AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MI vs RCB: ಆರ್​ಸಿಬಿ ತಂಡದಲ್ಲಿ 3 ಬದಲಾವಣೆ; ಕೊನೆಗೂ ವಿಲ್ ಜ್ಯಾಕ್ಸ್​ಗೆ ಅವಕಾಶ

IPL 2024 MI vs RCB: ಐಪಿಎಲ್ 17ನೇ ಆವೃತ್ತಿಯ 25ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿವೆ. ಈ ಟೂರ್ನಿಯಲ್ಲಿ ಈ ಎರಡು ತಂಡಗಳು ಸರಣಿಯಲ್ಲಿ ಮೊದಲ ಹಾಗೂ ಕೊನೆಯ ಬಾರಿ ಮುಖಾಮುಖಿಯಾಗಿವೆ.

MI vs RCB: ಆರ್​ಸಿಬಿ ತಂಡದಲ್ಲಿ 3 ಬದಲಾವಣೆ; ಕೊನೆಗೂ ವಿಲ್ ಜ್ಯಾಕ್ಸ್​ಗೆ ಅವಕಾಶ
ಫಾಫ್ ಡುಪ್ಲೆಸಿಸ್
ಪೃಥ್ವಿಶಂಕರ
|

Updated on: Apr 11, 2024 | 7:06 PM

Share

ಐಪಿಎಲ್ 17ನೇ ಆವೃತ್ತಿಯ 25ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿವೆ. ಈ ಟೂರ್ನಿಯಲ್ಲಿ ಈ ಎರಡು ತಂಡಗಳು ಸರಣಿಯಲ್ಲಿ ಮೊದಲ ಹಾಗೂ ಕೊನೆಯ ಬಾರಿ ಮುಖಾಮುಖಿಯಾಗಿವೆ. ಏಕೆಂದರೆ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿವಿಧ ಗುಂಪುಗಳಲ್ಲಿದ್ದು, ಈ ಸೀಸನ್​ನಲ್ಲಿ ಒಮ್ಮೆ ಮಾತ್ರ ಮುಖಾಮುಖಿಯಾಗಲಿವೆ. ಇದಲ್ಲದೆ ಲೀಗ್​ನಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ಉಭಯ ತಂಡಗಳಿಗೂ ಗೆಲುವು ಬಹಳ ಮುಖ್ಯ. ಇಲ್ಲದಿದ್ದರೆ, ಪ್ಲೇಆಫ್‌ ಹಾದಿ ಎರಡೂ ತಂಡಗಳಿಗೂ ಕಷ್ಟವಾಗಲಿದೆ. ಇನ್ನು ಈ ಪಂದ್ಯದ ಟಾಸ್ ಕೂಡ ಮುಗಿದಿದ್ದು ಟಾಸ್ ಗೆದ್ದ ಮುಂಬೈ ನಾಯಕ ಹಾರ್ದಿಕ್ ಪಾಂಡ್ಯ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಟಾಸ್ ಜೊತೆಗೆ ಎರಡೂ ತಂಡಗಳ ಆಡುವ ಹನ್ನೊಂದರ ಬಳಗವೂ ಬಹಿರಂಗವಾಗಿದೆ.

ಮುಖಾಮುಖಿ ವರದಿ

ಐಪಿಎಲ್‌ನಲ್ಲಿ ಇಲ್ಲಿಯವರೆಗೆ ಎರಡು ತಂಡಗಳ ನಡುವೆ 32 ಪಂದ್ಯಗಳು ನಡೆದಿವೆ. ಅದರಲ್ಲಿ ಮುಂಬೈ 18 ಪಂದ್ಯಗಳನ್ನು ಗೆದ್ದಿದ್ದರೆ, ಬೆಂಗಳೂರು 14 ಪಂದ್ಯಗಳನ್ನು ಗೆದ್ದಿದೆ. ವಾಂಖೆಡೆ ಸ್ಟೇಡಿಯಂನಲ್ಲಿ ಇದುವರೆಗೆ ನಡೆದ ಪಂದ್ಯಗಳ ಬಗ್ಗೆ ಹೇಳುವುದಾದರೆ, ಉಭಯ ತಂಡಗಳ ನಡುವೆ ಇದುವರೆಗೆ 10 ಪಂದ್ಯಗಳು ನಡೆದಿದ್ದು, ಅದರಲ್ಲಿ 7 ಪಂದ್ಯಗಳನ್ನು ಮುಂಬೈ ಇಂಡಿಯನ್ಸ್ ಮತ್ತು 3 ಪಂದ್ಯಗಳನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆದ್ದಿದೆ. ಇದರರ್ಥ ಐಪಿಎಲ್​ನಲ್ಲಿ ಆರ್​ಸಿಬಿ ವಿರುದ್ಧ ಮುಂಬೈ ಮೇಲುಗೈ ಸಾಧಿಸಿರುವುದು ಸ್ಪಷ್ಟವಾಗಿದೆ.

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ