AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಸಿಎಸ್​ಕೆ ವಿರುದ್ಧ ಸೋಲಿನ ಬೆನ್ನಲ್ಲೇ ಕೊಹ್ಲಿಗೆ ದಂಡದ ಬರೆ! ಮತ್ತೆ ಈ ತಪ್ಪಾದರೆ ವಿರಾಟ್​ಗೆ ಒಂದು ಪಂದ್ಯದಿಂದ ಗೇಟ್ ಪಾಸ್

IPL 2021: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 20 ಓವರ್‌ಗಳನ್ನು ಎಸೆಯಲು ಹೆಚ್ಚು ಸಮಯ ತೆಗೆದುಕೊಂಡಿತು. ಈ ಕಾರಣದಿಂದ ವಿರಾಟ್ ಕೊಹ್ಲಿಗೆ 12 ಲಕ್ಷ ರೂ.ಗಳ ದಂಡ ವಿಧಿಸಲಾಗಿದೆ.

IPL 2021: ಸಿಎಸ್​ಕೆ ವಿರುದ್ಧ ಸೋಲಿನ ಬೆನ್ನಲ್ಲೇ ಕೊಹ್ಲಿಗೆ ದಂಡದ ಬರೆ! ಮತ್ತೆ ಈ ತಪ್ಪಾದರೆ ವಿರಾಟ್​ಗೆ ಒಂದು ಪಂದ್ಯದಿಂದ ಗೇಟ್ ಪಾಸ್
ವಿರಾಟ್ ಕೊಹ್ಲಿ
Follow us
ಪೃಥ್ವಿಶಂಕರ
| Updated By: Skanda

Updated on: Apr 26, 2021 | 9:51 AM

ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ನಾಯಕ ವಿರಾಟ್ ಕೊಹ್ಲಿಗೆ ಭಾನುವಾರ ಕೆಟ್ಟ ದಿನವಾಗಿತ್ತು. ಐಪಿಎಲ್ (IPL 14) ನ 14 ನೇ ಆವೃತ್ತಿಯಲ್ಲಿ ಸತತ ನಾಲ್ಕು ಜಯಗಳಿಸಿದ ನಂತರ ಕೊಹ್ಲಿ ತಂಡ ಸೋಲನ್ನು ಅನುಭವಿಸಿತು. ಮಹೇಂದ್ರ ಸಿಂಗ್ ಧೋನಿ ನಾಯಕತ್ವ ವಹಿಸಿದ್ದ ಚೆನ್ನೈ ಸೂಪರ್ ಕಿಂಗ್ಸ್ 69 ರನ್​ಗಳಿಂದ ಆರ್​ಸಿಬಿಯನ್ನು ಸೋಲಿಸಿತು. ರವೀಂದ್ರ ಜಡೇಜಾ ಅವರ ಆಲ್‌ರೌಂಡ್ ಗೇಮ್ ಎದುರು ಆರ್‌ಸಿಬಿ ಕೆಟ್ಟದಾಗಿ ಸೋತಿದೆ. ಈ ಗೆಲುವಿನೊಂದಿಗೆ ಚೆನ್ನೈ ಕೂಡ ಪಾಯಿಂಟ್ ಟೇಬಲ್‌ನಲ್ಲಿ ಬೆಂಗಳೂರಿನಿಂದ ಅಗ್ರ ಸ್ಥಾನವನ್ನು ಕಸಿದುಕೊಂಡಿದೆ. ಈಗ ಸಿಎಸ್​ಕೆ ಅಗ್ರ ತಂಡವಾಗಿದೆ. ಇದರೊಂದಿಗೆ ಆರ್‌ಸಿಬಿ ಮತ್ತು ವಿರಾಟ್ ಕೊಹ್ಲಿಗೆ ಮತ್ತೊಂದು ಕೆಟ್ಟ ಸುದ್ದಿ ಇದೆ.

ವಿರಾಟ್ ಕೊಹ್ಲಿಗೆ 12 ಲಕ್ಷ ರೂ.ಗಳ ದಂಡ ವಾಸ್ತವವಾಗಿ, ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ ನಿಧಾನವಾಗಿ ಓವರ್ ಮಾಡಿದ ಆರೋಪ ಕೇಳಿಬಂದಿದೆ. ಸಾಮಾನ್ಯವಾಗಿ ಇನ್ನಿಂಗ್ಸ್‌ನಲ್ಲಿ 20 ಓವರ್‌ಗಳನ್ನು ಪೂರ್ಣಗೊಳಿಸಲು 90 ನಿಮಿಷಗಳನ್ನು ನೀಡಲಾಗುತ್ತದೆ, ಆದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 20 ಓವರ್‌ಗಳನ್ನು ಎಸೆಯಲು ಹೆಚ್ಚು ಸಮಯ ತೆಗೆದುಕೊಂಡಿತು. ಈ ಕಾರಣದಿಂದ ವಿರಾಟ್ ಕೊಹ್ಲಿಗೆ 12 ಲಕ್ಷ ರೂ.ಗಳ ದಂಡ ವಿಧಿಸಲಾಗಿದೆ. ಈ ಆವೃತ್ತಿಯಲ್ಲಿ ಆರ್​ಸಿಬಿ ನಿರಂತರವಾಗಿ ಈ ತಪ್ಪನ್ನು ಮಾಡುತ್ತಿರುವುದು ಕಂಡುಬಂದರೆ, ಕೊಹ್ಲಿಯ ಮೇಲೆ ಪಂದ್ಯದ ಅಮಾನತು ಸಹ ವಿಧಿಸಬಹುದು. ಮುಂದಿನ ಪಂದ್ಯಗಳಲ್ಲಿ ಹೀಗಾಗದಂತೆ ನಿಯಂತ್ರಿಸಲು ಈ ಕಠಿಣ ಕ್ರಮ ಮುಖ್ಯವಾಗಿದೆ. ಒಂದು ವೇಳೆ ಈ ತಪ್ಪು ಮರುಕಳಿಸಿದರೆ ಅವರಿಗೆ ಪಂದ್ಯವೊಂದರಲ್ಲಿ ನಿಷೇಧ ಹೇರಬಹುದಾಗಿದೆ.

ಈ ಆವೃತ್ತಿಯಲ್ಲಿ ಶಿಕ್ಷೆ ಅನುಭವಿಸಿದ ನಾಲ್ಕನೇ ನಾಯಕ ವಿರಾಟ್ ಕೊಹ್ಲಿ. ಇವರಿಗಿಂತ ಮೊದಲು ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಮಹೇಂದ್ರ ಸಿಂಗ್ ಧೋನಿ, ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಮತ್ತು ಕೋಲ್ಕತಾ ನೈಟ್ ರೈಡರ್ಸ್ ತಂಡದ ನಾಯಕ ಅಯಾನ್ ಮೊರ್ಗಾನ್ ಕೂಡ ನಿಧಾನವಾಗಿ ಓವರ್ ಮುಗಿಸಿದಕ್ಕೆ ದಂಡ ಹಾಕಿಸಿಕೊಂಡಿದ್ದಾರೆ. ಈ ಕಾರಣಕ್ಕಾಗಿ, ಮುಂದಿನ ಎಲ್ಲಾ ಪಂದ್ಯಗಳಲ್ಲಿ ಧೋನಿ ತಮ್ಮ ಬೌಲರ್‌ಗಳನ್ನು ಆದಷ್ಟು ಬೇಗನೆ ಬೌಲಿಂಗ್ ಮುಗಿಸುವಂತೆ ನೋಡಿಕೊಳ್ಳುತ್ತಿದ್ದಾರೆ.

ಐದು ಪಂದ್ಯಗಳಲ್ಲಿ ಫಲಿತಾಂಶ ಹೀಗಿತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಇದುವರೆಗೆ ಐದು ಪಂದ್ಯಗಳನ್ನು ಆಡಿದೆ. ಈ ಪೈಕಿ ಅವರು ನಾಲ್ಕು ಪಂದ್ಯಗಳನ್ನು ಗೆದ್ದಿದ್ದಾರೆ ಮತ್ತು ಒಂದನ್ನು ಕಳೆದುಕೊಂಡಿದ್ದಾರೆ. ಐಪಿಎಲ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಈ ತಂಡವು ಆವೃತ್ತಿಯ ಮೊದಲ ನಾಲ್ಕು ಪಂದ್ಯಗಳನ್ನು ಗೆದ್ದಿದೆ. ಆದರೆ ವಿಜೇತ ರಥವು ಧೋನಿ ತಂಡದ ಮುಂದೆ ನಿಂತಿತು. ವಿರಾಟ್ ಕೊಹ್ಲಿ ನೇತೃತ್ವದ ಆರ್‌ಸಿಬಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು 2 ವಿಕೆಟ್‌ಗಳ ಅಂತರದಿಂದ ಸೋಲಿಸಿತು. ಇದರ ನಂತರ, ಎರಡನೇ ಪಂದ್ಯದಲ್ಲಿ, ಬೆರಗುಗೊಳಿಸುವ ಮತ್ತು ಕಡಿಮೆ ಸ್ಕೋರಿಂಗ್ ಪಂದ್ಯದಲ್ಲಿ ಬೆಂಗಳೂರು ಡೇವಿಡ್ ವಾರ್ನರ್ ನಾಯಕತ್ವದ ಸನ್‌ರೈಸರ್ಸ್ ಹೈದರಾಬಾದ್ ಅನ್ನು 6 ರನ್‌ಗಳಿಂದ ಸೋಲಿಸಿತು.

ಮೂರನೇ ಪಂದ್ಯದಲ್ಲಿ ಇಯಾನ್ ಮೊರ್ಗಾನ್ ನಾಯಕತ್ವ ವಹಿಸಿದ್ದ ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು 38 ರನ್ಗಳಿಂದ ಸೋಲಿಸಿ ಆರ್‌ಸಿಬಿ ಹ್ಯಾಟ್ರಿಕ್ ಜಯ ಸಾಧಿಸಿತು. ನಂತರ ಪ್ರಸಕ್ತ ಸರಣಿಯಲ್ಲಿ, ಸಂಜು ಸ್ಯಾಮ್ಸನ್‌ ಸಾರಥ್ಯದ ರಾಜಸ್ಥಾನ್ ರಾಯಲ್ಸ್ ತಂಡವನ್ನು ಸೋಲಿಸಿ ಆರ್‌ಸಿಬಿ ನಾಲ್ಕನೇ ಜಯ ಸಾಧಿಸಿತ್ತು.

ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ಪ್ರತಾಪ್​ಗೆ ಗಗನನ ತಬ್ಬಿಕೊಳ್ಳೋ ಆಸೆ; ವೇದಿಕೆ ಮೇಲೆ ಹೇಳಿಕೊಂಡ ಸ್ಪರ್ಧಿ
ಪ್ರತಾಪ್​ಗೆ ಗಗನನ ತಬ್ಬಿಕೊಳ್ಳೋ ಆಸೆ; ವೇದಿಕೆ ಮೇಲೆ ಹೇಳಿಕೊಂಡ ಸ್ಪರ್ಧಿ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ