AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021 RCB vs DC Live Streaming: ಪಂದ್ಯ ಆರಂಭವಾಗುವ ಸಮಯ, ಲೈವ್ ಸ್ಟ್ರೀಮಿಂಗ್, ಯಾವ ಚಾನೆಲ್​ನಲ್ಲಿ ವೀಕ್ಷಣೆ, ಇಲ್ಲಿದೆ ಮಾಹಿತಿ

IPL 2021 RCB vs DC : ಸೋಲಿನ ದೊಡ್ಡ ಅಂತರದ ಹೊರತಾಗಿಯೂ, ಆರ್‌ಸಿಬಿಯ ನಾಲ್ಕು ಗೆಲುವುಗಳು ಅವರ ಅತ್ಯುತ್ತಮ ಆಟದ ಫಲಿತಾಂಶವಾಗಿದೆ ಮತ್ತು ಒಂದು ಕೆಟ್ಟ ಫಲಿತಾಂಶವು ಅದನ್ನು ಬದಲಾಯಿಸುವುದಿಲ್ಲ

IPL 2021 RCB vs DC Live Streaming: ಪಂದ್ಯ ಆರಂಭವಾಗುವ ಸಮಯ, ಲೈವ್ ಸ್ಟ್ರೀಮಿಂಗ್, ಯಾವ ಚಾನೆಲ್​ನಲ್ಲಿ ವೀಕ್ಷಣೆ, ಇಲ್ಲಿದೆ ಮಾಹಿತಿ
ಪಂತ್, ಪಡಿಕ್ಕಲ್
Follow us
ಪೃಥ್ವಿಶಂಕರ
| Updated By: Skanda

Updated on: Apr 27, 2021 | 8:26 AM

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2021 ರ 22 ನೇ ಪಂದ್ಯದಲ್ಲಿ ದೆಹಲಿ ಕ್ಯಾಪಿಟಲ್ಸ್ (ಡಿಸಿ) ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಇಂದು ಅಹಮದಾಬಾದ್‌ನಲ್ಲಿ ಸೆಣಸಲಿವೆ. ಡಿಸಿ ಮತ್ತು ಆರ್‌ಸಿಬಿ ಎರಡೂ ಈ ಆವೃತ್ತಿಯಲ್ಲಿ ಐದು ಪಂದ್ಯಗಳಿಂದ ಕ್ರಮವಾಗಿ ಎಂಟು ಅಂಕಗಳೊಂದಿಗೆ ಅಗ್ರ ಪ್ರದರ್ಶನ ನೀಡಿವೆ. ಟೂರ್ನಿಯ ಆರಂಭದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಡಿಸಿ ಏಕೈಕ ಸೋಲು ಕಂಡಿದೆ. ರಿಷಭ್ ಪಂತ್ ನೇತೃತ್ವದ ತಂಡವು ಪ್ರಸ್ತುತ ಗೆಲುವಿನ ಹಾದಿಯಲ್ಲಿ ಮುಂದುವರೆಯಲು ತವಕಿಸುತ್ತಿದೆ.

ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್​ಕೆ) ವಿರುದ್ಧದ ಆವೃತ್ತಿಯ ಮೊದಲ ಸೋಲನ್ನು ಅನುಭವಿಸಿದ ನಂತರ ಆರ್​ಸಿಬಿ ಗೆಲುವಿನ ಹಾದಿಗೆ ಮರಳುವ ವಿಶ್ವಾಸದಲ್ಲಿದೆ. ಪರ್ಪಲ್ ಕ್ಯಾಪ್ ಹೋಲ್ಡರ್ ಹರ್ಷಲ್ ಪಟೇಲ್ ಅವರ ಕೊನೆಯ ಓವರ್​ನಲ್ಲಿ ಸಿಎಸ್​ಕೆ ಪರ ರವೀಂದ್ರ ಜಡೇಜಾ ಅವರು 36 ರನ್ ಗಳಿಸಿದ್ದರಿಂದ ಆರ್​ಸಿಬಿ ಸೋಲಬೇಕಾಯಿತು.

ಸೋಲಿನ ದೊಡ್ಡ ಅಂತರದ ಹೊರತಾಗಿಯೂ, ಆರ್‌ಸಿಬಿಯ ನಾಲ್ಕು ಗೆಲುವುಗಳು ಅವರ ಅತ್ಯುತ್ತಮ ಆಟದ ಫಲಿತಾಂಶವಾಗಿದೆ ಮತ್ತು ಒಂದು ಕೆಟ್ಟ ಫಲಿತಾಂಶವು ಅದನ್ನು ಬದಲಾಯಿಸುವುದಿಲ್ಲ ಎಂಬುದನ್ನು ನಾವು ಮರೆಯಬಾರದು. ಕೊಹ್ಲಿ ಮತ್ತು ತಂಡ ಈಗ ತಕ್ಷಣವೇ ಪುಟಿದೇಳುವ ಗುರಿಯನ್ನು ಹೊಂದಿದೆ.

ಡಿಸಿ ಮತ್ತು ಆರ್‌ಸಿಬಿ ನಡುವಿನ ಐಪಿಎಲ್‌ನ 22 ನೇ ಪಂದ್ಯ ಯಾವಾಗ ನಡೆಯುತ್ತದೆ? ಡಿಸಿ ಮತ್ತು ಆರ್‌ಸಿಬಿ ನಡುವಿನ ಐಪಿಎಲ್‌ನ 22 ನೇ ಪಂದ್ಯವು 2021 ಏಪ್ರಿಲ್ 27 ರಂದು ನಡೆಯಲಿದೆ.

ಪಂದ್ಯದ ಸ್ಥಳ ಯಾವುದು? ಈ ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಪಂದ್ಯವು ಯಾವ ಸಮಯದಲ್ಲಿ ಪ್ರಾರಂಭವಾಗುತ್ತದೆ? ಸಂಜೆ 7.30 ಕ್ಕೆ ಪಂದ್ಯ ಆರಂಭವಾಗಲಿದೆ. ಟಾಸ್ ಸಂಜೆ 7 ಗಂಟೆಗೆ ನಡೆಯಲಿದೆ.

ಯಾವ ಟಿವಿ ಚಾನೆಲ್‌ಗಳು ಪಂದ್ಯವನ್ನು ಪ್ರಸಾರ ಮಾಡುತ್ತವೆ? ಪಂದ್ಯವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಪ್ರಸಾರವಾಗಲಿದೆ. ಪಂದ್ಯದ ಲೈವ್ ಸ್ಟ್ರೀಮಿಂಗ್ ಡಿಸ್ನಿ + ಹಾಟ್‌ಸ್ಟಾರ್‌ನಲ್ಲಿಯೂ ಲಭ್ಯವಿರುತ್ತದೆ.

ಸಂಭವನೀಯ ಇಲೆವನ್ ದೆಹಲಿ ಕ್ಯಾಪಿಟಲ್ಸ್ ಶಿಖರ್ ಧವನ್, ಪೃಥ್ವಿ ಶಾ, ಸ್ಟೀವ್ ಸ್ಮಿತ್, ರಿಷಭ್ ಪಂತ್ (ನಾಯಕ), ಮಾರ್ಕಸ್ ಸ್ಟೊಯಿನಿಸ್, ಶಿಮ್ರಾನ್ ಹೆಟ್ಮಿಯರ್, ಆಕ್ಸಾರ್ ಪಟೇಲ್, ಅಮಿತ್ ಮಿಶ್ರಾ, ಲಲಿತ್ ಯಾದವ್ / ಇಶಾಂತ್ ಶರ್ಮಾ, ಕಗಿಸೊ ರಬಾಡ, ಅವೇಶ್ ಖಾನ್

ಬೆಂಚ್: ಶಮ್ಸ್ ಮುಲಾನಿ, ಟಾಮ್ ಕುರ್ರನ್, ಅನ್ರಿಕ್ ನಾರ್ಟ್ಜೆ, ಅನಿರುದ್ಧಾ ಜೋಶಿ, ವಿಷ್ಣು ವಿನೋದ್, ಸ್ಯಾಮ್ ಬಿಲ್ಲಿಂಗ್ಸ್, ರಿಪಾಲ್ ಪಟೇಲ್, ಲುಕ್ಮನ್ ಮೇರಿವಾಲಾ, ಇಶಾಂತ್ ಶರ್ಮಾ / ಲಲಿತ್ ಯಾದವ್, ಪ್ರವೀಣ್ ದುಬೆ, ಉಮೇಶ್ ಯಾದವ್, ಅಜಿಂಕ್ಯ ರಹಾನೆ, ಕ್ರಿಸ್ ವೋಕ್ಸ್

ರಾಯಲ್ ಚಾಲೆಂಜರ್ಸ್ ಬೆಂಗಳೂರು ದೇವದತ್ ಪಡಿಕ್ಕಲ್, ವಿರಾಟ್ ಕೊಹ್ಲಿ (ನಾಯಕ), ವಾಷಿಂಗ್ಟನ್ ಸುಂದರ್, ಎಬಿ ಡಿವಿಲಿಯರ್ಸ್, ಗ್ಲೆನ್ ಮ್ಯಾಕ್ಸ್ ವೆಲ್, ಡೇನಿಯಲ್ ಕ್ರಿಶ್ಚಿಯನ್, ಕೈಲ್ ಜಾಮಿಸನ್, ಹರ್ಷಲ್ ಪಟೇಲ್, ಯುಜ್ವೇಂದ್ರ ಚಾಹಲ್, ಮೊಹಮ್ಮದ್ ಸಿರಾಜ್, ನವದೀಪ್ ಸೈನಿ

ಬೆಂಚ್: ಸುಯಾಶ್ ಪ್ರಭುದೇಸಾಯಿ, ಸಚಿನ್ ಬೇಬಿ, ಪವನ್ ದೇಶಪಾಂಡೆ, ರಜತ್ ಪಾಟಿದಾರ್, ಡೇನಿಯಲ್ ಸ್ಯಾಮ್ಸ್, ಮೊಹಮ್ಮದ್ ಅಜರುದ್ದೀನ್, ಶಹಬಾಜ್ ಅಹ್ಮದ್, ಫಿನ್ ಅಲೆನ್, ಕೆ.ಎಸ್.ಭಾರತ್

ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ