AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jasprit Bumrah Marriage: ಗೋವಾದಲ್ಲಿ ಈ ವಾರ ಜಸ್ಪ್ರೀತ್​ ಬೂಮ್ರಾ ಮದುವೆ? ವಧು ಯಾರು? ಇಲ್ಲಿದೆ ಉತ್ತರ

ಕೊರೊನಾ ಇರುವ ಕಾರಣಕ್ಕೆ ಗೋವಾದಲ್ಲಿ ಜಸ್ಪ್ರೀತ್​ ಬೂಮ್ರಾ ಮದುವೆ ತುಂಬಾನೇ ಸರಳವಾಗಿ ನಡೆಯಲಿದೆ. ಕ್ರಿಕೆಟ್​ ದಿಗ್ಗಜರು ಮದುವೆಯಲ್ಲಿ ಪಾಲ್ಗೊಳ್ಳುವುದು ಅನುಮಾನ.

Jasprit Bumrah Marriage: ಗೋವಾದಲ್ಲಿ ಈ ವಾರ ಜಸ್ಪ್ರೀತ್​ ಬೂಮ್ರಾ ಮದುವೆ? ವಧು ಯಾರು? ಇಲ್ಲಿದೆ ಉತ್ತರ
Jasprit bumra
ರಾಜೇಶ್ ದುಗ್ಗುಮನೆ
| Edited By: |

Updated on:Mar 06, 2021 | 1:01 PM

Share

ಕ್ರಿಕೆಟ್​ ವೇಗಿ ಜಸ್​​ಪ್ರೀತ್ ಬೂಮ್ರಾ ವೈಯಕ್ತಿಕ ಕಾರಣ ನೀಡಿ ಭಾರತ vs ಇಂಗ್ಲೆಂಡ್​ ನಾಲ್ಕನೇ ಟೆಸ್ಟ್​ನಿಂದ ಹೊರಗುಳಿದಿದ್ದಾರೆ. ಮೂಲಗಳ ಪ್ರಕಾರ ಜಸ್​ಪ್ರೀತ್​​ ಬೂಮ್ರಾ ಈ ವಾರ ಗೋವಾದಲ್ಲಿ ವಿವಾಹ ಆಗಲಿದ್ದಾರಂತೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಿದೆ. ಇಷ್ಟೇ ಅಲ್ಲ, ಆ ಹುಡುಗಿ ಯಾರು ಎನ್ನುವ ಬಗ್ಗೆಯೂ ಚರ್ಚೆ ಜೋರಾಗಿದೆ. ಹಾಗಾದರೆ, ಜಸ್​ಪ್ರೀತ್​ ಬೂಮ್ರಾ ಯಾರನ್ನು ವರಿಸುತ್ತಿದ್ದಾರೆ? ಆ ಪ್ರಶ್ನೆಗೆ ಇಲ್ಲಿದೆ ಉತ್ತರ. ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯ ಇಂದು ಅಹಮದಾಬಾದ್‌ನಲ್ಲಿ ಆರಂಭವಾಗಿದೆ. ಇದರ ನಂತರ, ಮಾರ್ಚ್ 12 ರಿಂದ ಉಭಯ ತಂಡಗಳ ನಡುವೆ ಐದು ಟಿ 20 ಪಂದ್ಯಗಳು ನಡೆಯಲಿವೆ. ಇದರ ನಂತರ ಮಾರ್ಚ್ 23 ರಿಂದ ಮೂರು ಏಕದಿನ ಪಂದ್ಯಗಳ ಸರಣಿ ನಡೆಯಲಿದೆ. ಇವುಗಳಿಂದ ಬೂಮ್ರಾ ಹೊರಗುಳಿಯಲಿದ್ದಾರಂತೆ. ಇದಕ್ಕೆ ಕಾರಣ ಮದುವೆ ಎನ್ನಲಾಗುತ್ತಿದೆ.

ಮದುವೆ ಕಾರ್ಯಕ್ರಮದಲ್ಲಿ ಬೂಮ್ರಾ ಆಪ್ತರಷ್ಟೇ ಭಾಗಿಯಾಗಲಿದ್ದಾರಂತೆ. ಕೊರೊನಾ ಇರುವ ಕಾರಣಕ್ಕೆ ತುಂಬಾನೇ ಸರಳವಾಗಿ ಮದುವೆ ಕಾರ್ಯಕ್ರಮ ನಡೆಯಲಿದೆ. ಕ್ರಿಕೆಟ್​ ದಿಗ್ಗಜರು ಮದುವೆಯಲ್ಲಿ ಪಾಲ್ಗೊಳ್ಳುವುದು ಅನುಮಾನ. ಮದುವೆ ನಂತರ ಮುಂಬೈನಲ್ಲಿ ಅದ್ದೂರಿಯಾಗಿ ರಿಸೆಪ್ಶನ್​ ಏರ್ಪಡಿಸಲು ಬೂಮ್ರಾ ನಿರ್ಧರಿಸಿದ್ದಾರೆ.

ಹುಡುಗಿ ಯಾರು?: ಮೂಲಗಳ ಪ್ರಕಾರ ಬೂಮ್ರಾ ಮದುವೆ ಆಗುತ್ತಿರುವುದು ಖಾಸಗಿ ಸ್ಪೋರ್ಟ್ಸ್​​ ವಾಹಿನಿಯ ಆ್ಯಂಕರ್​ ಸಂಜನಾ ಗಣೇಶನ್​ ಜತೆ ಎನ್ನಲಾಗುತ್ತಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸುದ್ದಿಗಳು ಹರಿದಾಡಿವೆ. ಆದರೆ, ಈ ಬಗ್ಗೆ ಬೂಮ್ರಾ ಕಡೆಯಿಂದ ಯಾವುದೇ ಅಧಿಕೃತ ಮಾಹಿತಿ ಹೊರ ಬಿದ್ದಿಲ್ಲ.

ಇದನ್ನೂ ಓದಿ: India vs England: ಅಂತಿಮ ಟೆಸ್ಟ್​ನಿಂದ ಹೊರಗುಳಿದ ಬುಮ್ರಾ.. ಟಿ20, ಏಕದಿನ ಸರಣಿಯಲ್ಲೂ ಕಣಕ್ಕಿಳಿಯುವುದು ಡೌಟ್

Published On - 12:00 pm, Thu, 4 March 21

Follow Us
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ