AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Junior Men’s Asia Cup Hockey: ಪಾಕ್​ ಮಣಿಸಿ ಕಪ್​ ಗೆದ್ದ ಭಾರತ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ

ಇಂದು ನಡೆದ ಫೈನಲ್​ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು 2-1 ಗೋಲುಗಳ ಅಂತರದಲ್ಲಿ ಸೋಲಿಸುವ ಮೂಲಕ ಭಾರತೀಯ ಜೂನಿಯರ್ ಪುರುಷರ ಹಾಕಿ ತಂಡ ಜೂನಿಯರ್ ಏಷ್ಯಾಕಪ್ ಟೂರ್ನಿಯಲ್ಲಿ ಚಾಂಪಿಯನ್​ ಆಗಿ ಹೊರಹೊಮ್ಮಿದೆ.

Junior Men’s Asia Cup Hockey: ಪಾಕ್​ ಮಣಿಸಿ ಕಪ್​ ಗೆದ್ದ ಭಾರತ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ
ಭಾರತ ಹಾಕಿ ತಂಡ
ಗಂಗಾಧರ​ ಬ. ಸಾಬೋಜಿ
|

Updated on: Jun 02, 2023 | 10:47 PM

Share

ಇಂದು ನಡೆದ ಫೈನಲ್​ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು 2-1 ಗೋಲುಗಳ ಅಂತರದಲ್ಲಿ ಸೋಲಿಸುವ ಮೂಲಕ ಭಾರತೀಯ ಜೂನಿಯರ್ ಪುರುಷರ ಹಾಕಿ ತಂಡ ಜೂನಿಯರ್ ಏಷ್ಯಾಕಪ್ ಟೂರ್ನಿ (Junior Men’s Asia Cup Hockey) ಯಲ್ಲಿ ಚಾಂಪಿಯನ್​ ಆಗಿ ಹೊರಹೊಮ್ಮಿದೆ. ಅಂಗದ್ ಬೀರ್ ಸಿಂಗ್ ಮತ್ತು ಅರೈಜೀತ್ ಸಿಂಗ್ ಹುಂಡಾಲ್ ಅವರ ಗೋಲುಗಳ ನೆರವಿನಿಂದ ಭಾರತ 2-1 ಗೋಲುಗಳಿಂದ ಎದುರಾಳಿ ಪಾಕಿಸ್ತಾನವನ್ನು ಮಣಿಸಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಗೆದ್ದ ಭಾರತೀಯ ಜೂನಿಯರ್ ಪುರುಷರ ಹಾಕಿ ತಂಡಕ್ಕೆ ಹೃತ್ಪೂರ್ವಕ ಅಭಿನಂದನೆ ಕೋರಿದ್ದಾರೆ.

ಟ್ವೀಟ್​ ಮೂಲಕ ಶುಭ ಕೋರಿರುವ ಪ್ರಧಾನಿ ನರೇಂದ್ರ ಮೋದಿ, ಪುರುಷರ ಜೂನಿಯರ್ ಏಷ್ಯಾ ಕಪ್​ನಲ್ಲಿ ಅದ್ಭುತ ಗೆಲುವು ಸಾಧಿಸಿದ ನಮ್ಮ ಜೂನಿಯರ್ ಪುರುಷರ ಹಾಕಿ ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳು. ಅವರ ಗೆಲುವು ಬೆಳೆಯುತ್ತಿರುವ ಯುವಕರಲ್ಲಿ ಪ್ರತಿಭೆ ಮತ್ತು ದೃಢನಿಶ್ಚಯವನ್ನು ಪ್ರತಿಬಿಂಬಿಸುತ್ತದೆ. ಅವರು ಭಾರತವನ್ನು ಹೆಮ್ಮೆ ಪಡುವಂತೆ ಮಾಡಿದ್ದಾರೆ ಎಂದಿದ್ದಾರೆ.

ಇದನ್ನೂ ಓದಿ: WTC Final 2023: ಡಬ್ಲ್ಯುಟಿಸಿ ಫೈನಲ್ ಗೆದ್ದರೆ ಕ್ರಿಕೆಟ್ ದುನಿಯಾದಲ್ಲಿ ಹೊಸ ಇತಿಹಾಸ ಬರೆಯಲಿದೆ ಟೀಂ ಇಂಡಿಯಾ..!

ನಾಲ್ಕನೇ ಭಾರಿ ಪ್ರಶಸ್ತಿ ಗೆದ್ದ ಭಾರತ

ಪಂದ್ಯಾವಳಿಯ ಪ್ರತಿ ಹಂತವನ್ನು ಗೆದ್ದ ಭಾರತೀಯ ಜೂನಿಯರ್ ತಂಡವು ರಿಪಬ್ಲಿಕ್ ಆಫ್ ಕೊರಿಯಾವನ್ನು 9-1 ಗೋಲುಗಳಿಂದ ಸೋಲಿಸಿ ಪಾಕಿಸ್ತಾನವನ್ನು ಸೋಲಿಸಿ ಫೈನಲ್​ಗೆ ಪ್ರವೇಶಿಸಿತು. 2004, 2008 ಮತ್ತು 2015 ರಲ್ಲಿ ಗೆಲುವು ಸಾಧಿಸಿದ ನಂತರ, ಭಾರತೀಯ ಜೂನಿಯರ್ ತಂಡವು ಜೂನಿಯರ್ ಏಷ್ಯಾ ಕಪ್​ನ ಅತ್ಯಂತ ಯಶಸ್ವಿ ತಂಡವಾಗಿದೆ.

ಇದನ್ನೂ ಓದಿ: ಎಸಿಸಿ ಉದಯೋನ್ಮುಖ ಮಹಿಳಾ ಏಷ್ಯಾಕಪ್​ಗೆ ಭಾರತ ‘ಎ’ ತಂಡ ಪ್ರಕಟ; ಶ್ವೇತಾ ಸೆಹ್ರಾವತ್​ಗೆ ನಾಯಕತ್ವ

ತಲಾ 2ಲಕ್ಷ ರೂ. ಬಹುಮಾನ

ಏಷ್ಯಾ ಕಪ್​ ಗೆದ್ದ ಭಾರತ ತಂಡದ ಸದಸ್ಯರಿಗೆ ಹಾಕಿ ಇಂಡಿಯಾ ತಲಾ 2 ಲಕ್ಷ ರೂ. ಹಾಗೂ ಕೋಚಿಂಗ್​ ಸಿಬ್ಬಂದಿಗೆ ತಲಾ 1 ಲಕ್ಷ ರೂ, ನಗದು ಬಹುಮಾನವನ್ನು ಪ್ರಕಟಿಸಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
ಬೆಂಗಳೂರಿನಲ್ಲಿ ರಾತ್ರಿಯೆಲ್ಲ ಟ್ರಾಫಿಕ್ ಜಾಮ್, ಮೆಜೆಸ್ಟಿಕ್​ನಲ್ಲಿ ಜನವೋ ಜನ
ಬೆಂಗಳೂರಿನಲ್ಲಿ ರಾತ್ರಿಯೆಲ್ಲ ಟ್ರಾಫಿಕ್ ಜಾಮ್, ಮೆಜೆಸ್ಟಿಕ್​ನಲ್ಲಿ ಜನವೋ ಜನ
ಬೇವು ಬೆಲ್ಲ ಆಯುಷ್ಯ ವೃದ್ಧಿಸುತ್ತದೆ! ಅದು ಹೇಗೆ?
ಬೇವು ಬೆಲ್ಲ ಆಯುಷ್ಯ ವೃದ್ಧಿಸುತ್ತದೆ! ಅದು ಹೇಗೆ?
ಯುಗಾದಿಯಿಂದ ಈ ರಾಶಿಯವರ ಜೀವನ ಬೆಲ್ಲದಂತೆ ಸಿಹಿಯಾಗಿರುತ್ತದೆ
ಯುಗಾದಿಯಿಂದ ಈ ರಾಶಿಯವರ ಜೀವನ ಬೆಲ್ಲದಂತೆ ಸಿಹಿಯಾಗಿರುತ್ತದೆ
ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಜಾರಿಬಿದ್ದ ಯುವಕ ಬದುಕುಳಿದಿದ್ದು ಹೇಗೆ?
ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಜಾರಿಬಿದ್ದ ಯುವಕ ಬದುಕುಳಿದಿದ್ದು ಹೇಗೆ?
‘ಆಕಾಶ್’ ಚಿತ್ರೀಕರಣದ ನೆನಪುಗಳು: ವಿಡಿಯೋ ಹಂಚಿಕೊಂಡ ರಮ್ಯಾ
‘ಆಕಾಶ್’ ಚಿತ್ರೀಕರಣದ ನೆನಪುಗಳು: ವಿಡಿಯೋ ಹಂಚಿಕೊಂಡ ರಮ್ಯಾ
ಭಾರೀ ಮಳೆ ಗಾಳಿಗೆ ಧರೆಗುರುಳಿದ ಬೃಹತ್ ನೇಮ್ ಬೋರ್ಡ್ ಪಿಲ್ಲರ್
ಭಾರೀ ಮಳೆ ಗಾಳಿಗೆ ಧರೆಗುರುಳಿದ ಬೃಹತ್ ನೇಮ್ ಬೋರ್ಡ್ ಪಿಲ್ಲರ್
ಒಡೆದ ತುಂಗಭದ್ರಾ ಎಡದಂಡೆ ಕಾಲುವೆ, ಸಿಕ್ತು ಬೃಹತ್ ಗಾತ್ರದ​ ಮೀನು
ಒಡೆದ ತುಂಗಭದ್ರಾ ಎಡದಂಡೆ ಕಾಲುವೆ, ಸಿಕ್ತು ಬೃಹತ್ ಗಾತ್ರದ​ ಮೀನು
ಭಾವೈಕ್ಯತೆ ಸಾರಿದ ವಿನೋದ್ ರಾಜ್: ಮಸೀದಿಗಳಲ್ಲಿ ಹಣ್ಣು ವಿತರಣೆ: ವಿಡಿಯೋ
ಭಾವೈಕ್ಯತೆ ಸಾರಿದ ವಿನೋದ್ ರಾಜ್: ಮಸೀದಿಗಳಲ್ಲಿ ಹಣ್ಣು ವಿತರಣೆ: ವಿಡಿಯೋ
ಕಾಂಗ್ರೆಸ್​​​ ಹೈಕ,ಮಾಂಡ್​​​ಗೆ ಎಚ್ಚರಿಕೆ ನೀಡಿದ ಮುಸ್ಲಿಂ ಮುಖಂಡರು!
ಕಾಂಗ್ರೆಸ್​​​ ಹೈಕ,ಮಾಂಡ್​​​ಗೆ ಎಚ್ಚರಿಕೆ ನೀಡಿದ ಮುಸ್ಲಿಂ ಮುಖಂಡರು!
ರಾಹುಲ್ ಗಾಂಧಿಯನ್ನು ಟಪೋರಿ ಎಂದು ಕರೆದ ಕಂಗನಾ ರಣಾವತ್
ರಾಹುಲ್ ಗಾಂಧಿಯನ್ನು ಟಪೋರಿ ಎಂದು ಕರೆದ ಕಂಗನಾ ರಣಾವತ್