AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಪ್ಟಂಬರ್ 19 ರಿಂದ ನವಂಬರ್ 8 ರವರೆಗೆ UAE ನಲ್ಲಿ IPL2020 .. ಕನ್ಫರ್ಮ್!

ಕೊರೊನಾ ವೈರಸ್ ಕಾರಣದಿಂದಾಗಿ ಮುಂದೂಡಲಾಗಿದ್ದ IPL 2020 UAEನಲ್ಲಿ ನಡೆಯೋದು ಖಚಿತವಾಗಿದೆ. ಸೆಪ್ಟೆಂಬರ್ 19ರಿಂದ ಯುನೈಟೆಡ್ ಅರಬ್ ಎಮಿರೇಟ್ಸ್​​ನಲ್ಲಿ IPL ಆರಂಭವಾಗಲಿದೆ ಅಂತಾ ಐಪಿಎಲ್ ಅಧ್ಯಕ್ಷ ಬ್ರಿಜೇಷ್​ ಪಟೇಲ್ ತಿಳಿಸಿದ್ದಾರೆ. ಹೀಗಾಗಿ, ಸೆ.19ರಂದು ಆರಂಭವಾಗಲಿದ್ದು, ನ. 8ರಂದು ಫೈನಲ್ ಪಂದ್ಯ ನಡೆಯಲಿದೆ. ಈ ಬಗ್ಗೆ ಅನುಮತಿ ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೇವೆ ಎಂದಿರೋ ಬ್ರಿಜೇಷ್ ಪಟೇಲ್, ಅನುಮತಿ ಸಿಕ್ಕ ನಂತರ ಮುಂದಿನ ದಿನಗಳಲ್ಲಿ ಹೆಚ್ಚಿನ ಮಾಹಿತಿ ನೀಡುತ್ತೇವೆ ಎಂದಿದ್ದಾರೆ. ಈಗಾಗಲೇ ದುಬೈ ಸ್ಪೋರ್ಟ್ಸ್ ಸಿಟಿಯ ಕ್ರಿಕೆಟ್ […]

ಸೆಪ್ಟಂಬರ್ 19 ರಿಂದ ನವಂಬರ್ 8 ರವರೆಗೆ UAE ನಲ್ಲಿ IPL2020 .. ಕನ್ಫರ್ಮ್!
ಐಪಿಎಲ್​ ಟ್ರೋಪಿ
KUSHAL V
| Edited By: |

Updated on:Jul 25, 2020 | 9:09 PM

Share

ಕೊರೊನಾ ವೈರಸ್ ಕಾರಣದಿಂದಾಗಿ ಮುಂದೂಡಲಾಗಿದ್ದ IPL 2020 UAEನಲ್ಲಿ ನಡೆಯೋದು ಖಚಿತವಾಗಿದೆ. ಸೆಪ್ಟೆಂಬರ್ 19ರಿಂದ ಯುನೈಟೆಡ್ ಅರಬ್ ಎಮಿರೇಟ್ಸ್​​ನಲ್ಲಿ IPL ಆರಂಭವಾಗಲಿದೆ ಅಂತಾ ಐಪಿಎಲ್ ಅಧ್ಯಕ್ಷ ಬ್ರಿಜೇಷ್​ ಪಟೇಲ್ ತಿಳಿಸಿದ್ದಾರೆ.

ಹೀಗಾಗಿ, ಸೆ.19ರಂದು ಆರಂಭವಾಗಲಿದ್ದು, ನ. 8ರಂದು ಫೈನಲ್ ಪಂದ್ಯ ನಡೆಯಲಿದೆ. ಈ ಬಗ್ಗೆ ಅನುಮತಿ ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೇವೆ ಎಂದಿರೋ ಬ್ರಿಜೇಷ್ ಪಟೇಲ್, ಅನುಮತಿ ಸಿಕ್ಕ ನಂತರ ಮುಂದಿನ ದಿನಗಳಲ್ಲಿ ಹೆಚ್ಚಿನ ಮಾಹಿತಿ ನೀಡುತ್ತೇವೆ ಎಂದಿದ್ದಾರೆ.

ಈಗಾಗಲೇ ದುಬೈ ಸ್ಪೋರ್ಟ್ಸ್ ಸಿಟಿಯ ಕ್ರಿಕೆಟ್ ಮತ್ತು ಈವೆಂಟ್‌ಗಳ ಮುಖ್ಯಸ್ಥ ಸಲ್ಮಾನ್ ಹನೀಫ್ ದುಬೈನಲ್ಲಿ IPL ನಡೆಸಲು ಎಲ್ಲಾ ಸೌಲಭ್ಯಗಳನ್ನು ಸಿದ್ಧಪಡಿಸಿಕೊಳ್ಳುತ್ತಿರೋದಾಗಿ ಹೇಳಿಕೊಂಡಿದ್ದಾರೆ. ಹೀಗಾಗಿ, ಐಪಿಎಲ್ UAEನಲ್ಲೇ ನಡೆಯೋದು ಖಚಿತವಾದಂತಾಗಿದೆ.

ಇನ್ನು, ಕೊರೊನಾ ಸೋಂಕಿನ ಭೀತಿಯಿಂದಾಗಿ ಈ ಬಾರಿಯ IPL ಪಂದ್ಯಗಳನ್ನ ಬಹುತೇಕ ಮುಚ್ಚಿದ ಕ್ರೀಡಾಂಗಣದಲ್ಲಿ ನಡೆಸೋದಕ್ಕೆ BCCI ತೀರ್ಮಾನಿಸಿದೆ. ಹಾಗಿದ್ರೂ UAE ಸರ್ಕಾರದ ಬಳಿ ಮಾತನಾಡಿ, ದೈಹಿಕ ಅಂತರದ ಆಧಾರದ ಮೇಲೆ ಕಡಿಮೆ ಪ್ರೇಕ್ಷಕರಿಗೆ ಮೈದಾನಕ್ಕೆ ಬರೋದಕ್ಕೆ ಅವಕಾಶ ಮಾಡಿಕೊಡುವಂತೆ ಕೇಳಿಕೊಳ್ಳೋದಾಗಿ ಬ್ರಿಜೇಷ್ ಪಟೇಲ್ ತಿಳಿಸಿದ್ದಾರೆ.

Published On - 3:00 pm, Sat, 25 July 20

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?