AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs England: ಇಂಗ್ಲೆಂಡ್ ಬಿ ತಂಡವನ್ನು ಸೋಲಿಸಿದ ಟೀಂ ಇಂಡಿಯಾಗೆ ಶುಭಾಶಯಗಳು: ಭಾರತದ ಗೆಲುವು ಲೇವಡಿ ಮಾಡಿದ ಕೆವಿನ್ ಪೀಟರ್ಸನ್

India vs England: ಚೆನ್ನೈನಲ್ಲಿ ನಡೆದ 2 ನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಬಿ ತಂಡವನ್ನು ಆರಾಮವಾಗಿ ಸೋಲಿಸಿದ ಟೀಂ ಇಂಡಿಯಾಗೆ ಶುಭಾಶಯಗಳು ಎಂದು ಪೀಟರ್ಸನ್ ಟ್ವಿಟ್ಟರ್​ನಲ್ಲಿ ಬರೆದುಕೊಂಡಿದ್ದಾರೆ.

India vs England: ಇಂಗ್ಲೆಂಡ್ ಬಿ ತಂಡವನ್ನು ಸೋಲಿಸಿದ ಟೀಂ ಇಂಡಿಯಾಗೆ ಶುಭಾಶಯಗಳು: ಭಾರತದ ಗೆಲುವು ಲೇವಡಿ ಮಾಡಿದ ಕೆವಿನ್ ಪೀಟರ್ಸನ್
ಕೆವಿನ್ ಪೀಟರ್ಸನ್
ಪೃಥ್ವಿಶಂಕರ
| Edited By: |

Updated on:Feb 17, 2021 | 1:40 PM

Share

ಚೆನ್ನೈ: ಟೀಮ್ ಇಂಡಿಯಾದ ಸ್ಮರಣೀಯ ಗೆಲುವನ್ನು ಸಾಮಾಜಿಕ ಜಾಲತಾಣದಲ್ಲಿ ಶ್ಲಾಘಿಸಿರುವ ಇಂಗ್ಲೆಂಡ್ ತಂಡದ ಮಾಜಿ ನಾಯಕ ಕೆವಿನ್ ಪೀಟರ್ಸನ್ ಹಿಂದಿಯಲ್ಲಿ ಟ್ವೀಟ್ ಮಾಡುವ ಮೂಲಕ ಭಾರತವನ್ನು ಅಭಿನಂದಿಸಿದ್ದಾರೆ. ಚೆನ್ನೈನಲ್ಲಿ ನಡೆದ 2ನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಬಿ ತಂಡವನ್ನು ಆರಾಮವಾಗಿ ಸೋಲಿಸಿದ ಟೀಂ ಇಂಡಿಯಾಗೆ ಶುಭಾಶಯಗಳು ಎಂದು ಪೀಟರ್ಸನ್ ಟ್ವಿಟ್ಟರ್​ನಲ್ಲಿ ಬರೆದುಕೊಂಡಿದ್ದಾರೆ. ಟೀಂ ಇಂಡಿಯಾದ ಗೆಲುವನ್ನು ಲೇವಡಿ ಮಾಡುವ ಮೂಲಕ ಮತ್ತೊಮ್ಮೆ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಾಗಿದ್ದಾರೆ.

ಎಂ.ಎ.ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನ ಟೀಂ ಇಂಡಿಯಾ 317 ರನ್‌ಗಳ ಭಾರಿ ಅಂತರದಿಂದ ಇಂಗ್ಲೆಂಡ್‌ ತಂಡವನ್ನು ಮಣಿಸಿತು. ಈ ಗೆಲುವು ಆತಿಥೇಯರಿಗೆ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯನ್ನು 1-1ರಿಂದ ಸಮಗೊಳಿಸುವ ಅವಕಾಶವನ್ನು ನೀಡಿತು.

ಮಾಜಿ ಕ್ರಿಕೆಟಿಗರು ಪೀಟರ್ಸನ್ ಟ್ವೀಟ್​ಗೆ ವ್ಯಂಗ್ಯವಾಗಿ ಉತ್ತರಿಸಿದ್ದಾರೆ.. ಹೀಗಾಗಿ ಟೀಂ ಇಂಡಿಯಾದ ಗೆಲುವನ್ನ ಅರಗಿಸಿಕೊಳ್ಳಲಾಗದ ಕೆವಿನ್ ಪೀಟರ್ಸನ್ ಈ ರೀತಿಯಾಗಿ ಟ್ವೀಟ್​ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕೆವಿನ್ ಪೀಟರ್ಸನ್ ಟ್ವೀಟ್​ಗೆ ಭಾರಿ ವಿರೋಧ ವ್ಯಕ್ತಪಡಿಸಲಾಗಿದೆ. ಅಲ್ಲದೆ ಮಾಜಿ ಕ್ರಿಕೆಟಿಗರು ಸಹ ಪೀಟರ್ಸನ್ ಟ್ವೀಟ್​ಗೆ ವ್ಯಂಗ್ಯವಾಗಿ ಉತ್ತರಿಸಿದ್ದಾರೆ.

ಇಂಗ್ಲೆಂಡ್​ನ 2ನೇ ಇನ್ನಿಂಗ್ಸ್ ಆರಂಭದಿಂದಲೂ ಆರ್ಭಟ ತೋರಿದ ಟೀಂ ಇಂಡಿಯಾ ವೇಗಿಗಳು ಇಂಗ್ಲೆಂಡ್ ತಂಡವನ್ನು ಕಡಿಮೆ ರನ್​ಗಳಿಗೆ ಆಲೌಟ್​ ಮಾಡುವದರಲ್ಲಿ ಯಶಸ್ವಿಯಾದರು. ಟೀಂ ಇಂಡಿಯಾ ಪರ ಬ್ಯಾಟಿಂಗ್​ನಲ್ಲಿ ಶತಕ ಸಿಡಿಸಿ ಮಿಂಚಿದ ಅಶ್ವಿನ್​, ಬೌಲಿಂಗ್​ನಲ್ಲೂ ಕಮಾಲ್​ ಮಾಡಿದರು. 2ನೇ ಇನ್ನಿಂಗ್ಸ್​ನಲ್ಲಿ 106 ರನ್ ಸಿಡಿಸಿದ ಅಶ್ವಿನ್​ 3 ವಿಕೆಟ್​ ಪಡೆದು ಮಿಂಚಿದರು. ಹಾಗೆಯೇ ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಂಡ ಅಕ್ಷರ್​ ಪಟೇಲ್​ 5 ವಿಕೆಟ್​ ಪಡೆದು ಮಿಂಚಿದರು.

ಫೆಬ್ರವರಿ 24 ರಿಂದ ಪ್ರಾರಂಭವಾಗಲಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಉಭಯ ತಂಡಗಳು ಮತ್ತೊಮ್ಮೆ ಪರಸ್ಪರ ಮುಖಾಮುಖಿಯಾಗಲಿವೆ. ಇಂಗ್ಲೆಂಡ್‌ ತಂಡ ಗೆಲುವಿನ ಹಾದಿಗೆ ಮರಳುವ ಗುರಿಯನ್ನು ಹೊಂದಿದ್ದರೆ, ಆತಿಥೇಯರು ಸರಣಿಯಲ್ಲಿ ಮುನ್ನಡೆ ಸಾಧಿಸುವ ಆಶಯ ಹೊಂದಿದ್ದಾರೆ.

Published On - 1:39 pm, Wed, 17 February 21

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ