AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂಜರಿಯಬೇಡಿ, ಬೇಗ ಲಸಿಕೆ ಪಡೆಯಿರಿ; ಕೊವಿಡ್ ಲಸಿಕೆ ಪಡೆದ ಟೀಂ ಇಂಡಿಯಾದ ಮೊದಲ ಕ್ರಿಕೆಟಿಗ ಶಿಖರ್​ ಧವನ್

ಕೊರೊನಾ ಯೋಧರ ತ್ಯಾಗ ಮತ್ತು ಬದ್ಧತೆಗೆ ಧನ್ಯವಾದಗಳು. ದಯವಿಟ್ಟು ಹಿಂಜರಿಯಬೇಡಿ, ಶೀಘ್ರದಲ್ಲೇ ಲಸಿಕೆ ಪಡೆಯಿರಿ: ಶಿಖರ್ ಧವನ್​

ಹಿಂಜರಿಯಬೇಡಿ, ಬೇಗ ಲಸಿಕೆ ಪಡೆಯಿರಿ; ಕೊವಿಡ್ ಲಸಿಕೆ ಪಡೆದ ಟೀಂ ಇಂಡಿಯಾದ ಮೊದಲ ಕ್ರಿಕೆಟಿಗ ಶಿಖರ್​ ಧವನ್
ಕೋವಿಡ್ ಲಸಿಕೆ ಪಡೆದ ಟೀಂ ಇಂಡಿಯಾದ ಮೊದಲ ಕ್ರಿಕೆಟಿಗ ಶಿಖರ್​ ಧವನ್
Follow us
ಪೃಥ್ವಿಶಂಕರ
| Updated By: Skanda

Updated on:May 07, 2021 | 8:30 AM

ಐಪಿಎಲ್ 2021 ಮುಂದೂಡಲ್ಪಟ್ಟ ನಂತರ, ಭಾರತೀಯ ಕ್ರಿಕೆಟಿಗರು ಸೇರಿದಂತೆ ಎಲ್ಲಾ ಆಟಗಾರರು ತಮ್ಮ ತಮ್ಮ ಮನೆಗಳಿಗೆ ಮರಳಲು ಪ್ರಾರಂಭಿಸಿದ್ದಾರೆ. ಅಂತಹ ಪರಿಸ್ಥಿತಿಯಲ್ಲಿ, ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುತ್ತಾ, ಟೀಮ್ ಇಂಡಿಯಾದ ಹಿರಿಯ ಬ್ಯಾಟ್ಸ್‌ಮನ್ ಶಿಖರ್ ಧವನ್ ಮೊದಲು ಅತ್ಯಂತ ಪ್ರಮುಖವಾದ ಕೆಲಸವನ್ನು ಮಾಡಿದ್ದಾರೆ. ಕೊರೊನಾ ವೈರಸ್ ವಿರುದ್ಧದ ಲಸಿಕೆ ಪಡೆಯಲು ಅತ್ಯುತ್ಸಾಹದಿಂದ ಮುಂದಡಿ ಇಟ್ಟ ಧವನ್​ ಇತರ ಭಾರತೀಯ ಆಟಗಾರರು ಸೇರಿದಂತೆ ಜನಸಾಮಾನ್ಯರೆಲ್ಲರಿಗೂ ಮಾದರಿಯಾಗಿದ್ದಾರೆ. ಮೇ 6 ರ ಗುರುವಾರದಂದು ಶಿಖರ್ ಧವನ್ ಕೊರೊನಾ ಲಸಿಕೆಯ ಮೊದಲ ಡೋಸ್​ ತೆಗೆದುಕೊಂಡಿದ್ದಾರೆ. ಲಸಿಕೆ ಪಡೆಯುವ ಪೋಟೋ ಹಂಚಿಕೊಂಡಿರುವ ಅವರು ಸಾಂಕ್ರಾಮಿಕ ರೋಗ ಉಲ್ಬಣಿಸುತ್ತಿರುವ ಈ ಹಂತದಲ್ಲಿ ಅದನ್ನು ಮಣಿಸಲು ಮುಂಚೂಣಿಯಲ್ಲಿ ನಿಂತಿರುವ ಆರೋಗ್ಯ ಕಾರ್ಯಕರ್ತರಿಗೆ ಧನ್ಯವಾದ ಅರ್ಪಿಸಿದ್ದಾರೆ. ಲಸಿಕೆ ತೆಗೆದುಕೊಂಡ ಟೀಮ್ ಇಂಡಿಯಾದ ಮೊದಲ ಆಟಗಾರ ಶಿಖರ್ ಧವನ್ ಎನ್ನುವುದು ಗಮನಾರ್ಹವಾಗಿದೆ.

ಐಪಿಎಲ್‌ನಲ್ಲಿ ದೆಹಲಿ ಕ್ಯಾಪಿಟಲ್ಸ್ ಓಪನರ್ ಶಿಖರ್ ಧವನ್ ಮುಂದಿನ ಬಾರಿ ಕೆಲ ನಿರ್ದಿಷ್ಟ ಪಂದ್ಯಾವಳಿಗಳಿಂದ ದೂರವಿರಲಿದ್ದಾರೆ. ಐಪಿಎಲ್​ ಕೂಡಾ ತಕ್ಷಣಕ್ಕೆ ಪುನಾರಂಭಗೊಳ್ಳುವ ಸಾಧ್ಯತೆ ಕಾಣುತ್ತಿಲ್ಲ. ಅಲ್ಲದೆ, ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಮತ್ತು ನಂತರ ಟೆಸ್ಟ್ ಸರಣಿಯ ಫೈನಲ್‌ಗಾಗಿ ಭಾರತ ತಂಡ ಇಂಗ್ಲೆಂಡ್‌ಗೆ ಹೋಗಲಿದೆ. ಧವನ್ ಭಾರತೀಯ ಟೆಸ್ಟ್ ತಂಡದ ಭಾಗವಲ್ಲ. ಅಂತಹ ಪರಿಸ್ಥಿತಿಯಲ್ಲಿ ಶಿಖರ್​ ಧವನ್ ಕೊರೊನಾ ಲಸಿಕೆ ಪಡೆಯಲು ಇದು ಉತ್ತಮ ಸಮಯವೆಂದು ಮುಂದೆ ಬಂದಿದ್ದಾರೆ.

ಲಸಿಕೆ ಮನವಿ ಐಪಿಎಲ್​ 2021ರಲ್ಲಿ ಇದುವರೆಗೆ ಧವನ್ ಅತಿ ಹೆಚ್ಚು ಅಂದರೆ 380 ರನ್ ಗಳಿಸಿದ್ದಾರೆ. ರನ್​ ಗಳಿಕೆಯಲ್ಲಿ ಮುಂಚೂಣಿಯಲ್ಲಿರುವ ಧವನ್ ಲಸಿಕೆ ಪಡೆಯುವುದರಲ್ಲಿಯೂ ಮೊದಲಿಗರಾಗಿದ್ದಾರೆ. ಗುರುವಾರ ಲಸಿಕೆ ಪಡೆದ ನಂತರ ಧವನ್, ನಾನು ಲಸಿಕೆ ತೆಗೆದುಕೊಂಡಿದ್ದೇನೆ. ಕೊರೊನಾ ಯೋಧರ ತ್ಯಾಗ ಮತ್ತು ಬದ್ಧತೆಗೆ ಧನ್ಯವಾದಗಳು. ದಯವಿಟ್ಟು ಹಿಂಜರಿಯಬೇಡಿ ಮತ್ತು ಶೀಘ್ರದಲ್ಲೇ ಲಸಿಕೆ ಪಡೆಯಿರಿ. ಇದರಿಂದ ವೈರಸ್‌ ವಿರುದ್ಧ ಹೋರಾಡಲು ಸಾಧ್ಯವಾಗುತ್ತದೆ ಎಂದಿದ್ದಾರೆ.

ಇತರ ಆಟಗಾರರು ಯಾವಾಗ ಲಸಿಕೆ ಪಡೆಯುತ್ತಾರೆ? ಆಟಗಾರರ ಪೈಕಿ ಧವನ್ ಮೊದಲು ಲಸಿಕೆ ತೆಗೆದುಕೊಂಡಿರುವರಾದರೂ,​ ಟೀಮ್ ಇಂಡಿಯಾದ ಮುಖ್ಯ ಕೋಚ್ ರವಿಶಾಸ್ತ್ರಿ ಮಾರ್ಚ್ ಮೊದಲ ವಾರದಲ್ಲೇ ಮೊದಲ ಡೋಸ್ ಲಸಿಕೆ ಪಡೆದಿದ್ದಾರೆ. ಸದ್ಯ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸೇರಿದಂತೆ ಇತರ ಪ್ರಮುಖ ಕ್ರಿಕೆಟಿಗರಿಗೆ ಲಸಿಕೆ ಹಾಕಲು ಯಾವ ವ್ಯವಸ್ಥೆಗಳನ್ನು ಮಾಡಲಾಗುವುದು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಏಕೆಂದರೆ ಟೀಮ್ ಇಂಡಿಯಾ ಈ ತಿಂಗಳ ಕೊನೆಯಲ್ಲಿ ಇಂಗ್ಲೆಂಡ್‌ಗೆ ಪ್ರಯಾಣಿಸಲಿದೆ ಹಾಗೂ ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ಟೆಸ್ಟ್ ಸರಣಿ ಅಂತ್ಯದ ನಂತರ ಹಿಂತಿರುಗಲಿದೆ. ಅಂತಹ ಪರಿಸ್ಥಿತಿಯಲ್ಲಿ, ಟೀಮ್ ಇಂಡಿಯಾದ ಆಟಗಾರರು ಹಿಂದಿರುಗಿದ ನಂತರ ಲಸಿಕೆ ಹಾಕುತ್ತಾರೆಯೇ ಅಥವಾ ಇಂಗ್ಲೆಂಡ್‌ನಲ್ಲಿ ಈ ಸೌಲಭ್ಯವನ್ನು ಪಡೆಯುತ್ತಾರೆಯೇ ಎಂಬುದು ಸ್ಪಷ್ಟವಾಗಿಲ್ಲ.

ಇದನ್ನೂ ಓದಿ: IPL 2021: ಐಪಿಎಲ್​ನಲ್ಲಿ ಭಾಗಿಯಾಗಿದ್ದ ಆಸಿಸ್ ಆಟಗಾರರನ್ನು ಸ್ವದೇಶಕ್ಕೆ ಕಳುಹಿಸಲು ಹೊಸ ಉಪಾಯ, ಬಿಸಿಸಿಐ ಸಹಾಯ!

Published On - 8:27 am, Fri, 7 May 21

ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ