AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Junior Men’s Asia Cup Hockey: ಪಾಕ್​ ಮಣಿಸಿ ಕಪ್​ ಗೆದ್ದ ಭಾರತ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ

ಇಂದು ನಡೆದ ಫೈನಲ್​ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು 2-1 ಗೋಲುಗಳ ಅಂತರದಲ್ಲಿ ಸೋಲಿಸುವ ಮೂಲಕ ಭಾರತೀಯ ಜೂನಿಯರ್ ಪುರುಷರ ಹಾಕಿ ತಂಡ ಜೂನಿಯರ್ ಏಷ್ಯಾಕಪ್ ಟೂರ್ನಿಯಲ್ಲಿ ಚಾಂಪಿಯನ್​ ಆಗಿ ಹೊರಹೊಮ್ಮಿದೆ.

Junior Men’s Asia Cup Hockey: ಪಾಕ್​ ಮಣಿಸಿ ಕಪ್​ ಗೆದ್ದ ಭಾರತ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ
ಭಾರತ ಹಾಕಿ ತಂಡ
ಗಂಗಾಧರ​ ಬ. ಸಾಬೋಜಿ
|

Updated on: Jun 02, 2023 | 10:47 PM

Share

ಇಂದು ನಡೆದ ಫೈನಲ್​ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು 2-1 ಗೋಲುಗಳ ಅಂತರದಲ್ಲಿ ಸೋಲಿಸುವ ಮೂಲಕ ಭಾರತೀಯ ಜೂನಿಯರ್ ಪುರುಷರ ಹಾಕಿ ತಂಡ ಜೂನಿಯರ್ ಏಷ್ಯಾಕಪ್ ಟೂರ್ನಿ (Junior Men’s Asia Cup Hockey) ಯಲ್ಲಿ ಚಾಂಪಿಯನ್​ ಆಗಿ ಹೊರಹೊಮ್ಮಿದೆ. ಅಂಗದ್ ಬೀರ್ ಸಿಂಗ್ ಮತ್ತು ಅರೈಜೀತ್ ಸಿಂಗ್ ಹುಂಡಾಲ್ ಅವರ ಗೋಲುಗಳ ನೆರವಿನಿಂದ ಭಾರತ 2-1 ಗೋಲುಗಳಿಂದ ಎದುರಾಳಿ ಪಾಕಿಸ್ತಾನವನ್ನು ಮಣಿಸಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಗೆದ್ದ ಭಾರತೀಯ ಜೂನಿಯರ್ ಪುರುಷರ ಹಾಕಿ ತಂಡಕ್ಕೆ ಹೃತ್ಪೂರ್ವಕ ಅಭಿನಂದನೆ ಕೋರಿದ್ದಾರೆ.

ಟ್ವೀಟ್​ ಮೂಲಕ ಶುಭ ಕೋರಿರುವ ಪ್ರಧಾನಿ ನರೇಂದ್ರ ಮೋದಿ, ಪುರುಷರ ಜೂನಿಯರ್ ಏಷ್ಯಾ ಕಪ್​ನಲ್ಲಿ ಅದ್ಭುತ ಗೆಲುವು ಸಾಧಿಸಿದ ನಮ್ಮ ಜೂನಿಯರ್ ಪುರುಷರ ಹಾಕಿ ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳು. ಅವರ ಗೆಲುವು ಬೆಳೆಯುತ್ತಿರುವ ಯುವಕರಲ್ಲಿ ಪ್ರತಿಭೆ ಮತ್ತು ದೃಢನಿಶ್ಚಯವನ್ನು ಪ್ರತಿಬಿಂಬಿಸುತ್ತದೆ. ಅವರು ಭಾರತವನ್ನು ಹೆಮ್ಮೆ ಪಡುವಂತೆ ಮಾಡಿದ್ದಾರೆ ಎಂದಿದ್ದಾರೆ.

ಇದನ್ನೂ ಓದಿ: WTC Final 2023: ಡಬ್ಲ್ಯುಟಿಸಿ ಫೈನಲ್ ಗೆದ್ದರೆ ಕ್ರಿಕೆಟ್ ದುನಿಯಾದಲ್ಲಿ ಹೊಸ ಇತಿಹಾಸ ಬರೆಯಲಿದೆ ಟೀಂ ಇಂಡಿಯಾ..!

ನಾಲ್ಕನೇ ಭಾರಿ ಪ್ರಶಸ್ತಿ ಗೆದ್ದ ಭಾರತ

ಪಂದ್ಯಾವಳಿಯ ಪ್ರತಿ ಹಂತವನ್ನು ಗೆದ್ದ ಭಾರತೀಯ ಜೂನಿಯರ್ ತಂಡವು ರಿಪಬ್ಲಿಕ್ ಆಫ್ ಕೊರಿಯಾವನ್ನು 9-1 ಗೋಲುಗಳಿಂದ ಸೋಲಿಸಿ ಪಾಕಿಸ್ತಾನವನ್ನು ಸೋಲಿಸಿ ಫೈನಲ್​ಗೆ ಪ್ರವೇಶಿಸಿತು. 2004, 2008 ಮತ್ತು 2015 ರಲ್ಲಿ ಗೆಲುವು ಸಾಧಿಸಿದ ನಂತರ, ಭಾರತೀಯ ಜೂನಿಯರ್ ತಂಡವು ಜೂನಿಯರ್ ಏಷ್ಯಾ ಕಪ್​ನ ಅತ್ಯಂತ ಯಶಸ್ವಿ ತಂಡವಾಗಿದೆ.

ಇದನ್ನೂ ಓದಿ: ಎಸಿಸಿ ಉದಯೋನ್ಮುಖ ಮಹಿಳಾ ಏಷ್ಯಾಕಪ್​ಗೆ ಭಾರತ ‘ಎ’ ತಂಡ ಪ್ರಕಟ; ಶ್ವೇತಾ ಸೆಹ್ರಾವತ್​ಗೆ ನಾಯಕತ್ವ

ತಲಾ 2ಲಕ್ಷ ರೂ. ಬಹುಮಾನ

ಏಷ್ಯಾ ಕಪ್​ ಗೆದ್ದ ಭಾರತ ತಂಡದ ಸದಸ್ಯರಿಗೆ ಹಾಕಿ ಇಂಡಿಯಾ ತಲಾ 2 ಲಕ್ಷ ರೂ. ಹಾಗೂ ಕೋಚಿಂಗ್​ ಸಿಬ್ಬಂದಿಗೆ ತಲಾ 1 ಲಕ್ಷ ರೂ, ನಗದು ಬಹುಮಾನವನ್ನು ಪ್ರಕಟಿಸಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ