AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಐಪಿಎಲ್ ದ್ವಿತೀಯಾರ್ಧಕ್ಕೆ ಆಸೀಸ್, ಇಂಗ್ಲೆಂಡ್ ಆಟಗಾರರು ಅಲಭ್ಯ! ಕಾರಣವೇನು ಗೊತ್ತಾ?

IPL 2021: ಆಸ್ಟ್ರೇಲಿಯಾ ತಂಡ ಆಗಸ್ಟ್‌ನಲ್ಲಿ ಬಾಂಗ್ಲಾದೇಶ ಪ್ರವಾಸ ಕೈಗೊಳ್ಳಲಿದೆ. ಸರಣಿಯ ಅಂತ್ಯದ ವೇಳೆಗೆ ಐಪಿಎಲ್‌ನ ದ್ವಿತೀಯಾರ್ಧ ಮುಗಿಯಲಿದೆ.

IPL 2021: ಐಪಿಎಲ್ ದ್ವಿತೀಯಾರ್ಧಕ್ಕೆ ಆಸೀಸ್, ಇಂಗ್ಲೆಂಡ್ ಆಟಗಾರರು ಅಲಭ್ಯ! ಕಾರಣವೇನು ಗೊತ್ತಾ?
ಪ್ರಾತಿನಿಧಿಕ ಚಿತ್ರ
ಪೃಥ್ವಿಶಂಕರ
|

Updated on: May 28, 2021 | 8:14 PM

Share

ಸೆಪ್ಟೆಂಬರ್‌ನಲ್ಲಿ ಪುನರಾರಂಭಗೊಳ್ಳಲಿರುವ ಐಪಿಎಲ್ 2021 ರ ದ್ವಿತೀಯಾರ್ಧದ ಆರಂಭಕ್ಕೂ ಮುನ್ನ ಐಪಿಎಲ್ ಆಡಳಿತ ಮಂಡಳಿಗೆ ಮತ್ತೊಂದು ದೊಡ್ಡ ಹಿನ್ನಡೆ ಎದುರಾಗಿದೆ. ಲೀಗ್‌ನ ಉಳಿದ 31 ಪಂದ್ಯಗಳನ್ನು ಇಂಗ್ಲೆಂಡ್ ಕ್ರಿಕೆಟಿಗರು ತಪ್ಪಿಸಿಕೊಳ್ಳಲಿದ್ದಾರೆ ಎಂದು ಇಂಗ್ಲೆಂಡ್ ತಂಡದ ಎಂಡಿ ಆಶ್ಲೇ ಗೈಲ್ಸ್ ಸ್ಪಷ್ಟಪಡಿಸಿದ್ದಾರೆ. ಐಪಿಎಲ್ನ 14 ನೇ ಆವೃತ್ತಿಯ ದ್ವಿತೀಯಾರ್ಧದಲ್ಲಿ ಆಡಲು ತಮ್ಮ ಆಟಗಾರರನ್ನು ಕಳುಹಿಸಿ ಎಂದು ಗೈಲ್ಸ್ ಇತ್ತೀಚಿನ ಸಂದರ್ಶನದಲ್ಲಿ ಹೇಳಿದರು. ಐಪಿಎಲ್‌ಗೆ ಆತಿಥ್ಯ ವಹಿಸಲು ಬೇಕಾದ ದೊಡ್ಡ ಅವಕಾಶಕ್ಕಾಗಿ ಭಾರತ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಯಾವುದೇ ಬದಲಾವಣೆಗಳಾಗುವ ಸಾಧ್ಯತೆಯನ್ನೂ ಗೈಲ್ಸ್ ತಳ್ಳಿಹಾಕಿದರು. ಟಿ 20 ವಿಶ್ವಕಪ್ ತನಕ ಇಂಗ್ಲೆಂಡ್ ತಂಡವು ಬಿಡುವಿಲ್ಲದ ವೇಳಾಪಟ್ಟಿಯನ್ನು ಹೊಂದಿದೆ ಎಂದು ಅವರು ಹೇಳಿದರು.

ಆಸಿಸ್ ಆಟಗಾರರು ಅಲಭ್ಯ? ಏತನ್ಮಧ್ಯೆ, ಐಪಿಎಲ್ ದ್ವಿತೀಯಾರ್ಧಕ್ಕೆ ಆಸ್ಟ್ರೇಲಿಯಾದ ಆಟಗಾರರು ಸಹ ದೂರವಿರುತ್ತಾರೆ ಎಂದು ತೋರುತ್ತದೆ. ಆಸ್ಟ್ರೇಲಿಯಾ ತಂಡ ಆಗಸ್ಟ್‌ನಲ್ಲಿ ಬಾಂಗ್ಲಾದೇಶ ಪ್ರವಾಸ ಕೈಗೊಳ್ಳಲಿದೆ. ಸರಣಿಯ ಅಂತ್ಯದ ವೇಳೆಗೆ ಐಪಿಎಲ್‌ನ ದ್ವಿತೀಯಾರ್ಧ ಮುಗಿಯಲಿದೆ. ಆಸ್ಟ್ರೇಲಿಯಾದ ಆಟಗಾರರು ಮತ್ತು ಇಂಗ್ಲೆಂಡ್ ಆಟಗಾರರಿಬ್ಬರೂ ಲೀಗ್‌ನ ದ್ವಿತೀಯಾರ್ಧವನ್ನು ತಪ್ಪಿಸಿಕೊಂಡರೆ, ಪಂದ್ಯಾವಳಿ ಪ್ರಾಮುಖ್ಯತೆಯನ್ನು ಕಳೆದುಕೊಳ್ಳುವುದರಲ್ಲಿ ಯಾವುದೇ ಅನುಮಾನವಿಲ್ಲ. ಈಗಾಗಲೇ ಹಲವಾರು ಸ್ಟಾರ್ ಆಟಗಾರರು ಗಾಯಗಳಿಂದಾಗಿ ಪಂದ್ಯಾವಳಿಯಿಂದ ಹೊರಗುಳಿದಿದ್ದಾರೆ. ಅಂತಹದರಲ್ಲಿ ಮರುಪ್ರಾರಂಭಿಸುವುದರಿಂದ ಲೀಗ್ ಎಲ್ಲಿಯವರೆಗೆ ಪ್ರಯೋಜನ ಪಡೆಯುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.

10 ಮುಖಾಮುಖಿ ಪಂದ್ಯಗಳನ್ನು ಆಯೋಜಿಸಲು ಚಿಂತಿಸಲಾಗಿದೆ ಕೊರೊನಾ ಎರಡನೇ ಅಲೆ ಉಪಟಳದಿಂದಾಗಿ ಅರ್ಧಕ್ಕೆ ಸ್ಥಗಿತಗೊಂಡಿರುವ ಐಪಿಲ್​ 2021ಆವೃತ್ತಿಯನ್ನು ದುಬೈನಲ್ಲಿ ಮುಂದುವರೆಸಲು ಬಿಸಿಸಿಐ ನಿರ್ಧರಿಸಿದೆ. ಸೆಪ್ಟೆಂಬರ್ 18 ಅಥವಾ 19ರಿಂದ ಐಪಿಎಲ್ 14 ಪುನಾರಂಭಗೊಳ್ಳಲಿದ್ದು ಮೂರು ವಾರಗಳ ಕಾಲ ನಡೆಯಲಿರುವ ಆವೃತ್ತಿಯ ದ್ವಿತೀಯಾರ್ಧದಲ್ಲಿ 10 ಮುಖಾಮುಖಿ ಪಂದ್ಯಗಳನ್ನು ಆಯೋಜಿಸಲು ಚಿಂತಿಸಲಾಗಿದೆ ಎಂದು ಬಿಸಿಸಿಐ ಉನ್ನತ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಆ ಮೂಲಕ ಅರ್ಧದಲ್ಲೇ ನಿಂತು ಕ್ರಿಕೆಟ್ ಪ್ರೇಮಿಗಳಿಗೆ ಉಂಟಾಗಿದ್ದ ನಿರಾಸೆಯನ್ನು ಶಮನ ಮಾಡಲು ಬಿಸಿಸಿಐ ಚಿಂತಿಸುತ್ತಿರುವುದು ದೃಢಪಟ್ಟಿದೆ.

ಈ ಸರಣಿಯ ಫೈನಲ್ ಪಂದ್ಯವನ್ನು ಅಕ್ಟೋಬರ್ 9 ಅಥವಾ 10ರಂದು ಆಡಿಸಲು ಬಿಸಿಸಿಐ ನಿರ್ಧರಿಸಿದೆ ಎಂಬುದು ಕೂಡಾ ಇದೇ ಸಂದರ್ಭದಲ್ಲಿ ಬಹಿರಂಗವಾಗಿದೆ. ಈ ಬಗ್ಗೆ ಬಿಸಿಸಿಐ ಈಗಾಗಲೇ ಎಲ್ಲಾ ಫ್ರಾಂಚೈಸಿಗಳೊಂದಿಗೆ ನಿರ್ಧರಿಸಿದ್ದು ಬಾಕಿ ಉಳಿದಿರುವ ಪಂದ್ಯಾವಳಿಗಳನ್ನು ಸೆಪ್ಟೆಂಬರ್ 18-20ರ ಆಸುಪಾಸಿನಲ್ಲಿ ಆರಂಭಿಸುವುದಾಗಿ ಮಾಹಿತಿ ರವಾನಿಸಿದೆ.

ಸೆಪ್ಟೆಂಬರ್ 18 ಶನಿವಾರ ಹಾಗೂ 19ನೇ ತಾರೀಖು ಭಾನುವಾರ ಆಗಿರುವುದು ಪಂದ್ಯಗಳನ್ನು ಪುನಾರಂಭಿಸಲು ಅತ್ಯಂತ ಸೂಕ್ತ ದಿನವೆಂದು ಬಿಸಿಸಿಐ ನಿರ್ಧರಿಸಿದೆ. ಹೀಗಾಗಿ ಮೇ 4ರಂದು ಏಕಾಏಕಿ ನಿಂತಿದ್ದ ಪಂದ್ಯ ಈಗ ಮತ್ತೆ ಆರಂಭಗೊಳ್ಳುವುದು ಖಚಿತವಾಗಿದೆ. ಉಳಿದ 31 ಪಂದ್ಯಗಳನ್ನು ಆಡಿಸಬೇಕೆಂದರೂ ಮೂರು ವಾರಗಳ ಕಾಲ ಆರಾಮವಾಗಿ ಸಾಕು ಎಂದು ಅಭಿಪ್ರಾಯಪಟ್ಟಿರುವ ಬಿಸಿಸಿಐ ಈ ಬಾರಿಯ ಸರಣಿಗೆ ಸೂಕ್ತ ಅಂತ್ಯ ನೀಡಲೇಬೇಕೆಂಬ ಕಾರಣಕ್ಕೆ ಈ ನಿಲುವು ತಾಳಿರುವುದಾಗಿ ತಿಳಿಸಿದೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ