Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಆರ್​ಸಿಬಿ ರಣತಂತ್ರ! ಐಪಿಎಲ್​ನಲ್ಲಿ ಕೊಹ್ಲಿ ಆರಂಭಿಕರಾಗಿ ಕಣಕ್ಕಿಳಿಯುವುದನ್ನು ನಾವು ಹರಾಜಿಗೂ ಮುನ್ನವೇ ತೀರ್ಮಾನಿಸಿದ್ದೇವು

IPL 2021: ನಿಸ್ಸಂಶಯವಾಗಿ, ನಾವು ಐಪಿಎಲ್​ ಹರಾಜಿಗೂ ಮೊದಲು ಕೊಹ್ಲಿ ಆರಂಭಿಕನಾಗಿ ಆಡುವ ಬಗ್ಗೆ ಮಾತನಾಡಿದ್ದವು.

IPL 2021: ಆರ್​ಸಿಬಿ ರಣತಂತ್ರ! ಐಪಿಎಲ್​ನಲ್ಲಿ ಕೊಹ್ಲಿ ಆರಂಭಿಕರಾಗಿ ಕಣಕ್ಕಿಳಿಯುವುದನ್ನು ನಾವು ಹರಾಜಿಗೂ ಮುನ್ನವೇ ತೀರ್ಮಾನಿಸಿದ್ದೇವು
ವಿರಾಟ್​ ಕೊಹ್ಲಿ ಜೊತೆ ದೇವದತ್ ಪಡಿಕ್ಕಲ್
Follow us
ಪೃಥ್ವಿಶಂಕರ
|

Updated on:Mar 25, 2021 | 1:03 PM

ಇಂಡಿಯನ್ ಪ್ರೀಮಿಯರ್ ಲೀಗ್‌ನ ಮುಂಬರುವ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಇನ್ನಿಂಗ್ಸ್ ಆರಂಭಿಸುವುದಾಗಿ ಭಾರತದ ನಾಯಕ ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಸರಣಿಯ ಐದನೇ ಮತ್ತು ಅಂತಿಮ ಟಿ 20 ಐ ನಂತರ ಖಚಿತಪಡಿಸಿದ್ದರು. ಸಾಮಾನ್ಯವಾಗಿ ಕಡಿಮೆ ಸ್ವರೂಪ ಮತ್ತು ಐವತ್ತು ಓವರ್ ಫಾರ್ಮ್ಯಾಟ್‌ಗಳಲ್ಲಿ ನಂ .3 ರಲ್ಲಿ ಬ್ಯಾಟ್ ಮಾಡುವ ಕೊಹ್ಲಿ, 5 ನೇ ಟಿ 20 ಯಲ್ಲಿ ರೋಹಿತ್ ಶರ್ಮಾ ಅವರೊಂದಿಗೆ ಇನ್ನಿಂಗ್ಸ್​ ಆರಂಭಿಸಿದ್ದರು. ಇದರಿಂದ ಟೀಂ ಇಂಡಿಯಾ ಕೂಡ ಭರ್ಜರಿ ಜಯ ಗಳಿಸಿತ್ತು. ಪಂದ್ಯದ ನಂತರ ಈ ಬಗ್ಗೆ ಮಾತಾನಾಡಿದ್ದ ಕೊಹ್ಲಿ, ಈ ಬಾರಿಯ ಐಪಿಎಲ್​ನಲ್ಲೂ ನಾನು ಆರಂಭಿಕನಾಗಿ ಬ್ಯಾಟ್​ ಬೀಸಲಿದ್ದೇನೆ ಎಂದು ಹೇಳಿಕೊಂಡಿದ್ದರು. ಈಗ ಕೊಹ್ಲಿ ಹೇಳಿಕೆಗೆ ಸ್ಪಷ್ಟನೇ ನೀಡಿರುವ ಆರ್‌ಸಿಬಿಯ ಕ್ರಿಕೆಟ್ ಕಾರ್ಯಾಚರಣೆಗಳ ನಿರ್ದೇಶಕ ಮೈಕ್ ಹೆಸ್ಸನ್, ಫೆಬ್ರವರಿಯಲ್ಲಿ ಐಪಿಎಲ್ ಹರಾಜಿಗೆ ಮುಂಚಿತವಾಗಿ ಕೊಹ್ಲಿ ಇನ್ನಿಂಗ್ಸ್ ತೆರೆಯುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.

ಕೊಹ್ಲಿ ಆರಂಭಿಕನಾಗಿ ಆಡುವ ಬಗ್ಗೆ ಮಾತನಾಡಿದ್ದವು ನಿಸ್ಸಂಶಯವಾಗಿ, ನಾವು ಐಪಿಎಲ್​ ಹರಾಜಿಗೂ ಮೊದಲು ಕೊಹ್ಲಿ ಆರಂಭಿಕನಾಗಿ ಆಡುವ ಬಗ್ಗೆ ಮಾತನಾಡಿದ್ದವು. ಏಕೆಂದರೆ ಆ ಚಿಂತನೆ ನಮ್ಮ ಬ್ಯಾಟಿಂಗ್​ ಶ್ರೇಣಿಯನ್ನು ಹೇಗೆ ರಚಿಸಬೇಕೆಂಬುದರ ದೃಷ್ಟಿಯಿಂದ ನಮ್ಮ ಹರಾಜು ಯೋಜನೆ ಸೃಷ್ಟಿಯಾಗಿತ್ತು. ಆದ್ದರಿಂದ ಖಂಡಿತವಾಗಿಯೂ ಅಲ್ಲಿ ಆಶ್ಚರ್ಯವಿಲ್ಲ ಎಂದು ಹೆಸ್ಸನ್ ಹೇಳಿದರು. ಟಿ 20 ಯಲ್ಲಿ 52 ಎಸೆತಗಳಲ್ಲಿ 80 ರನ್‌ಗಳಿಸಿದ್ದ ಕೊಹ್ಲಿ ಅಜೇಯರಾಗಿ ಉಳಿದಿದ್ದರು. ಇದರ ಫಲವಾಗಿ ಭಾರತವು 36 ರನ್‌ಗಳ ಗೆಲುವು ದಾಖಲಿಸಿ ಸರಣಿಯನ್ನು 3-2ರಿಂದ ಗೆದ್ದುಕೊಂಡಿತು.

ವಿರಾಟ್, ಪಡಿಕಲ್​ ಜೊತೆ ಇನ್ನಿಂಗ್ಸ್​ ಆರಂಭಿಸುವುದನ್ನು ನಿಜವಾಗಿಯೂ ಎದುರು ನೋಡುತ್ತಿದ್ದೇನೆ. ಎಡ ಮತ್ತು ಬಲ ಸಂಯೋಜನೆ ಬ್ಯಾಟಿಂಗ್​ನಲ್ಲಿ ಉತ್ತಮ ರನ್​ ಗಳಿಸಲು ಸಹಾಯ ಮಾಡಬಲ್ಲದು. ವಿರಾಟ್ ಪವರ್‌ಪ್ಲೇನಲ್ಲಿ ಆಡಿದಾಗ ಅವರ ದಾಖಲೆಯನ್ನು ನಾವು ತಿಳಿದಿದ್ದೇವೆ. ಆದ್ದರಿಂದ ಕೊಹ್ಲಿ ಆರಂಭಿಕರಾಗಿ ಬ್ಯಾಟ್​ ಮಾಡಿದರೆ, ನಂತರ ಯಾವ ಆಟಗಾರನನ್ನು ಬ್ಯಾಟಿಂಗ್​ಗೆ ಕಳುಹಿಸಬಹುದು ಎಂಬುದನ್ನು ನಾವು ತೀರ್ಮಾನಿಸಬಹುದಾಗಿದೆ ಎಂದರು.

ಎಬಿ ಡಿವಿಲಿಯರ್ಸ್ ಹೆಚ್ಚು ಒತ್ತಡವಿಲ್ಲದೆ ಬ್ಯಾಟ್​ ಬೀಸಲಿದ್ದಾರೆ ಪಂದ್ಯಾವಳಿಯ ಹಿಂದಿನ ಆವೃತ್ತಿಯಲ್ಲಿ ಎಬಿ ಡಿವಿಲಿಯರ್ಸ್ ವಿಕೆಟ್ ಕೀಪಿಂಗ್‌ಗೆ ಮರಳಿದ್ದರು. ಆದರೆ ಈ ವರ್ಷದ ಐಪಿಎಲ್ ಹರಾಜಿನಲ್ಲಿ ಆರ್‌ಸಿಬಿ ತಜ್ಞ ವಿಕೆಟ್‌ಕೀಪರ್‌ಗಳಾದ ಮೊಹಮ್ಮದ್ ಅಜರುದ್ದೀನ್ ಮತ್ತು ಕೆ.ಎಸ್. ಭರತ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ. ಇದರಿಂದ ಎಬಿ ಡಿವಿಲಿಯರ್ಸ್ ಹೆಚ್ಚು ಒತ್ತಡವಿಲ್ಲದೆ ಬ್ಯಾಟ್​ ಬೀಸಲಿದ್ದಾರೆ ಎಂದರು. ಎಬಿ ಡಿವಿಲಿಯರ್ಸ್ ವಿಕೆಟ್ ಕೀಪಿಂಗ್ ಇಷ್ಟಪಟ್ಟಿದ್ದರಿಂದ ನಾವು ಅದನ್ನು ಮುಂದುವರೆಸಲು ಹೇಳಿದ್ದವು. ಇದು ಎಬಿ ಡಿವಿಲಿಯರ್ಸ್ ಅವರ ಸ್ವಂತ ತೀರ್ಮಾನವಾಗಿತ್ತು ಎಂದು ಹೆಸ್ಸನ್ ಹೇಳಿದರು.

ನಾನು ಐಪಿಎಲ್‌ನಲ್ಲೂ ಆರಂಭಿಕನಾಗಿ ಕಣಕ್ಕಿಳಿಯಲ್ಲಿದ್ದೇನೆ.. ಅಂತಿಮ ಟಿ20 ಪಂದ್ಯದ ಗೆಲುವಿನ ಬಳಿಕ ಮಾತಾನಾಡಿದ ನಾಯಕ ಕೊಹ್ಲಿ ಹೌದು, ನಾನು ಐಪಿಎಲ್‌ನಲ್ಲೂ ಆರಂಭಿಕನಾಗಿ ಕಣಕ್ಕಿಳಿಯಲ್ಲಿದ್ದೇನೆ. ನೋಡಿ, ನಾನು ಈ ಹಿಂದೆ ಬೇರೆ ಬೇರೆ ಸ್ಥಾನಗಳಲ್ಲಿ ಬ್ಯಾಟಿಂಗ್ ಮಾಡಿದ್ದೇನೆ, ಆದರೆ ನಾವು ಈಗ ಬಹಳ ಮಧ್ಯಮ ಕ್ರಮಾಂಕವನ್ನು ಹೊಂದಿದ್ದೇವೆ ಎಂದು ನನಗೆ ಅನಿಸುತ್ತದೆ. ಹೀಗಾಗಿ ಇಬ್ಬರು ಶ್ರೇಷ್ಠ ಆಟಗಾರರಿಗೆ ಆಡಲು ಅತಿ ಹೆಚ್ಚು ಎಸೆತಗಳು ಸಿಗಲಿ ಎಂಬುದು ಇದರ ಹಿಂದಿನ ಉದ್ದೇಶ. ಹಾಗಾಗಿ ನಾನು ಖಂಡಿತವಾಗಿಯೂ ಓಪನರ್​ ಆಗಿ ರೋಹಿತ್‌ ಜೊತೆ ಉತ್ತಮ ಜೊತೆಯಾಟ ಆಡಲು ಇಷ್ಟಪಡುತ್ತೇನೆ. ಏಕೆಂದರೆ ಇಬ್ಬರಲ್ಲಿ ಒಬ್ಬರು ಕ್ರೀಸ್‌ನಲ್ಲಿ ಇದ್ದರೂ ಉಳಿದ ಬ್ಯಾಟ್ಸ್‌ಮನ್‌ಗಳಿಗೆ ಆತ್ಮವಿಶ್ವಾಸ ಸಿಗಲಿದೆ. ಇದರಿಂದ ತಂಡದ ಮೊತ್ತವೂ ಹೆಚ್ಚಲಿದೆ. ಆಟಗಾರರು ಭಯಬಿಟ್ಟು ಮೈದಾನದಲ್ಲಿ ಬ್ಯಾಟ್​ ಬೀಸುತ್ತಾರೆ. ಹೀಗಾಗಿ ಇದನ್ನೇ ಮುಂದುವರಿಯಲು ಇಚ್ಚಿಸುತ್ತೇನೆ ಎಂದು ಕೊಹ್ಲಿ ಹೇಳಿದ್ದರು.

ಇದನ್ನೂ ಓದಿ:IPL 2021: ಧೋನಿ ಇದ್ದಿದ್ದಕ್ಕೆ ನಿನ್ನನ್ನು ಸಿಎಸ್‌ಕೆಗೆ ತೆಗೆದುಕೊಳ್ಳಲಾಯ್ತು ಅನ್ನೋ ಮಾತು ನಾಳೆ ಬರಬಾರದು ಅಲ್ವಾ? ಉತ್ತಪ್ಪಗೆ ಕರೆ ಮಾಡಿದ್ದ ಧೋನಿ ಹೇಳಿದ್ದಿಷ್ಟು!

Published On - 1:00 pm, Thu, 25 March 21

ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಹಿಂದಿನಿಂದ ಗುದ್ದಿದ ಮಿನಿಬಸ್ ಚಾಲಕ
ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಹಿಂದಿನಿಂದ ಗುದ್ದಿದ ಮಿನಿಬಸ್ ಚಾಲಕ
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ