AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

K Gowtham: 9.25 ಕೋಟಿಗೆ ಚೆನ್ನೈ ಸೂಪರ್​ ಕಿಂಗ್ಸ್​ ಪಾಲಾದ ಕನ್ನಡಿಗ ಕೆ. ಗೌತಮ್​..

IPL 2021 Auction: ಕೃಷ್ಣಪ್ಪ ಗೌತಮ್​ ಈ ಮೊದಲು ರಾಜಸ್ಥಾನ ರಾಯಲ್ಸ್​ ತಂಡವನ್ನು ಪ್ರತಿನಿಧಿಸಿದ್ದರು. ಆದರೆ, ಅಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿರಲಿಲ್ಲ.

K Gowtham: 9.25 ಕೋಟಿಗೆ ಚೆನ್ನೈ ಸೂಪರ್​ ಕಿಂಗ್ಸ್​ ಪಾಲಾದ ಕನ್ನಡಿಗ ಕೆ. ಗೌತಮ್​..
ಕೆ. ಗೌತಮ್
ರಾಜೇಶ್ ದುಗ್ಗುಮನೆ
|

Updated on: Feb 18, 2021 | 5:50 PM

Share

ಐಪಿಎಲ್​ನಲ್ಲಿ ಚೆನ್ನೈ ಹಾಗೂ ಬೆಂಗಳೂರು ತಂಡಗಳ ನಡುವಣ ಮ್ಯಾಚ್​ ಯಾವಾಗಲೂ ಹೈ ವೋಲ್ಟೇಜ್​ನಿಂದ ಕೂಡಿರುತ್ತದೆ. ಇದಕ್ಕೆ ಕಾರಣ, ತಮಿಳುನಾಡು ಹಾಗೂ ಕರ್ನಾಟಕದ ನಡುವೆ ಇರುವ ವೈಷಮ್ಯಗಳು ಕಾರಣವಾಗಿರಬಹುದು. ಆರ್​ಸಿಬಿಗೆ ವಿರಾಟ್​ ಕೊಹ್ಲಿ ನಾಯಕನಾದರೆ, ಚೆನ್ನೈಗೆ ಧೋನಿ ನಾಯಕ. ವಿರಾಟ್​-ಧೋನಿ ಅಭಿಮಾನಿಗಳ ನಡುವೆ ಶೀತಲ ಸಮರ ನಡೆಯುತ್ತಲೇ ಇರುತ್ತದೆ ಎನ್ನುವುದು ಗುಟ್ಟಾಗೇನು ಉಳಿದಿಲ್ಲ. ಹೀಗಿರುವಾಗಲೇ ಇಂದಿನ ಐಪಿಎಲ್​ ಹರಾಜಿನಲ್ಲಿ ಕನ್ನಡಿಗ ಕೃಷ್ಣಪ್ಪ ಗೌತಮ್​ ದೊಡ್ಡ ಮೊತ್ತಕ್ಕೆ ಚೆನ್ನೈ ಪಾಲಾಗಿದ್ದಾರೆ.

ಕೃಷ್ಣಪ್ಪ ಗೌತಮ್​ ಈ ಮೊದಲು ರಾಜಸ್ಥಾನ ರಾಯಲ್ಸ್​ ತಂಡವನ್ನು ಪ್ರತಿನಿಧಿಸಿದ್ದರು. ಆದರೆ, ಅಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿರಲಿಲ್ಲ. ಹೀಗಾಗಿ ಅವರನ್ನು ತಂಡದಿಂದ ಕೈಬಿಡಲಾಗಿತ್ತು. ಆದರೆ, ಇಂದಿನ ಹರಾಜಿನಲ್ಲಿ ದೊಡ್ಡ ಮೊತ್ತಕ್ಕೆ ಗೌತಮ್​ ಸೇಲ್​ ಆಗಿದ್ದಾರೆ.

ಗೌತಮ್​ ಮೂಲ ಬೆಲೆ 20 ಲಕ್ಷ ರೂಪಾಯಿ ಆಗಿತ್ತು. ಒಂದೊಂದೇ ತಂಡಗಳು ಗೌತಮ್​ ಮೇಲೆ ಬಿಡ್​ ಮಾಡಲು ಆರಂಭಿಸಿದ್ದವು. ಗೌತಮ್​ನನ್ನು ಪಡೆಯಲು ಡೆಲ್ಲಿ ಕ್ಯಾಪಿಟಲ್ಸ್​, ಸನ್​ ರೈಸರ್ಸ್​ ಹೈದರಾಬಾದ್​ ಹಾಗೂ ಕೋಲ್ಕತ್ತ ನೈಟ್​ ರೈಡರ್ಸ್​ ನಡುವೆ ಬಿಗ್​ ಫೈಟ್​ ಏರ್ಪಟ್ಟಿತ್ತು. ಕೊನೆಗೆ ಸಿಎಸ್​ಕೆ ಕೂಡ ಈ ರೇಸ್​ನಲ್ಲಿ ಸೇರಿಕೊಂಡು, ಅಂತಿಮವಾಗಿ 9.25 ಕೋಟಿ ರೂಪಾಯಿಗೆ ಗೌತಮ್​ರನ್ನು ಖರೀದಿಸಿತ್ತು.

ದಾಖಲೆ ಬರೆದ ಕ್ರಿಸ್​ ಮಾರಿಸ್​..

2021ರ ಐಪಿಎಲ್​ ಹರಾಜು ಪ್ರಕ್ರಿಯೆಯಲ್ಲಿ ಕ್ರಿಸ್​ ಮೊರಿಸ್​ 16.25 ಕೋಟಿ ರೂಪಾಯಿಗೆ ರಾಜಸ್ಥಾನ್​ ರಾಯಲ್ಸ್​ ಪಾಲಾಗಿದ್ದಾರೆ. ಈ ಮೂಲಕ ಅವರು ಐಪಿಎಲ್​ ಇತಿಹಾಸದಲ್ಲೇ ಹೊಸ ದಾಖಲೆ ಸೃಷ್ಟಿಸಿದ್ದಾರೆ. ಇಂದಿನ ಹರಾಜು ಪ್ರಕ್ರಿಯೆಯಲ್ಲಿ ಕ್ರಿಸ್​ ಮೊರಿಸ್​ ಮೂಲ ಬೆಲೆ 75 ಲಕ್ಷ ರೂಪಾಯಿ ಇತ್ತು. ದಕ್ಷಿಣ ಆಫ್ರಿಕಾದ ಆಲ್​ರೌಂಡರ್​ ಕ್ರಿಸ್​ 2020ರಲ್ಲಿ ಆರ್​ಸಿಬಿ ಪರ ಆಡಿದ್ದರು. ಗಾಯದ ಸಮಸ್ಯೆಯಿಂದ ಕೆಲ ಮ್ಯಾಚ್​ಗಳಿಗೆ ಅವರು ಅಲಭ್ಯರಾಗಿದ್ದರು. ಆದರೆ, ಆಡಿದ ಕೆಲವೇ ಮ್ಯಾಚ್​ಗಳಲ್ಲಿ ಅವರು ಮಿಂಚಿದ್ದರು. ಆದಾಗ್ಯೂ, ಆರ್​ಸಿಬಿ ಅವರನ್ನು ತಂಡದಿಂದ ಕೈಬಿಟ್ಟಿತ್ತು.

 ಇದನ್ನೂ ಓದಿ: Chris Morris; IPL Auction 2021: 16.25 ಕೋಟಿ ರೂಪಾಯಿಗೆ ಮಾರಾಟವಾಗಿ ಹೊಸ ದಾಖಲೆ ಬರೆದ ಕ್ರಿಸ್​ ಮೊರಿಸ್​

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ