AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021 Auction RCB Players List: ಐಪಿಎಲ್ 2021 ಆರ್​ಸಿಬಿ ತನ್ನಲ್ಲೇ ಉಳಿಸಿಕೊಂಡ, ಕೈಬಿಟ್ಟ ಆಟಗಾರರು ಯಾರ್ಯಾರು ಗೊತ್ತಾ?

IPL 2021 Auction RCB Players List: ಕಳೆದ ಬಾರಿ ನಿರೀಕ್ಷೆಗೆ ತಕ್ಕ ಆಟವಾಡದೇ ಇದ್ದ ಆಟಗಾರರನ್ನು ಈ ಬಾರಿ ತಂಡದಿಂದ ಹೊರಗೆ ಕಳಿಸಲಾಗಿದೆ. ನಾಳೆ ನಡೆಯುವ ಹರಾಜಿನಲ್ಲಿ ಆಲ್‌ರೌಂಡರ್‌ಗಳನ್ನು ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

IPL 2021 Auction RCB Players List: ಐಪಿಎಲ್ 2021 ಆರ್​ಸಿಬಿ ತನ್ನಲ್ಲೇ ಉಳಿಸಿಕೊಂಡ, ಕೈಬಿಟ್ಟ ಆಟಗಾರರು ಯಾರ್ಯಾರು ಗೊತ್ತಾ?
2020ರ ಆರ್​ಸಿಬಿ ತಂಡ
Follow us
ಪೃಥ್ವಿಶಂಕರ
|

Updated on: Feb 17, 2021 | 7:09 PM

ಚೆನ್ನೈ: ಇಂಡಿಯನ್ ಪ್ರೀಮಿಯರ್‌ ಲೀಗ್‌ (Indian Premier League – IPL) ಟೂರ್ನಿಯಲ್ಲಿ ಪ್ರತಿಬಾರಿಯೂ ಆರ್​ಸಿಬಿ (Royal Challengers Bangalore – RCB) ಈವರೆಗೆ ಎಲ್ಲಾ ಆವೃತ್ತಿಗಳಲ್ಲೂ ಕಪ್​ ಗೆಲ್ಲುವ ಆಸೆಯೊಂದಿಗೆ ಕಣಕ್ಕಿಳಿಯುತ್ತದೆ. ಆದರೆ ಅಭಿಮಾನಿಗಳಿಗೆ ಭಾರೀ ನಿರಾಸೆ ಉಂಟುಮಾಡಿ ಸರಣಿಯಿಂದ ಹೊರನಡೆಯುತ್ತದೆ. ಮೂರು ಬಾರಿ ಫೈನಲ್ ತಲುಪಿದರೂ ಕೂಡ ಪ್ರಶಸ್ತಿ ಗೆಲ್ಲಲು ಸಾಧ್ಯವಾಗದೇ ಇರುವುದು ತಂಡದ ದುರಾದೃಷ್ಟವೇ ಸರಿ. ಈ ಬಾರಿಯ ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡಕ್ಕೆ ಕಪ್​ ಗೆಲ್ಲುವ ವಿಶ್ವಾಸವಿದೆ.

2020ರ ಐಪಿಎಲ್‌ ಆವೃತ್ತಿಯಲ್ಲಿ ನಾಕ್‌ಔಟ್‌ ಹಂತಕ್ಕೆ ಕಾಲಿಟ್ಟಿದ್ದ ವಿರಾಟ್‌ ಕೊಹ್ಲಿ ಬಳಗ ಬ್ಯಾಟಿಂಗ್‌ ವೈಫಲ್ಯಕ್ಕೆ ಭಾರಿ ಬೆಲೆ ತೆತ್ತು ಸನ್‌ರೈಸರ್ಸ್‌ ಹೈದರಾಬಾದ್‌ ಎದುರು ಮುಗ್ಗರಿಸಿತ್ತು. ಈ ಮೂಲಕ ಟೂರ್ನಿಯಲ್ಲಿ 4ನೇ ಸ್ಥಾನಿಯಾಗಿ ತನ್ನ ಅಭಿಯಾನ ಅಂತ್ಯಗೊಳಿಸಿತು.

ಇದೀಗ ಐಪಿಎಲ್‌ 2021ರ ಟೂರ್ನಿಯಲ್ಲಿ ಆರ್‌ಸಿಬಿ ತನ್ನ ಪ್ರದರ್ಶನ ಮಟ್ಟವನ್ನು ಮತ್ತಷ್ಟು ಸುಧಾರಿಸಿಕೊಳ್ಳುವ ಕಡೆಗೆ ಗಮನ ಹರಿಸಿದೆ. ಕಳೆದ ಬಾರಿ ನಿರೀಕ್ಷೆಗೆ ತಕ್ಕಂತೆ ಆಟವಾಡದ ಆಟಗಾರರಿಗೆ ಈ ಬಾರಿ ತಂಡದಿಂದ ಗೇಟ್​ ಪಾಸ್​ ನೀಡಲಾಗಿದೆ. ನಾಳೆ ನಡೆಯುವ ಹರಾಜಿನಲ್ಲಿ ಬ್ಯಾಟಿಂಗ್‌ ಜೊತೆಗೆ ಮಧ್ಯಮ ಕ್ರಮಾಂಕ ಬಲ ಪಡಿಸಿಕೊಳ್ಳಲು ಆಲ್‌ರೌಂಡರ್‌ಗಳನ್ನು ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು.. ಉಳಿಸಿಕೊಂಡಿರುವ ಆಟಗಾರರು: ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್, ದೇವದತ್ ಪಡಿಕ್ಕಲ್, ಮಹಮದ್ ಸಿರಾಜ್, ನವದೀಪ್ ಸೈನಿ, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಜೋಶ್​ ಫಿಲಿಪೆ, ಪವನ್ ದೇಶಪಾಂಡೆ, ಶಹಬಾಜ್ ಅಹ್ಮದ್, ಆಡಮ್ ಜಂಪಾ, ಕೇನ್ ರಿಚರ್ಡ್ಸನ್

ತಂಡದಿಂದ ಕೈಬಿಟ್ಟ ಆಟಗಾರರು: ಕ್ರಿಸ್ ಮೋರಿಸ್, ಶಿವಂ ದುಬೆ, ಆರನ್ ಫಿಂಚ್, ಉಮೇಶ್ ಯಾದವ್, ಡೇಲ್ ಸ್ಟೇನ್, ಮೊಯೀನ್ ಅಲಿ, ಪಾರ್ಥಿವ್ ಪಟೇಲ್, ಪವನ್ ನೇಗಿ, ಇಸುರು ಉದಾನಾ, ಗುರ್ಕೀರತ್ ಮನ್.

ಸಿಯಾಲ್​ಕೋಟ್ ತೊರೆಯುತ್ತಿರುವ ಪಾಕ್ ಜನ, ಕಾಲ್ತುಳಿದಂಥಾ ಸ್ಥಿತಿ
ಸಿಯಾಲ್​ಕೋಟ್ ತೊರೆಯುತ್ತಿರುವ ಪಾಕ್ ಜನ, ಕಾಲ್ತುಳಿದಂಥಾ ಸ್ಥಿತಿ
ವಿಡಿಯೋ: ಭೀಕರ ದಾಳಿಗೆ ಛಿದ್ರ ಛಿದ್ರವಾಗಿ ಹಾರಿದ ಪಾಕ್ ಸೈನಿಕರ ಮೃತದೇಹ
ವಿಡಿಯೋ: ಭೀಕರ ದಾಳಿಗೆ ಛಿದ್ರ ಛಿದ್ರವಾಗಿ ಹಾರಿದ ಪಾಕ್ ಸೈನಿಕರ ಮೃತದೇಹ
ಕರುಂಗಲಿ ಮಾಲೆಯ ಹಿಂದಿನ ರಹಸ್ಯ ಹಾಗೂ ಅದರ ಮಹತ್ವ ತಿಳಿಯಿರಿ
ಕರುಂಗಲಿ ಮಾಲೆಯ ಹಿಂದಿನ ರಹಸ್ಯ ಹಾಗೂ ಅದರ ಮಹತ್ವ ತಿಳಿಯಿರಿ
Daily horoscope: ಮಿಥುನ ರಾಶಿಯವರಿಗೆ ಐದು ಗ್ರಹಗಳ ಶುಭಫಲ
Daily horoscope: ಮಿಥುನ ರಾಶಿಯವರಿಗೆ ಐದು ಗ್ರಹಗಳ ಶುಭಫಲ
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ