AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CSK vs SRH: ಸಿಎಸ್​ಕೆ ಪ್ಲೇಆಫ್‌ ಕನಸಿಗೆ ಕೊಳ್ಳಿ ಇಟ್ಟ ಸನ್‌ರೈಸರ್ಸ್ ಹೈದರಾಬಾದ್

IPL 2026: ಐಪಿಎಲ್ 2026 ರ ಹೈವೋಲ್ಟೇಜ್ ಪಂದ್ಯದಲ್ಲಿ ಸಿಎಸ್‌ಕೆ ತಂಡವನ್ನು 5 ವಿಕೆಟ್‌ಗಳಿಂದ ಸೋಲಿಸಿದ ಸನ್‌ರೈಸರ್ಸ್ ಹೈದರಾಬಾದ್ ಪ್ಲೇಆಫ್‌ಗೆ ಲಗ್ಗೆ ಹಾಕಿದೆ. ಇದು ಅವರ 8ನೇ ಗೆಲುವು. ಈ ಗೆಲುವಿನಿಂದ ಗುಜರಾತ್ ಕೂಡ ಪ್ಲೇಆಫ್ ಸ್ಥಾನ ಗಿಟ್ಟಿಸಿದೆ. ಇಶಾನ್ ಕಿಶನ್ ಅವರ ಅಮೋಘ 70 ರನ್​ಗಳಿಂದ ಸನ್‌ರೈಸರ್ಸ್ 180 ರನ್ ಬೆನ್ನಟ್ಟಿ ಭರ್ಜರಿ ಜಯ ಸಾಧಿಸಿತು. ಈ ಸೋಲು ಸಿಎಸ್‌ಕೆಯನ್ನು ರೇಸ್‌ನಿಂದ ಭಾಗಶಃ ಹೊರತಳ್ಳಿದೆ.

CSK vs SRH: ಸಿಎಸ್​ಕೆ ಪ್ಲೇಆಫ್‌ ಕನಸಿಗೆ ಕೊಳ್ಳಿ ಇಟ್ಟ ಸನ್‌ರೈಸರ್ಸ್ ಹೈದರಾಬಾದ್
Csk
ಪೃಥ್ವಿಶಂಕರ
|

Updated on:May 19, 2026 | 12:03 AM

Share

ಐಪಿಎಲ್ 2026 (IPL 2026) ರ ಪ್ಲೇಆಫ್‌ನಲ್ಲಿ ಸ್ಥಾನ ಪಡೆಯುವಲ್ಲಿ ಸನ್‌ರೈಸರ್ಸ್ ಹೈದರಾಬಾದ್ (SRH) ತಂಡ ಯಶಸ್ವಿಯಾಗಿದೆ. ಸಿಎಸ್​ಕೆಯ (CSK) ತವರು ನೆಲವಾದ ಎಂಎ ಚಿದಂಬರಂ ಮೈದಾನದಲ್ಲಿ ನಡೆದ ಈ ಹೈವೋಲ್ಟೇಜ್ ಕದನಲ್ಲಿ ಸಿಎಸ್​ಕೆ ತಂಡವನ್ನು 5 ವಿಕೆಟ್​ಗಳಿಂದ ಸೋಲಿಸಿದ ಸನ್‌ರೈಸರ್ಸ್ ಈ ಆವೃತ್ತಿಯಲ್ಲಿ 8ನೇ ಗೆಲುವು ದಾಖಲಿಸುವ ಮೂಲಕ 16 ಅಂಕಗಳೊಂದಿಗೆ ಪ್ಲೇಆಫ್​ಗೆ ಅರ್ಹತೆ ಪಡೆದುಕೊಂಡಿದೆ. ಇತ್ತ ಸನ್‌ರೈಸರ್ಸ್ ವಿರುದ್ಧ ಸೋತ ಸಿಎಸ್​ಕೆ ಪ್ಲೇಆಫ್‌ ರೇಸ್​ನಿಂದ ಭಾಗಶಃ ಹೊರಬಿದ್ದಿದೆ. ಸನ್‌ರೈಸರ್ಸ್ ತಂಡದ ಗೆಲುವಿನೊಂದಿಗೆ ಗುಜರಾತ್ ಕೂಡ ಪ್ಲೇಆಫ್‌ಗೆ ಅರ್ಹತೆ ಪಡೆದುಕೊಂಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸಿಎಸ್​ಕೆ 180 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಸನ್‌ರೈಸರ್ಸ್ ಕೊನೆಯ ಓವರ್​ನಲ್ಲಿ ಗೆಲುವು ದಾಖಲಿಸುವ ಮೂಲಕ ಅಮೋಘ ಜಯ ದಾಖಲಿಸಿತು.

ಸಿಎಸ್​ಕೆ ತಂಡಕ್ಕೆ ಆರಂಭಿಕ ಆಘಾತ

ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಸಿಎಸ್​ಕೆ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಅನುಭವಿ ಸಂಜು ಸ್ಯಾಮ್ಸನ್ 27 ರನ್​ಗಳಿಗೆ ಔಟಾದರೆ, ನಾಯಕ ರುತುರಾಜ್ ಗಾಯಕ್ವಾಡ್ ಗೆಲ್ಲಲೇಬೇಕಾದ ಪಂದ್ಯದಲ್ಲಿ 15 ರನ್​ಗಳಿಗೆ ಸುಸ್ತಾದರು. ಊರ್ವಿಲ್ ಪಟೇಲ್ ಇನ್ನಿಂಗ್ಸ್ ಕೂಡ 17 ರನ್​ಗಳಿಗೆ ಅಂತ್ಯವಾಯಿತು. ಈ ಮಧ್ಯದಲ್ಲಿ, ಕಾರ್ತಿಕ್ ಶರ್ಮಾ 32 ರನ್​ಗಳ ಇನ್ನಿಂಗ್ಸ್ ಆಡುವ ಮೂಲಕ ತಂಡದ ಇನ್ನಿಂಗ್ಸ್ ನಿಭಾಯಿಸಿದರು. ಡೆವಾಲ್ಡ್ ಬ್ರೆವಿಸ್ ಕೂಡ 44 ರನ್​ಗಳ ನಿರ್ಣಾಯಕ ಇನ್ನಿಂಗ್ಸ್ ಆಡುವ ಮೂಲಕ ತಂಡವನ್ನು 180 ರನ್‌ಗಳಿಗೆ ಕೊಂಡೊಯ್ದರು. ಇತ್ತ ಹೈದರಾಬಾದ್ ಪರ ನಾಯಕ ಪ್ಯಾಟ್ ಕಮ್ಮಿನ್ಸ್ ಗರಿಷ್ಠ ಮೂರು ವಿಕೆಟ್‌ಗಳನ್ನು ಪಡೆದರು.

ನಾಯಕನ ಇನ್ನಿಂಗ್ಸ್ ಆಡಿದ ಕಿಶನ್

ಈ ಗುರಿ ಬೆನ್ನಟ್ಟಿದ ಸನ್‌ರೈಸರ್ಸ್‌ಗೂ ಆಘಾತ ಎದುರಾಯಿತು. ಎರಡನೇ ಓವರ್‌ನಲ್ಲಿ ಟ್ರಾವಿಸ್ ಹೆಡ್ ಔಟ್ ಆದರು.ಆದರೆ ಆ ನಂತರ ಬಂದ ಇಶಾನ್ ಕಿಶನ್ ಮತ್ತು ಅಭಿಷೇಕ್ ಶರ್ಮಾ ನಿಧಾನವಾಗಿ ಜೊತೆಯಾಟ ಕಟ್ಟಿದರು. ಆದಾಗ್ಯೂ ಅಭಿಷೇಕ್ ಶರ್ಮಾ ಎಂಟನೇ ಓವರ್‌ನಲ್ಲಿ 26 ರನ್ ಬಾರಿಸಿ ಔಟಾದರು. ಆಗ ತಂಡದ ಮೊತ್ತ ಕೇವಲ 56 ರನ್ ಆಗಿತ್ತು.

CSK vs SRH IPL 2026 Highlights: ಸಿಎಸ್​ಕೆ ಮಣಿಸಿ ಪ್ಲೇಆಫ್​ಗೇರಿದ ಸನ್​ರೈಸರ್ಸ್​

ಕಿಶನ್- ಕ್ಲಾಸೆನ್ ಜೊತೆಯಾಟ

ಈ ವೇಳೆ ತಂಡಕ್ಕೆ ಆಸರೆಯಾದ ಹೆನ್ರಿಕ್ ಕ್ಲಾಸೆನ್ ನಾಯಕ ಇಶಾನ್ ಕಿಶನ್ ಜೊತೆ 75 ರನ್‌ಗಳ ಜೊತೆಯಾಟ ಕಟ್ಟಿದರು. 47 ರನ್ ಬಾರಿಸಿದ್ದ ಕ್ಲಾಸೆನ್ ಅವರ ವಿಕೆಟ್ ಪಡೆದ ನಂತರ ಚೆನ್ನೈ ತಂಡವು ಮತ್ತೆ ಗೆಲುವಿನ ಭರವಸೆ ಮೂಡಿಸಿತ್ತು. ಆದರೆ ಇಶಾನ್ ಕಿಶಾನ್ ಅದ್ಭುತ ಅರ್ಧಶತಕದ ಜೊತೆಗೆ 70 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿ ತಂಡವನ್ನು 5 ವಿಕೆಟ್‌ಗಳ ಗೆಲುವಿನತ್ತ ಕೊಂಡೊಯ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:02 am, Tue, 19 May 26

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಖಂಡ್ರೆ!
ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಖಂಡ್ರೆ!