AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021 Auction RCB Players List: ಐಪಿಎಲ್ 2021 ಆರ್​ಸಿಬಿ ತನ್ನಲ್ಲೇ ಉಳಿಸಿಕೊಂಡ, ಕೈಬಿಟ್ಟ ಆಟಗಾರರು ಯಾರ್ಯಾರು ಗೊತ್ತಾ?

IPL 2021 Auction RCB Players List: ಕಳೆದ ಬಾರಿ ನಿರೀಕ್ಷೆಗೆ ತಕ್ಕ ಆಟವಾಡದೇ ಇದ್ದ ಆಟಗಾರರನ್ನು ಈ ಬಾರಿ ತಂಡದಿಂದ ಹೊರಗೆ ಕಳಿಸಲಾಗಿದೆ. ನಾಳೆ ನಡೆಯುವ ಹರಾಜಿನಲ್ಲಿ ಆಲ್‌ರೌಂಡರ್‌ಗಳನ್ನು ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

IPL 2021 Auction RCB Players List: ಐಪಿಎಲ್ 2021 ಆರ್​ಸಿಬಿ ತನ್ನಲ್ಲೇ ಉಳಿಸಿಕೊಂಡ, ಕೈಬಿಟ್ಟ ಆಟಗಾರರು ಯಾರ್ಯಾರು ಗೊತ್ತಾ?
2020ರ ಆರ್​ಸಿಬಿ ತಂಡ
ಪೃಥ್ವಿಶಂಕರ
|

Updated on: Feb 17, 2021 | 7:09 PM

Share

ಚೆನ್ನೈ: ಇಂಡಿಯನ್ ಪ್ರೀಮಿಯರ್‌ ಲೀಗ್‌ (Indian Premier League – IPL) ಟೂರ್ನಿಯಲ್ಲಿ ಪ್ರತಿಬಾರಿಯೂ ಆರ್​ಸಿಬಿ (Royal Challengers Bangalore – RCB) ಈವರೆಗೆ ಎಲ್ಲಾ ಆವೃತ್ತಿಗಳಲ್ಲೂ ಕಪ್​ ಗೆಲ್ಲುವ ಆಸೆಯೊಂದಿಗೆ ಕಣಕ್ಕಿಳಿಯುತ್ತದೆ. ಆದರೆ ಅಭಿಮಾನಿಗಳಿಗೆ ಭಾರೀ ನಿರಾಸೆ ಉಂಟುಮಾಡಿ ಸರಣಿಯಿಂದ ಹೊರನಡೆಯುತ್ತದೆ. ಮೂರು ಬಾರಿ ಫೈನಲ್ ತಲುಪಿದರೂ ಕೂಡ ಪ್ರಶಸ್ತಿ ಗೆಲ್ಲಲು ಸಾಧ್ಯವಾಗದೇ ಇರುವುದು ತಂಡದ ದುರಾದೃಷ್ಟವೇ ಸರಿ. ಈ ಬಾರಿಯ ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡಕ್ಕೆ ಕಪ್​ ಗೆಲ್ಲುವ ವಿಶ್ವಾಸವಿದೆ.

2020ರ ಐಪಿಎಲ್‌ ಆವೃತ್ತಿಯಲ್ಲಿ ನಾಕ್‌ಔಟ್‌ ಹಂತಕ್ಕೆ ಕಾಲಿಟ್ಟಿದ್ದ ವಿರಾಟ್‌ ಕೊಹ್ಲಿ ಬಳಗ ಬ್ಯಾಟಿಂಗ್‌ ವೈಫಲ್ಯಕ್ಕೆ ಭಾರಿ ಬೆಲೆ ತೆತ್ತು ಸನ್‌ರೈಸರ್ಸ್‌ ಹೈದರಾಬಾದ್‌ ಎದುರು ಮುಗ್ಗರಿಸಿತ್ತು. ಈ ಮೂಲಕ ಟೂರ್ನಿಯಲ್ಲಿ 4ನೇ ಸ್ಥಾನಿಯಾಗಿ ತನ್ನ ಅಭಿಯಾನ ಅಂತ್ಯಗೊಳಿಸಿತು.

ಇದೀಗ ಐಪಿಎಲ್‌ 2021ರ ಟೂರ್ನಿಯಲ್ಲಿ ಆರ್‌ಸಿಬಿ ತನ್ನ ಪ್ರದರ್ಶನ ಮಟ್ಟವನ್ನು ಮತ್ತಷ್ಟು ಸುಧಾರಿಸಿಕೊಳ್ಳುವ ಕಡೆಗೆ ಗಮನ ಹರಿಸಿದೆ. ಕಳೆದ ಬಾರಿ ನಿರೀಕ್ಷೆಗೆ ತಕ್ಕಂತೆ ಆಟವಾಡದ ಆಟಗಾರರಿಗೆ ಈ ಬಾರಿ ತಂಡದಿಂದ ಗೇಟ್​ ಪಾಸ್​ ನೀಡಲಾಗಿದೆ. ನಾಳೆ ನಡೆಯುವ ಹರಾಜಿನಲ್ಲಿ ಬ್ಯಾಟಿಂಗ್‌ ಜೊತೆಗೆ ಮಧ್ಯಮ ಕ್ರಮಾಂಕ ಬಲ ಪಡಿಸಿಕೊಳ್ಳಲು ಆಲ್‌ರೌಂಡರ್‌ಗಳನ್ನು ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು.. ಉಳಿಸಿಕೊಂಡಿರುವ ಆಟಗಾರರು: ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್, ದೇವದತ್ ಪಡಿಕ್ಕಲ್, ಮಹಮದ್ ಸಿರಾಜ್, ನವದೀಪ್ ಸೈನಿ, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಜೋಶ್​ ಫಿಲಿಪೆ, ಪವನ್ ದೇಶಪಾಂಡೆ, ಶಹಬಾಜ್ ಅಹ್ಮದ್, ಆಡಮ್ ಜಂಪಾ, ಕೇನ್ ರಿಚರ್ಡ್ಸನ್

ತಂಡದಿಂದ ಕೈಬಿಟ್ಟ ಆಟಗಾರರು: ಕ್ರಿಸ್ ಮೋರಿಸ್, ಶಿವಂ ದುಬೆ, ಆರನ್ ಫಿಂಚ್, ಉಮೇಶ್ ಯಾದವ್, ಡೇಲ್ ಸ್ಟೇನ್, ಮೊಯೀನ್ ಅಲಿ, ಪಾರ್ಥಿವ್ ಪಟೇಲ್, ಪವನ್ ನೇಗಿ, ಇಸುರು ಉದಾನಾ, ಗುರ್ಕೀರತ್ ಮನ್.

ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು