Junior Men’s Asia Cup Hockey: ಪಾಕ್​ ಮಣಿಸಿ ಕಪ್​ ಗೆದ್ದ ಭಾರತ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ

ಇಂದು ನಡೆದ ಫೈನಲ್​ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು 2-1 ಗೋಲುಗಳ ಅಂತರದಲ್ಲಿ ಸೋಲಿಸುವ ಮೂಲಕ ಭಾರತೀಯ ಜೂನಿಯರ್ ಪುರುಷರ ಹಾಕಿ ತಂಡ ಜೂನಿಯರ್ ಏಷ್ಯಾಕಪ್ ಟೂರ್ನಿಯಲ್ಲಿ ಚಾಂಪಿಯನ್​ ಆಗಿ ಹೊರಹೊಮ್ಮಿದೆ.

Junior Men’s Asia Cup Hockey: ಪಾಕ್​ ಮಣಿಸಿ ಕಪ್​ ಗೆದ್ದ ಭಾರತ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ
ಭಾರತ ಹಾಕಿ ತಂಡ

Updated on: Jun 02, 2023 | 10:47 PM

ಇಂದು ನಡೆದ ಫೈನಲ್​ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು 2-1 ಗೋಲುಗಳ ಅಂತರದಲ್ಲಿ ಸೋಲಿಸುವ ಮೂಲಕ ಭಾರತೀಯ ಜೂನಿಯರ್ ಪುರುಷರ ಹಾಕಿ ತಂಡ ಜೂನಿಯರ್ ಏಷ್ಯಾಕಪ್ ಟೂರ್ನಿ (Junior Men’s Asia Cup Hockey) ಯಲ್ಲಿ ಚಾಂಪಿಯನ್​ ಆಗಿ ಹೊರಹೊಮ್ಮಿದೆ. ಅಂಗದ್ ಬೀರ್ ಸಿಂಗ್ ಮತ್ತು ಅರೈಜೀತ್ ಸಿಂಗ್ ಹುಂಡಾಲ್ ಅವರ ಗೋಲುಗಳ ನೆರವಿನಿಂದ ಭಾರತ 2-1 ಗೋಲುಗಳಿಂದ ಎದುರಾಳಿ ಪಾಕಿಸ್ತಾನವನ್ನು ಮಣಿಸಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಗೆದ್ದ ಭಾರತೀಯ ಜೂನಿಯರ್ ಪುರುಷರ ಹಾಕಿ ತಂಡಕ್ಕೆ ಹೃತ್ಪೂರ್ವಕ ಅಭಿನಂದನೆ ಕೋರಿದ್ದಾರೆ.

ಟ್ವೀಟ್​ ಮೂಲಕ ಶುಭ ಕೋರಿರುವ ಪ್ರಧಾನಿ ನರೇಂದ್ರ ಮೋದಿ, ಪುರುಷರ ಜೂನಿಯರ್ ಏಷ್ಯಾ ಕಪ್​ನಲ್ಲಿ ಅದ್ಭುತ ಗೆಲುವು ಸಾಧಿಸಿದ ನಮ್ಮ ಜೂನಿಯರ್ ಪುರುಷರ ಹಾಕಿ ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳು. ಅವರ ಗೆಲುವು ಬೆಳೆಯುತ್ತಿರುವ ಯುವಕರಲ್ಲಿ ಪ್ರತಿಭೆ ಮತ್ತು ದೃಢನಿಶ್ಚಯವನ್ನು ಪ್ರತಿಬಿಂಬಿಸುತ್ತದೆ. ಅವರು ಭಾರತವನ್ನು ಹೆಮ್ಮೆ ಪಡುವಂತೆ ಮಾಡಿದ್ದಾರೆ ಎಂದಿದ್ದಾರೆ.

ಇದನ್ನೂ ಓದಿ: WTC Final 2023: ಡಬ್ಲ್ಯುಟಿಸಿ ಫೈನಲ್ ಗೆದ್ದರೆ ಕ್ರಿಕೆಟ್ ದುನಿಯಾದಲ್ಲಿ ಹೊಸ ಇತಿಹಾಸ ಬರೆಯಲಿದೆ ಟೀಂ ಇಂಡಿಯಾ..!

ನಾಲ್ಕನೇ ಭಾರಿ ಪ್ರಶಸ್ತಿ ಗೆದ್ದ ಭಾರತ

ಪಂದ್ಯಾವಳಿಯ ಪ್ರತಿ ಹಂತವನ್ನು ಗೆದ್ದ ಭಾರತೀಯ ಜೂನಿಯರ್ ತಂಡವು ರಿಪಬ್ಲಿಕ್ ಆಫ್ ಕೊರಿಯಾವನ್ನು 9-1 ಗೋಲುಗಳಿಂದ ಸೋಲಿಸಿ ಪಾಕಿಸ್ತಾನವನ್ನು ಸೋಲಿಸಿ ಫೈನಲ್​ಗೆ ಪ್ರವೇಶಿಸಿತು. 2004, 2008 ಮತ್ತು 2015 ರಲ್ಲಿ ಗೆಲುವು ಸಾಧಿಸಿದ ನಂತರ, ಭಾರತೀಯ ಜೂನಿಯರ್ ತಂಡವು ಜೂನಿಯರ್ ಏಷ್ಯಾ ಕಪ್​ನ ಅತ್ಯಂತ ಯಶಸ್ವಿ ತಂಡವಾಗಿದೆ.

ಇದನ್ನೂ ಓದಿ: ಎಸಿಸಿ ಉದಯೋನ್ಮುಖ ಮಹಿಳಾ ಏಷ್ಯಾಕಪ್​ಗೆ ಭಾರತ ‘ಎ’ ತಂಡ ಪ್ರಕಟ; ಶ್ವೇತಾ ಸೆಹ್ರಾವತ್​ಗೆ ನಾಯಕತ್ವ

ತಲಾ 2ಲಕ್ಷ ರೂ. ಬಹುಮಾನ

ಏಷ್ಯಾ ಕಪ್​ ಗೆದ್ದ ಭಾರತ ತಂಡದ ಸದಸ್ಯರಿಗೆ ಹಾಕಿ ಇಂಡಿಯಾ ತಲಾ 2 ಲಕ್ಷ ರೂ. ಹಾಗೂ ಕೋಚಿಂಗ್​ ಸಿಬ್ಬಂದಿಗೆ ತಲಾ 1 ಲಕ್ಷ ರೂ, ನಗದು ಬಹುಮಾನವನ್ನು ಪ್ರಕಟಿಸಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us