AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಆರ್​ಸಿಬಿಗೆ ಮೊದಲ ಎದುರಾಳಿ ಮುಂಬೈ.. ಹೀಗಿದೆ ನೋಡಿ ನಮ್ಮ ಬೆಂಗಳೂರು ತಂಡದ ಸಂಪೂರ್ಣ ವೇಳಾಪಟ್ಟಿ..!

IPL 2021: ಏಪ್ರಿಲ್ 9 ರಂದು ಚೆನ್ನೈನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಆರ್ಸಿಬಿ ತಂಡ ಹಾಲಿ ಚಾಂಪಿಯನ್ಸ್ ಮುಂಬೈ ತಂಡ ಎದುರಿಸಲಿದೆ. ಲೀಗ್ ಹಂತದಲ್ಲಿ ಆರ್ಸಿಬಿ 14 ಪಂದ್ಯವನ್ನು ಆಡಲಿದ್ದು, ಬಹುತೇಕ ಪಂದ್ಯಗಳು ಸಂಜೆ ಆರಂಭವಾಗಲಿದೆ.

IPL 2021: ಆರ್​ಸಿಬಿಗೆ ಮೊದಲ ಎದುರಾಳಿ ಮುಂಬೈ.. ಹೀಗಿದೆ ನೋಡಿ ನಮ್ಮ ಬೆಂಗಳೂರು ತಂಡದ ಸಂಪೂರ್ಣ ವೇಳಾಪಟ್ಟಿ..!
ಬಲಿಷ್ಠ ಮುಂಬೈ ಇಂಡಿಯನ್ಸ್​ಗೆ ಸೋಲುಣಿಸುವ ಮೂಲಕ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ದ್ವಿತಿಯಾರ್ಧದಲ್ಲಿ ಗೆಲುವಿನ ಖಾತೆ ತೆರೆದಿದೆ. 166 ರನ್​ಗಳ ಸ್ಪರ್ಧಾತ್ಮಕ ಸವಾಲನ್ನು ಬೆನ್ನತ್ತಿದ ಮುಂಬೈ ಒಂದು ಹಂತದಲ್ಲಿ ಚೇಸ್ ಮಾಡುವ ಸ್ಥಿತಿಯಲ್ಲಿತ್ತು. ಆದರೆ ಇಡೀ ಪಂದ್ಯದ ಚಿತ್ರಣ ಬದಲಾಗಿದ್ದು 17ನೇ ಓವರ್​ನಲ್ಲಿ. ವಿರಾಟ್ ಕೊಹ್ಲಿ ಮಾಡಿದ ಬೌಲಿಂಗ್ ಚೇಂಜ್ ಇಡೀ ಪಂದ್ಯದ ಗತಿಯನ್ನೇ ಬದಲಿಸಿತು. ಏಕೆಂದರೆ ಒಂದೇ ಓವರ್​ನಲ್ಲಿ 3 ವಿಕೆಟ್​ ಉರುಳಿದ್ದವು. ಈ ಮೂವರಲ್ಲಿ ಇಬ್ಬರು ಟಿ20 ಕ್ರಿಕೆಟ್​ನ ಡೇಂಜರಸ್​ ಬ್ಯಾಟ್ಸ್​ಮನ್ ಎಂಬುದು ವಿಶೇಷ.
Follow us
ಪೃಥ್ವಿಶಂಕರ
|

Updated on:Mar 08, 2021 | 12:24 PM

ಬೆಂಗಳೂರು: ಏಪ್ರಿಲ್ 9ರಿಂದ ಐಪಿಎಲ್ ಟೂರ್ನಿ 14ನೇ ಆವೃತ್ತಿ ಆರಂಭವಾಗಲಿದೆ. ಉದ್ಘಾಟನಾ ಪಂದ್ಯದಲ್ಲೇ ಆರ್​ಸಿಬಿಗೆ ಹಾಲಿ ಚಾಂಪಿಯನ್ಸ್ ಮುಂಬೈ ಬಾಯ್ಸ್ ಸವಾಲ್ ಎದುರಾಗಿದೆ. ಈ ಬಾರಿಯ ಐಪಿಎಲ್ ಟೂರ್ನಿಯ ವೇಳಾಪಟ್ಟಿಯನ್ನು ಐಪಿಎಲ್ ಆಡಳಿತ ಮಂಡಳಿ ಅಧಿಕೃತ ಘೋಷಣೆ ಮಾಡಿದೆ. ಏಪ್ರಿಲ್ 9ರಿಂದ ಐಪಿಎಲ್ 14ನೇ ಆವೃತ್ತಿ ಆರಂಭವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಆರ್​ಸಿಬಿಗೆ-ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿವೆ.

ಉದ್ಘಾಟನಾ ಪಂದ್ಯ ಮುಂಬೈ Vs ಆರ್ಸಿಬಿ ಏಪ್ರಿಲ್ 9 ರಂದು ಚೆನ್ನೈನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಆರ್​ಸಿಬಿ ತಂಡ ಹಾಲಿ ಚಾಂಪಿಯನ್ಸ್ ಮುಂಬೈ ತಂಡ ಎದುರಿಸಲಿದೆ. ಲೀಗ್ ಹಂತದಲ್ಲಿ ಆರ್​ಸಿಬಿ 14 ಪಂದ್ಯವನ್ನು ಆಡಲಿದ್ದು, ಬಹುತೇಕ ಪಂದ್ಯಗಳು ಸಂಜೆ ಆರಂಭವಾಗಲಿದೆ. ಭಾನುವಾರ ನಡೆಯುವ 3 ಪಂದ್ಯಗಳು ಮಾತ್ರ ಮಧ್ಯಾಹ್ನ ನಡೆಯಲಿವೆ.

ಆರ್ಸಿಬಿ ಆಟ ತವರಿನಲ್ಲಿ 5 ಪಂದ್ಯವನ್ನು ಎದುರಿಸಲಿರುವ ಆರ್​ಸಿಬಿ ತಂಡ ಹೊರ ರಾಜ್ಯದಲ್ಲಿ 9 ಪಂದ್ಯ ಆಡಲಿದೆ.

6 ನಗರದಲ್ಲಿ ಟೂರ್ನಿ ಆಯೋಜನೆ.. ಈ ಹಿಂದಿನ ಆವೃತ್ತಿಗಿಂತಲೂ ಈ ಬಾರಿಯ ಟೂರ್ನಿ ವಿಭಿನ್ನವಾಗಿರಲಿದೆ. ಈ ಬಾರಿಯ ಟೂರ್ನಿಗೆ ಒಟ್ಟು 6 ನಗರಗಳು ಆತಿಥ್ಯ ವಹಿಸಲಿದೆ. ಅಹಮದಾಬಾದ್, ಬೆಂಗಳೂರು, ಚೆನ್ನೈ, ಮುಂಬೈ, ದೆಹಲಿ ಮತ್ತು ಕೋಲ್ಕತ್ತಾದಲ್ಲಿ ಪಂದ್ಯಗಳು ನಡೆಯಲಿವೆ.

ಪ್ಲೇ ಆಫ್, ಫೈನಲ್ ಎಲ್ಲಿ? ಈ ಬಾರಿಯ ಐಪಿಎಲ್ ಟೂರ್ನಿಯ ಪ್ಲೇ ಆಫ್ ಹಾಗೂ ಫೈನಲ್ ಪಂದ್ಯಗಳಿಗೆ ಗುಜರಾತ್​ನಲ್ಲಿ ಹೊಸದಾಗಿ ನಿರ್ಮಾಣಗೊಂಡಿರುವ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂ ಆತಿಥ್ಯ ವಹಿಸಲಿದೆ. ಇದೇ ಮೊದಲ ಬಾರಿಗೆ ಐಪಿಎಲ್ ಪಂದ್ಯಗಳು ಈ ಸ್ಟೇಡಿಯಂನಲ್ಲಿ ಆಯೋಜನೆಗೊಂಡಿದೆ. ಫೈನಲ್ ಪಂದ್ಯ ಮೇ 30 ಭಾನುವಾರದಂದು ನಡೆಯಲಿದೆ.

ಆರ್​ಸಿಬಿ ಸಂಪೂರ್ಣ ತಂಡ ಐಪಿಎಲ್​ 2021ರ ಆರ್​ಸಿಬಿ ತಂಡ ಹೀಗಿದೆ: ವಿರಾಟ್ ಕೊಹ್ಲಿ (ನಾಯಕ), ಎಬಿ ಡಿ ವಿಲಿಯರ್ಸ್, ದೇವದತ್ ಪಡಿಕ್ಕಲ್, ವಾಷಿಂಗ್ಟನ್ ಸುಂದರ್, ಯಜುವೇಂದ್ರ ಚಾಹಲ್, ಜೋಶ್ ಫಿಲಿಪೆ, ಪವನ್ ದೇಶಪಾಂಡೆ, ಮೊಹಮ್ಮದ್ ಸಿರಾಜ್, ನವದೀಪ್ ಸೈನಿ, ಶಾಬಾಜ್ ಅಹ್ಮದ್, ಆಡಂ ಝಂಪಾ, ಕೇನ್ ರಿಚರ್ಡ್ಸನ್, ಗ್ಲೆನ್ ಮ್ಯಾಕ್ಸ್ ವೆಲ್, ಕೈಲ್ ಜೇಮಿಸನ್, ಮೊಹಮ್ಮದ್ ಅಜರುದ್ದೀನ್, ರಜತ್ ಪಾಟೀದಾರ್, ಸಚಿನ್ ಬೇಬಿ, ಡೇನಿಯಲ್ ಕ್ರಿಶ್ಚಿಯನ್.

ನಮ್ಮ ಬೆಂಗಳೂರು ತಂಡದ ಸಂಪೂರ್ಣ ವೇಳಾಪಟ್ಟಿ ಹೀಗಿದೆ..

ದಿನಾಂಕ ಮುಖಾಮುಖಿ ಸ್ಥಳ ಸಮಯ
ಏಪ್ರಿಲ್ 9  ಆರ್‌ಸಿಬಿ vs ಮುಂಬೈ ಇಂಡಿಯನ್ಸ್ ಚೆನ್ನೈ ಸಂಜೆ 7.30
ಏಪ್ರಿಲ್ 14 ಆರ್‌ಸಿಬಿ vs ಸನ್‌ರೈಸರ್ಸ್ ಹೈದರಾಬಾದ್ ಚೆನ್ನೈ ಸಂಜೆ 7.30
 ಏಪ್ರಿಲ್ 18 ಆರ್‌ಸಿಬಿ vs ಕೊಲ್ಕತ್ತಾ ನೈಟ್ ರೈಡರ್ಸ್ ಚೆನ್ನೈ  ಮಧ್ಯಾಹ್ನ 3.30
 ಏಪ್ರಿಲ್ 22 ಆರ್‌ಸಿಬಿ vs ರಾಜಸ್ಥಾನ್ ರಾಯಲ್ಸ್ ಮುಂಬೈ  ಸಂಜೆ 7.30
ಏಪ್ರಿಲ್ 25  ಆರ್‌ಸಿಬಿ vs ಚೆನ್ನೈ ಸೂಪರ್ ಕಿಂಗ್ಸ್ ಮುಂಬೈ ಮಧ್ಯಾಹ್ನ 3.30
ಏಪ್ರಿಲ್ 27 ಆರ್‌ಸಿಬಿ vs ಡೆಲ್ಲಿ ಕ್ಯಾಪಿಟಲ್ಸ್  ಅಹಮದಾಬಾದ್  ಸಂಜೆ 7.30
ಏಪ್ರಿಲ್ 30 ಆರ್‌ಸಿಬಿ vs ಪಂಜಾಬ್ ಕಿಂಗ್ಸ್  ಅಹಮದಾಬಾದ್  ಸಂಜೆ 7.30
ಮೇ 3  ಆರ್‌ಸಿಬಿ vs ಕೊಲ್ಕತ್ತಾ ನೈಟ್ ರೈಡರ್ಸ್  ಅಹಮದಾಬಾದ್  ಸಂಜೆ 7.30
ಮೇ 6 ಆರ್‌ಸಿಬಿ vs ಪಂಜಾಬ್ ಕಿಂಗ್ಸ್  ಅಹಮದಾಬಾದ್  ಸಂಜೆ 7.30
ಮೇ 9 ಆರ್‌ಸಿಬಿ vs ಸನ್‌ರೈಸರ್ಸ್ ಹೈದರಾಬಾದ್  ಕೋಲ್ಕತಾ  ಸಂಜೆ 7.30
ಮೇ 14  ಆರ್‌ಸಿಬಿ vs ಡೆಲ್ಲಿ ಕ್ಯಾಪಿಟಲ್ಸ್  ಕೋಲ್ಕತಾ  ಸಂಜೆ 7.30
ಮೇ 16 ಆರ್‌ಸಿಬಿ vs ರಾಜಸ್ಥಾನ್ ರಾಯಲ್ಸ್  ಕೋಲ್ಕತಾ ಮಧ್ಯಾಹ್ನ 3.30
ಮೇ 20 ಆರ್‌ಸಿಬಿ vs ಮುಂಬೈ ಇಂಡಿಯನ್ಸ್  ಕೋಲ್ಕತಾ  ಸಂಜೆ 7.30
 ಮೇ 23  ಆರ್‌ಸಿಬಿ vs ಚೆನ್ನೈ ಸೂಪರ್ ಕಿಂಗ್ಸ್  ಕೋಲ್ಕತಾ  ಸಂಜೆ 7.30

Published On - 12:20 pm, Mon, 8 March 21

ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್