AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಚೆನ್ನೈನಲ್ಲಿ ಕ್ಲೀನ್ ಸ್ವೀಪ್ ಮಾಡಿದ್ದೇವೆ, ಮುಂಬೈನಲ್ಲೂ ಕ್ಲೀನ್ ಸ್ವೀಪ್ ಮಾಡ್ತೀವಿ; ಗ್ಲೆನ್ ಮ್ಯಾಕ್ಸ್​ವೆಲ್

IPL 2021: . ಚೆನ್ನೈನಲ್ಲಿ ಕ್ಲೀನ್ ಸ್ವೀಪ್ ಮಾಡಿದಂತೆ, ಮುಂಬೈನಲ್ಲೂ ಕ್ಲೀನ್ ಸ್ವೀಪ್ ಸಾಧನೆ ಮಾಡಲು ಕೊಹ್ಲಿ ಹುಡುಗರು ತುದಿಗಾಲಲ್ಲಿ ನಿಂತಿದ್ದಾರೆ. ಆರ್​ಸಿಬಿ ತಂಡದ ಬಿಗ್ ಹಿಟ್ಟರ್ ಗ್ಲೆನ್ ಮ್ಯಾಕ್ಸ್​ವೆಲ್, ಮುಂಬೈನಲ್ಲಿ ಎರಡೂ ಪಂದ್ಯಗಳನ್ನ ನಾವೇ ಗೆಲ್ತೀವಿ ಅನ್ನೋ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

IPL 2021: ಚೆನ್ನೈನಲ್ಲಿ ಕ್ಲೀನ್ ಸ್ವೀಪ್ ಮಾಡಿದ್ದೇವೆ, ಮುಂಬೈನಲ್ಲೂ ಕ್ಲೀನ್ ಸ್ವೀಪ್ ಮಾಡ್ತೀವಿ; ಗ್ಲೆನ್ ಮ್ಯಾಕ್ಸ್​ವೆಲ್
ಗ್ಲೆನ್ ಮ್ಯಾಕ್ಸ್​ವೆಲ್
ಪೃಥ್ವಿಶಂಕರ
| Edited By: |

Updated on: Apr 22, 2021 | 9:15 AM

Share

ಚೆನ್ನೈನಲ್ಲಿ ಆಡಿದ ಮೂರು ಪಂದ್ಯಗಳಲ್ಲೂ ಗೆಲುವು ದಾಖಲಿಸಿರುವ ಆರ್​ಸಿಬಿ, ಐಪಿಎಲ್​ನಲ್ಲಿ ಹ್ಯಾಟ್ರಿಕ್ ಗೆಲುವಿನ ದಾಖಲೆ ಬರೆದಿದೆ. ಚೆನ್ನೈನಲ್ಲಿ ಕ್ಲೀನ್ ಸ್ವೀಪ್ ಮಾಡಿರುವ ಕೊಹ್ಲಿ ಹುಡುಗರು, ಈಗ ಮುಂಬೈಗೆ ಪ್ರಯಾಣಿಸಿದ್ದಾರೆ. ವಾಂಖೆಡೆಯಲ್ಲಿ ಆರ್​ಸಿಬಿ ತಂಡ ರಾಜಸ್ಥಾನ ಮತ್ತು ಚೆನ್ನೈ ವಿರುದ್ಧ ಪಂದ್ಯಗಳನ್ನಾಡಲಿದೆ. ಚೆನ್ನೈನಲ್ಲಿ ಕ್ಲೀನ್ ಸ್ವೀಪ್ ಮಾಡಿದಂತೆ, ಮುಂಬೈನಲ್ಲೂ ಕ್ಲೀನ್ ಸ್ವೀಪ್ ಸಾಧನೆ ಮಾಡಲು ಕೊಹ್ಲಿ ಹುಡುಗರು ತುದಿಗಾಲಲ್ಲಿ ನಿಂತಿದ್ದಾರೆ. ಆರ್​ಸಿಬಿ ತಂಡದ ಬಿಗ್ ಹಿಟ್ಟರ್ ಗ್ಲೆನ್​ ಮ್ಯಾಕ್ಸ್​ವೆಲ್, ಮುಂಬೈನಲ್ಲಿ ಎರಡೂ ಪಂದ್ಯಗಳನ್ನ ನಾವೇ ಗೆಲ್ತೀವಿ ಅನ್ನೋ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಚೆನ್ನೈನಂತೆ ಮುಂಬೈನಲ್ಲೂ ಅಬ್ಬರಿಸಲು RCB ರೆಡಿ! ಚೆನ್ನೈನಲ್ಲಿ ಆಡಿದ ಮೊದಲ ಮೂರು ಪಂದ್ಯಗಳನ್ನ ಗೆದ್ದು ಬೀಗಿರುವ ಆರ್​ಸಿಬಿ, ಇದೀಗ ಮುಂಬೈನ ವಾಂಖೆಡೆ ಮೈದಾನದಲ್ಲೂ ಗೆಲುವಿನ ರಿದಮ್ ಮುಂದುವರಿಸುವ ವಿಶ್ವಾಸದಲ್ಲಿದೆ. ಚೆನ್ನೈ ಪಿಚ್ ಮುಖ್ಯವಾಗಿ ಸ್ಪಿನರ್​​ಗಳಿಗೆ ನೆರವಾಗುತ್ತಿತ್ತು. ಆದ್ರೆ ವಾಂಖೆಡೆ ಪಿಚ್ ಬ್ಯಾಟ್ಸ್​​ಮನ್​ಗಳಿಗೆ ಹೆಚ್ಚಾಗಿ ನೆರವಾಗಲಿದೆ. ಹೀಗಾಗಿ ಆರ್​ಸಿಬಿ ಆಟಗಾರರು ವಾಂಖೆಡೆ ಪಿಚ್​​ನ ಸ್ವರೂಪಕ್ಕೆ ತಕ್ಕಂತೆ, ತಂಡದ ಪ್ಲ್ಯಾನ್​ಗಳನ್ನ ಬದಲಿಸಿಕೊಂಡು ಅಬ್ಬರಿಸಿಲು ಸಜ್ಜಾಗಿದ್ದಾರೆ.

ವಾಂಖೆಡೆ ಮೈದಾನದಲ್ಲಿ ಕೊಹ್ಲಿ ಪಡೆಯಿಂದ ಅದ್ವಿತೀಯ ದಾಖಲೆ! ವಾಂಖೆಡೆ ಮೈದಾನದಲ್ಲಿ ಆರ್​ಸಿಬಿ ಸಾಧನೆ ಅದ್ಭುತವಾಗಿದೆ. ವಾಂಖೆಡೆಯಲ್ಲಿ ಅತೀ ಹೆಚ್ಚು ರನ್​ಗಳಿಸಿದ ಸಾಧನೆ ಆರ್​ಸಿಬಿ ತಂಡದ ಹೆಸರಿನಲ್ಲಿದೆ. 2015ರಲ್ಲಿ ಆರ್​ಸಿಬಿ, ಮುಂಬೈ ವಿರುದ್ಧ 235 ರನ್​ಗಳಿಸಿತ್ತು. ಮಿಸ್ಟರ್ 360 ಬ್ಯಾಟ್ಸ್​​ಮನ್​ 133 ರನ್​ಗಳಿಸಿ ಅಬ್ಬರಿಸಿದ್ರೆ, ನಾಯಕ ವಿರಾಟ್ ಕೊಹ್ಲಿ 82 ರನ್​ಗಳಿಸಿ ಅಜೇಯರಾಗುಳಿದಿದ್ದರು. ತವರಿನ ನೆಲದಲ್ಲೇ ಮುಂಬೈ ವಿರುದ್ಧ ಆರ್​ಸಿಬಿ ಮಾಡಿರುವ ಈ ಸಾಧನೆ, ಎದುರಾಳಿಗಳಿಗೆ ಆರ್​ಸಿಬಿ ಮೇಲೆ ಹೆಚ್ಚು ಆತಂಕವನ್ನುಂಟು ಮಾಡಿದೆ.

ಆರ್​ಸಿಬಿಗೆ ವರದಾನವಾಗಲಿದೆ ಚೇಸಿಂಗ್ ಪಿಚ್! ವಾಂಖೆಡೆ ಪಿಚ್​ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ತಂಡಕ್ಕಿಂತ, ಚೇಸಿಂಗ್ ಮಾಡಿದ ತಂಡಗಳೇ ಹೆಚ್ಚಿನ ಗೆಲುವು ದಾಖಲಿಸಿವೆ. ಇದು ಆರ್​ಸಿಬಿಗೆ ವರದಾನವಾಗಲಿದೆ. ಗುರಿ ಬೆನ್ನತ್ತುವ ವಿಚಾರದಲ್ಲಿ ಆರ್​ಸಿಇಬ ತಂಡದಲ್ಲಿ ಚೇಸಿಂಗ್ ಮಾಸ್ಟರ್​ಗಳೇ ಇದ್ದಾರೆ. ನಾಯಕ ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್ ಮತ್ತು ಗ್ಲೆನ್ ಮ್ಯಾಕ್ಸ್​ವೆಲ್ ಚೇಸಿಂಗ್ ಪಿಚ್​ನಲ್ಲಿ ಬೆಟ್ಟದಂತ ಗುರಿಯನ್ನ ನಿರಾಯಾಸವಾಗಿ ಬೆನ್ನಟ್ಟುವ ಸಾಮರ್ಥ್ಯ ಹೊಂದಿದ್ದಾರೆ.

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ