AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಇದುವರೆಗೂ ಕಪ್ ಗೆದ್ದಿಲ್ಲ, ಹಾಗೆಂದು ಆರ್​ಸಿಬಿ ತಂಡದಿಂದ ದೂರವಾಗುವ ಯೋಚನೆ ಸ್ವಲ್ಪವೂ ಬಂದಿಲ್ಲ: ವಿರಾಟ್ ಕೊಹ್ಲಿ

2013ರಿಂದಲೂ ತಂಡದ ನಾಯಕರಾಗಿರುವ ಕೊಹ್ಲಿ, ಬೆಂಗಳೂರು ಅಭಿಮಾನಿಗಳಿಂದ ಪಡೆದಿರುವ ಗೌರವ, ಸಂಭ್ರಮವನ್ನು ಮತ್ತೆಲ್ಲೂ ಪಡೆಯಲು ಸಾಧ್ಯವಿಲ್ಲ ಎಂದು ಹೇಳಿಕೊಂಡಿದ್ದಾರೆ.

IPL 2021: ಇದುವರೆಗೂ ಕಪ್ ಗೆದ್ದಿಲ್ಲ, ಹಾಗೆಂದು ಆರ್​ಸಿಬಿ ತಂಡದಿಂದ ದೂರವಾಗುವ ಯೋಚನೆ ಸ್ವಲ್ಪವೂ ಬಂದಿಲ್ಲ: ವಿರಾಟ್ ಕೊಹ್ಲಿ
ಇದೀಗ ಐಪಿಎಲ್​ನ ದ್ವಿತಿಯಾರ್ಧದಲ್ಲಿ ಕೆಕೆಆರ್ ವಿರುದ್ದ ಕಣಕ್ಕಿಳಿಯಲಿರುವ ಕೊಹ್ಲಿ 71 ರನ್​ ಕಲೆಹಾಕಿದ್ರೆ ಟಿ20 ಕ್ರಿಕೆಟ್​ನಲ್ಲಿ 10 ಸಾವಿರ ರನ್ ಬಾರಿಸಿದ ಮೊದಲ ಭಾರತೀಯ ಬ್ಯಾಟ್ಸ್​ಮನ್ ಎನಿಸಿಕೊಳ್ಳಲಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ವಿಶ್ವದ ಐದನೇ ಬ್ಯಾಟ್ಸ್​ಮನ್ ಎಂಬ ಹೆಗ್ಗಳಿಕೆಗೂ ಕೊಹ್ಲಿ ಪಾತ್ರರಾಗಲಿದ್ದಾರೆ.
TV9 Web
| Edited By: |

Updated on:Apr 05, 2022 | 12:43 PM

Share

ಐಪಿಎಲ್ ಟೂರ್ನಿಯ ಮೊದಲ ಪಂದ್ಯಾಟ ಇಂದು (ಏಪ್ರಿಲ್ 9) ಸಂಜೆ 7 ಗಂಟೆಗೆ ಆರಂಭವಾಗಲಿದೆ. 5 ಬಾರಿ ಚಾಂಪಿಯನ್ ಪಟ್ಟಕ್ಕೇರಿದ ಮುಂಬೈ ಇಂಡಿಯನ್ಸ್, ಬೆಂಗಳೂರಿನ ರಾಯಲ್ ಚಾಲೆಂಜರ್ಸ್ ತಂಡದ ವಿರುದ್ಧ ಸೆಣೆಸಾಡಲಿದೆ. ಆರ್​ಸಿಬಿ ಅಭಿಮಾನಿಗಳು ಈ ಸಲ ಕಪ್ ನಮ್ದೇ ಎಂಬ ಉತ್ಸಾಹದಲ್ಲಿದ್ದಾರೆ. ಮುಂಬೈ ಇಂಡಿಯನ್ಸ್ ಆಟಗಾರರು ನಾವು ಈ ಬಾರಿಯೂ ಚಾಂಪಿಯನ್ಸ್ ಎನ್ನಲು ಕಾದು ಕುಳಿತಿದ್ದಾರೆ. ಈ ಮಧ್ಯೆ, ಆರ್​ಸಿಬಿ ತಂಡದ ನಾಯಕ, ಅಭಿಮಾನಿಗಳ ಹಾಟ್ ಫೇವರಿಟ್ ಕ್ರಿಕೆಟರ್ ವಿರಾಟ್ ಕೊಹ್ಲಿ ತಮ್ಮ ಮತ್ತು ಆರ್​ಸಿಬಿ ನಡುವಿನ ಬಾಂಧವ್ಯವನ್ನು ಬಿಚ್ಚಿಟ್ಟಿದ್ದಾರೆ.

ಭಾರತ ತಂಡದ ನಾಯಕನೂ ಆಗಿರುವ ಕೊಹ್ಲಿಗೆ ಸದ್ಯ 32 ವರ್ಷ ವಯಸ್ಸು. ಕೊಹ್ಲಿ ಮತ್ತು ಆರ್​ಸಿಬಿ ನಂಟು ಇಂದು ನಿನ್ನೆಯದಲ್ಲ. ಐಪಿಎಲ್ ಆರಂಭಿಕ ಆವೃತ್ತಿಯಿಂದಲೂ ಕೊಹ್ಲಿ ಆರ್​ಸಿಬಿಯ ಆಟಗಾರರಾಗಿದ್ದಾರೆ. ಅಂದರೆ, 2008ರಿಂದ 2021ರ ಐಪಿಎಲ್, ಒಟ್ಟು 12 ವರ್ಷಗಳಿಗೂ ಹೆಚ್ಚು ಕಾಲ ಆರ್​ಸಿಬಿ ಮತ್ತು ಬೆಂಗಳೂರು ಜೊತೆ ಬಾಂಧವ್ಯ ಹೊಂದಿದ್ದಾರೆ.

ಈ ಬಗ್ಗೆ ಮಾತನಾಡಿರುವ ಕೊಹ್ಲಿ, ಇದುವರೆಗೆ ಒಂದು ಬಾರಿಯೂ ಆರ್​ಸಿಬಿ ಕಪ್ ಗೆಲ್ಲಲಾಗಲಿಲ್ಲ. ಆದರೂ ಆರ್​ಸಿಬಿ ತಂಡವನ್ನು ತ್ಯಜಿಸುವ ಮನ ಮಾಡಲಿಲ್ಲ ಎಂದು ಹೇಳಿದ್ದಾರೆ. 2013ರಿಂದಲೂ ತಂಡದ ನಾಯಕರಾಗಿರುವ ಕೊಹ್ಲಿ, ಬೆಂಗಳೂರು ಅಭಿಮಾನಿಗಳಿಂದ ಪಡೆದಿರುವ ಗೌರವ, ಸಂಭ್ರಮವನ್ನು ಮತ್ತೆಲ್ಲೂ ಪಡೆಯಲು ಸಾಧ್ಯವಿಲ್ಲ ಎಂದು ಹೇಳಿಕೊಂಡಿದ್ದಾರೆ.

ಅಭಿಮಾನಿಗಳಿಂದ ತುಂಬಾ ಸಪೋರ್ಟ್ ಪಡೆಯುವ ಇತರ ತಂಡಗಳೂ ಐಪಿಎಲ್​ನಲ್ಲಿವೆ. ಆದರೆ, ನಮಗೆ ಎಲ್ಲೆಡೆ ಸಿಗುವಷ್ಟು ಪ್ರೋತ್ಸಾಹ ಇನ್ಯಾರಿಗೂ ಸಿಕ್ಕಿಲ್ಲ ಎಂದು ಹೇಳಿದ್ದಾರೆ. ನಾವು ಹೃತ್ಪೂರ್ವಕವಾಗಿ ಕ್ರಿಕೆಟ್ ಆಡುತ್ತೇವೆ. ಈ ಹಿಂದೆ ಕಷ್ಟದ ಸನ್ನಿವೇಶಗಳಿಂದಾಗಿ ನಾವು ಸೋತಿಸರಬಹುದು. ಅಷ್ಟಾಗ್ಯೂ ಕ್ರಿಕೆಟ್ ಬಗೆಗಿನ ಆಸಕ್ತಿ, ಬದ್ಧತೆ ಕಡಿಮೆ ಆಗಿಲ್ಲ ಎಂದು ತಿಳಿಸಿದ್ದಾರೆ.

ಇದುವರೆಗೂ ನಾವು ಕಪ್ ಗೆದ್ದಿಲ್ಲ ಎಂಬ ಕಾರಣಕ್ಕೆ ಈ ತಂಡದಿಂದ ದೂರವಾಗುವ ಮನಸ್ಸೇ ನನಗೆ ಬಂದಿಲ್ಲ. ಇಂತಹ ಪರಿಸ್ಥಿತಿ, ಸನ್ನಿವೇಶ ಇನ್ನೆಲ್ಲೂ ಸಿಗಲು ಅಥವಾ ಸೃಷ್ಟಿಮಾಡಲು ಸಾಧ್ಯವಿಲ್ಲ. ಈ ಅನುಭವ ಮ್ಯಾಜಿಕಲ್ ಆಗಿದೆ ಎಂದು ಆರ್​ಸಿಬಿ ಪೋಸ್ಟ್ ಮಾಡಿಕೊಂಡಿರುವ ವಿಡಿಯೋದಲ್ಲಿ ವಿರಾಟ್ ಹೇಳಿಕೊಂಡಿದ್ದಾರೆ.

ಆರ್​ಸಿಬಿ ತಂಡ ಈ ಬಾರಿಯಾದರೂ ಕಪ್ ಗೆಲ್ಲುವ ಉತ್ಸಾಹದಲ್ಲಿದೆ. ಗ್ಲೆನ್ ಮ್ಯಾಕ್ಸ್​ವೆಲ್, ಕೈಲ್ ಜೆಮಿಸನ್ ಮುಂತಾದ ಆಟಗಾರರು ತಂಡದಲ್ಲಿದ್ದಾರೆ. ಭಾರತದ ಅತ್ಯಂತ ಸೆಲೆಬ್ರೇಟೆಡ್ ಕ್ರಿಕೆಟರ್ ಎ.ಬಿ. ಡಿವಿಲಿಯರ್ಸ್ ಕೂಡ ಆರ್​ಸಿಬಿಯಲ್ಲಿದ್ದಾರೆ. ಕಳೆದ ಸೀಸನ್​ನಲ್ಲಿ ಆರ್​ಸಿಬಿ ಪ್ಲೇ ಆಫ್​ವರೆಗೆ ಮುನ್ನುಗ್ಗಿತ್ತು. ಆದರೆ, ಸನ್​ರೈಸರ್ಸ್ ಹೈದರಾಬಾದ್ ಮುಂದೆ ಸೋಲು ಅನುಭವಿಸಿತ್ತು.

ಇದನ್ನೂ ಓದಿ: MI vs RCB Predicted Playing 11: ರಾಯಲ್ ಚಾಲೆಂಜರ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಮೊದಲ ಪಂದ್ಯದ ಸಂಭಾವ್ಯ ಆಟಗಾರರು ಇವರು

ಇದನ್ನೂ ಓದಿ: MI vs RCB: ನಮ್ಮ ಆರ್​ಸಿಬಿ ಗೆದ್ದರೆ ಕಿಚ್ಚ ಸುದೀಪ್​ ಹೀಗೆ ಮಾಡ್ತಾರಂತೆ!

Published On - 5:03 pm, Fri, 9 April 21

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ