AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರೆಂಟ್ ಶಾಕ್​ನಿಂದ ಅಂಗವೈಕಲ್ಯ; ತಮ್ಮದೇ ದಾಖಲೆ ಮುರಿದು ಒಲಿಂಪಿಕ್ಸ್‌ಗೆ ಟಿಕೆಟ್ ಪಡೆದ ದೇವೇಂದ್ರ ಝಾಜಾರಿಯಾ

. ದೆಹಲಿಯ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ಬುಧವಾರ ನಡೆದ ರಾಷ್ಟ್ರೀಯ ಟ್ರಯಲ್ಸ್‌ನಲ್ಲಿ ದೇವೇಂದ್ರ ತಮ್ಮದೇ ಆದ 63.97 ಮೀಟರ್ ವಿಶ್ವ ದಾಖಲೆಯನ್ನು ಮುರಿದರು. ಬುಧವಾರ ಅವರು 65.71 ಮೀಟರ್ ಜಾವೆಲಿನ್ ಎಸೆದು ಒಲಿಂಪಿಕ್ಸ್‌ಗೆ ಅರ್ಹತೆ ಪಡೆದರು.

ಕರೆಂಟ್ ಶಾಕ್​ನಿಂದ ಅಂಗವೈಕಲ್ಯ; ತಮ್ಮದೇ ದಾಖಲೆ ಮುರಿದು ಒಲಿಂಪಿಕ್ಸ್‌ಗೆ ಟಿಕೆಟ್ ಪಡೆದ ದೇವೇಂದ್ರ ಝಾಜಾರಿಯಾ
ದೇವೇಂದ್ರ ಝಾಜಾರಿಯಾ
Follow us
ಪೃಥ್ವಿಶಂಕರ
|

Updated on: Jul 01, 2021 | 7:12 PM

ಪ್ಯಾರಾಲಿಂಪಿಕ್ಸ್‌ನಲ್ಲಿ ಎರಡು ಚಿನ್ನದ ಪದಕಗಳನ್ನು ಗೆದ್ದ ದೇವೇಂದ್ರ ಝಾಜಾರಿಯಾ ಬುಧವಾರ ತಮ್ಮದೆ ದಾಖಲೆ ಮುರಿದು ಟೋಕಿಯೊಗೆ ಟಿಕೆಟ್ ಖಚಿತಪಡಿಸಿಕೊಂಡಿದ್ದಾರೆ. ಇದರೊಂದಿಗೆ ಮತ್ತೊಮ್ಮೆ ಅವರು ಒಲಿಂಪಿಕ್ಸ್‌ಗೆ ಅರ್ಹತೆ ಪಡೆದಿದ್ದಾರೆ. ತಮ್ಮದೇ ಆದ ವಿಶ್ವ ದಾಖಲೆಯನ್ನು ಮುರಿದು ಚಿನ್ನದ ಪದಕದ ಹ್ಯಾಟ್ರಿಕ್ ಪೂರ್ಣಗೊಳಿಸಲು ಕಣ್ಣಿಟ್ಟಿದ್ದಾರೆ. ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ಎರಡು ಚಿನ್ನದ ಪದಕಗಳನ್ನು ಗೆದ್ದ ಮೊದಲ ಭಾರತೀಯ ಆಟಗಾರ 40 ವರ್ಷದ ವಯಸ್ಸಿನ ಝಾಜಾರಿಯಾ. ದೆಹಲಿಯ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ಬುಧವಾರ ನಡೆದ ರಾಷ್ಟ್ರೀಯ ಟ್ರಯಲ್ಸ್‌ನಲ್ಲಿ ದೇವೇಂದ್ರ ತಮ್ಮದೇ ಆದ 63.97 ಮೀಟರ್ ವಿಶ್ವ ದಾಖಲೆಯನ್ನು ಮುರಿದರು. ಬುಧವಾರ ಅವರು 65.71 ಮೀಟರ್ ಜಾವೆಲಿನ್ ಎಸೆದು ಒಲಿಂಪಿಕ್ಸ್‌ಗೆ ಅರ್ಹತೆ ಪಡೆದರು. ಇದು ಮೂರನೇ ಬಾರಿಗೆ ದೇವೇಂದ್ರ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಕ್ಯಾನ್ಸರ್​ನಿಂದ ತಂದೆ ಸಾವು ಕಳೆದ ವರ್ಷ ಅಕ್ಟೋಬರ್‌ನಲ್ಲಿ ಕ್ಯಾನ್ಸರ್​ನಿಂದ ತಂದೆಯನ್ನು ಕಳೆದುಕೊಂಡ ನಂತರ ದೇವೇಂದ್ರ ಧೃತಿಗೆಡದೆ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ತಂದೆ ನಿಧನದ ಬಳಿಕ ದೇವೇಂದ್ರ ಅವರು ತಮ್ಮ ಕುಟುಂಬದ ಯಾವುದೇ ವ್ಯಕ್ತಿಯನ್ನು ಭೇಟಿ ಮಾಡಿಲ್ಲ ಮತ್ತು ನಿರಂತರವಾಗಿ ತರಬೇತಿ ಪಡೆಯುತ್ತಿದ್ದಾರೆ. ತಾಯಿಯ ಬೆಂಬಲ ನನಗೆ ಇಷ್ಟು ಧೈರ್ಯ ನೀಡಿದೆ ಎಂದು ಅವರು ಹೇಳಿಕೊಂಡಿದ್ದಾರೆ. ಟೈಮ್ಸ್ ಆಫ್ ಇಂಡಿಯಾದೊಂದಿಗಿನ ಸಂಭಾಷಣೆಯಲ್ಲಿ ಅವರು, ಇದು ಎಲ್ಲಾ ಭಾವೋದ್ರೇಕದ ವಿಷಯ ಎಂದು ನಾನು ಭಾವಿಸುತ್ತೇನೆ. ನೀವು ಉತ್ತಮವಾಗಿ ತರಬೇತಿ ನೀಡಿದರೆ ಮತ್ತು ಉತ್ತಮ ಸ್ಥಿತಿಯಲ್ಲಿದ್ದರೆ ವಯಸ್ಸು ಅಪ್ರಸ್ತುತವಾಗುತ್ತದೆ. ಕಳೆದ ಅಕ್ಟೋಬರ್‌ನಿಂದ ನಾನು ಮನೆಗೆ ಹೋಗಿಲ್ಲ. ನಾನು ತರಬೇತಿಯತ್ತ ಗಮನ ಹರಿಸಬೇಕೆಂದು ನನ್ನ ತಾಯಿ ಬಯಸುತ್ತಾರೆ. ನನ್ನ ತಂದೆಯ ನಿಧನದ ನಂತರ ನಾನು ಬಲಶಾಲಿಯಾಗಿದ್ದೇನೆ. ಟೋಕಿಯೊಗೆ ಹೋಗುವ ಮೊದಲು ನಾನು ಕುಟುಂಬವನ್ನು ಭೇಟಿ ಮಾಡಲು ಹೋಗುತ್ತೇನೆ ಎಂದು ತಮ್ಮ ಅಭಿಪ್ರಾಯವನ್ನು ಹೊರಹಾಕಿದರು.

ಕರೆಂಟ್ ಶಾಕ್​ನಿಂದ ಅಂಗವೈಕಲ್ಯ ದೇವೇಂದ್ರ ಹೇಳುವಂತೆ 1989 ರಲ್ಲಿ ಅಪಘಾತವು ತನ್ನ ಜೀವನವನ್ನು ಬದಲಿಸಿದಾಗ ಅವರಿಗೆ ಎಂಟು ವರ್ಷ. ಒಂದು ದಿನ ಅವರು ಮರ ಏರಲು ಪ್ರಯತ್ನಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕರೆಂಟ್​ಗೆ ಸಿಕ್ಕಿಹಾಕಿಕೊಂಡರು. ವೈದ್ಯರು ಉತ್ತಮವಾಗಿ ಚಿಕಿತ್ಸೆ ನೀಡಿದರು. ಅಂತಿಮವಾಗಿ ಎಡಗೈಯನ್ನು ಕತ್ತರಿಸಬೇಕಾಯಿತು. ಅದರೆ ಇದರಿಂದ ಹತಾಶರಾಗದ ದೇವೇಂದ್ರ ಪರಿಸ್ಥಿತಿಯ ವಿರುದ್ಧ ಹೋರಾಡಲು ನಿರ್ಧರಿಸಿದರು. ತನ್ನ ಶಾಲಾ ಶಿಕ್ಷಣದ ಜೊತೆಗೆ, ಒಂದು ಕೈಯಿಂದ ಜಾವೆಲಿನ್ ಎತ್ತಿಕೊಂಡು ಕ್ರೀಡಾ ಜಗತ್ತಿನಲ್ಲಿ ಸಾಧನೆ ಮಾಡಲು ಪ್ರಾರಂಭಿಸಿದರು. ಕೋಚ್ ಆರ್.ಡಿ.ಸಿಂಗ್ ಇವರ ಪ್ರತಿಭೆಯನ್ನು ಪೋಷಿಸಿದರು. ಅದರ ಫಲವಾಗಿ ದೇವೇಂದ್ರ ಪ್ಯಾರಾಲಿಂಪಿಕ್ಸ್‌ನಲ್ಲಿ ಎರಡು ಬಾರಿ ಚಿನ್ನದ ಪದಕ ಗೆದ್ದಿದ್ದಾರೆ.

ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
ಸುಳಿವು ನೀಡಿದ ಕಳ್ಳರ ಕಾರು,  ಚೇಸ್ ಮಾಡಿದಾಗ ಪೊಲೀಸರ ಮೇಲೆ ಹಲ್ಲೆ
ಸುಳಿವು ನೀಡಿದ ಕಳ್ಳರ ಕಾರು,  ಚೇಸ್ ಮಾಡಿದಾಗ ಪೊಲೀಸರ ಮೇಲೆ ಹಲ್ಲೆ
ಹೀಗೂ ಉಂಟೆ... ಅಳತೆ ಮೀರಿದ ಬ್ಯಾಟ್ ಬಳಸಲು ರವೀಂದ್ರ ಜಡೇಜಾ ಸರ್ಕಸ್
ಹೀಗೂ ಉಂಟೆ... ಅಳತೆ ಮೀರಿದ ಬ್ಯಾಟ್ ಬಳಸಲು ರವೀಂದ್ರ ಜಡೇಜಾ ಸರ್ಕಸ್
Daily Devotional: ಮಂಗಳವಾರ ಹಾಗೂ ಶುಕ್ರವಾರ ಹಣವನ್ನು ಕೊಡಬಹುದಾ?
Daily Devotional: ಮಂಗಳವಾರ ಹಾಗೂ ಶುಕ್ರವಾರ ಹಣವನ್ನು ಕೊಡಬಹುದಾ?
Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ
Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...