AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಇದುವರೆಗೂ ಕಪ್ ಗೆದ್ದಿಲ್ಲ, ಹಾಗೆಂದು ಆರ್​ಸಿಬಿ ತಂಡದಿಂದ ದೂರವಾಗುವ ಯೋಚನೆ ಸ್ವಲ್ಪವೂ ಬಂದಿಲ್ಲ: ವಿರಾಟ್ ಕೊಹ್ಲಿ

2013ರಿಂದಲೂ ತಂಡದ ನಾಯಕರಾಗಿರುವ ಕೊಹ್ಲಿ, ಬೆಂಗಳೂರು ಅಭಿಮಾನಿಗಳಿಂದ ಪಡೆದಿರುವ ಗೌರವ, ಸಂಭ್ರಮವನ್ನು ಮತ್ತೆಲ್ಲೂ ಪಡೆಯಲು ಸಾಧ್ಯವಿಲ್ಲ ಎಂದು ಹೇಳಿಕೊಂಡಿದ್ದಾರೆ.

IPL 2021: ಇದುವರೆಗೂ ಕಪ್ ಗೆದ್ದಿಲ್ಲ, ಹಾಗೆಂದು ಆರ್​ಸಿಬಿ ತಂಡದಿಂದ ದೂರವಾಗುವ ಯೋಚನೆ ಸ್ವಲ್ಪವೂ ಬಂದಿಲ್ಲ: ವಿರಾಟ್ ಕೊಹ್ಲಿ
ಇದೀಗ ಐಪಿಎಲ್​ನ ದ್ವಿತಿಯಾರ್ಧದಲ್ಲಿ ಕೆಕೆಆರ್ ವಿರುದ್ದ ಕಣಕ್ಕಿಳಿಯಲಿರುವ ಕೊಹ್ಲಿ 71 ರನ್​ ಕಲೆಹಾಕಿದ್ರೆ ಟಿ20 ಕ್ರಿಕೆಟ್​ನಲ್ಲಿ 10 ಸಾವಿರ ರನ್ ಬಾರಿಸಿದ ಮೊದಲ ಭಾರತೀಯ ಬ್ಯಾಟ್ಸ್​ಮನ್ ಎನಿಸಿಕೊಳ್ಳಲಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ವಿಶ್ವದ ಐದನೇ ಬ್ಯಾಟ್ಸ್​ಮನ್ ಎಂಬ ಹೆಗ್ಗಳಿಕೆಗೂ ಕೊಹ್ಲಿ ಪಾತ್ರರಾಗಲಿದ್ದಾರೆ.
TV9 Web
| Updated By: ganapathi bhat|

Updated on:Apr 05, 2022 | 12:43 PM

Share

ಐಪಿಎಲ್ ಟೂರ್ನಿಯ ಮೊದಲ ಪಂದ್ಯಾಟ ಇಂದು (ಏಪ್ರಿಲ್ 9) ಸಂಜೆ 7 ಗಂಟೆಗೆ ಆರಂಭವಾಗಲಿದೆ. 5 ಬಾರಿ ಚಾಂಪಿಯನ್ ಪಟ್ಟಕ್ಕೇರಿದ ಮುಂಬೈ ಇಂಡಿಯನ್ಸ್, ಬೆಂಗಳೂರಿನ ರಾಯಲ್ ಚಾಲೆಂಜರ್ಸ್ ತಂಡದ ವಿರುದ್ಧ ಸೆಣೆಸಾಡಲಿದೆ. ಆರ್​ಸಿಬಿ ಅಭಿಮಾನಿಗಳು ಈ ಸಲ ಕಪ್ ನಮ್ದೇ ಎಂಬ ಉತ್ಸಾಹದಲ್ಲಿದ್ದಾರೆ. ಮುಂಬೈ ಇಂಡಿಯನ್ಸ್ ಆಟಗಾರರು ನಾವು ಈ ಬಾರಿಯೂ ಚಾಂಪಿಯನ್ಸ್ ಎನ್ನಲು ಕಾದು ಕುಳಿತಿದ್ದಾರೆ. ಈ ಮಧ್ಯೆ, ಆರ್​ಸಿಬಿ ತಂಡದ ನಾಯಕ, ಅಭಿಮಾನಿಗಳ ಹಾಟ್ ಫೇವರಿಟ್ ಕ್ರಿಕೆಟರ್ ವಿರಾಟ್ ಕೊಹ್ಲಿ ತಮ್ಮ ಮತ್ತು ಆರ್​ಸಿಬಿ ನಡುವಿನ ಬಾಂಧವ್ಯವನ್ನು ಬಿಚ್ಚಿಟ್ಟಿದ್ದಾರೆ.

ಭಾರತ ತಂಡದ ನಾಯಕನೂ ಆಗಿರುವ ಕೊಹ್ಲಿಗೆ ಸದ್ಯ 32 ವರ್ಷ ವಯಸ್ಸು. ಕೊಹ್ಲಿ ಮತ್ತು ಆರ್​ಸಿಬಿ ನಂಟು ಇಂದು ನಿನ್ನೆಯದಲ್ಲ. ಐಪಿಎಲ್ ಆರಂಭಿಕ ಆವೃತ್ತಿಯಿಂದಲೂ ಕೊಹ್ಲಿ ಆರ್​ಸಿಬಿಯ ಆಟಗಾರರಾಗಿದ್ದಾರೆ. ಅಂದರೆ, 2008ರಿಂದ 2021ರ ಐಪಿಎಲ್, ಒಟ್ಟು 12 ವರ್ಷಗಳಿಗೂ ಹೆಚ್ಚು ಕಾಲ ಆರ್​ಸಿಬಿ ಮತ್ತು ಬೆಂಗಳೂರು ಜೊತೆ ಬಾಂಧವ್ಯ ಹೊಂದಿದ್ದಾರೆ.

ಈ ಬಗ್ಗೆ ಮಾತನಾಡಿರುವ ಕೊಹ್ಲಿ, ಇದುವರೆಗೆ ಒಂದು ಬಾರಿಯೂ ಆರ್​ಸಿಬಿ ಕಪ್ ಗೆಲ್ಲಲಾಗಲಿಲ್ಲ. ಆದರೂ ಆರ್​ಸಿಬಿ ತಂಡವನ್ನು ತ್ಯಜಿಸುವ ಮನ ಮಾಡಲಿಲ್ಲ ಎಂದು ಹೇಳಿದ್ದಾರೆ. 2013ರಿಂದಲೂ ತಂಡದ ನಾಯಕರಾಗಿರುವ ಕೊಹ್ಲಿ, ಬೆಂಗಳೂರು ಅಭಿಮಾನಿಗಳಿಂದ ಪಡೆದಿರುವ ಗೌರವ, ಸಂಭ್ರಮವನ್ನು ಮತ್ತೆಲ್ಲೂ ಪಡೆಯಲು ಸಾಧ್ಯವಿಲ್ಲ ಎಂದು ಹೇಳಿಕೊಂಡಿದ್ದಾರೆ.

ಅಭಿಮಾನಿಗಳಿಂದ ತುಂಬಾ ಸಪೋರ್ಟ್ ಪಡೆಯುವ ಇತರ ತಂಡಗಳೂ ಐಪಿಎಲ್​ನಲ್ಲಿವೆ. ಆದರೆ, ನಮಗೆ ಎಲ್ಲೆಡೆ ಸಿಗುವಷ್ಟು ಪ್ರೋತ್ಸಾಹ ಇನ್ಯಾರಿಗೂ ಸಿಕ್ಕಿಲ್ಲ ಎಂದು ಹೇಳಿದ್ದಾರೆ. ನಾವು ಹೃತ್ಪೂರ್ವಕವಾಗಿ ಕ್ರಿಕೆಟ್ ಆಡುತ್ತೇವೆ. ಈ ಹಿಂದೆ ಕಷ್ಟದ ಸನ್ನಿವೇಶಗಳಿಂದಾಗಿ ನಾವು ಸೋತಿಸರಬಹುದು. ಅಷ್ಟಾಗ್ಯೂ ಕ್ರಿಕೆಟ್ ಬಗೆಗಿನ ಆಸಕ್ತಿ, ಬದ್ಧತೆ ಕಡಿಮೆ ಆಗಿಲ್ಲ ಎಂದು ತಿಳಿಸಿದ್ದಾರೆ.

ಇದುವರೆಗೂ ನಾವು ಕಪ್ ಗೆದ್ದಿಲ್ಲ ಎಂಬ ಕಾರಣಕ್ಕೆ ಈ ತಂಡದಿಂದ ದೂರವಾಗುವ ಮನಸ್ಸೇ ನನಗೆ ಬಂದಿಲ್ಲ. ಇಂತಹ ಪರಿಸ್ಥಿತಿ, ಸನ್ನಿವೇಶ ಇನ್ನೆಲ್ಲೂ ಸಿಗಲು ಅಥವಾ ಸೃಷ್ಟಿಮಾಡಲು ಸಾಧ್ಯವಿಲ್ಲ. ಈ ಅನುಭವ ಮ್ಯಾಜಿಕಲ್ ಆಗಿದೆ ಎಂದು ಆರ್​ಸಿಬಿ ಪೋಸ್ಟ್ ಮಾಡಿಕೊಂಡಿರುವ ವಿಡಿಯೋದಲ್ಲಿ ವಿರಾಟ್ ಹೇಳಿಕೊಂಡಿದ್ದಾರೆ.

ಆರ್​ಸಿಬಿ ತಂಡ ಈ ಬಾರಿಯಾದರೂ ಕಪ್ ಗೆಲ್ಲುವ ಉತ್ಸಾಹದಲ್ಲಿದೆ. ಗ್ಲೆನ್ ಮ್ಯಾಕ್ಸ್​ವೆಲ್, ಕೈಲ್ ಜೆಮಿಸನ್ ಮುಂತಾದ ಆಟಗಾರರು ತಂಡದಲ್ಲಿದ್ದಾರೆ. ಭಾರತದ ಅತ್ಯಂತ ಸೆಲೆಬ್ರೇಟೆಡ್ ಕ್ರಿಕೆಟರ್ ಎ.ಬಿ. ಡಿವಿಲಿಯರ್ಸ್ ಕೂಡ ಆರ್​ಸಿಬಿಯಲ್ಲಿದ್ದಾರೆ. ಕಳೆದ ಸೀಸನ್​ನಲ್ಲಿ ಆರ್​ಸಿಬಿ ಪ್ಲೇ ಆಫ್​ವರೆಗೆ ಮುನ್ನುಗ್ಗಿತ್ತು. ಆದರೆ, ಸನ್​ರೈಸರ್ಸ್ ಹೈದರಾಬಾದ್ ಮುಂದೆ ಸೋಲು ಅನುಭವಿಸಿತ್ತು.

ಇದನ್ನೂ ಓದಿ: MI vs RCB Predicted Playing 11: ರಾಯಲ್ ಚಾಲೆಂಜರ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಮೊದಲ ಪಂದ್ಯದ ಸಂಭಾವ್ಯ ಆಟಗಾರರು ಇವರು

ಇದನ್ನೂ ಓದಿ: MI vs RCB: ನಮ್ಮ ಆರ್​ಸಿಬಿ ಗೆದ್ದರೆ ಕಿಚ್ಚ ಸುದೀಪ್​ ಹೀಗೆ ಮಾಡ್ತಾರಂತೆ!

Published On - 5:03 pm, Fri, 9 April 21

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ