AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021 PBKS vs CSK: ಕೊಹ್ಲಿಗೆ ಬೇಡವಾಗಿ ಪಂಜಾಬ್​ ಸೇರಿದ ಈ ಐದು ಆಟಗಾರರೇ ಇಂದು ಧೋನಿಯನ್ನು ಇನ್ನಿಲ್ಲದಂತೆ ಕಾಡುತ್ತಿದ್ದಾರೆ!

IPL 2021: ರಾಹುಲ್ ಅವರಲ್ಲದೆ, ಕ್ರಿಸ್ ಗೇಲ್, ಮಾಯಾಂಕ್ ಅಗರ್ವಾಲ್, ಸರ್ಫರಾಜ್ ಖಾನ್ ಮತ್ತು ಮಂದೀಪ್ ಸಿಂಗ್ ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಭಾಗವಾಗಿದ್ದರು.

IPL 2021 PBKS vs CSK: ಕೊಹ್ಲಿಗೆ ಬೇಡವಾಗಿ ಪಂಜಾಬ್​ ಸೇರಿದ ಈ ಐದು ಆಟಗಾರರೇ ಇಂದು ಧೋನಿಯನ್ನು ಇನ್ನಿಲ್ಲದಂತೆ ಕಾಡುತ್ತಿದ್ದಾರೆ!
ಪಂಜಾಬ್ ತಂಡ
ಪೃಥ್ವಿಶಂಕರ
|

Updated on:Apr 16, 2021 | 4:52 PM

Share

ಇಂಡಿಯನ್ ಪ್ರೀಮಿಯರ್ ಲೀಗ್‌ನ ಇಂದಿನ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಚೆನ್ನೈ ಸೂಪರ್‌ಕಿಂಗ್ಸ್ ಸ್ಪರ್ಧಿಸಲಿವೆ. ಕೆ.ಎಲ್. ರಾಹುಲ್ ನೇತೃತ್ವದ ಪಂಜಾಬ್ ತಂಡವು ಗೆಲುವಿನೊಂದಿಗೆ ತಮ್ಮ ಅಭಿಯಾನವನ್ನು ಪ್ರಾರಂಭಿಸಿದರೆ, ಚೆನ್ನೈ ಸೂಪರ್ ಕಿಂಗ್ಸ್ ಮೊದಲ ಪಂದ್ಯದಲ್ಲಿ ದೆಹಲಿ ಕ್ಯಾಪಿಟಲ್ಸ್ ವಿರುದ್ಧ ಸೋತು ತೀವ್ರ ಮುಖಭಂಗ ಅನುಭವಿಸಿದೆ. ಮೊದಲ ಪಂದ್ಯದಲ್ಲಿ ಸೋಲಿನ ಹೊರತಾಗಿಯೂ, ಧೋನಿಗೆ ತೊಂದರೆಗಳು ಕಡಿಮೆಯಾಗಿಲ್ಲ. ಕೊಹ್ಲಿಗೆ ಬೇಡವಾದ ಈ ಐದು ಆಟಗಾರರು ಈಗ ಧೋನಿಗೆ ದೊಡ್ಡ ತಲೆನೋವಾಗಿದ್ದಾರೆ.

ಪಂಜಾಬ್ ಕಿಂಗ್ಸ್ ತಂಡದ ಐದು ಆಟಗಾರರು ಆರ್ಸಿಬಿಯ ಭಾಗವಾಗಿದ್ದರು ವಾಸ್ತವವಾಗಿ, ಪಂಜಾಬ್ ಕಿಂಗ್ಸ್ ತಂಡದ ಐದು ಆಟಗಾರರು ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಭಾಗವಾಗಿದ್ದರು. ಇವುಗಳಲ್ಲಿ ಪಂಜಾಬ್‌ ತಂಡದ ನಾಯಕ ಕೆ.ಎಲ್.ರಾಹುಲ್ ಅವರು ಹೆಸರು ಸೇರಿದೆ. ರಾಹುಲ್ ಅವರಲ್ಲದೆ, ಕ್ರಿಸ್ ಗೇಲ್, ಮಾಯಾಂಕ್ ಅಗರ್ವಾಲ್, ಸರ್ಫರಾಜ್ ಖಾನ್ ಮತ್ತು ಮಂದೀಪ್ ಸಿಂಗ್ ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಭಾಗವಾಗಿದ್ದರು. ಈ ಪೈಕಿ ರಾಹುಲ್, ಗೇಲ್ ಮತ್ತು ಮಾಯಾಂಕ್ ನಿಯಮಿತವಾಗಿ ತಂಡದ ಆಡುವ ಇಲೆವೆನ್‌ನ ಭಾಗವಾಗಿದ್ದರೆ, ಸರ್ಫರಾಜ್ ಮತ್ತು ಮಂದೀಪ್ ಕೂಡ ಕಾಲಕಾಲಕ್ಕೆ ತಂಡಕ್ಕಾಗಿ ಮೈದಾನಕ್ಕಿಳಿಯುತ್ತಿದ್ದಾರೆ.

ಮೊದಲ ಪಂದ್ಯವನ್ನು ಪಂಜಾಬ್ ಗೆದ್ದುಕೊಂಡಿತು, ಚೆನ್ನೈಗೆ ಗೆಲುವಿನೊಂದಿಗಿನ ಚೊಚ್ಚಲ ಪ್ರವೇಶ ಸಾಧ್ಯವಾಗಲಿಲ್ಲ. ಐಪಿಎಲ್‌ನ 14 ನೇ ಆವೃತ್ತಿಯಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಗೆಲುವಿನೊಂದಿಗೆ ಪಂಜಾಬ್ ತಂಡವು ತಮ್ಮ ಅಭಿಯಾನವನ್ನು ಪ್ರಾರಂಭಿಸಿದರೆ, ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ತಮ್ಮ ಮೊದಲ ಪಂದ್ಯವನ್ನು ಕಳೆದುಕೊಂಡಿತು. ಪಂಜಾಬ್ ಕಿಂಗ್ಸ್ 6 ವಿಕೆಟ್ ಕಳೆದುಕೊಂಡು 221 ರನ್ ಗಳಿಸಿತ್ತು. ಇದಕ್ಕೆ ಪ್ರತಿಕ್ರಿಯೆಯಾಗಿ, ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ತಂಡವು 7 ವಿಕೆಟ್‌ಗಳಿಗೆ 217 ರನ್ ಗಳಿಸಲಷ್ಟೇ ಶಕ್ತವಾಯಿತು. ಅದೇ ಸಮಯದಲ್ಲಿ, ಚೆನ್ನೈ ತಂಡವು ದೆಹಲಿ ಕ್ಯಾಪಿಟಲ್ಸ್ ವಿರುದ್ಧ 7 ವಿಕೆಟ್ ನಷ್ಟಕ್ಕೆ 188 ರನ್‌ಗಳ ಸವಾಲಿನ ಸ್ಕೋರ್ ಗಳಿಸಿತು. ಆದರೆ ರಿಷಭ್ ಪಂತ್ ನೇತೃತ್ವದ ದೆಹಲಿ ತಂಡವು 18.4 ಓವರ್‌ಗಳಲ್ಲಿ ಕೇವಲ 3 ವಿಕೆಟ್ ಕಳೆದುಕೊಂಡು ಗುರಿ ಸಾಧಿಸಿತು. ಪಂಜಾಬ್ ತಂಡವು ತಮ್ಮ ಗೆಲುವಿನ ಹಾದಿಯನ್ನು ಮುನ್ನಡೆಸುತ್ತದೆಯೇ ಅಥವಾ ಧೋನಿಯ ಚೆನ್ನೈ ಗೆಲುವಿನ ಹಾದಿಗೆ ಮರಳಲು ಸಾಧ್ಯವಾಗುತ್ತದೆಯೇ ಎಂದು ನೋಡಬೇಕಾಗಿದೆ.

Published On - 4:49 pm, Fri, 16 April 21

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ