AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB Blue Jersey: ಒಂದು ವರ್ಷದಿಂದ ನಮಗಾಗಿ ಹೋರಾಡಿದ್ದೀರಿ! ನೀಲಿ ಜೆರ್ಸಿ ತೊಟ್ಟು ಕೊರೊನಾ ಸಂತ್ರಸ್ತರಿಗೆ ದೇಣಿಗೆ ಸಂಗ್ರಹಿಸಲಿದೆ ಆರ್‌ಸಿಬಿ

RCB Blue Jersey : ಕಳೆದ ವರ್ಷದಿಂದಲೂ ಕೊರೊನಾ ವಾರಿಯರ್ಸ್​ ಪಿಪಿಇ ಕಿಟ್‌ಗಳನ್ನು ಧರಿಸಿರುತ್ತಾರೆ. ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಟ ಮಾಡುತ್ತಾ ಈ ಒಂದು ವರ್ಷವನ್ನು ಕಳೆದಿದ್ದಾರೆ.

RCB Blue Jersey: ಒಂದು ವರ್ಷದಿಂದ ನಮಗಾಗಿ ಹೋರಾಡಿದ್ದೀರಿ! ನೀಲಿ ಜೆರ್ಸಿ ತೊಟ್ಟು ಕೊರೊನಾ ಸಂತ್ರಸ್ತರಿಗೆ ದೇಣಿಗೆ ಸಂಗ್ರಹಿಸಲಿದೆ ಆರ್‌ಸಿಬಿ
ನೀಲಿ ಜೆರ್ಸಿಯಲ್ಲಿ ಆರ್​ಸಿಬಿ
ಪೃಥ್ವಿಶಂಕರ
|

Updated on: May 02, 2021 | 2:56 PM

Share

ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪ್ರತಿ ಆವೃತ್ತಿಯಲ್ಲೂ ಎರಡು ವಿಭಿನ್ನ ಜರ್ಸಿಗಳಲ್ಲಿ ಕಣಕ್ಕೆ ಇಳಿಯುತ್ತದೆ. ವಿರಾಟ್ ಕೊಹ್ಲಿ ತಂಡವು ಪ್ರತಿ ಐಪಿಎಲ್‌ನಲ್ಲಿ ಹಸಿರು ವಿಶೇಷ ಜರ್ಸಿ ಧರಿಸಿ ಒಂದು ಪಂದ್ಯವನ್ನು ಆಡುತ್ತದೆ. ಈ ಮೂಲಕ ಪರಿಸರದ ಸುರಕ್ಷತೆಯ ಕುರಿತು ಅರಿವು ಮೂಡಿಸುತ್ತದೆ. ಈ ಬಾರಿ, ದೇಶದಲ್ಲಿ ಕೊರೊನಾದಿಂದ ಉಂಟಾದ ಬಿಕ್ಕಟ್ಟನ್ನು ಮನದಲ್ಲಿಟ್ಟುಕೊಂಡು ಆರ್‌ಸಿಬಿ ಮತ್ತೊಮ್ಮೆ ಸಾರ್ವಜನಿಕರಲ್ಲಿ ಜಾಗೃತಗೊಳಿಸಲು ತಮ್ಮ ಜರ್ಸಿಯಿಂದ ಜನರಿಗೆ ಸಹಾಯ ಮಾಡಲು ನಿರ್ಧರಿಸಿದೆ. ಈ ಸಮಯದಲ್ಲಿ, ಇಡೀ ದೇಶವು ಕೊರೊನಾ ವೈರಸ್ನ ಎರಡನೇ ಅಲೆಯೊಂದಿಗೆ ಹೋರಾಡುತ್ತಿದೆ. ಆಸ್ಪತ್ರೆಗಳು ರೋಗಿಗಳಿಂದ ತುಂಬಿವೆ. ಆಮ್ಲಜನಕ, ಔಷಧ, ಆಸ್ಪತ್ರೆಗಳಲ್ಲಿ ಹಾಸಿಗೆಗಳಿಗೆ ಸರತಿ ಸಾಲುಗಳಿವೆ. ಈ ಬಿಕ್ಕಟ್ಟಿನಿಂದ ದೇಶವನ್ನು ಹೊರಹಾಕಲು ಎಲ್ಲರೂ ಹೋರಾಡುತ್ತಿದ್ದಾರೆ. ಆರ್‌ಸಿಬಿ ಸಹ ಇದಕ್ಕೆ ಕೊಡುಗೆ ನೀಡಲು ಮುಂದಾಗಿದೆ.

ಸಂತ್ರಸ್ತರಿಗೆ ಸಹಾಯ ಮಾಡಲು ಕೈ ಚಾಚುತ್ತೇವೆ ಸೋಷಿಯಲ್ ಮೀಡಿಯಾದಲ್ಲಿ ಆರ್​ಸಿಬಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದು, ಆರ್‌ಸಿಬಿ ಕೊರೊನಾ ವಿರುದ್ಧದ ಹೋರಾಟದಲ್ಲಿ ಸಹ ಭಾಗಿಯಾಗಿವುದರೊಂದಿಗೆ, ಸಂತ್ರಸ್ತರಿಗೆ ಸಹಾಯ ಮಾಡಲು ಕೈ ಚಾಚುತ್ತೇವೆ ಎಂದು ಹೇಳಿಕೊಂಡಿದೆ. ಆರ್‌ಸಿಬಿ ತನ್ನ ನಾಯಕ ವಿರಾಟ್ ಕೊಹ್ಲಿ ಮೂಲಕ ಈ ಸಂದೇಶವನ್ನು ಅಭಿಮಾನಿಗಳಿಗೆ ತಲುಪಿಸಿದೆ. ಇದರೊಂದಿಗೆ ಮುಂಬರುವ ಪಂದ್ಯದಲ್ಲಿ ಬೆಂಗಳೂರು ಹೊಸ ರೂಪದಲ್ಲಿ ಕಾಣಿಸಿಕೊಳ್ಳಲಿದೆ. ಮುಂಬರುವ ಪಂದ್ಯವೊಂದರಲ್ಲಿ ಅವರು ಕೊರೊನಾ ವಾರಿಯರ್ಸ್‌ಗೆ ಗೌರವ ಸೂಚಿಸುವ ಸಲುವಾಗಿ ವಿಶೇಷ ನೀಲಿ ಜರ್ಸಿ ಧರಿಸಲು ಆರ್‌ಸಿಬಿ ನಿರ್ಧರಿಸಿದೆ. ಹಾಗೂ ಈ ಪಂದ್ಯದಲ್ಲಿ ಬಳಸುವ ಮ್ಯಾಚ್ ಕಿಟ್ ಮೇಲೆ ಕೊರೊನಾ ವಾರಿಯರ್ಸ್ ಕುರಿತು ವಿಶೇಷ ಸಂದೇಶವನ್ನು ಬರೆಯಲಾಗಿರುತ್ತದೆ.

ಆರ್‌ಸಿಬಿ ಸಹಾಯ ಹೀಗಿರಲಿದೆ ಆರ್‌ಸಿಬಿಯನ್ನು ಮುನ್ನಡೆಸುತ್ತಿರುವ ಭಾರತೀಯ ನಾಯಕ ವಿರಾಟ್ ಕೊಹ್ಲಿ ಟ್ವಿಟರ್‌ನಲ್ಲಿ ಫ್ರ್ಯಾಂಚೈಸ್ ಹಾಕಿದ ವಿಡಿಯೋದಲ್ಲಿ ಅವರು ನೆಲಮಟ್ಟದಲ್ಲಿ ಹೇಗೆ ಸಹಾಯ ಮಾಡಬಹುದು ಎಂದು ಚರ್ಚಿಸಿದ್ದಾರೆ. ಬೆಂಗಳೂರು ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ ಆಕ್ಸಿಜನ್ ಸರಬರಾಜು ಮಾಡುವುದಕ್ಕೂ ಸಹ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆರ್ಥಿಕ ಸಹಾಯ ಮಾಡಲಿದೆ ಎಂದು ಆರ್‌ಸಿಬಿ ತಿಳಿಸಿದೆ. ಇಷ್ಟು ವರ್ಷ ಪಂದ್ಯವೊಂದರಲ್ಲಿ ಪರಿಸರದ ಸಂರಕ್ಷಣೆಯ ಕುರಿತು ಸಂದೇಶವನ್ನು ರವಾನಿಸಲು ಹಸಿರು ಜೆರ್ಸಿ ತೊಟ್ಟು ಆಡುತ್ತಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಬಾರಿ ಕೊರೊನಾ ವಾರಿಯರ್ಸ್ ಪಟ್ಟ ಶ್ರಮಕ್ಕೆ ಗೌರವವನ್ನು ಸಲ್ಲಿಸಲು ನೀಲಿ ಜೆರ್ಸಿ ತೊಟ್ಟು ಆಡಲಿದೆ.

ಕೊಹ್ಲಿ ಹೇಳಿದ್ದೇನು? ಈ ಬಗ್ಗೆ ಮಾತಾನಾಡಿದ ಕೊಹ್ಲಿ, ಆರ್‌ಸಿಬಿ ಪಂದ್ಯವೊಂದರಲ್ಲಿ ವಿಶೇಷ ನೀಲಿ ಬಣ್ಣದ ಜರ್ಸಿಯನ್ನು ಧರಿಸಲಿದ್ದು, ನಮ್ಮ ಮ್ಯಾಚ್ ಕಿಟ್‌ನಲ್ಲಿ ಮಹತ್ವದ ಸಂದೇಶವನ್ನು ನೀಡಲಿದೆ, ಈ ಸೋಂಕಿನ ವಿರುದ್ಧ ಹೋರಾಡಲು ಸಹಾಯ ಮಾಡಿದವರಿಗೆ ಗೌರವ ಮತ್ತು ಒಗ್ಗಟ್ಟನ್ನು ತೋರಿಸುವುದು ಇದರ ಉದ್ದೇಶವಾಗಿದೆ. ಕಳೆದ ವರ್ಷದಿಂದಲೂ ಕೊರೊನಾ ವಾರಿಯರ್ಸ್​ ಪಿಪಿಇ ಕಿಟ್‌ಗಳನ್ನು ಧರಿಸಿರುತ್ತಾರೆ. ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಟ ಮಾಡುತ್ತಾ ಈ ಒಂದು ವರ್ಷವನ್ನು ಕಳೆದಿದ್ದಾರೆ. ಹೀಗಾಗಿ ಈ ಪಂದ್ಯದಲ್ಲಿ ಆಟಗಾರರು ಸಹಿ ಮಾಡಿದ ಜರ್ಸಿಯನ್ನು ಹರಾಜು ಮಾಡುವ ಮೂಲಕ ಆರ್‌ಸಿಬಿ ತಂಡವು ಹಣವನ್ನು ಸಂಗ್ರಹಿಸುತ್ತದೆ ಮತ್ತು ಆರೋಗ್ಯ ಮೂಲಸೌಕರ್ಯಗಳನ್ನು ಬೆಂಬಲಿಸಲು ನಮ್ಮ ಹಿಂದಿನ ಆರ್ಥಿಕ ಕೊಡುಗೆಯನ್ನು ಹೆಚ್ಚಿಸುತ್ತದೆ ಎಂದು ಕೊಹ್ಲಿ ಹೇಳಿದರು. ಆರ್‌ಸಿಬಿ ಸೋಮವಾರ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಸೆಣಸಲಿದೆ.

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ