AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL Auction 2021: ತಮ್ಮನನ್ನು ಟ್ರೋಲ್ ಮಾಡುತ್ತಿರುವವರಿಗೆ ತಿರುಗೇಟು ನೀಡಿದ ಸಾರಾ ತೆಂಡೂಲ್ಕರ್

IPL Auction 2021: ಈ ಸಾಧನೆಯನ್ನು ನಿನ್ನಿಂದ ಯಾರೂ ತೆಗೆದುಕೊಳ್ಳಲು ಸಾಧ್ಯವಿಲ್ಲ ಇದು ನಿನ್ನದು ಎಂದು ತಮ್ಮನಿಗೆ ಸ್ಫೂರ್ತಿ ತುಂಬಿದ್ದಾಳೆ. ಹೀಗೆ ಸಾರಾ ತೆಂಡೂಲ್ಕರ್, ತಮ್ಮ ಅರ್ಜುನ್ ಆಯ್ಕೆಯನ್ನ ಸಮರ್ಥಿಸಿಕೊಂಡಿದ್ದಾಳೆ. ಮತ್ತೊಂದೆಡೆ ಬಾಲಿವುಡ್ ನಟ ನಿರ್ದೇಶಕ ಫರಾನ್ ಅಖ್ತರ್ ಕೂಡ, ಅರ್ಜುನ್ ಪರವಾಗಿ ಬ್ಯಾಟ್ ಬೀಸಿದ್ದಾರೆ.

IPL Auction 2021: ತಮ್ಮನನ್ನು ಟ್ರೋಲ್ ಮಾಡುತ್ತಿರುವವರಿಗೆ ತಿರುಗೇಟು ನೀಡಿದ ಸಾರಾ ತೆಂಡೂಲ್ಕರ್
ಅರ್ಜುನ್ ತೆಂಡೂಲ್ಕರ್, ಸಾರಾ ತೆಂಡೂಲ್ಕರ್
ಪೃಥ್ವಿಶಂಕರ
| Edited By: |

Updated on: Feb 21, 2021 | 12:57 PM

Share

ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್, ಐಪಿಎಲ್ ಬಿಡ್ಡಿಂಗ್​ನಲ್ಲಿ ಮುಂಬೈ ಫ್ರಾಂಚೈಸಿ ಪಾಲಾಗಿರೋದು ನಿಮಗೆ ಗೊತ್ತೇ ಇದೆ. ಆದ್ರೆ ಐಪಿಎಲ್​ನಲ್ಲಿ ​  ಹರಾಜಾಗಿದ್ದಕ್ಕೆ ಖುಷಿ ಪಡಬೇಕಿದ್ದ ಅರ್ಜುನ್ ಎರಡು ದಿನಗಳಿಂದ ನೋವು ಅನುಭವಿಸುತ್ತಿದ್ದ. ಆದ್ರೀಗ ತಮ್ಮನ ಪರ ಬ್ಯಾಟ್ ಬೀಸಿರುವ ಅಕ್ಕ ಸಾರಾ ತೆಂಡೂಲ್ಕರ್, ಅರ್ಜುನ್​ನ್ನು ಟ್ರೋಲ್ ಮಾಡಿದವರಿಗೆ ಸರಿಯಾಗೇ ತಿರುಗೇಟು ನೀಡಿದ್ದಾರೆ.

ಈ ಬಾರಿಯ ಐಪಿಎಲ್ ಬಿಡ್ಡಿಂಗ್​ನಲ್ಲಿ ಆಕರ್ಷಣೆಯ ಕೇಂದ್ರವಾಗಿದ್ದು ಅರ್ಜುನ್ ತೆಂಡೂಲ್ಕರ್. ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಪುತ್ರ ಅನ್ನೋ ಕಾರಣಕ್ಕೆ, ಅರ್ಜುನ್​ನ್ನು ಯಾವ ಫ್ರಾಂಚೈಸಿ ಖರೀದಿ ಮಾಡುತ್ತೆ ಅನ್ನೋ ಕುತೂಹಲ ಅಭಿಮಾನಿಗಳಲ್ಲಿತ್ತು. ಹರಾಜಿನಲ್ಲಿ ಎಡಗೈ ವೇಗಿ ಅರ್ಜುನ್ ತೆಂಡೂಲ್ಕರ್ ಸರದಿ ಬಂದಾಗ, ಯಾವ ಫ್ರಾಂಚೈಸಿಯೂ ಖರೀದಿಸೋ ಮನಸ್ಸು ಮಾಡಲಿಲ್ಲ. ಆದ್ರೆ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ₹ 20 ಲಕ್ಷ ಮೂಲ ಬೆಲೆಗೆ, ಅರ್ಜುನ್​ನ್ನು ತನ್ನ ತೆಕ್ಕೆಗೆ ಹಾಕಿಕೊಂಡಿತು.

ಮುಂಬೈ ತಂಡ ₹20 ಲಕ್ಷಕ್ಕೆ ಖರೀದಿ ಮಾಡುತ್ತಿದ್ದಂತೆ, ಅರ್ಜುನ್ ತೆಂಡೂಲ್ಕರ್ ಸಂತಸ ವ್ಯಕ್ತಪಡಿಸಿದ್ದ. ಬಾಲ್ಯದಿಂದಲೂ ಮುಂಬೈ ಇಂಡಿಯನ್ಸ್ ತಂಡದ ಅಭಿಮಾನಿಯಾಗಿದ್ದೆ. ನನ್ನ ಕನಸು ಸಾಕಾರಗೊಂಡಿದೆ ಎಂದು, ಸಂತಸ ಹಂಚಿಕೊಂಡಿದ್ದರು.

ಇಷ್ಟೇ ಆಗಿದ್ರೆ ಅರ್ಜುನ್ ಸುದ್ದಿಯಾಗ್ತಿರಲಿಲ್ಲ. ಆದ್ರೆ ಸೋಷಿಯಲ್ ಮೀಡಿಯಾದಲ್ಲಿ ಅರ್ಜುನ್​ನನ್ನ ಟ್ರೋಲ್ ಮಾಡಲು ಶುರುಮಾಡಿದ್ರು. ಕೆಲವರು ಸರ್​ನೇಮ್​ನಿಂದ ಅರ್ಜುನ್​ಗೆ ₹20 ಲಕ್ಷ ರೂಪಾಯಿ ಸಿಕ್ಕಿದೆ ಎಂದ್ರೆ, ಇನ್ನು ಕೆಲವರು ಕ್ರಿಕೆಟ್ನಲ್ಲೂ ಸ್ವಜನಪಕ್ಷಪಾತ ಶುರುವಾಯ್ತು ಅಂತಾ ಹೇಳಲು ಶುರುಮಾಡಿದ್ರು.

ಆದ್ರೀಗ ಸಾರಾ ತೆಂಡೂಲ್ಕರ್, ತನ್ನ ತಮ್ಮನನ್ನ ಟ್ರೋಲ್ ಮಾಡುತ್ತಿರುವವರಿಗೆ ಸರಿಯಾಗೇ ತಿರುಗೇಟು ನೀಡಿದ್ದಾರೆ. ಈ ಸಾಧನೆಯನ್ನು ನಿನ್ನಿಂದ ಯಾರೂ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಸಾರಾ ತಮ್ಮ ಇನ್​ಸ್ಟಾಗ್ರಾಂನಲ್ಲಿ ಸ್ಟೋರಿ ಅಪ್​ಡೇಟ್ ಮಾಡಿದ್ದಾರೆ.

Sara tendulkar Insta story

ಸಾರಾ ತೆಂಡೂಲ್ಕರ್ ಇನ್​ಸ್ಟಾಗ್ರಾಂ ಸ್ಟೋರಿ

ಮತ್ತೊಂದೆಡೆ ಬಾಲಿವುಡ್ ನಟ ನಿರ್ದೇಶಕ ಫರಾನ್ ಅಖ್ತರ್ ಕೂಡ, ಅರ್ಜುನ್ ಪರವಾಗಿ ಬ್ಯಾಟ್ ಬೀಸಿದ್ದಾರೆ. ಅರ್ಜುನ್ ಕರಿಯರ್ ಆರಂಭಿಸುವ ಮುನ್ನವೇ ಆತನ ಉತ್ಸಾಹವನ್ನ ಕೊಲ್ಲಬೇಡಿ ಎಂದಿದ್ದಾರೆ.

ಇದನ್ನೂ ಓದಿ:IPL Auction 2021: ಸ್ವಜನ ಪಕ್ಷಪಾತ ಅಪವಾದ, ಅರ್ಜುನ್ ಬೆಂಬಲಕ್ಕೆ ನಿಂತ ಬಾಲಿವುಡ್ ನಟ ಫರ್ಹಾನ್ ಅಖ್ತರ್

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು