Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಟ್ ಅಲ್ಲ, ಧೋನಿ ಕತ್ತಿ ಹಿಡ್ಕೊಂಡು ಬರುತ್ತಿದ್ದಾರೆ: ಇಂದೆಂತಹ ಹೊಗಳಿಕೆ..!

IPL 2025 PBKS vs CSK: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 22ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ 219 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ಸಿಎಸ್​ಕೆ ತಂಡವು 201 ರನ್​ಗಳಿಸಿ 18 ರನ್​ಗಳಿಂದ ಸೋಲೊಪ್ಪಿಕೊಂಡಿದೆ.

ಬ್ಯಾಟ್ ಅಲ್ಲ, ಧೋನಿ ಕತ್ತಿ ಹಿಡ್ಕೊಂಡು ಬರುತ್ತಿದ್ದಾರೆ: ಇಂದೆಂತಹ ಹೊಗಳಿಕೆ..!
Ambati Rayudu - Dhoni
Follow us
ಝಾಹಿರ್ ಯೂಸುಫ್
|

Updated on:Apr 09, 2025 | 7:58 AM

ಮಹೇಂದ್ರ ಸಿಂಗ್ ಧೋನಿಯನ್ನು (MS Dhoni) ಹೊಗಳುವ ಭರದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ಆಟಗಾರ ಅಂಬಾಟಿ ರಾಯುಡು (Ambati Rayudu) ಎಡವಟ್ಟು ಮಾಡಿಕೊಂಡಿದ್ದಾರೆ. ಅದು ಸಹ ಲೈವ್​ನಲ್ಲಿ. ಮುಲ್ಲನ್​ಪುರ್​ನಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಧೋನಿ ಬ್ಯಾಟಿಂಗ್​ಗೆ ಇಳಿಯುತ್ತಿದ್ದಂತೆ ರಾಯುಡು ಹೊಗಳಿಕೆ ಆರಂಭಿಸಿದ್ದರು.

ಇವತ್ತು ಧೋನಿ ಬ್ಯಾಟ್ ಇಟ್ಕೊಂಡು ಬರುತ್ತಿಲ್ಲ. ಕತ್ತಿಯೊಂದಿಗೆ ಆಗಮಿಸುತ್ತಿದ್ದಾರೆ ಎಂದು ಅಂಬಾಟಿ ರಾಯುಡು ವರ್ಣಿಸಿದ್ದಾರೆ. ಆದರೆ ಕ್ರಿಕೆಟ್​ಗೂ ಕತ್ತಿಗೂ ಏನು ಸಂಬಂಧ ಎಂಬುದೇ ಈಗ ಅಭಿಮಾನಿಗಳ ಪ್ರಶ್ನೆ. ಹೊಗಳುವ ಭರದಲ್ಲಿ ಎದುರಾಳಿ ತಂಡದ ವಿರುದ್ಧ ಕತ್ತಿಯೊಂದಿಗೆ ಆಗಮಿಸುತ್ತಿದ್ದಾರೆ ಎನ್ನುವು ಎಷ್ಟು ಸರಿ ಎಂದು ಅನೇಕರು ಸೋಷಿಯಲ್ ಮೀಡಿಯಾದಲ್ಲಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ
Image
ಹುಡುಗಿಯಾಗಿ ಬದಲಾದ ಟೀಮ್ ಇಂಡಿಯಾದ ಮಾಜಿ ಆಟಗಾರನ ಪುತ್ರ
Image
VIDEO: ವಿರಾಟ್ ಕೊಹ್ಲಿಗೆ ಬೌಲಿಂಗ್: ಭಾವುಕರಾಗಿ ಅರ್ಧದಲ್ಲೇ ನಿಂತ ಸಿರಾಜ್
Image
11ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ ವಿಶ್ವ ದಾಖಲೆ ಬರೆದ ನಸೀಮ್ ಶಾ
Image
MS Dhoni: ಕೇವಲ 3 ರನ್​: ಗ್ರೇಟ್​ ಫಿನಿಶರ್ ಫಿನಿಶ್..!

ಅದರಲ್ಲೂ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮಹೇಂದ್ರ ಸಿಂಗ್ ಧೋನಿಯನ್ನು ಮಾತ್ರ ಹೊಗಳುತ್ತಾ ಕೂರುವ ಅಂಬಾಟಿ ರಾಯುಡು ಅವರನ್ನು ಕಾಮೆಂಟ್ರಿಗಾಗಿ ಹೇಗೆ ಆಯ್ಕೆ ಮಾಡಿದ್ದೀರಿ ಎಂದು ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾನ್ಯವಾಗಿ ಕಾಮೆಂಟ್ರಿ ಪ್ಯಾನೆಲ್​ನಲ್ಲಿ ಕಾಣಿಸಿಕೊಳ್ಳುವವರು ನಿಷ್ಪಕ್ಷಪಾತರಾಗಿ ವರ್ತಿಸಬೇಕು.

ಆದರೆ ಅಂಬಾಟಿ ರಾಯುಡು ವಿಷಯದಲ್ಲಿ ಅದು ಕಂಡು ಬರುತ್ತಿಲ್ಲ. ಈ ಹಿಂದೆ ರಾಯುಡು ಆರ್​ಸಿಬಿ ತಂಡವನ್ನು ಬಹಿರಂಗವಾಗಿ ಸೋಲಬೇಕೆಂದು ಆಗ್ರಹಿಸಿದ್ದರು. ಅಲ್ಲದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಗೇಲಿ ಮಾಡಿ ಹಲವು ಹೇಳಿಕೆಗಳನ್ನು ಸಹ ನೀಡಿದ್ದರು.

ಇದನ್ನೂ ಓದಿ: IPL 2025: ಗೆಲುವಿನ ಬೆನ್ನಲ್ಲೇ RCB ನಾಯಕ ರಜತ್ ಪಾಟಿದಾರ್​ಗೆ ದಂಡ ವಿಧಿಸಿದ ಬಿಸಿಸಿಐ

ಇದೀಗ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಮಹೇಂದ್ರ ಸಿಂಗ್ ಧೋನಿ ಬ್ಯಾಟ್ ಅಲ್ಲ, ಕತ್ತಿ ಹಿಡ್ಕೊಂಡು ಬರುತ್ತಿದ್ದಾರೆ ಎನ್ನುವ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ರಾಯುಡು ಅವರ ಈ ಹೇಳಿಕೆಗೆ ಪಂಜಾಬ್ ಕಿಂಗ್ಸ್ ಅಭಿಮಾನಿಗಳು ಆಕ್ರೋಶಗಳನ್ನು ಹೊರಹಾಕಿದ್ದಾರೆ.

ಇನ್ನು ಈ ಪಂದ್ಯದಲ್ಲಿ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮಹೇಂದ್ರ ಸಿಂಗ್ ಧೋನಿ 12 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 1 ಫೋರ್​ನೊಂದಿಗೆ 27 ರನ್ ಬಾರಿಸಿದ್ದರು.

ಮಹೇಂದ್ರ ಸಿಂಗ್ ಧೋನಿ ಬ್ಯಾಟಿಂಗ್:

ಇದಾಗ್ಯೂ ಪಂಜಾಬ್ ಕಿಂಗ್ಸ್ ತಂಡದ ನೀಡಿ 220 ರನ್​ಗಳ ಗುರಿ ಬೆನ್ನತ್ತಲು ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಸಾಧ್ಯವಾಗಲಿಲ್ಲ. ಈ ಮೂಲಕ ಪಂಜಾಬ್ ಪಡೆ 18 ರನ್​ಗಳ ಜಯ ಸಾಧಿಸಿದೆ.

Published On - 7:58 am, Wed, 9 April 25

ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಯುಎಸ್ ಉಪಾಧ್ಯಕ್ಷ ಜೆಡಿ. ವ್ಯಾನ್ಸ್ ಕುಟುಂಬಕ್ಕೆ ಶಾಸ್ತ್ರೀಯ ನೃತ್ಯದ ಸ್ವಾಗತ
ಯುಎಸ್ ಉಪಾಧ್ಯಕ್ಷ ಜೆಡಿ. ವ್ಯಾನ್ಸ್ ಕುಟುಂಬಕ್ಕೆ ಶಾಸ್ತ್ರೀಯ ನೃತ್ಯದ ಸ್ವಾಗತ