AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs DC IPL 2021 Match Prediction: ಬಲಿಷ್ಠ ಆರ್​ಸಿಬಿ – ಡೆಲ್ಲಿ ನಡುವೆ ಹಣಾಹಣಿ, ಕೊಹ್ಲಿ ಗೆಲ್ಲುವ ಕುದುರೆ ಎನ್ನುತ್ತಿವೆ ಅಂಕಿ ಅಂಶ

IPL 2021: ಉಭಯ ತಂಡಗಳು ಒಟ್ಟಾರೆ 26 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ದೆಹಲಿ ಕ್ಯಾಪಿಟಲ್ಸ್ 10 ಪಂದ್ಯಗಳಲ್ಲಿ ಗೆದ್ದಿದ್ದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು 15 ಪಂದ್ಯಗಳಲ್ಲಿ ಗೆದ್ದಿದೆ.

RCB vs DC IPL 2021 Match Prediction: ಬಲಿಷ್ಠ ಆರ್​ಸಿಬಿ - ಡೆಲ್ಲಿ ನಡುವೆ ಹಣಾಹಣಿ, ಕೊಹ್ಲಿ ಗೆಲ್ಲುವ ಕುದುರೆ ಎನ್ನುತ್ತಿವೆ ಅಂಕಿ ಅಂಶ
ವಿರಾಟ್ ಕೊಹ್ಲಿ, ರಿಷಭ್ ಪಂತ್
ಪೃಥ್ವಿಶಂಕರ
| Updated By: Skanda|

Updated on: Apr 27, 2021 | 8:50 AM

Share

ಇಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ದೆಹಲಿ ಕ್ಯಾಪಿಟಲ್ಸ್ (ಡಿಸಿ) ನಡುವೆ ಬಿಗ್ ಫೈಟ್​ ನಡೆಯಲಿದೆ. ಉಭಯ ತಂಡಗಳು ಐದು ಪಂದ್ಯಗಳಿಂದ ನಾಲ್ಕು ಗೆಲುವು ಸಾಧಿಸಿವೆ, ರಿಷಭ್ ಪಂತ್ ಅವರ ಡಿಸಿ 0.096 ಕ್ಕೆ ಉತ್ತಮ ನಿವ್ವಳ ರನ್​ರೇಟ್  ಹೊಂದಿದೆ. ತಮ್ಮ ಹಿಂದಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸೂಪರ್ ಓವರ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಹೆಚ್) ತಂಡವನ್ನು ಸೋಲಿಸಿತು. ಮತ್ತೊಂದೆಡೆ, ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 69 ರನ್​ಗಳಿಂದ ಸೋತ ನಂತರ ರಾಯಲ್​ ಚಾಲೆಂಜರ್ಸ್ ಗೆಲುವಿನ ಹಾದಿಗೆ ಮರಳಲು ಉತ್ಸುಕರಾಗಿದ್ದಾರೆ.

ಈ ಮಧ್ಯೆ, ಆರ್‌ಸಿಬಿಯ ಕೇನ್ ರಿಚರ್ಡ್‌ಸನ್ ಮತ್ತು ಆಡಮ್ ಜಂಪಾ ಆಸ್ಟ್ರೇಲಿಯಾಕ್ಕೆ ಮರಳಿದ್ದಾರೆ ಮತ್ತು ಉಳಿದ ಪಂದ್ಯಾವಳಿಗಳಿಗೆ ಲಭ್ಯವಿರುವುದಿಲ್ಲ. ಚಾಲೆಂಜರ್ಸ್ ಮತ್ತು ಕ್ಯಾಪಿಟಲ್ಸ್​ ಇಬ್ಬರೂ ತಮ್ಮ ಮುಂದಿನ ಮುಖಾಮುಖಿಯಲ್ಲಿ ಗೆಲುವಿನೊಂದಿಗೆ ಪಾಯಿಂಟ್ ಟೇಬಲ್‌ನ ಅಗ್ರಸ್ಥಾನಕ್ಕೆ ಹೋಗಲು ನೋಡುತ್ತಿದ್ದಾರೆ.

ಪಿಚ್ ವರದಿ ಅಹಮದಾಬಾದ್‌ನಲ್ಲಿನ ಪಿಚ್ ಬ್ಯಾಟಿಂಗ್‌ಗೆ ಉತ್ತಮವಾಗಿದೆ, ವಿಶೇಷವಾಗಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟಿ 20 ಐ ಸರಣಿಯಲ್ಲಿ ಇಲ್ಲಿ ಬೃಹತ್​ ರನ್ ಮಳೆಯೇ ಹರಿದಿತ್ತು. ಈ ಹಿಂದಿನ ಆಟಗಳನ್ನು ಗಮನದಲ್ಲಿಟ್ಟುಕೊಂಡರೆ ಚೇಸ್ ಮಾಡುವವರಿಗೆ ಉತ್ತಮ ಅವಕಾಶ. ಇಲ್ಲಿ 38 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದೆ

ಸರಾಸರಿ ಮೊದಲ ಇನ್ನಿಂಗ್ಸ್ ಸ್ಕೋರ್: 171

ಬೆನ್ನಟ್ಟುವ ತಂಡಗಳ ದಾಖಲೆ: ಗೆಲುವು – 3, ಸೋಲು – 2,

ಸಂಭವನೀಯ ಇಲೆವನ್ ದೆಹಲಿ ಕ್ಯಾಪಿಟಲ್ಸ್ ಶಿಖರ್ ಧವನ್, ಪೃಥ್ವಿ ಶಾ, ಸ್ಟೀವ್ ಸ್ಮಿತ್, ರಿಷಭ್ ಪಂತ್ (ಸಿ & ಡಬ್ಲ್ಯೂಕೆ), ಮಾರ್ಕಸ್ ಸ್ಟೊಯಿನಿಸ್, ಶಿಮ್ರಾನ್ ಹೆಟ್ಮಿಯರ್, ಆಕ್ಸಾರ್ ಪಟೇಲ್, ಅಮಿತ್ ಮಿಶ್ರಾ, ಲಲಿತ್ ಯಾದವ್ / ಇಶಾಂತ್ ಶರ್ಮಾ, ಕಗಿಸೊ ರಬಾಡ, ಅವೇಶ್ ಖಾನ್

ಬೆಂಚ್: ಶಮ್ಸ್ ಮುಲಾನಿ, ಟಾಮ್ ಕುರ್ರನ್, ಅನ್ರಿಕ್ ನಾರ್ಟ್ಜೆ, ಅನಿರುದ್ಧಾ ಜೋಶಿ, ವಿಷ್ಣು ವಿನೋದ್, ಸ್ಯಾಮ್ ಬಿಲ್ಲಿಂಗ್ಸ್, ರಿಪಾಲ್ ಪಟೇಲ್, ಲುಕ್ಮನ್ ಮೇರಿವಾಲಾ, ಇಶಾಂತ್ ಶರ್ಮಾ / ಲಲಿತ್ ಯಾದವ್, ಪ್ರವೀಣ್ ದುಬೆ, ಉಮೇಶ್ ಯಾದವ್, ಅಜಿಂಕ್ಯ ರಹಾನೆ, ಕ್ರಿಸ್ ವೋಕ್ಸ್

ರಾಯಲ್ ಚಾಲೆಂಜರ್ಸ್ ಬೆಂಗಳೂರು ದೇವದುತ್ ಪಡಿಕ್ಕಲ್, ವಿರಾಟ್ ಕೊಹ್ಲಿ (ಸಿ), ವಾಷಿಂಗ್ಟನ್ ಸುಂದರ್, ಎಬಿ ಡಿವಿಲಿಯರ್ಸ್ (ಡಬ್ಲ್ಯೂಕೆ), ಗ್ಲೆನ್ ಮ್ಯಾಕ್ಸ್ ವೆಲ್, ಡೇನಿಯಲ್ ಕ್ರಿಶ್ಚಿಯನ್, ಕೈಲ್ ಜಾಮಿಸನ್, ಹರ್ಷಲ್ ಪಟೇಲ್, ಯುಜ್ವೇಂದ್ರ ಚಾಹಲ್, ಮೊಹಮ್ಮದ್ ಸಿರಾಜ್, ನವದೀಪ್ ಸೈನಿ

ಬೆಂಚ್: ಸುಯಾಶ್ ಪ್ರಭುದೇಸಾಯಿ, ಸಚಿನ್ ಬೇಬಿ, ಪವನ್ ದೇಶಪಾಂಡೆ, ರಜತ್ ಪಾಟಿದಾರ್, ಡೇನಿಯಲ್ ಸ್ಯಾಮ್ಸ್, ಮೊಹಮ್ಮದ್ ಅಜರುದ್ದೀನ್, ಶಹಬಾಜ್ ಅಹ್ಮದ್, ಫಿನ್ ಅಲೆನ್, ಕೆ.ಎಸ್.ಭಾರತ್

ಮುಖಾಮುಖಿ ಉಭಯ ತಂಡಗಳು ಒಟ್ಟಾರೆ 26 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ದೆಹಲಿ ಕ್ಯಾಪಿಟಲ್ಸ್ 10 ಪಂದ್ಯಗಳಲ್ಲಿ ಗೆದ್ದಿದ್ದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು 15 ಪಂದ್ಯಗಳಲ್ಲಿ ಗೆದ್ದಿದೆ. ಒಂದು ಪಂದ್ಯ ಪಲಿತಾಂಶವಿಲ್ಲದೆ ಅಂತ್ಯಗೊಂಡಿದೆ.

ಪಂದ್ಯದ ಅತ್ಯುತ್ತಮ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ- ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರಾಟ್ ಕೊಹ್ಲಿ ಡೆಲ್ಲಿ ವಿರುದ್ಧ ದೈತ್ಯಾಕಾರದ ಸಂಖ್ಯೆಯನ್ನು ಹೊಂದಿದ್ದಾರೆ. 23 ಪಂದ್ಯಗಳಲ್ಲಿ, ಬಲಗೈ ಆಟಗಾರ 897 ರನ್ ಗಳಿಸಿದ್ದಾರೆ. ಕ್ರಮವಾಗಿ 59.80 ಮತ್ತು 136.53 ರ ಸ್ಟ್ರೈಕ್ ರೇಟ್ ಹಾಗೂ ಸರಾಸರಿ ಹೊಂದಿದ್ದಾರೆ. ಎಂಟು ಅರ್ಧಶತಕಗಳನ್ನು ಹೊಂದಿದ್ದಾರೆ. ನಡೆಯುತ್ತಿರುವ ಆವೃತ್ತಿಯಲ್ಲಿ, ಕೊಹ್ಲಿ 151 ರನ್ ಗಳಿಸಿದ್ದಾರೆ, ಆದರೆ ಸಿಎಸ್ಕೆ ವಿರುದ್ಧದ ಪಂದ್ಯದಲ್ಲಿ ಅವರು ಕಳಪೆ ಆಟ ಆಡಿದ್ದರು.

ಹರ್ಷಲ್ ಪಟೇಲ್- ರಾಯಲ್ ಚಾಲೆಂಜರ್ಸ್ ಬೆಂಗಳೂರು ಸಿಎಎಸ್​ಕೆ ವಿರುದ್ಧದ ಅಂತಿಮ ಓವರ್‌ನಲ್ಲಿ ಅವರು 37 ರನ್ ನೀಡಿದ ಹರ್ಷಲ್ ಪಟೇಲ್ ಪಂದ್ಯಾವಳಿಯಲ್ಲಿ ಆರ್‌ಸಿಬಿಯ ಅತ್ಯುತ್ತಮ ಬೌಲರ್ ಆಗಿದ್ದಾರೆ. ಅವರು ಪರ್ಪಲ್ ಕ್ಯಾಪ್ ಹೊಂದಿರುವವರಾಗಿದ್ದು, ಅವರ ಹೆಸರಿಗೆ 15 ವಿಕೆಟ್​ಗಳು ಸೇರಿವೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಪಟೇಲ್ ಸ್ಟಾರ್​ ಬೌಲರ್​ ಆಗಲಿದ್ದಾರೆ.

ಭಾವಿ ಪತಿಯ ಜೊತೆಗೆ ಆರತಿ ಮಾಡಿದ ಆಂಕರ್ ಅನುಶ್ರೀ, ಹಳೆ ವಿಡಿಯೋ ವೈರಲ್
ಭಾವಿ ಪತಿಯ ಜೊತೆಗೆ ಆರತಿ ಮಾಡಿದ ಆಂಕರ್ ಅನುಶ್ರೀ, ಹಳೆ ವಿಡಿಯೋ ವೈರಲ್
ಬುಧವಾರ ಪುನಃ ವಿಚಾರಣೆಗೆ ಬರಲು ಹೇಳಿದ್ದಾರೆ: ಭೈರತಿ ಬಸವರಾಜ
ಬುಧವಾರ ಪುನಃ ವಿಚಾರಣೆಗೆ ಬರಲು ಹೇಳಿದ್ದಾರೆ: ಭೈರತಿ ಬಸವರಾಜ
ಭೂಪಾಲ್​ನ ಶಾಲೆಯಲ್ಲಿ ಸೀಲಿಂಗ್ ಪ್ಲಾಸ್ಟರ್ ಬಿದ್ದು ಇಬ್ಬರಿಗೆ ಗಾಯ
ಭೂಪಾಲ್​ನ ಶಾಲೆಯಲ್ಲಿ ಸೀಲಿಂಗ್ ಪ್ಲಾಸ್ಟರ್ ಬಿದ್ದು ಇಬ್ಬರಿಗೆ ಗಾಯ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ
ಸಿಎಂ ಸಿದ್ದರಾಮಯ್ಯರನ್ನು ವಿನಾಕಾರಣ ದೂಷಿಸಲಾಗುತ್ತಿದೆ: ಕಾಶಪ್ಪನವರ್
ಸಿಎಂ ಸಿದ್ದರಾಮಯ್ಯರನ್ನು ವಿನಾಕಾರಣ ದೂಷಿಸಲಾಗುತ್ತಿದೆ: ಕಾಶಪ್ಪನವರ್