂಕಿನ ಯಾವುದೇ ಲಕ್ಷಣವಿಲ್ಲ. ಆದ್ರೆ ವೈದ್ಯಕೀಯ ಸೌಲಭ್ಯವಿರುವ ಐಸೋಲೇಷನ್ನಲ್ಲಿದ್ದಾರೆ. – ಆರ್ಸಿಬಿ ಫ್ರಾಂಚೈಸಿ

ಒಟ್ನಲ್ಲಿ ಕನ್ನಡಿಗ ದೇವದತ್ ಪಡಿಕ್ಕಲ್ ಕೊರೊನಾ ಗೆದ್ದು ಬಂದಿರೋದು ಆರ್ಸಿಬಿ ತಂಡದ ಉತ್ಸಾಹವನ್ನು ನೂರು ಪಟ್ಟು ಹೆಚ್ಚಾಗುವಂತೆ ಮಾಡಿದೆ. ಜೊತೆಗೆ ಆರಂಭಿಕರ ಸಮಸ್ಯೆಯ ಆತಂಕವನ್ನು ಪಡಿಕ್ಕಲ್ ದೂರ ಮಾಡಿದ್ದಾನೆ. ಆದ್ರೆ ಪಡಿಕ್ಕಲ್ ಬೆನ್ನಲ್ಲೇ ಸ್ಯಾಮ್ಸ್ಗೆ ಸೋಂಕು ತಂದಿರೋದು, ಆರ್ಸಿಬಿ ಕ್ಯಾಂಪ್ನಲ್ಲಿ ತಳಮಳ ಹೆಚ್ಚಾಗುವಂತೆ ಮಾಡುತ್ತಿದೆ.

ಇದನ್ನೂ ಓದಿ:IPL 2021: ನಾನೀಗಲೂ ಅತೀ ವೇಗದ ಚಿರತೆ! ಆರ್​ಸಿಬಿ ಜರ್ಸಿ ತೊಟ್ಟು, ಕೊಹ್ಲಿ- ಎಬಿಡಿಗೆ ಚಾಲೆಂಜ್ ಹಾಕಿದ ಬೋಲ್ಟ್

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!