AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಹ್ಲಿ, ರೋಹಿತ್, ಧೋನಿಯಲ್ಲ! ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್ ನೆಚ್ಚಿನ ಕ್ರಿಕೆಟಿಗ ಯಾರು ಗೊತ್ತಾ?

ರೋಹಿತ್ ಶರ್ಮಾ ಅವರ ಹೆಸರಾಗಲಿ, ವಿರಾಟ್ ಕೊಹ್ಲಿಯವರಾಗಲಿ ತೆಗೆದುಕೊಳ್ಳಲಿಲ್ಲ. ಬದಲಿಗೆ ಯಾರ್ಕರ್ ಕಿಂಗ್ ಜಸ್ಪ್ರಿತ್ ಬುಮ್ರಾ ನನ್ನ ನೆಚ್ಚಿನ ಕ್ರಿಕೆಟಿಗರು ಎಂದು ಅರ್ಜುನ್ ತೆಂಡೂಲ್ಕರ್ ಉತ್ತರಿಸಿದ್ದಾರೆ.

ಕೊಹ್ಲಿ, ರೋಹಿತ್, ಧೋನಿಯಲ್ಲ! ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್ ನೆಚ್ಚಿನ ಕ್ರಿಕೆಟಿಗ ಯಾರು ಗೊತ್ತಾ?
ರೋಹಿತ್, ಕೊಹ್ಲಿ, ಸಚಿನ್, ಅರ್ಜುನ್
ಪೃಥ್ವಿಶಂಕರ
|

Updated on: May 19, 2021 | 2:44 PM

Share

ಸಚಿನ್ ತೆಂಡೂಲ್ಕರ್.. ಕ್ರಿಕೆಟ್ ಜಗತ್ತಿನ ದೇವರು ಎಂತಲೇ ಪ್ರಸಿದ್ಧ. ಸವ್ಯಸಾಚಿ ಸಚಿನ್​ಗೆ ಇನ್ನ್ಯಾರು ಸರಿಸಮರಿಲ್ಲ ಎಂಬುದು ಕ್ರಿಕೆಟ್ ಪಂಡಿತರ ವಾದವಾಗಿದೆ. ಹಾಗೆಯೇ ವಿಶ್ವದ ಎಷ್ಟೋ ಕ್ರಿಕೆಟ್ ಆಟಗಾರರಿಗೆ ಸಚಿನ್ ಮಾದರಿಯಾಗಿದ್ದಾರೆ. ಅವರಲ್ಲಿ ವಿರಾಟ್, ಯುವರಾಜ್, ಮುಂತಾದ ಆಟಗಾರರು ಸೇರಿದ್ದಾರೆ. ನಿವೃತ್ತಿ ಬಳಿಕ ಮಗನ ಕ್ರಿಕೆಟ್ ವೃತ್ತಿ ಬದುಕಿನ ಬಗ್ಗೆ ತಲೆಕೆಡಿಸಿಕೊಂಡಿರುವ ಸಚಿನ್​ಗೆ ತಕ್ಕಮಟ್ಟದ ಯಶಸ್ಸು ಸಿಕ್ಕಿಲ್ಲ. ಆದರೂ ಸಹ ಸಚಿನ್ ಪುತ್ರ ದೇಶಿ ಕ್ರಿಕೆಟ್​ನಲ್ಲಿ ಆಡುತ್ತಿದ್ದಾರೆ. ಜೊತೆಗೆ ಈ ವರ್ಷದಿಂದ ಐಪಿಎಲ್​ಗೂ ಕಾಲಿಟ್ಟಿದ್ದಾರೆ. ಹೀಗಾಗಿ ಕಾರ್ಯಕ್ರಮವೊಂದರಲ್ಲಿ ಸಚಿನ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್​ಗೆ ತಮ್ಮ ನೆಚ್ಚಿನ ಕ್ರಿಕೆಟಿಗ ಯಾರು ಎಂದು ಕೇಳಿದಾಗ ಅವರು ಆಘಾತಕಾರಿ ಉತ್ತರವನ್ನು ನೀಡಿದ್ದಾರೆ. ಎಲ್ಲರ ನಿರೀಕ್ಷೆ ಅವರ ತಂದೆಯೇ ಆಗಿರುತ್ತಾರೆ ಎಂಬುದಾಗಿತ್ತು. ಆದರೆ ಅವರು ಸ್ವತಃ ತಂದೆಯ ಹೆಸರನ್ನು ಉಲ್ಲೇಖಿಸಲಿಲ್ಲ. ಜೊತೆಗೆ ರೋಹಿತ್ ಶರ್ಮಾ ಅವರ ಹೆಸರಾಗಲಿ, ವಿರಾಟ್ ಕೊಹ್ಲಿಯವರಾಗಲಿ ತೆಗೆದುಕೊಳ್ಳಲಿಲ್ಲ. ಬದಲಿಗೆ ಯಾರ್ಕರ್ ಕಿಂಗ್ ಜಸ್ಪ್ರಿತ್ ಬುಮ್ರಾ ನನ್ನ ನೆಚ್ಚಿನ ಕ್ರಿಕೆಟಿಗರು ಎಂದು ಅರ್ಜುನ್ ತೆಂಡೂಲ್ಕರ್ ಉತ್ತರಿಸಿದ್ದಾರೆ.

ಜಸ್ಪ್ರೀತ್ ಬುಮ್ರಾ ಏಕೆ ನೆಚ್ಚಿನ ಆಟಗಾರ? ಲೈವ್ ಸೆಷನ್‌ನಲ್ಲಿ ನಿಮ್ಮ ನೆಚ್ಚಿನ ಆಟಗಾರ ಯಾರು? ಈ ಪ್ರಶ್ನೆಯನ್ನು ಅರ್ಜುನ್ ತೆಂಡೂಲ್ಕರ್ ಅವರಿಗೆ ಕೇಳಲಾಯಿತು. ಈ ಬಾರಿ ಜಸ್ಪ್ರೀತ್ ಬುಮ್ರಾ ನನ್ನ ನೆಚ್ಚಿನ ಆಟಗಾರ ಎಂದು ಅರ್ಜುನ್ ಉತ್ತರಿಸಿದರು. ಈ ಉತ್ತರ ಎಲ್ಲರಿಗೂ ಆಘಾತಕಾರಿಯಾಗಿದೆ ಏಕೆಂದರೆ ಅವರು ಸಚಿನ್-ರೋಹಿತ್-ವಿರಾಟ್ ಎಂದು ಹೆಸರಿಸದೆ ಬುಮ್ರಾ ಎಂದು ಹೆಸರಿಸಿದ್ದಾರೆ.

ಜಸ್ಪ್ರೀತ್ ಬುಮ್ರಾ ಕಳೆದ ಕೆಲವು ವರ್ಷಗಳಿಂದ ಮುಂಬೈ ಇಂಡಿಯನ್ಸ್ ಪರ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುಂಬೈನ ವೇಗದ ಬೌಲಿಂಗ್‌ನ ಉಸ್ತುವಾರಿ ಅವರ ಮೇಲಿದೆ. ಅವರ ಬೌಲಿಂಗ್ ನಾಯಕತ್ವದಲ್ಲಿ ಮುಂಬೈ ತಂಡವು ಸತತ ಉತ್ತಮ ಪ್ರದರ್ಶನ ನೀಡಿದೆ. ಬುಮ್ರಾ ಅವರ ಯಾರ್ಕರ್ ಬೌಲಿಂಗ್ ಅನೇಕ ಅನುಭವಿ ಬ್ಯಾಟ್ಸ್‌ಮನ್‌ಗಳನ್ನು ಮಂಕಾಗುವಂತೆ ಮಾಡಿದೆ. ಇದಲ್ಲದೆ, ಡೆತ್ ಓವರ್‌ಗಳಲ್ಲಿ, ಅವರು ಬ್ಯಾಟ್ಸ್‌ಮನ್‌ಗಳನ್ನು ಕಟ್ಟಿಹಾಕುತ್ತಾರೆ.

ಮುಂಬೈ ಇಂಡಿಯನ್ಸ್ ಪರ ಆಡುತ್ತಿದ್ದಾರೆ ಅರ್ಜುನ್ ಬೌಲರ್ ಆಗಿ ವೃತ್ತಿಜೀವನವನ್ನು ಪ್ರಾರಂಭಿಸಿದರು. ಪ್ರಸ್ತುತ ಅವರು ಮುಂಬೈ ಇಂಡಿಯನ್ಸ್ ಪರ ಆಡುತ್ತಿದ್ದಾರೆ. ತಂಡದಲ್ಲಿ ಆಡುವ 11ರಲ್ಲಿ ಅವಕಾಶ ಸಿಗದಿದ್ದರೂ, ಅವರು ಮುಂಬೈ ತಂಡದ ಜೊತೆಗಿದ್ದಾರೆ. ನೆಟ್​ನಲ್ಲಿ ಅರ್ಜುನ್, ಬುಮ್ರಾವನ್ನು ಹತ್ತಿರದಿಂದ ಗಮನಿಸುತ್ತಿರುತ್ತಾರೆ. ಅವರ ಬೌಲಿಂಗ್ ವೀಕ್ಷಿಸುತ್ತಿದ್ದಾರೆ. ಈ ಕಾರಣಗಳಿಗಾಗಿ, ಬುಮ್ರಾ ನನ್ನ ನೆಚ್ಚಿನ ಆಟಗಾರ ಎಂದು ಅರ್ಜುನ್ ಹೇಳಿದ್ದಿರಬೇಕು.

20 ಲಕ್ಷ ರೂ.ಗೆ ಮುಂಬೈ ಸೇರಿದ ಅರ್ಜುನ್ ಮುಂಬೈ ಇಂಡಿಯನ್ಸ್ ಈ ವರ್ಷದ ಹರಾಜಿನಲ್ಲಿ ಅರ್ಜುನ್ ತೆಂಡೂಲ್ಕರ್ ಅವರನ್ನು 20 ಲಕ್ಷ ರೂ.ಗೆ ಖರೀದಿಸಿದೆ. ವಾಸ್ತವವಾಗಿ, ಐಪಿಎಲ್‌ನ 14 ನೇ ಆವೃತ್ತಿಯಲ್ಲಿ ಅರ್ಜುನ್ ಒಂದೇ ಒಂದು ಪಂದ್ಯವನ್ನೂ ಆಡಿಲ್ಲ. ಪ್ರಸ್ತುತ, ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳಿಂದಾಗಿ ಏಕಾಏಕಿ ಐಪಿಎಲ್ ಅನ್ನು ಅನಿರ್ದಿಷ್ಟವಾಗಿ ಮುಂದೂಡಲಾಗಿದೆ.

ಇದನ್ನೂ ಓದಿ:IPL 2021 Auction: ಟ್ವಿಟರ್​ನಲ್ಲಿ ಅರ್ಜುನ್ ತೆಂಡೂಲ್ಕರ್ ಟ್ರೆಂಡಿಂಗ್, ಯಾವ ತಂಡಕ್ಕೆ ಸಚಿನ್ ಪುತ್ರ?

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ