AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಐಪಿಎಲ್​ನಲ್ಲಿ ಚೊಚ್ಚಲ ಶತಕ ಬಾರಿಸಿದ ಜೋಸ್ ಬಟ್ಲರ್! ರಾಜಸ್ಥಾನ್ ಪರ ಶತಕ ಸಿಡಿಸಿದ 6ನೇ ಬ್ಯಾಟ್ಸ್​ಮನ್

IPL 2021: ಐಪಿಎಲ್ 2021 ರಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ 56 ಎಸೆತಗಳಲ್ಲಿ 10 ಬೌಂಡರಿ ಮತ್ತು ಐದು ಸಿಕ್ಸರ್‌ಗಳೊಂದಿಗೆ ಶತಕ ಗಳಿಸಿದ್ದಾರೆ.

IPL 2021: ಐಪಿಎಲ್​ನಲ್ಲಿ ಚೊಚ್ಚಲ ಶತಕ ಬಾರಿಸಿದ ಜೋಸ್ ಬಟ್ಲರ್! ರಾಜಸ್ಥಾನ್ ಪರ ಶತಕ ಸಿಡಿಸಿದ 6ನೇ ಬ್ಯಾಟ್ಸ್​ಮನ್
* ಜೋಸ್ ಬಟ್ಲರ್ (ರಾಜಸ್ಥಾನ್ ರಾಯಲ್ಸ್)
ಪೃಥ್ವಿಶಂಕರ
|

Updated on: May 02, 2021 | 7:06 PM

Share

ರಾಜಸ್ಥಾನ್ ರಾಯಲ್ಸ್ ಓಪನರ್ ಜೋಸ್ ಬಟ್ಲರ್ ಐಪಿಎಲ್ 2021 ರಲ್ಲಿ ಶತಕ ಬಾರಿಸಿದ್ದಾರೆ. ಐಪಿಎಲ್ 2021 ರಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ 56 ಎಸೆತಗಳಲ್ಲಿ 10 ಬೌಂಡರಿ ಮತ್ತು ಐದು ಸಿಕ್ಸರ್‌ಗಳೊಂದಿಗೆ ಶತಕ ಗಳಿಸಿದ್ದಾರೆ. ಐಪಿಎಲ್ ಜೊತೆ ಟಿ 20 ಕ್ರಿಕೆಟ್‌ನಲ್ಲಿ ಇದು ಅವರ ಮೊದಲ ಶತಕ. ಜೋಸ್ ಬಟ್ಲರ್ 282 ನೇ ಟಿ 20 ಪಂದ್ಯದಲ್ಲಿ ಶತಕ ಬಾರಿಸಿದ್ದಾರೆ. 64 ಎಸೆತಗಳಲ್ಲಿ 124 ರನ್ ಗಳಿಸಿದ ನಂತರ ಅವರು ಔಟ್ ಆದರು. ಈ ಅವಧಿಯಲ್ಲಿ ಅವರು ಒಟ್ಟು 11 ಬೌಂಡರಿ ಮತ್ತು ಎಂಟು ಸಿಕ್ಸರ್‌ಗಳನ್ನು ಹೊಡೆದರು. ಐಪಿಎಲ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ಗಳಿಸಿದ ಗರಿಷ್ಠ ಸ್ಕೋರ್ ಇದಾಗಿದೆ. ಅಲ್ಲದೆ, ಇದು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಎರಡನೇ ಅತಿದೊಡ್ಡ ಇನ್ನಿಂಗ್ಸ್ ಆಗಿದೆ.

27 ಎಸೆತಗಳಲ್ಲಿ 82 ರನ್ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದ ವೇಳೆ ಬಟ್ಲರ್ 37 ಎಸೆತಗಳಲ್ಲಿ 42 ರನ್ ಬಾರಿಸಿದ್ದರು. ಇದರ ನಂತರ ಅವರು ಆಕ್ರಮಣಕಾರಿಯಾಗಿ ಬ್ಯಾಟಿಂಗ್ ಮಾಡಿದರು ಮತ್ತು ಮುಂದಿನ 27 ಎಸೆತಗಳಲ್ಲಿ 82 ರನ್ ಗಳಿಸಿದರು. ಅದೇ ಸಮಯದಲ್ಲಿ, ಇದು ರಾಜಸ್ಥಾನ್ ರಾಯಲ್ಸ್ನಿಂದ ಒಂಬತ್ತನೇ ಐಪಿಎಲ್ ಶತಕವಾಗಿದೆ. ಬಟ್ಲರ್ ಈ ತಂಡದಿಂದ ಶತಕ ಗಳಿಸಿದ ಆರನೇ ಬ್ಯಾಟ್ಸ್‌ಮನ್. ರಾಜಸ್ಥಾನಕ್ಕೆ ಸಂಬಂಧಿಸಿದಂತೆ, ಐಸಿಎಲ್ 2010 ರಲ್ಲಿ ಯೂಸುಫ್ ಪಠಾಣ್ ಮೊದಲ ಶತಕ ಗಳಿಸಿದರು. ಇದರ ನಂತರ ಅಜಿಂಕ್ಯ ರಹಾನೆ, ಶೇನ್ ವ್ಯಾಟ್ಸನ್ ಮತ್ತು ಸಂಜು ಸ್ಯಾಮ್ಸನ್ ತಲಾ ಎರಡು ಶತಕ ಗಳಿಸಿದರೆ, ಬೆನ್ ಸ್ಟೋಕ್ಸ್ ಐಪಿಎಲ್ 2020 ರಲ್ಲಿ ಶತಕ ಬಾರಿಸಿದರು.

ರಾಜಸ್ಥಾನ್ ರಾಯಲ್ಸ್ ಆಟಗಾರರ ಶತಕಗಳು ಯೂಸುಫ್ ಪಠಾಣ್ vs ಮುಂಬೈ ಇಂಡಿಯನ್ಸ್ (2010) ಅಜಿಂಕ್ಯ ರಹಾನೆ vs ರಾಯಲ್ ಚಾಲೆಂಜರ್ಸ್ ಬೆಂಗಳೂರು (2012) ಶೇನ್ ವ್ಯಾಟ್ಸನ್ Vs ಚೆನ್ನೈ ಸೂಪರ್ ಕಿಂಗ್ಸ್ (2013) ಶೇನ್ ವ್ಯಾಟ್ಸನ್ vs ಕೋಲ್ಕತಾ ನೈಟ್ ರೈಡರ್ಸ್ (2015) ಸಂಜು ಸ್ಯಾಮ್ಸನ್ vs ಸನ್‌ರೈಸರ್ಸ್ ಹೈದರಾಬಾದ್ (2019) ಅಜಿಂಕ್ಯ ರಹಾನೆ vs ದೆಹಲಿ ಕ್ಯಾಪಿಟಲ್ಸ್ (2019) ಬೆನ್ ಸ್ಟೋಕ್ಸ್ Vs ಮುಂಬೈ ಇಂಡಿಯನ್ಸ್ (2020) ಸಂಜು ಸ್ಯಾಮ್ಸನ್ Vs ಪಂಜಾಬ್ ಕಿಂಗ್ಸ್ (2021) ಜೋಸ್ ಬಟ್ಲರ್ vs ಸನ್‌ರೈಸರ್ಸ್ ಹೈದರಾಬಾದ್ (2021)

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ