AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Khel Ratna Award: ರಾಜೀವ್​ ಗಾಂಧಿ ಖೇಲ್​ ರತ್ನ ಪ್ರಶಸ್ತಿಗೆ ಹಾಕಿ ಮಾಂತ್ರಿಕ ಧ್ಯಾನ್​ ಚಂದ್​ ಹೆಸರಿಟ್ಟ ಪ್ರಧಾನಿ ಮೋದಿ; ಟ್ವಿಟರ್​​ನಲ್ಲಿ ಘೋಷಣೆ

Major Dhyan Chand Khel Ratna Award: ಕ್ರೀಡಾಕ್ಷೇತ್ರದ ಸಾಧಕರಿಗೆ ನೀಡುವ ಈ ಖೇಲ್​ ರತ್ನ ಪ್ರಶಸ್ತಿಗೆ ಭಾರತದ ಹಾಕಿ ಮಾಂತ್ರಿಕ ಧ್ಯಾನ್​ ಚಂದ್​ ನಾಮಕರಣ ಮಾಡುವಂತೆ ಅನೇಕರು ಪ್ರಧಾನಿ ಮೋದಿಗೆ ಮನವಿ ಮಾಡಿದ್ದರು. ಹಾಗಾಗಿ ಇಷ್ಟು ದಿನ ರಾಜೀವ್ ಗಾಂಧಿ ಹೆಸರಿನಲ್ಲಿದ್ದ ಪ್ರಶಸ್ತಿಗೆ ಧ್ಯಾನ್​ ಚಂದ್​ ಹೆಸರಿಡಲಾಗಿದೆ.

Khel Ratna Award: ರಾಜೀವ್​ ಗಾಂಧಿ ಖೇಲ್​ ರತ್ನ ಪ್ರಶಸ್ತಿಗೆ ಹಾಕಿ ಮಾಂತ್ರಿಕ ಧ್ಯಾನ್​ ಚಂದ್​ ಹೆಸರಿಟ್ಟ ಪ್ರಧಾನಿ ಮೋದಿ; ಟ್ವಿಟರ್​​ನಲ್ಲಿ ಘೋಷಣೆ
ಹಾಕಿ ಮಾಂತ್ರಿಕ ಧ್ಯಾನ್​ ಚಂದ್​
TV9 Web
| Edited By: |

Updated on:Aug 06, 2021 | 1:03 PM

Share

ರಾಜೀವ್​ ಗಾಂಧಿ ಖೇಲ್​ ರತ್ನ ಪ್ರಶಸ್ತಿ (Rajeev Gandhi Khel Ratna Award) ಇನ್ನು ಮುಂದೆ ಮೇಜರ್​ ಧ್ಯಾನ್ ಚಂದ್​ ಖೇಲ್​ರತ್ನ ಪ್ರಶಸ್ತಿ (Dhyan Chand Khel Ratna Award) ಯಾಗಿ ಕೊಡಲ್ಪಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಘೋಷಿಸಿದರು. ಟ್ವೀಟ್ ಮಾಡಿರುವ ಅವರು, ಖೇಲ್ ರತ್ನ ಪ್ರಶಸ್ತಿಗೆ, ಭಾರತೀಯ ಹಾಕಿ ದಿಗ್ಗಜ ಮೇಜರ್​ ಧ್ಯಾನ್​ ಚಂದ್ (Dhyan Chand) ಹೆಸರಿಡುವಂತೆ ಅನೇಕ ನಾಗರಿಕರಿಂದ ನನಗೆ ಮನವಿ ಬಂದಿತ್ತು. ಆ ಕೋರಿಕೆಗಳನ್ನು ಪುರಸ್ಕರಿಸಲಾಗುವುದು. ಖೇಲ್​ ರತ್ನ ಪ್ರಶಸ್ತಿಗೆ ಧ್ಯಾನ್ ಚಂದ್​ ಹೆಸರಿಡಲಾಗುವುದು. ಇನ್ನು ಮುಂದೆ ಮೇಜರ್​ ಧ್ಯಾನ್​ ಚಂದ್​ ಖೇಲ್​ ರತ್ನ ಎಂಬ ಹೆಸರಲ್ಲಿ ಈ ಪ್ರಶಸ್ತಿ ನೀಡಲಾಗುತ್ತದೆ. ಹಾಗೇ ಇಂಥದ್ದೊಂದು ವಿಚಾರವನ್ನು ಹಂಚಿಕೊಂಡ ಪ್ರತಿಯೊಬ್ಬರಿಗೂ ಧನ್ಯವಾದ ಎಂದು ಹೇಳಿದ್ದಾರೆ. 

ರಾಜೀವ್​ ಗಾಂಧಿ ಖೇಲ್​ರತ್ನ ಪ್ರಶಸ್ತಿ ಕ್ರೀಡಾಕ್ಷೇತ್ರದ ಅತ್ಯುನ್ನತ ಗೌರವವಾಗಿದೆ. ಇಲ್ಲಿ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿ ನೀಡಿ ಪುರಸ್ಕರಿಸಲಾಗುತ್ತದೆ. ಹಾಕಿ ದಿಗ್ಗಜ ಸರ್ದಾರ್​ ಸಿಂಗ್​, ಟೆನ್ನಿಸ್​ ಆಟಗಾರ್ತಿ ಸಾನಿಯಾ ಮಿರ್ಜಾ, ಕ್ರಿಕೆಟರ್ಸ್​ಗಳಾದ ಮಹೇಂದ್ರ ಸಿಂಗ್​ ಧೋನಿ, ಸಚಿನ್​ ತೆಂಡೂಲ್ಕರ್​, ವಿರಾಟ್ ಕೊಹ್ಲಿ ಮತ್ತಿತರರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇಷ್ಟು ದಿನಗಳಿಂದ ಇದು ರಾಜೀವ್​ ಗಾಂಧಿ ಖೇಲ್​ ರತ್ನ ಪ್ರಶಸ್ತಿ ಎಂದು ಕೊಡಲ್ಪಡುತ್ತಿತ್ತು. ಆದರೀಗ ರಾಜೀವ್​ ಗಾಂಧಿ ಹೆಸರನ್ನು ತೆಗೆದು, ಹಾಕಿ ದಿಗ್ಗಜ ಧ್ಯಾನ್​ ಚಂದ್​ ನಾಮಕರಣ ಮಾಡಲಾಗಿದೆ.

ಧ್ಯಾನ್​ಚಂದ್​ ಅವರು ಭಾರತದ ಅಗ್ರಗಣ್ಯ ಕ್ರೀಡಾಪಟುಗಳಲ್ಲಿಒಬ್ಬರು. ಅವರು ಭಾರತಕ್ಕೆ ಗೌರವ, ಹೆಮ್ಮೆಯನ್ನು ತಂದಿದ್ದಾರೆ. ನಮ್ಮ ರಾಷ್ಟ್ರದ ಕ್ರೀಡಾಕ್ಷೇತ್ರದ ಅತ್ಯುನ್ನತ ಪ್ರಶಸ್ತಿಯಾದ ಖೇಲ್​ ರತ್ನಕ್ಕೆ ಅವರ ಹೆಸರನ್ನಿಡುವುದು ತುಂಬ ಸರಿಯಾದ ಕೆಲಸ. ಹೀಗೊಂದು ದೃಷ್ಟಿಕೋನವನ್ನು ನನಗೆ ತಿಳಿಸಿದವರಿಗೆ ಕೃತಜ್ಞತೆಗಳು ಎಂದು ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

 

ಇದನ್ನೂ ಓದಿ: ಬೆಂಗಳೂರು ಗ್ರಾಮಾಂತರ ಎಸ್ಪಿ ಕೋನವಂಶಿ ಕೃಷ್ಣಗೆ ನೂತನ ಸಚಿವ ಎಂಟಿಬಿ ನಾಗರಾಜ್ ಫುಲ್​ ಕ್ಲಾಸ್

ಕೊರೊನಾ ನಿಯಂತ್ರಣಕ್ಕೆ ಮತ್ತೆ ಕಠಿಣ ನಿಯಮಾವಳಿ; ತಾಂತ್ರಿಕ ಸಲಹಾ ಸಮಿತಿಯಿಂದ ಶಿಫಾರಸು

Published On - 12:47 pm, Fri, 6 August 21

ಡಿ ಕ್ಲರ್ಕ್ ಆಟಕ್ಕೆ ಸಲಾಂ ಹೊಡೆದ ಕ್ರಿಕೆಟ್ ಜಗತ್ತು; ವಿಡಿಯೋ
ಡಿ ಕ್ಲರ್ಕ್ ಆಟಕ್ಕೆ ಸಲಾಂ ಹೊಡೆದ ಕ್ರಿಕೆಟ್ ಜಗತ್ತು; ವಿಡಿಯೋ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ