AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್ ಸೂಪರ್ ಲೀಗ್ ಆಡಿದ ಆಟಗಾರನನ್ನು ತಂಡಕ್ಕೆ ಸೇರಿಸಿಕೊಂಡ ಸಿಎಸ್​ಕೆ

IPL 2026: ಐಪಿಎಲ್ 2026 ಪ್ಲೇಆಫ್ ರೋಚಕತೆ ಹೆಚ್ಚಿರುವಾಗ, ಸಿಎಸ್‌ಕೆ ತಂಡಕ್ಕೆ ಗಾಯದ ಸಮಸ್ಯೆ ಮುಂದುವರಿದಿದೆ. ಜೇಮೀ ಓವರ್ಟನ್ ಗಾಯಗೊಂಡು ಹೊರಬಿದ್ದ ಬಳಿಕ, ಚೆನ್ನೈ ಸೂಪರ್ ಕಿಂಗ್ಸ್ ದಕ್ಷಿಣ ಆಫ್ರಿಕಾದ ಯುವ ಆಲ್‌ರೌಂಡರ್ ಡಯಾನ್ ಫಾರೆಸ್ಟರ್ ಅವರನ್ನು ₹75 ಲಕ್ಷಕ್ಕೆ ತಂಡಕ್ಕೆ ಸೇರಿಸಿಕೊಂಡಿದೆ. ಇದು ಫಾರೆಸ್ಟರ್ ಅವರ ಮೊದಲ ಐಪಿಎಲ್ ಸೀಸನ್ ಆಗಿದ್ದು, ಅವರು ಪಾಕಿಸ್ತಾನ ಸೂಪರ್ ಲೀಗ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು.

ಪಾಕ್ ಸೂಪರ್ ಲೀಗ್ ಆಡಿದ ಆಟಗಾರನನ್ನು ತಂಡಕ್ಕೆ ಸೇರಿಸಿಕೊಂಡ ಸಿಎಸ್​ಕೆ
Csk
ಪೃಥ್ವಿಶಂಕರ
|

Updated on:May 14, 2026 | 7:05 PM

Share

ಐಪಿಎಲ್ 2026 (IPL 2026) ರಲ್ಲಿ ಲೀಗ್ ಹಂತ ಮುಗಿಯುವ ಹತ್ತಿರದಲ್ಲಿದೆ. ಹೀಗಾಗಿ ಪ್ಲೇಆಫ್ ರೋಚಕತೆ ಹೆಚ್ಚಾಗಿದೆ. ಈವರೆಗೆ 3 ತಂಡಗಳು ಪ್ಲೇಆಫ್​ನಿಂದ ಹೊರಬಿದ್ದಿದ್ದು, ಉಳಿದ 7 ತಂಡಗಳು ಅಗ್ರ ನಾಲ್ಕರಲ್ಲಿ ಸ್ಥಾನ ಪಡೆಯಲು ಹೋರಾಡುತ್ತಿವೆ. ಆ 7 ತಂಡಗಳ ಪೈಕಿ ಸಿಎಸ್​ಕೆ ಕೂಡ ಒಂದು. ಲೀಗ್​ನಲ್ಲಿ ಕಳಪೆ ಆರಂಭ ಪಡೆದುಕೊಂಡಿದ್ದ ಸಿಎಸ್​ಕೆ (CSK) ಇತ್ತೀಚೆಗೆ ಲಯ ಕಂಡುಕೊಂಡಿದೆ. ಆದರೆ ತಂಡದಲ್ಲಿನ ಆಟಗಾರರ ಇಂಜುರಿ ಸಮಸ್ಯೆ ಮಾತ್ರ ಹಾಗೆಯೇ ಮುಂದುವರೆದಿದೆ. ಕೆಲವು ದಿನಗಳ ಹಿಂದೆ ಬಲ ತೊಡೆಯ ಗಾಯದಿಂದಾಗಿ ಇಂಗ್ಲೆಂಡ್ ವೇಗದ ಬೌಲರ್ ಜೇಮೀ ಓವರ್ಟನ್ ಲೀಗ್​ನಿಂದಲೇ ಹೊರಬಿದ್ದಿದ್ದರು. ಇದೀಗ ಚೆನ್ನೈ ಸೂಪರ್ ಕಿಂಗ್ಸ್ ಅವರ ಬದಲಿ ಆಟಗಾರನನ್ನು ಘೋಷಿಸಿದೆ. ಕೆಲವು ದಿನಗಳ ಹಿಂದೆ ಪಾಕಿಸ್ತಾನ ಸೂಪರ್ ಲೀಗ್‌ನಲ್ಲಿ ಆಡುತ್ತಿದ್ದ ದಕ್ಷಿಣ ಆಫ್ರಿಕಾದ ಆಟಗಾರನನ್ನು ಸಿಎಸ್​ಕೆ ತಂಡಕ್ಕೆ ಸೇರಿಸಿಕೊಂಡಿದೆ.

ಬದಲಿಯಾಗಿ ಬಂದಿದ್ಯಾರು?

ಚೆನ್ನೈ ಸೂಪರ್ ಕಿಂಗ್ಸ್, ಜೇಮೀ ಓವರ್ಟನ್ ಬದಲಿಗೆ ದಕ್ಷಿಣ ಆಫ್ರಿಕಾದ ಯುವ ಆಲ್‌ರೌಂಡರ್ ಡಯಾನ್ ಫಾರೆಸ್ಟರ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ. 25 ವರ್ಷದ ಡಯಾನ್ ಫಾರೆಸ್ಟರ್ 75 ಲಕ್ಷ ರೂಗಳಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೇರಿಕೊಂಡಿದ್ದಾರೆ. ಇದು ಅವರ ಮೊದಲ ಐಪಿಎಲ್ ಸೀಸನ್ ಆಗಿದೆ. ಕೆಲವು ದಿನಗಳ ಹಿಂದೆ, ಪಾಕಿಸ್ತಾನ ಸೂಪರ್ ಲೀಗ್​ನಲ್ಲಿ ರಾವಲ್ಪಿಂಡಿ ಪರ ಆಡಿದ್ದ ಡಯಾನ್ ಫಾರೆಸ್ಟರ್, ಆರು ಪಂದ್ಯಗಳಲ್ಲಿ 44.00 ಸರಾಸರಿಯಲ್ಲಿ 144 ರನ್ ಮತ್ತು ಎರಡು ವಿಕೆಟ್‌ಗಳನ್ನು ಸಹ ಪಡೆದಿದ್ದರು.

2026 ರಲ್ಲಿ ನ್ಯೂಜಿಲೆಂಡ್ ವಿರುದ್ಧ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ ಡಯಾನ್ ಫಾರೆಸ್ಟರ್ ಇಲ್ಲಿಯವರೆಗೆ, ಐದು ಟಿ20 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು 83 ರನ್ ಗಳಿಸಿದ್ದಾರೆ. ಬ್ಯಾಟಿಂಗ್ ಮತ್ತು ಬೌಲಿಂಗ್‌ನಲ್ಲಿಯೂ ಸಮರ್ಥರಾಗಿರುವ ಫಾರೆಸ್ಟರ್ ಮಧ್ಯಮ ಕ್ರಮಾಂಕದಲ್ಲಿ ಉಪಯುಕ್ತ ಕೊಡುಗೆ ನೀಡಬಹುದು ಮತ್ತು ವೇಗದ ಬೌಲಿಂಗ್ ಆಯ್ಕೆಯನ್ನು ಒದಗಿಸಬಹುದು.

CSK vs LSG: ಸಿಎಸ್​ಕೆಗೆ ಮಾಡು ಇಲ್ಲವೇ ಮಡಿ ಪಂದ್ಯ; ಗೆದ್ದರಷ್ಟೇ ಉಳಿಗಾಲ

ಸಿಎಸ್​ಕೆ ನವೀಕರಿಸಿದ ತಂಡ:

ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರುತುರಾಜ್ ಗಾಯಕ್‌ವಾಡ್ (ನಾಯಕ), ಉರ್ವಿಲ್ ಪಟೇಲ್, ಕಾರ್ತಿಕ್ ಶರ್ಮಾ, ಡೆವಾಲ್ಡ್ ಬ್ರೂವಿಸ್, ಡಿಯೋನ್ ಫಾರೆಸ್ಟರ್, ಅಕೇಲ್ ಹುಸೇನ್, ನೂರ್ ಅಹ್ಮದ್, ಅನ್ಶುಲ್ ಕಾಂಬೋಜ್, ಮುಖೇಶ್ ಚೌಧರಿ, ಗುರ್ಜಪ್ನೀತ್ ಸಿಂಗ್, ಎಂಎಸ್ ಧೋನಿ, ಮಾತ್ ಹೆನ್ರಿ, ಮಾತ್ ಹೆನ್ರಿ, ಮಾತ್ ಹೆನ್ರಿ, ಮಾತ್ ಹೆನ್ರಿ, ಮಾತ್ ಹೆನ್ರಿ, ಮಾತ್ ಹೆನ್ರಿ, ದುಬೆ, ರಾಹುಲ್ ಚಾಹರ್, ಸ್ಪೆನ್ಸರ್ ಜಾನ್ಸನ್, ಆಕಾಶ್ ಮಾಧ್ವಲ್, ಅಮನ್ ಖಾನ್, ಜಕಾರಿ ಫೌಲ್ಕ್ಸ್, ಪ್ರಶಾಂತ್ ವೀರ್, ಮೆಕ್‌ನೀಲ್ ಹ್ಯಾಡ್ಲಿ ನೊರೊನ್ಹಾ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:49 pm, Thu, 14 May 26

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು