AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಇದುವರೆಗೂ ಕಪ್ ಗೆದ್ದಿಲ್ಲ, ಹಾಗೆಂದು ಆರ್​ಸಿಬಿ ತಂಡದಿಂದ ದೂರವಾಗುವ ಯೋಚನೆ ಸ್ವಲ್ಪವೂ ಬಂದಿಲ್ಲ: ವಿರಾಟ್ ಕೊಹ್ಲಿ

2013ರಿಂದಲೂ ತಂಡದ ನಾಯಕರಾಗಿರುವ ಕೊಹ್ಲಿ, ಬೆಂಗಳೂರು ಅಭಿಮಾನಿಗಳಿಂದ ಪಡೆದಿರುವ ಗೌರವ, ಸಂಭ್ರಮವನ್ನು ಮತ್ತೆಲ್ಲೂ ಪಡೆಯಲು ಸಾಧ್ಯವಿಲ್ಲ ಎಂದು ಹೇಳಿಕೊಂಡಿದ್ದಾರೆ.

IPL 2021: ಇದುವರೆಗೂ ಕಪ್ ಗೆದ್ದಿಲ್ಲ, ಹಾಗೆಂದು ಆರ್​ಸಿಬಿ ತಂಡದಿಂದ ದೂರವಾಗುವ ಯೋಚನೆ ಸ್ವಲ್ಪವೂ ಬಂದಿಲ್ಲ: ವಿರಾಟ್ ಕೊಹ್ಲಿ
ಇದೀಗ ಐಪಿಎಲ್​ನ ದ್ವಿತಿಯಾರ್ಧದಲ್ಲಿ ಕೆಕೆಆರ್ ವಿರುದ್ದ ಕಣಕ್ಕಿಳಿಯಲಿರುವ ಕೊಹ್ಲಿ 71 ರನ್​ ಕಲೆಹಾಕಿದ್ರೆ ಟಿ20 ಕ್ರಿಕೆಟ್​ನಲ್ಲಿ 10 ಸಾವಿರ ರನ್ ಬಾರಿಸಿದ ಮೊದಲ ಭಾರತೀಯ ಬ್ಯಾಟ್ಸ್​ಮನ್ ಎನಿಸಿಕೊಳ್ಳಲಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ವಿಶ್ವದ ಐದನೇ ಬ್ಯಾಟ್ಸ್​ಮನ್ ಎಂಬ ಹೆಗ್ಗಳಿಕೆಗೂ ಕೊಹ್ಲಿ ಪಾತ್ರರಾಗಲಿದ್ದಾರೆ.
TV9 Web
| Edited By: |

Updated on:Apr 05, 2022 | 12:43 PM

Share

ಐಪಿಎಲ್ ಟೂರ್ನಿಯ ಮೊದಲ ಪಂದ್ಯಾಟ ಇಂದು (ಏಪ್ರಿಲ್ 9) ಸಂಜೆ 7 ಗಂಟೆಗೆ ಆರಂಭವಾಗಲಿದೆ. 5 ಬಾರಿ ಚಾಂಪಿಯನ್ ಪಟ್ಟಕ್ಕೇರಿದ ಮುಂಬೈ ಇಂಡಿಯನ್ಸ್, ಬೆಂಗಳೂರಿನ ರಾಯಲ್ ಚಾಲೆಂಜರ್ಸ್ ತಂಡದ ವಿರುದ್ಧ ಸೆಣೆಸಾಡಲಿದೆ. ಆರ್​ಸಿಬಿ ಅಭಿಮಾನಿಗಳು ಈ ಸಲ ಕಪ್ ನಮ್ದೇ ಎಂಬ ಉತ್ಸಾಹದಲ್ಲಿದ್ದಾರೆ. ಮುಂಬೈ ಇಂಡಿಯನ್ಸ್ ಆಟಗಾರರು ನಾವು ಈ ಬಾರಿಯೂ ಚಾಂಪಿಯನ್ಸ್ ಎನ್ನಲು ಕಾದು ಕುಳಿತಿದ್ದಾರೆ. ಈ ಮಧ್ಯೆ, ಆರ್​ಸಿಬಿ ತಂಡದ ನಾಯಕ, ಅಭಿಮಾನಿಗಳ ಹಾಟ್ ಫೇವರಿಟ್ ಕ್ರಿಕೆಟರ್ ವಿರಾಟ್ ಕೊಹ್ಲಿ ತಮ್ಮ ಮತ್ತು ಆರ್​ಸಿಬಿ ನಡುವಿನ ಬಾಂಧವ್ಯವನ್ನು ಬಿಚ್ಚಿಟ್ಟಿದ್ದಾರೆ.

ಭಾರತ ತಂಡದ ನಾಯಕನೂ ಆಗಿರುವ ಕೊಹ್ಲಿಗೆ ಸದ್ಯ 32 ವರ್ಷ ವಯಸ್ಸು. ಕೊಹ್ಲಿ ಮತ್ತು ಆರ್​ಸಿಬಿ ನಂಟು ಇಂದು ನಿನ್ನೆಯದಲ್ಲ. ಐಪಿಎಲ್ ಆರಂಭಿಕ ಆವೃತ್ತಿಯಿಂದಲೂ ಕೊಹ್ಲಿ ಆರ್​ಸಿಬಿಯ ಆಟಗಾರರಾಗಿದ್ದಾರೆ. ಅಂದರೆ, 2008ರಿಂದ 2021ರ ಐಪಿಎಲ್, ಒಟ್ಟು 12 ವರ್ಷಗಳಿಗೂ ಹೆಚ್ಚು ಕಾಲ ಆರ್​ಸಿಬಿ ಮತ್ತು ಬೆಂಗಳೂರು ಜೊತೆ ಬಾಂಧವ್ಯ ಹೊಂದಿದ್ದಾರೆ.

ಈ ಬಗ್ಗೆ ಮಾತನಾಡಿರುವ ಕೊಹ್ಲಿ, ಇದುವರೆಗೆ ಒಂದು ಬಾರಿಯೂ ಆರ್​ಸಿಬಿ ಕಪ್ ಗೆಲ್ಲಲಾಗಲಿಲ್ಲ. ಆದರೂ ಆರ್​ಸಿಬಿ ತಂಡವನ್ನು ತ್ಯಜಿಸುವ ಮನ ಮಾಡಲಿಲ್ಲ ಎಂದು ಹೇಳಿದ್ದಾರೆ. 2013ರಿಂದಲೂ ತಂಡದ ನಾಯಕರಾಗಿರುವ ಕೊಹ್ಲಿ, ಬೆಂಗಳೂರು ಅಭಿಮಾನಿಗಳಿಂದ ಪಡೆದಿರುವ ಗೌರವ, ಸಂಭ್ರಮವನ್ನು ಮತ್ತೆಲ್ಲೂ ಪಡೆಯಲು ಸಾಧ್ಯವಿಲ್ಲ ಎಂದು ಹೇಳಿಕೊಂಡಿದ್ದಾರೆ.

ಅಭಿಮಾನಿಗಳಿಂದ ತುಂಬಾ ಸಪೋರ್ಟ್ ಪಡೆಯುವ ಇತರ ತಂಡಗಳೂ ಐಪಿಎಲ್​ನಲ್ಲಿವೆ. ಆದರೆ, ನಮಗೆ ಎಲ್ಲೆಡೆ ಸಿಗುವಷ್ಟು ಪ್ರೋತ್ಸಾಹ ಇನ್ಯಾರಿಗೂ ಸಿಕ್ಕಿಲ್ಲ ಎಂದು ಹೇಳಿದ್ದಾರೆ. ನಾವು ಹೃತ್ಪೂರ್ವಕವಾಗಿ ಕ್ರಿಕೆಟ್ ಆಡುತ್ತೇವೆ. ಈ ಹಿಂದೆ ಕಷ್ಟದ ಸನ್ನಿವೇಶಗಳಿಂದಾಗಿ ನಾವು ಸೋತಿಸರಬಹುದು. ಅಷ್ಟಾಗ್ಯೂ ಕ್ರಿಕೆಟ್ ಬಗೆಗಿನ ಆಸಕ್ತಿ, ಬದ್ಧತೆ ಕಡಿಮೆ ಆಗಿಲ್ಲ ಎಂದು ತಿಳಿಸಿದ್ದಾರೆ.

ಇದುವರೆಗೂ ನಾವು ಕಪ್ ಗೆದ್ದಿಲ್ಲ ಎಂಬ ಕಾರಣಕ್ಕೆ ಈ ತಂಡದಿಂದ ದೂರವಾಗುವ ಮನಸ್ಸೇ ನನಗೆ ಬಂದಿಲ್ಲ. ಇಂತಹ ಪರಿಸ್ಥಿತಿ, ಸನ್ನಿವೇಶ ಇನ್ನೆಲ್ಲೂ ಸಿಗಲು ಅಥವಾ ಸೃಷ್ಟಿಮಾಡಲು ಸಾಧ್ಯವಿಲ್ಲ. ಈ ಅನುಭವ ಮ್ಯಾಜಿಕಲ್ ಆಗಿದೆ ಎಂದು ಆರ್​ಸಿಬಿ ಪೋಸ್ಟ್ ಮಾಡಿಕೊಂಡಿರುವ ವಿಡಿಯೋದಲ್ಲಿ ವಿರಾಟ್ ಹೇಳಿಕೊಂಡಿದ್ದಾರೆ.

ಆರ್​ಸಿಬಿ ತಂಡ ಈ ಬಾರಿಯಾದರೂ ಕಪ್ ಗೆಲ್ಲುವ ಉತ್ಸಾಹದಲ್ಲಿದೆ. ಗ್ಲೆನ್ ಮ್ಯಾಕ್ಸ್​ವೆಲ್, ಕೈಲ್ ಜೆಮಿಸನ್ ಮುಂತಾದ ಆಟಗಾರರು ತಂಡದಲ್ಲಿದ್ದಾರೆ. ಭಾರತದ ಅತ್ಯಂತ ಸೆಲೆಬ್ರೇಟೆಡ್ ಕ್ರಿಕೆಟರ್ ಎ.ಬಿ. ಡಿವಿಲಿಯರ್ಸ್ ಕೂಡ ಆರ್​ಸಿಬಿಯಲ್ಲಿದ್ದಾರೆ. ಕಳೆದ ಸೀಸನ್​ನಲ್ಲಿ ಆರ್​ಸಿಬಿ ಪ್ಲೇ ಆಫ್​ವರೆಗೆ ಮುನ್ನುಗ್ಗಿತ್ತು. ಆದರೆ, ಸನ್​ರೈಸರ್ಸ್ ಹೈದರಾಬಾದ್ ಮುಂದೆ ಸೋಲು ಅನುಭವಿಸಿತ್ತು.

ಇದನ್ನೂ ಓದಿ: MI vs RCB Predicted Playing 11: ರಾಯಲ್ ಚಾಲೆಂಜರ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಮೊದಲ ಪಂದ್ಯದ ಸಂಭಾವ್ಯ ಆಟಗಾರರು ಇವರು

ಇದನ್ನೂ ಓದಿ: MI vs RCB: ನಮ್ಮ ಆರ್​ಸಿಬಿ ಗೆದ್ದರೆ ಕಿಚ್ಚ ಸುದೀಪ್​ ಹೀಗೆ ಮಾಡ್ತಾರಂತೆ!

Published On - 5:03 pm, Fri, 9 April 21

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ