AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PT Usha: ಭಾರತದ ಗೋಲ್ಡನ್ ಗರ್ಲ್ ಪಿಟಿ ಉಷಾ ವಿರುದ್ಧ ವಂಚನೆ ಪ್ರಕರಣ ದಾಖಲಿಸಿದ ಕೇರಳ ಪೊಲೀಸರು

PT Usha: ಉಷಾ ಬಿಲ್ಡರ್ ಜೊತೆ ಸೇರಿ ತನಗೆ ಮೋಸ ಮಾಡಿದ್ದಾರೆ ಎಂದು ಜೋಸೆಫ್ ಆರೋಪಿಸಿದ್ದಾರೆ. ಅವರ ದೂರನ್ನು ಕೋಝಿಕ್ಕೋಡ್ ಪೊಲೀಸ್ ಮುಖ್ಯಸ್ಥ ಎವಿ ಜಾರ್ಜ್ ಅವರಿಗೆ ವಿವರವಾದ ವಿಚಾರಣೆಗಾಗಿ ಕಳುಹಿಸಲಾಗಿದೆ.

PT Usha: ಭಾರತದ ಗೋಲ್ಡನ್ ಗರ್ಲ್ ಪಿಟಿ ಉಷಾ ವಿರುದ್ಧ ವಂಚನೆ ಪ್ರಕರಣ ದಾಖಲಿಸಿದ ಕೇರಳ ಪೊಲೀಸರು
ಪಿಟಿ ಉಷಾ
TV9 Web
| Updated By: ಪೃಥ್ವಿಶಂಕರ|

Updated on: Dec 19, 2021 | 3:30 PM

Share

ಭಾರತದ ಅಥ್ಲೀಟ್, ಚಿನ್ನದ ಪದಕ ವಿಜೇತೆ ಪಿಟಿ ಉಷಾ ವಿರುದ್ಧ ಕೇರಳ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮಾಜಿ ಅಥ್ಲೀಟ್ ಗೆಮ್ಮಾ ಜೋಸೆಫ್ ದೂರಿನ ಮೇರೆಗೆ ಕೋಝಿಕೋಡ್ ಪೊಲೀಸರು ಉಷಾ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಉಷಾ ಸೇರಿ ಆರು ಮಂದಿಯ ವಿರುದ್ಧ ಐಪಿಸಿ ಸೆಕ್ಷನ್ 420ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಮನೆ ನಿರ್ಮಾಣಕ್ಕೆ ಇಂತಿಷ್ಟು ಹಣ ನೀಡಿದ್ದರೂ, ಆದರೆ ಗ್ಯಾರಂಟಿ ಗಡುವಿನೊಳಗೆ ಮನೆ ಪೂರ್ಣಗೊಳಿಸಿಲ್ಲ ಎಂದು ದೂರುದಾರ ಗೆಮ್ಮಾ ದೂರಿದ್ದಾರೆ.

ಜೆಮ್ಮಾ ಜೋಸೆಫ್ ಕೋಝಿಕ್ಕೋಡ್‌ನಲ್ಲಿ ಬಿಲ್ಡರ್‌ನಿಂದ 1,012 ಚದರ ಅಡಿ ಫ್ಲಾಟ್ ಖರೀದಿಸಿದರು. ಜೋಸೆಫ್ ಒಟ್ಟು ರೂ. 46 ಲಕ್ಷ ಪಾವತಿಸಿದ್ದಾರೆ. ಆದರೆ, ಗಡುವು ಮುಗಿದಿದ್ದರು ಬಿಲ್ಡರ್ ಜೋಸೆಫ್​ಗೆ ಫ್ಲಾಟ್ ಹಸ್ತಾಂತರಿಸಿರಲಿಲ್ಲ. ಆದರೆ, ವ್ಯವಹಾರಕ್ಕೆ ಸಂಬಂಧಿಸಿದಂತೆ ಮಧ್ಯಸ್ಥಿಕೆ ಮೂಲಕ ಪೆಟ್ಟಿ ಉಷಾ ಬಿಲ್ಡರ್‌ಗೆ ಆ ಎಲ್ಲ ಹಣವನ್ನು ಪಾವತಿಸಿದ್ದಾರೆ. ಆದರೆ ಫ್ಲಾಟ್ ವಿತರಣೆಯಲ್ಲಿ ವಿಳಂಬ ಮಾಡುತ್ತಿದ್ದಾರೆ ಎಂದು ಜೋಸೆಫ್ ದೂರಿದ್ದಾರೆ. ಉಷಾ ಬಿಲ್ಡರ್ ಜೊತೆ ಸೇರಿ ತನಗೆ ಮೋಸ ಮಾಡಿದ್ದಾರೆ ಎಂದು ಜೋಸೆಫ್ ಆರೋಪಿಸಿದ್ದಾರೆ. ಅವರ ದೂರನ್ನು ಕೋಝಿಕ್ಕೋಡ್ ಪೊಲೀಸ್ ಮುಖ್ಯಸ್ಥ ಎವಿ ಜಾರ್ಜ್ ಅವರಿಗೆ ವಿವರವಾದ ವಿಚಾರಣೆಗಾಗಿ ಕಳುಹಿಸಲಾಗಿದೆ.

ದೂರುದಾರರು ಕೇರಳ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಮೊರೆ ಹೋಗಿದ್ದು, ಸಮಸ್ಯೆ ಬಗೆಹರಿಸಲು ಮುಂದಾಗಿದ್ದರು. ಆದರೆ, ಬಿಲ್ಡರ್ ಆಗಲಿ, ಪಿಟಿ ಉಷಾ ಆಗಲಿ ಹಣ ಮರುಪಾವತಿ ಮಾಡಲು ಒಪ್ಪಲಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ. ಹೀಗಾಗಿ, ಉಷಾ ಮತ್ತು ಇತರ ಆರು ಮಂದಿ ವಿರುದ್ಧ ಐಪಿಸಿ 420 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಶೀಘ್ರದಲ್ಲೇ ತನಿಖೆ ಆರಂಭವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಿಲ್ಡರ್​ಗಳ ಮೇಲೆ ನಿಗಾ ಇಡುವ ಕೇರಳ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ