AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಮುಂಬೈ ಇಂಡಿಯನ್ಸ್ ಪಾಲಾದ ಆರ್​ಸಿಬಿ ತಂಡದ ವೇಗದ ಬೌಲರ್​!

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವೇಗದ ಬೌಲರ್​ ಜೇಸನ್ ಬೆಹ್ರೆನ್​ಡಾರ್ಫ್ ಮತ್ತೆ ಮುಂಬೈ ಇಂಡಿಯನ್ಸ್ ತಂಡ ಪಾಲಾಗಿದ್ದಾರೆ.

IPL 2023: ಮುಂಬೈ ಇಂಡಿಯನ್ಸ್ ಪಾಲಾದ ಆರ್​ಸಿಬಿ ತಂಡದ ವೇಗದ ಬೌಲರ್​!
Jason Behrendorff
TV9 Web
| Edited By: |

Updated on:Nov 12, 2022 | 11:25 PM

Share

ಮುಂಬೈ(ನ.12): ಇಂಡಿಯನ್​ ಪ್ರಿಮಿಯರ್ ಲೀಗ್ (IPL) ಸೀಸನ್ 16ಕ್ಕೆ ಆಟಗಾರರ ಟ್ರೇಡಿಂಗ್ ಪ್ರಕ್ರಿಯೆ ಶುರುವಾಗಿದ್ದು, ಇದರ ಮೊದಲ ಭಾಗವಾಗಿ ಇದೀಗ ಮುಂಬೈ ಇಂಡಿಯನ್ಸ್, ಟ್ರೇಡಿಂಗ್ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು(Royal Challengers Bangalore) ತಂಡದ ವೇಗಿಯನ್ನು ಖರೀದಿಸಿದೆ. ಆರ್​ಸಿಬಿ ತಂಡದ ಆಸ್ಟ್ರೇಲಿಯಾದ ಎಡಗೈ ವೇಗಿ ಜೇಸನ್ ಬೆಹ್ರೆನ್​ಡಾರ್ಫ್ ಮುಂಬೈ ಪಾಲಾಗಿದ್ದಾರೆ.

IPL 2023: ಐಪಿಎಲ್ ಮಿನಿ ಹರಾಜಿನ ದಿನಾಂಕ ಬಹಿರಂಗ; ಭಾರತದಲ್ಲಿಯೇ ಆಟಗಾರರ ಹರಾಜು ಪ್ರಕ್ರಿಯೆ..!

32 ವರ್ಷದ ವೇಗಿ ಜೇಸನ್ ಬೆಹ್ರೆನ್​ಡಾರ್ಫ್ 2018 ಹಾಗೂ 2019ರಲ್ಲಿ ಮುಂಬೈ ಇಂಡಿಯನ್ಸ್ ತಂಡದಲ್ಲಿದ್ದರು. ಆದ್ರೆ, ಕಳೆದ ಐಪಿಎಲ್​ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೇರಿಕೊಂಡಿದ್ದರು. ಇದೀಗ 2023ರ ಐಪಿಎಲ್ ಟೂರ್ನಿಗೆ ಮತ್ತೆ ಮುಂಬೈ ಇಂಡಿಯನ್ಸ್ ತಂಡ ಸೇರಿಕೊಂಡಿದ್ದಾರೆ.

2022ರ ಐಪಿಎಲ್ ಹರಾಜಿನಲ್ಲಿ ಆರ್​ಸಿಬಿ ಪ್ರಾಂಚೈಸಿ ವೇಗಿ ಜೇಸನ್‌ ಅವರನ್ನು 75 ಲಕ್ಷ ರೂಪಾಯಿ ಮೂಲ ಬೆಲೆಗೆ ಖರೀದಿ ಮಾಡಿತ್ತು. ಆದ್ರೆ, 2022ರ ಐಪಿಎಲ್ ಟೂರ್ನಿಯಲ್ಲಿ ಜೇಸನ್‌ಗೆ ಹೆಚ್ಚಿನ ಅವಕಾಶ ಸಿಕ್ಕಿರಲಿಲ್ಲ. ಇನ್ನು 2021ರಲ್ಲಿ ಜೇಸನ್ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಆಡಿದ್ದರು. ಈಗ ಮುಂದಿನ ಅಂದ್ರೆ 2023ರಲ್ಲಿ ನಡೆಯಲಿರುವ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ಪರ ಆಡಲಿದ್ದಾರೆ.

ಇನ್ನು ಆರ್​ಸಿಬಿ ಬೆಹ್ರೆನ್​ಡಾರ್ಫ್ ಟ್ವಿಟ್ಟರ್​ನಲ್ಲಿ ಬೆಸ್ಟ್ ಆಫ್ ಲಕ್ ಹೇಳಿ ಬಿಳ್ಕೊಟ್ಟಿದ್ರೆ, ಮತ್ತೊಂದೆಡೆ ಮುಂಬೈ ಇಂಡಿಯನ್ಸ್ ಟ್ವಿಟ್ಟರ್​ನಲ್ಲಿ ವೆಲ್​ಕಮ್ ಬ್ಯಾಕ್ ಎಂದು ಸ್ವಾಗತಿಸಿದೆ.

ಡಿ.23ಕ್ಕೆ ಐಪಿಎಲ್‌ ಮಿನಿ ಹರಾಜು

2023ರ ಐಪಿಎಲ್‌ ಆಟಗಾರರ ಮಿನಿ ಹರಾಜು ಪ್ರಕ್ರಿಯೆ ಡಿ.23ರಂದು ಕೊಚ್ಚಿಯಲ್ಲಿ ನಡೆಯಲಿದೆ ಎಂದು ಬುಧವಾರ ಬಿಸಿಸಿಐ ಅಧಿಕೃತ ಪ್ರಕಟಣೆ ಹೊರಡಿಸಿದೆ. ಹರಾಜು ಪ್ರಕ್ರಿಯೆಯು ಬೆಂಗಳೂರು ಇಲ್ಲವೇ ಟರ್ಕಿಯ ಇಸ್ತಾಂಬುಲ್‌ನಲ್ಲಿ ನಡೆಯಬಹುದು ಎನ್ನಲಾಗಿತ್ತು. ಆದರೆ ಬಿಸಿಸಿಐ ಕೊಚ್ಚಿಯಲ್ಲಿ ನಡೆಸಲು ತೀರ್ಮಾನಿಸಿದೆ. ಈ ಹಿನ್ನೆಲೆಯಲ್ಲಿ ತಂಡಗಳು ತಾವು ಉಳಿಸಿಕೊಳ್ಳುವ ಆಟಗಾರರ ಪಟ್ಟಿಯನ್ನು ನ.15ರೊಳಗೆ ಪ್ರಕಟಿಸಬೇಕಿದೆ. ಕಳೆದ ಹರಾಜಿನ ಬಳಿಕ ಉಳಿದ ಹಣ, ಆಟಗಾರರನ್ನು ಕೈಬಿಟ್ಟ ಬಳಿಕ ಉಳಿಯುವ ಹಣದ ಜೊತೆಗೆ ಹೆಚ್ಚುವರಿ 5 ಕೋಟಿ ರೂ. ಬಳಸಲು ಅವಕಾಶ ನೀಡಲಾಗಿದೆ.

Published On - 11:25 pm, Sat, 12 November 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ