AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ಪಾಕಿಸ್ತಾನಕ್ಕೆ ಬಿಗ್ ಶಾಕ್..ಟೀಮ್ ಇಂಡಿಯಾ ವಿರುದ್ದದ ಪಂದ್ಯಕ್ಕೆ ಪ್ರಮುಖ ಬೌಲರ್ ಔಟ್?

Asia Cup 2022: ಈ ಬಾರಿಯ ಏಷ್ಯಾಕಪ್ ಟಿ20 ಮಾದರಿಯಲ್ಲಿ ನಡೆಯಲಿದೆ. ಆಗಸ್ಟ್ 27 ರಿಂದ ಯುಎಇಯಲ್ಲಿ ಪ್ರಾರಂಭವಾಗುವ ಈ ಪಂದ್ಯಾವಳಿಯಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಆಗಸ್ಟ್ 28 ರಂದು ಮುಖಾಮುಖಿಯಾಗಲಿದೆ.

IND vs PAK: ಪಾಕಿಸ್ತಾನಕ್ಕೆ ಬಿಗ್ ಶಾಕ್..ಟೀಮ್ ಇಂಡಿಯಾ ವಿರುದ್ದದ ಪಂದ್ಯಕ್ಕೆ ಪ್ರಮುಖ ಬೌಲರ್ ಔಟ್?
Pakistan
TV9 Web
| Updated By: ಝಾಹಿರ್ ಯೂಸುಫ್|

Updated on: Aug 14, 2022 | 11:25 AM

Share

ಈ ಬಾರಿಯ ಏಷ್ಯಾಕಪ್ ತಂಡದಲ್ಲಿ ಟೀಮ್ ಇಂಡಿಯಾದ (Team India) ಪ್ರಮುಖ ವೇಗಿಗಳಾದ ಜಸ್​ಪ್ರೀತ್ ಬುಮ್ರಾ ಹಾಗೂ ಹರ್ಷಲ್ ಪಟೇಲ್ ಹೊರಗುಳಿದಿದ್ದಾರೆ. ಇದು ಆಗಸ್ಟ್​ 28 ರಂದು ನಡೆಯಲಿರುವ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ್  ವಿರುದ್ದದ ಪಂದ್ಯದಲ್ಲಿ ಪಾಕ್ ತಂಡಕ್ಕೆ ಪ್ಲಸ್ ಪಾಯಿಂಟ್ ಆಗಲಿದೆ. ಇದೇ ಖುಷಿಯಲ್ಲಿದ್ದ ಪಾಕ್ ತಂಡವು ಕೂಡ ಇದೀಗ ಭಾರೀ ಹಿನ್ನಡೆ ಎದುರಿಸುವಂತಾಗಿದೆ. ಪಾಕಿಸ್ತಾನದ ವೇಗದ ಬೌಲರ್ ಶಾಹೀನ್ ಅಫ್ರಿದಿ ಭಾರತ ವಿರುದ್ಧದ ಪಂದ್ಯದಲ್ಲಿ ಆಡುವುದು ಅನುಮಾನ ಎಂಬ ಸುದ್ದಿಯೊಂದು ಹೊರಬಿದ್ದಿದೆ.

ಏಕೆಂದರೆ ಗಾಯಗೊಂಡಿರುವ ಶಾಹೀನ್ ಅಫ್ರಿದಿ ನೆದರ್​ಲ್ಯಾಂಡ್ಸ್ ವಿರುದ್ದದ ಸರಣಿಯಲ್ಲಿ ಆಡುತ್ತಿಲ್ಲ. ಅವರಿಗೆ ಸಂಪೂರ್ಣ ವಿಶ್ರಾಂತಿ ನೀಡಲಾಗುತ್ತಿದೆ. ಇದಾಗ್ಯೂ ಅವರು ಏಷ್ಯಾಕಪ್ ಆಡಲಿದ್ದಾರಾ ಎಂಬುದು ಇನ್ನಷ್ಟೇ ನಿರ್ಧಾರವಾಗಬೇಕಿದೆ. ಶಾಹೀನ್ ಅಫ್ರಿದಿ ಅವರ ಫಿಟ್​ನೆಸ್​ ಬಗ್ಗೆ ಮಾತನಾಡಿರುವ ಪಾಕಿಸ್ತಾನದ ನಾಯಕ ಬಾಬರ್ ಆಜಂ, ನಮ್ಮ ಎಡಗೈ ವೇಗದ ಬೌಲರ್ ತಂಡದ ವೈದ್ಯರ ಮೇಲ್ವಿಚಾರಣೆಯಲ್ಲಿದ್ದಾರೆ. ಫಿಟ್ ಆಗಿದ್ದರೆ ಮಾತ್ರ ಅವರು ನೆದರ್ಲ್ಯಾಂಡ್ಸ್​ ವಿರುದ್ದ ಆಡಲಿದ್ದಾರೆ ಎಂದು ತಿಳಿಸಿದ್ದಾರೆ.

ಮುಂಬರುವ ಏಷ್ಯಾಕಪ್ ಮತ್ತು ಟಿ20 ವಿಶ್ವಕಪ್ ಅನ್ನು ಕೂಡ ಪರಿಗಣನೆಗೆ ತೆಗೆದುಕೊಂಡು ತಯಾರಿಗಳನ್ನು ನಡೆಸಲಾಗುತ್ತಿದೆ. ಹೀಗಾಗಿ ನಾವು ಆಟಗಾರರ ಫಿಟ್​ನೆಸ್ ಬಗ್ಗೆ ಸುದೀರ್ಘ ಯೋಜನೆಯೊಂದಿಗೆ ಆಲೋಚಿಸುತ್ತಿದ್ದೇವೆ ಎಂದು ಬಾಬರ್ ಆಜಂ ಹೇಳಿದ್ದಾರೆ. ಇದಾಗ್ಯೂ ಅಫ್ರಿದಿ ಏಷ್ಯಾಕಪ್ ಆಡಲಿದ್ದಾರಾ ಎಂಬುದರ ಬಗ್ಗೆ ಪಾಕ್ ನಾಯಕ ಯಾವುದೇ ಸ್ಪಷ್ಟನೆ ನೀಡಿಲ್ಲ. ಹೀಗಾಗಿ ಶಾಹೀನ್ ಅಫ್ರಿದಿ ಕೂಡ ಏಷ್ಯಾಕಪ್​ನಿಂದ ಹೊರಗುಳಿಯುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ
Image
Team India: 7 ತಿಂಗಳಲ್ಲಿ 7 ನಾಯಕರು: ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ
Image
ಸಚಿನ್, ಧೋನಿಗೂ ಸಿಕ್ಕಿಲ್ಲ ಈ ಗೌರವ: ಇಂಗ್ಲೆಂಡ್ ಕ್ರಿಕೆಟ್ ಸ್ಟೇಡಿಯಂಗೆ ಭಾರತೀಯ ಕ್ರಿಕೆಟಿಗನ ಹೆಸರು..!
Image
Cheteshwar Pujara: ಒಟ್ಟು 997 ರನ್​: ಕೌಂಟಿ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಪೂಜಾರ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಕಳೆದ ವರ್ಷ ನಡೆದ ಟಿ20 ವಿಶ್ವಕಪ್​​ನಲ್ಲಿ ಶಾಹೀನ್ ಅಫ್ರಿದಿ ಟೀಮ್ ಇಂಡಿಯಾದ ಅಗ್ರ ಕ್ರಮಾಂಕದ ಬ್ಯಾಟ್ಸ್​ಮನ್​ಗಳನ್ನು ಪೆವಿಲಿಯನ್​ಗೆ ಅಟ್ಟಿದ್ದರು. ಕೆಎಲ್ ರಾಹುಲ್, ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರ ವಿಕೆಟ್​ಗಳನ್ನು ಪಡೆಯುವ ಮೂಲಕ ಮಿಂಚಿದ್ದರು.

ಅಲ್ಲದೆ ಅವರ ಮಾರಕ ದಾಳಿಯಿಂದ ಆರಂಭಿಕ ಆಘಾತಕ್ಕೊಳಗಾದ ಟೀಮ್ ಇಂಡಿಯಾ ಬೃಹತ್ ಮೊತ್ತ ಪೇರಿಸುವಲ್ಲಿ ವಿಫಲರಾಗಿ ಪಾಕ್ ಮುಂದೆ ಮೊದಲ ಬಾರಿಗೆ ವಿಶ್ವಕಪ್​ನಲ್ಲಿ ಮಂಡಿಯೂರಿತು. ಈ ಸೋಲಿನ ಸೇಡನ್ನು ತೀರಿಸುವ ತವಕದಲ್ಲಿ ಟೀಮ್ ಇಂಡಿಯಾವಿದ್ದು, ಹೀಗಾಗಿ ಆಗಸ್ಟ್ 28 ರಂದು ನಡೆಯಲಿರುವ ಭಾರತ-ಪಾಕ್ ಪಂದ್ಯವನ್ನು ಅಭಿಮಾನಿಗಳು ಎದುರು ನೋಡುತ್ತಿದ್ದಾರೆ.

ಈ ಬಾರಿಯ ಏಷ್ಯಾಕಪ್ ಟಿ20 ಮಾದರಿಯಲ್ಲಿ ನಡೆಯಲಿದೆ. ಆಗಸ್ಟ್ 27 ರಿಂದ ಯುಎಇಯಲ್ಲಿ ಪ್ರಾರಂಭವಾಗುವ ಈ ಪಂದ್ಯಾವಳಿಯಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಆಗಸ್ಟ್ 28 ರಂದು ಮುಖಾಮುಖಿಯಾಗಲಿದೆ. ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯವು ಭಾರತೀಯ ಕಾಲಮಾನ ರಾತ್ರಿ 7.30 ಕ್ಕೆ ಶುರುವಾಗಲಿದೆ.

ಏಷ್ಯಾಕಪ್​ಗಾಗಿ ಪಾಕಿಸ್ತಾನ್ ತಂಡ ಹೀಗಿದೆ:

ಬಾಬರ್ ಆಜಂ (ನಾಯಕ), ಶಾದಾಬ್ ಖಾನ್ (ಉಪನಾಯಕ), ಆಸಿಫ್ ಅಲಿ, ಫಖರ್ ಜಮಾನ್, ಹೈದರ್ ಅಲಿ, ಹಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಖುಷ್ದಿಲ್ ಶಾ, ಮೊಹಮ್ಮದ್ ನವಾಜ್, ಮೊಹಮ್ಮದ್ ರಿಜ್ವಾನ್, ಮೊಹಮ್ಮದ್, ವಾಸಿಮ್ ಜೂನಿಯರ್, ನಸೀಮ್ ಶಾ, ಶಾಹೀನ್ ಶಾ ಆಫ್ರಿದಿ, ಶಾನವಾಜ್ ದಹಾನಿ ಮತ್ತು ಉಸ್ಮಾನ್ ಖಾದಿರ್.

ಏಷ್ಯಾಕಪ್​ಗಾಗಿ ಟೀಮ್ ಇಂಡಿಯಾ ಹೀಗಿದೆ:

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಆರ್ ಅಶ್ವಿನ್, ಯುಜುವೇಂದ್ರ ಚಾಹಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಅವೇಶ್ ಖಾನ್.

ಮೀಸಲು ಆಟಗಾರರು: ಅಕ್ಷರ್ ಪಟೇಲ್, ಶ್ರೇಯಸ್ ಅಯ್ಯರ್ ಹಾಗೂ ದೀಪಕ್ ಚಹರ್.

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ