AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಮುಂಬೈ ಇಂಡಿಯನ್ಸ್ ಪಾಲಾದ ಆರ್​ಸಿಬಿ ತಂಡದ ವೇಗದ ಬೌಲರ್​!

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವೇಗದ ಬೌಲರ್​ ಜೇಸನ್ ಬೆಹ್ರೆನ್​ಡಾರ್ಫ್ ಮತ್ತೆ ಮುಂಬೈ ಇಂಡಿಯನ್ಸ್ ತಂಡ ಪಾಲಾಗಿದ್ದಾರೆ.

IPL 2023: ಮುಂಬೈ ಇಂಡಿಯನ್ಸ್ ಪಾಲಾದ ಆರ್​ಸಿಬಿ ತಂಡದ ವೇಗದ ಬೌಲರ್​!
Jason Behrendorff
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on:Nov 12, 2022 | 11:25 PM

Share

ಮುಂಬೈ(ನ.12): ಇಂಡಿಯನ್​ ಪ್ರಿಮಿಯರ್ ಲೀಗ್ (IPL) ಸೀಸನ್ 16ಕ್ಕೆ ಆಟಗಾರರ ಟ್ರೇಡಿಂಗ್ ಪ್ರಕ್ರಿಯೆ ಶುರುವಾಗಿದ್ದು, ಇದರ ಮೊದಲ ಭಾಗವಾಗಿ ಇದೀಗ ಮುಂಬೈ ಇಂಡಿಯನ್ಸ್, ಟ್ರೇಡಿಂಗ್ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು(Royal Challengers Bangalore) ತಂಡದ ವೇಗಿಯನ್ನು ಖರೀದಿಸಿದೆ. ಆರ್​ಸಿಬಿ ತಂಡದ ಆಸ್ಟ್ರೇಲಿಯಾದ ಎಡಗೈ ವೇಗಿ ಜೇಸನ್ ಬೆಹ್ರೆನ್​ಡಾರ್ಫ್ ಮುಂಬೈ ಪಾಲಾಗಿದ್ದಾರೆ.

IPL 2023: ಐಪಿಎಲ್ ಮಿನಿ ಹರಾಜಿನ ದಿನಾಂಕ ಬಹಿರಂಗ; ಭಾರತದಲ್ಲಿಯೇ ಆಟಗಾರರ ಹರಾಜು ಪ್ರಕ್ರಿಯೆ..!

32 ವರ್ಷದ ವೇಗಿ ಜೇಸನ್ ಬೆಹ್ರೆನ್​ಡಾರ್ಫ್ 2018 ಹಾಗೂ 2019ರಲ್ಲಿ ಮುಂಬೈ ಇಂಡಿಯನ್ಸ್ ತಂಡದಲ್ಲಿದ್ದರು. ಆದ್ರೆ, ಕಳೆದ ಐಪಿಎಲ್​ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೇರಿಕೊಂಡಿದ್ದರು. ಇದೀಗ 2023ರ ಐಪಿಎಲ್ ಟೂರ್ನಿಗೆ ಮತ್ತೆ ಮುಂಬೈ ಇಂಡಿಯನ್ಸ್ ತಂಡ ಸೇರಿಕೊಂಡಿದ್ದಾರೆ.

2022ರ ಐಪಿಎಲ್ ಹರಾಜಿನಲ್ಲಿ ಆರ್​ಸಿಬಿ ಪ್ರಾಂಚೈಸಿ ವೇಗಿ ಜೇಸನ್‌ ಅವರನ್ನು 75 ಲಕ್ಷ ರೂಪಾಯಿ ಮೂಲ ಬೆಲೆಗೆ ಖರೀದಿ ಮಾಡಿತ್ತು. ಆದ್ರೆ, 2022ರ ಐಪಿಎಲ್ ಟೂರ್ನಿಯಲ್ಲಿ ಜೇಸನ್‌ಗೆ ಹೆಚ್ಚಿನ ಅವಕಾಶ ಸಿಕ್ಕಿರಲಿಲ್ಲ. ಇನ್ನು 2021ರಲ್ಲಿ ಜೇಸನ್ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಆಡಿದ್ದರು. ಈಗ ಮುಂದಿನ ಅಂದ್ರೆ 2023ರಲ್ಲಿ ನಡೆಯಲಿರುವ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ಪರ ಆಡಲಿದ್ದಾರೆ.

ಇನ್ನು ಆರ್​ಸಿಬಿ ಬೆಹ್ರೆನ್​ಡಾರ್ಫ್ ಟ್ವಿಟ್ಟರ್​ನಲ್ಲಿ ಬೆಸ್ಟ್ ಆಫ್ ಲಕ್ ಹೇಳಿ ಬಿಳ್ಕೊಟ್ಟಿದ್ರೆ, ಮತ್ತೊಂದೆಡೆ ಮುಂಬೈ ಇಂಡಿಯನ್ಸ್ ಟ್ವಿಟ್ಟರ್​ನಲ್ಲಿ ವೆಲ್​ಕಮ್ ಬ್ಯಾಕ್ ಎಂದು ಸ್ವಾಗತಿಸಿದೆ.

ಡಿ.23ಕ್ಕೆ ಐಪಿಎಲ್‌ ಮಿನಿ ಹರಾಜು

2023ರ ಐಪಿಎಲ್‌ ಆಟಗಾರರ ಮಿನಿ ಹರಾಜು ಪ್ರಕ್ರಿಯೆ ಡಿ.23ರಂದು ಕೊಚ್ಚಿಯಲ್ಲಿ ನಡೆಯಲಿದೆ ಎಂದು ಬುಧವಾರ ಬಿಸಿಸಿಐ ಅಧಿಕೃತ ಪ್ರಕಟಣೆ ಹೊರಡಿಸಿದೆ. ಹರಾಜು ಪ್ರಕ್ರಿಯೆಯು ಬೆಂಗಳೂರು ಇಲ್ಲವೇ ಟರ್ಕಿಯ ಇಸ್ತಾಂಬುಲ್‌ನಲ್ಲಿ ನಡೆಯಬಹುದು ಎನ್ನಲಾಗಿತ್ತು. ಆದರೆ ಬಿಸಿಸಿಐ ಕೊಚ್ಚಿಯಲ್ಲಿ ನಡೆಸಲು ತೀರ್ಮಾನಿಸಿದೆ. ಈ ಹಿನ್ನೆಲೆಯಲ್ಲಿ ತಂಡಗಳು ತಾವು ಉಳಿಸಿಕೊಳ್ಳುವ ಆಟಗಾರರ ಪಟ್ಟಿಯನ್ನು ನ.15ರೊಳಗೆ ಪ್ರಕಟಿಸಬೇಕಿದೆ. ಕಳೆದ ಹರಾಜಿನ ಬಳಿಕ ಉಳಿದ ಹಣ, ಆಟಗಾರರನ್ನು ಕೈಬಿಟ್ಟ ಬಳಿಕ ಉಳಿಯುವ ಹಣದ ಜೊತೆಗೆ ಹೆಚ್ಚುವರಿ 5 ಕೋಟಿ ರೂ. ಬಳಸಲು ಅವಕಾಶ ನೀಡಲಾಗಿದೆ.

Published On - 11:25 pm, Sat, 12 November 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?