AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಕ್ರಿಸ್ ಮಾರಿಸ್ ಕಾಲೆಳೆದ ವಿರೇಂದ್ರ ಸೆಹ್ವಾಗ್; ಟ್ವಿಟರ್​ನಲ್ಲಿ ವೈರಲ್ ಆಯ್ತು ತಮಾಷೆ!

ಐಪಿಎಲ್ ಟೂರ್ನಿಯ ರಾಜಸ್ಥಾನ್ ರಾಯಲ್ಸ್​ನ ಮೊದಲ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಮಾರಿಸ್​ಗೆ ಸ್ಟ್ರೈಕ್ ಬಿಟ್ಟುಕೊಡಲು ನಿರಾಕರಿಸಿದ್ದರು. ಹಾಗೂ ನಿನ್ನೆ ಗೆಲುವಿನಲ್ಲಿ ಮಾರಿಸ್ ಮುಖ್ಯ ಪಾತ್ರ ವಹಿಸಿದ್ದರು. ಈ ಎರಡು ಪಂದ್ಯದ ಕುರಿತ ಎರಡು ಫೋಟೊಗಳಿಗೆ ವಿಭಿನ್ನ ಕ್ಯಾಪ್ಶನ್ ಕೊಟ್ಟು ಸೆಹ್ವಾಗ್ ಹಂಚಿಕೊಂಡಿದ್ದಾರೆ.

IPL 2021: ಕ್ರಿಸ್ ಮಾರಿಸ್ ಕಾಲೆಳೆದ ವಿರೇಂದ್ರ ಸೆಹ್ವಾಗ್; ಟ್ವಿಟರ್​ನಲ್ಲಿ ವೈರಲ್ ಆಯ್ತು ತಮಾಷೆ!
ಕ್ರಿಸ್ ಮಾರಿಸ್, ವಿರೇಂದ್ರ ಸೆಹ್ವಾಗ್
TV9 Web
| Edited By: |

Updated on:Nov 30, 2021 | 12:20 PM

Share

ಭಾರತದ ಆಟಗಾರನಾಗಿ ಬ್ಯಾಟಿಂಗ್​ನಲ್ಲಿ ಬೌಲರ್​ಗಳನ್ನು ಗೋಳು ಹೊಯ್ದುಕೊಳ್ಳುತ್ತಿದ್ದ ವಿರೇಂದ್ರ ಸೆಹ್ವಾಗ್ ಈಗ ಸೋಷಿಯಲ್ ಮೀಡಿಯಾದಲ್ಲೂ ಆಗಾಗ ಬೌಂಡರಿ ಸಿಕ್ಸರ್ ಬಾರಿಸುತ್ತಿರುತ್ತಾರೆ. ಇತರರ ಕಾಲೆಳೆಯುತ್ತಿರುತ್ತಾರೆ. ಐಪಿಎಲ್ ಟೂರ್ನಮೆಂಟ್ ಪಂದ್ಯಗಳ ಕುರಿತಾಗಿಯೂ ಸೆಹ್ವಾಗ್ ಪ್ರತಿಕ್ರಿಯೆ ನೀಡುತ್ತಿರುತ್ತಾರೆ. ಅಂಥದ್ದೇ ಒಂದು ಟ್ವೀಟ್ ನಿನ್ನೆ ಮಾಡಿದ್ದಾರೆ. ಕ್ರಿಸ್ ಮಾರಿಸ್ ಬಗ್ಗೆ ಬರೆದುಕೊಂಡಿರುವ ಸಾಲುಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಸೆಹ್ವಾಗ್, ಮಾರಿಸ್​ರ ಎರಡು ಫೊಟೊಗಳಿರುವ ಮಿಮ್ಸ್​ನ್ನು ಹಂಚಿಕೊಂಡಿದ್ದಾರೆ. ಐಪಿಎಲ್ ಟೂರ್ನಿಯ ರಾಜಸ್ಥಾನ್ ರಾಯಲ್ಸ್​ನ ಮೊದಲ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಮಾರಿಸ್​ಗೆ ಸ್ಟ್ರೈಕ್ ಬಿಟ್ಟುಕೊಡಲು ನಿರಾಕರಿಸಿದ್ದರು. ಹಾಗೂ ನಿನ್ನೆ ಗೆಲುವಿನಲ್ಲಿ ಮಾರಿಸ್ ಮುಖ್ಯ ಪಾತ್ರ ವಹಿಸಿದ್ದರು. ಈ ಎರಡು ಪಂದ್ಯದ ಕುರಿತ ಎರಡು ಫೋಟೊಗಳಿಗೆ ವಿಭಿನ್ನ ಕ್ಯಾಪ್ಶನ್ ಕೊಟ್ಟು ಸೆಹ್ವಾಗ್ ಹಂಚಿಕೊಂಡಿದ್ದಾರೆ.

ಒಂದು ಮೊದಲ ಪಂದ್ಯದ ರಿಯಾಕ್ಷನ್ ಹಾಗೂ ಮತ್ತೊಂದು ಫೊಟೊ ಎರಡನೇ ಪಂದ್ಯದ ರಿಯಾಕ್ಷನ್ ಎಂದು ಅವರು ಹೇಳಿದ್ದಾರೆ. ರಾಜಸ್ಥಾನ್ ರಾಯಲ್ಸ್ 16.25 ಕೋಟಿ ಕೊಟ್ಟು ಕ್ರಿಸ್ ಮಾರಿಸ್​ರನ್ನು ತಂಡಕ್ಕೆ ಸೇರಿಸಿಕೊಂಡಿತ್ತು. ಆ ಮೂಲಕ ಐಪಿಎಲ್ ಸೀಸನ್​ನ ಅತಿ ದೊಡ್ಡ ಮೊತ್ತ ಪಡೆದ ಆಟಗಾರನಾಗಿ ಮಾರಿಸ್ ಹೊರಹೊಮ್ಮಿದ್ದರು. ಆ ಬಳಿಕ, ಮಾರಿಸ್​ ಬಗ್ಗೆ ಹಾಗೂ ಅವರಿಗೆ ಹರಾಜಿನಲ್ಲಿ ನೀಡಿದ ಮೊತ್ತದ ಬಗ್ಗೆ ಮಾತುಕತೆ ಆಗುತ್ತಲೇ ಇತ್ತು.

ನಿನ್ನೆ ನಡೆದ, ರಾಜಸ್ಥಾನ್ ರಾಯಲ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ರೋಚಕ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ 3 ವಿಕೆಟ್​ಗಳ ಗೆಲುವು ದಾಖಲಿಸಿದೆ. ಡೇವಿಡ್ ಮಿಲ್ಲರ್ ಹಾಗೂ ಕ್ರಿಸ್ ಮಾರಿಸ್ ತಂಡದ ಗೆಲುವಿನಲ್ಲಿ ಮುಖ್ಯ ಪಾತ್ರ ವಹಿಸಿದ್ದರು. ಮಿಲ್ಲರ್ 62(43) ಗಳಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ದು ಔಟ್ ಆದರೆ, ಕೊನೆಗೆ ಬಂದ ಮಾರಿಸ್ 36(18), 4 ಸಿಕ್ಸರ್ ಸಿಡಿಸಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದ್ದರು. ಡೆಲ್ಲಿ ಬೌಲರ್​ಗಳು ಆರಂಭದಲ್ಲಿ ಉತ್ತಮ ಪ್ರದರ್ಶನ ತೋರಿದ್ದರು. ಅವೇಶ್ ಖಾನ್ 3, ವೋಕ್ಸ್ ಹಾಗೂ ರಬಾಡ ತಲಾ 2 ವಿಕೆಟ್ ಕಬಳಿಸಿದ್ದರು. ಆದರೆ, ಅಂತಿಮ ಓವರ್​ಗಳಲ್ಲಿ ರಾಯಲ್ಸ್ ಬ್ಯಾಟಿಂಗ್ ಕಟ್ಟಿಹಾಕಲು ವಿಫಲರಾಗಿದ್ದರು. ಮಿಲ್ಲರ್-ಮಾರಿಸ್ ಆಟಕ್ಕೆ ಡೆಲ್ಲಿ ಬೌಲರ್​ಗಳು ಸುಸ್ತಾದರು. ಈ ಮೂಲಕ ರಾಜಸ್ತಾನ್ ತಂಡ ಮೊದಲ ಗೆಲುವನ್ನು ಕಂಡಿತು.

ಇದನ್ನೂ ಓದಿ: RR vs PBKS, IPL 2021: ಕೊನೆಯ ಓವರ್​ನಲ್ಲಿ ಸಿಂಗಲ್ ಓಟ ನಿರಾಕರಿಸಿದ ಸಂಜು ಸ್ಯಾಮ್ಸನ್​ಗೆ ಕ್ರಿಕೆಟ್ ದಿಗ್ಗಜರು ರಿಯಾಕ್ಟ್ ಮಾಡಿದ್ದು ಹೀಗೆ

ಇದನ್ನೂ ಓದಿ: KKR vs MI, IPL 2021: 30 ಬಾಲ್​ಗೆ 31 ರನ್ ಗಳಿಸಲು ಆಗದೇ ಸೋತ ಕೋಲ್ಕತ್ತಾ; ಅಚ್ಚರಿಯಿಂದ ಪ್ರತಿಕ್ರಿಯೆ ನೀಡಿದ ಹಿರಿಯ ಕ್ರಿಕೆಟಿಗರು

(IPL 2021 RR vs DC Virender Sehwag on Chris Morris Rajasthan Royals Match)

Published On - 3:56 pm, Fri, 16 April 21

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ