AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jasprit Bumrah Marriage: ಗೋವಾದಲ್ಲಿ ಈ ವಾರ ಜಸ್ಪ್ರೀತ್​ ಬೂಮ್ರಾ ಮದುವೆ? ವಧು ಯಾರು? ಇಲ್ಲಿದೆ ಉತ್ತರ

ಕೊರೊನಾ ಇರುವ ಕಾರಣಕ್ಕೆ ಗೋವಾದಲ್ಲಿ ಜಸ್ಪ್ರೀತ್​ ಬೂಮ್ರಾ ಮದುವೆ ತುಂಬಾನೇ ಸರಳವಾಗಿ ನಡೆಯಲಿದೆ. ಕ್ರಿಕೆಟ್​ ದಿಗ್ಗಜರು ಮದುವೆಯಲ್ಲಿ ಪಾಲ್ಗೊಳ್ಳುವುದು ಅನುಮಾನ.

Jasprit Bumrah Marriage: ಗೋವಾದಲ್ಲಿ ಈ ವಾರ ಜಸ್ಪ್ರೀತ್​ ಬೂಮ್ರಾ ಮದುವೆ? ವಧು ಯಾರು? ಇಲ್ಲಿದೆ ಉತ್ತರ
Jasprit bumra
ರಾಜೇಶ್ ದುಗ್ಗುಮನೆ
| Edited By: |

Updated on:Mar 06, 2021 | 1:01 PM

Share

ಕ್ರಿಕೆಟ್​ ವೇಗಿ ಜಸ್​​ಪ್ರೀತ್ ಬೂಮ್ರಾ ವೈಯಕ್ತಿಕ ಕಾರಣ ನೀಡಿ ಭಾರತ vs ಇಂಗ್ಲೆಂಡ್​ ನಾಲ್ಕನೇ ಟೆಸ್ಟ್​ನಿಂದ ಹೊರಗುಳಿದಿದ್ದಾರೆ. ಮೂಲಗಳ ಪ್ರಕಾರ ಜಸ್​ಪ್ರೀತ್​​ ಬೂಮ್ರಾ ಈ ವಾರ ಗೋವಾದಲ್ಲಿ ವಿವಾಹ ಆಗಲಿದ್ದಾರಂತೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಿದೆ. ಇಷ್ಟೇ ಅಲ್ಲ, ಆ ಹುಡುಗಿ ಯಾರು ಎನ್ನುವ ಬಗ್ಗೆಯೂ ಚರ್ಚೆ ಜೋರಾಗಿದೆ. ಹಾಗಾದರೆ, ಜಸ್​ಪ್ರೀತ್​ ಬೂಮ್ರಾ ಯಾರನ್ನು ವರಿಸುತ್ತಿದ್ದಾರೆ? ಆ ಪ್ರಶ್ನೆಗೆ ಇಲ್ಲಿದೆ ಉತ್ತರ. ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯ ಇಂದು ಅಹಮದಾಬಾದ್‌ನಲ್ಲಿ ಆರಂಭವಾಗಿದೆ. ಇದರ ನಂತರ, ಮಾರ್ಚ್ 12 ರಿಂದ ಉಭಯ ತಂಡಗಳ ನಡುವೆ ಐದು ಟಿ 20 ಪಂದ್ಯಗಳು ನಡೆಯಲಿವೆ. ಇದರ ನಂತರ ಮಾರ್ಚ್ 23 ರಿಂದ ಮೂರು ಏಕದಿನ ಪಂದ್ಯಗಳ ಸರಣಿ ನಡೆಯಲಿದೆ. ಇವುಗಳಿಂದ ಬೂಮ್ರಾ ಹೊರಗುಳಿಯಲಿದ್ದಾರಂತೆ. ಇದಕ್ಕೆ ಕಾರಣ ಮದುವೆ ಎನ್ನಲಾಗುತ್ತಿದೆ.

ಮದುವೆ ಕಾರ್ಯಕ್ರಮದಲ್ಲಿ ಬೂಮ್ರಾ ಆಪ್ತರಷ್ಟೇ ಭಾಗಿಯಾಗಲಿದ್ದಾರಂತೆ. ಕೊರೊನಾ ಇರುವ ಕಾರಣಕ್ಕೆ ತುಂಬಾನೇ ಸರಳವಾಗಿ ಮದುವೆ ಕಾರ್ಯಕ್ರಮ ನಡೆಯಲಿದೆ. ಕ್ರಿಕೆಟ್​ ದಿಗ್ಗಜರು ಮದುವೆಯಲ್ಲಿ ಪಾಲ್ಗೊಳ್ಳುವುದು ಅನುಮಾನ. ಮದುವೆ ನಂತರ ಮುಂಬೈನಲ್ಲಿ ಅದ್ದೂರಿಯಾಗಿ ರಿಸೆಪ್ಶನ್​ ಏರ್ಪಡಿಸಲು ಬೂಮ್ರಾ ನಿರ್ಧರಿಸಿದ್ದಾರೆ.

ಹುಡುಗಿ ಯಾರು?: ಮೂಲಗಳ ಪ್ರಕಾರ ಬೂಮ್ರಾ ಮದುವೆ ಆಗುತ್ತಿರುವುದು ಖಾಸಗಿ ಸ್ಪೋರ್ಟ್ಸ್​​ ವಾಹಿನಿಯ ಆ್ಯಂಕರ್​ ಸಂಜನಾ ಗಣೇಶನ್​ ಜತೆ ಎನ್ನಲಾಗುತ್ತಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸುದ್ದಿಗಳು ಹರಿದಾಡಿವೆ. ಆದರೆ, ಈ ಬಗ್ಗೆ ಬೂಮ್ರಾ ಕಡೆಯಿಂದ ಯಾವುದೇ ಅಧಿಕೃತ ಮಾಹಿತಿ ಹೊರ ಬಿದ್ದಿಲ್ಲ.

ಇದನ್ನೂ ಓದಿ: India vs England: ಅಂತಿಮ ಟೆಸ್ಟ್​ನಿಂದ ಹೊರಗುಳಿದ ಬುಮ್ರಾ.. ಟಿ20, ಏಕದಿನ ಸರಣಿಯಲ್ಲೂ ಕಣಕ್ಕಿಳಿಯುವುದು ಡೌಟ್

Published On - 12:00 pm, Thu, 4 March 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ