AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಸನ್​ರೈಸರ್ಸ್​ ತಂಡದ ಟಿ. ನಟರಾಜನ್​ಗೆ ಕೊರೊನಾ ಪಾಸಿಟಿವ್; ಮತ್ತೆ ರದ್ದಾಗುತ್ತಾ ಐಪಿಎಲ್?

T Natarajan : ಸನ್​ರೈಸರ್ಸ್​ ಹೈದರಾಬಾದ್​ (SRH) ತಂಡದ ಆಟಗಾರ ಟಿ. ನಟರಾಜನ್​ಗೆ ಕೊವಿಡ್ ಪಾಸಿಟಿವ್ ದೃಢಪಟ್ಟಿದೆ.

IPL 2021: ಸನ್​ರೈಸರ್ಸ್​ ತಂಡದ ಟಿ. ನಟರಾಜನ್​ಗೆ ಕೊರೊನಾ ಪಾಸಿಟಿವ್; ಮತ್ತೆ ರದ್ದಾಗುತ್ತಾ ಐಪಿಎಲ್?
ಟಿ. ನಟರಾಜನ್
TV9 Web
| Edited By: |

Updated on:Sep 22, 2021 | 3:54 PM

Share

ಕೊವಿಡ್ ಭೀತಿಯಿಂದ ಈ ಹಿಂದೆ ಐಪಿಎಲ್ ಪಂದ್ಯ ಮುಂದೂಡಲ್ಪಟ್ಟಿತ್ತು. ಬಳಿಕ ಆದರೆ, ಇದೀಗ ಮತ್ತೊಮ್ಮೆ ಐಪಿಎಲ್​ಗೆ ಕೊರೊನಾ ಸಂಕಷ್ಟ ಎದುರಾಗಿದ್ದು, ಸನ್​ರೈಸರ್ಸ್​ ಹೈದರಾಬಾದ್​ (SRH) ತಂಡದ ಆಟಗಾರ ಟಿ. ನಟರಾಜನ್​ಗೆ ಕೊವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರಿಂದಾಗಿ ಮತ್ತೊಮ್ಮೆ ಐಪಿಲ್ ಪಂದ್ಯ ರದ್ದಾಗಲಿದೆಯಾ? ಎಂಬ ಚರ್ಚೆಗಳು ಶುರುವಾಗಿವೆ. ಆದರೆ, ಇಂದಿನ ಡಿಸಿ ವರ್ಸಸ್ ಎಸ್​ಆರ್​ಹೆಚ್​ ಪಂದ್ಯ ನಡೆಯಲಿದೆ. 

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಲಾಗಿದ್ದು, ಸನ್​ರೈಸರ್ಸ್ ಹೈದರಾಬಾದ್ ತಂಡದ ಟಿ. ನಟರಾಜನ್ ಅವರಿಗೆ ಕೊವಿಡ್ ಪಾಸಿಟಿವ್ ದೃಢಪಟ್ಟಿದೆ. ಇಂದೇ ಸನ್​ರೈಸರ್ಸ್​ (ಎಸ್​ಆರ್​ಹೆಚ್​) ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (ಡಿಹೆಚ್​) ತಂಡದ ಮಧ್ಯೆ ಐಪಿಎಲ್ ಪಂದ್ಯ ನಡೆಯಲಿದೆ. ಇಂದಿನ ಪಂದ್ಯದಲ್ಲಿ ಯಾವುದೇ ವ್ಯತ್ಯಾಸ ಇರುವುದಿಲ್ಲ ಎಂದು ತಿಳಿಸಿದೆ.

ಭಾರತದಲ್ಲಿ ಕೊವಿಡ್​ ಸೋಂಕು ಹೆಚ್ಚಾಗಿದ್ದರಿಂದ ಐಪಿಎಲ್ ಪಂದ್ಯ ಅರ್ಧಕ್ಕೇ ಸ್ಥಗಿತಗೊಂಡಿತ್ತು. ಅದಾದ ನಾಲ್ಕು ತಿಂಗಳ ನಂತರ ಮತ್ತೆ ಐಪಿಎಲ್ ಟೂರ್ನಿ ಯುಎಇಯಲ್ಲಿ ಮತ್ತೆ ಪುನರಾರಂಭಗೊಂಡಿತ್ತು. ಇಂದು ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಸನ್​ರೈಸರ್ಸ್​ ಹೈದರಾಬಾದ್ ನಡುವೆ ದುಬೈನಲ್ಲಿ ಐಪಿಎಲ್ ಪಂದ್ಯ ನಡೆಯಲಿದೆ. ಟಿ. ನಟರಾಜನ್ ಸಂಪರ್ಕದಲ್ಲಿದ್ದ ಇತರೆ ಆಟಗಾರರು ಕೂಡ ಕ್ವಾರಂಟೈನ್ ಆಗಬೇಕಾದ ಅನಿವಾರ್ಯತೆ ಎದುರಾಗುವ ಸಾಧ್ಯತೆಯಿದೆ.

ಸನ್​ರೈಸರ್ಸ್​ ಹೈದರಾಬಾದ್​ ತಂಡದ ಆಟಗಾರರ ಪಟ್ಟಿ:

ಕೇನ್ ವಿಲಿಯಮ್ಸನ್ (ನಾಯಕ), ಡೇವಿಡ್ ವಾರ್ನರ್, ಮನೀಶ್ ಪಾಂಡೆ, ವಿರಾಟ್ ಸಿಂಗ್, ಪ್ರಿಯಂ ಗರ್ಗ್, ಅಬ್ದುಲ್ ಸಮದ್, ಭುವನೇಶ್ವರ್ ಕುಮಾರ್, ಖಲೀಲ್ ಅಹ್ಮದ್, ಸಂದೀಪ್ ಶರ್ಮಾ, ಸಿದ್ಧಾರ್ಥ್ ಕೌಲ್, ಟಿ ನಟರಾಜನ್, ಅಭಿಷೇಕ್ ಶರ್ಮಾ, ಶಹಬಾಝ್ ನದೀಮ್, ವಿಜಯ್ ಶಂಕರ್, ಮೊಹಮ್ಮದ್ ನಬಿ, ರಶೀದ್ ಖಾನ್, ಶೆರ್ಫೇನ್ ರುದಫೋರ್ಡ್, ವೃದ್ಧಿಮಾನ್ ಸಹಾ (ವಿಕೆಟ್‌ಕೀಪರ್‌), ಶ್ರೀವತ್ಸ ಗೋಸ್ವಾಮಿ, ಬಸಿಲ್ ಥಂಪಿ, ಜೇಸನ್ ಹೋಲ್ಡರ್, ಜಗದೀಶ ಸುಚಿತ್, ಕೇದಾರ್ ಜಾಧವ್, ಮುಜೀಬ್ ಉರ್ ರೆಹಮಾನ್, ಜೇಸನ್ ರಾಯ್‌.

(IPL 2021 SRH player T Natarajan tests Covid positive DC VS SRH Match will Continue)

Published On - 3:41 pm, Wed, 22 September 21

Follow Us
Web contact
Web contact

TV9 Kannada

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?