AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Khel Ratna Award: ರಾಜೀವ್​ ಗಾಂಧಿ ಖೇಲ್​ ರತ್ನ ಪ್ರಶಸ್ತಿಗೆ ಹಾಕಿ ಮಾಂತ್ರಿಕ ಧ್ಯಾನ್​ ಚಂದ್​ ಹೆಸರಿಟ್ಟ ಪ್ರಧಾನಿ ಮೋದಿ; ಟ್ವಿಟರ್​​ನಲ್ಲಿ ಘೋಷಣೆ

Major Dhyan Chand Khel Ratna Award: ಕ್ರೀಡಾಕ್ಷೇತ್ರದ ಸಾಧಕರಿಗೆ ನೀಡುವ ಈ ಖೇಲ್​ ರತ್ನ ಪ್ರಶಸ್ತಿಗೆ ಭಾರತದ ಹಾಕಿ ಮಾಂತ್ರಿಕ ಧ್ಯಾನ್​ ಚಂದ್​ ನಾಮಕರಣ ಮಾಡುವಂತೆ ಅನೇಕರು ಪ್ರಧಾನಿ ಮೋದಿಗೆ ಮನವಿ ಮಾಡಿದ್ದರು. ಹಾಗಾಗಿ ಇಷ್ಟು ದಿನ ರಾಜೀವ್ ಗಾಂಧಿ ಹೆಸರಿನಲ್ಲಿದ್ದ ಪ್ರಶಸ್ತಿಗೆ ಧ್ಯಾನ್​ ಚಂದ್​ ಹೆಸರಿಡಲಾಗಿದೆ.

Khel Ratna Award: ರಾಜೀವ್​ ಗಾಂಧಿ ಖೇಲ್​ ರತ್ನ ಪ್ರಶಸ್ತಿಗೆ ಹಾಕಿ ಮಾಂತ್ರಿಕ ಧ್ಯಾನ್​ ಚಂದ್​ ಹೆಸರಿಟ್ಟ ಪ್ರಧಾನಿ ಮೋದಿ; ಟ್ವಿಟರ್​​ನಲ್ಲಿ ಘೋಷಣೆ
ಹಾಕಿ ಮಾಂತ್ರಿಕ ಧ್ಯಾನ್​ ಚಂದ್​
TV9 Web
| Edited By: |

Updated on:Aug 06, 2021 | 1:03 PM

Share

ರಾಜೀವ್​ ಗಾಂಧಿ ಖೇಲ್​ ರತ್ನ ಪ್ರಶಸ್ತಿ (Rajeev Gandhi Khel Ratna Award) ಇನ್ನು ಮುಂದೆ ಮೇಜರ್​ ಧ್ಯಾನ್ ಚಂದ್​ ಖೇಲ್​ರತ್ನ ಪ್ರಶಸ್ತಿ (Dhyan Chand Khel Ratna Award) ಯಾಗಿ ಕೊಡಲ್ಪಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಘೋಷಿಸಿದರು. ಟ್ವೀಟ್ ಮಾಡಿರುವ ಅವರು, ಖೇಲ್ ರತ್ನ ಪ್ರಶಸ್ತಿಗೆ, ಭಾರತೀಯ ಹಾಕಿ ದಿಗ್ಗಜ ಮೇಜರ್​ ಧ್ಯಾನ್​ ಚಂದ್ (Dhyan Chand) ಹೆಸರಿಡುವಂತೆ ಅನೇಕ ನಾಗರಿಕರಿಂದ ನನಗೆ ಮನವಿ ಬಂದಿತ್ತು. ಆ ಕೋರಿಕೆಗಳನ್ನು ಪುರಸ್ಕರಿಸಲಾಗುವುದು. ಖೇಲ್​ ರತ್ನ ಪ್ರಶಸ್ತಿಗೆ ಧ್ಯಾನ್ ಚಂದ್​ ಹೆಸರಿಡಲಾಗುವುದು. ಇನ್ನು ಮುಂದೆ ಮೇಜರ್​ ಧ್ಯಾನ್​ ಚಂದ್​ ಖೇಲ್​ ರತ್ನ ಎಂಬ ಹೆಸರಲ್ಲಿ ಈ ಪ್ರಶಸ್ತಿ ನೀಡಲಾಗುತ್ತದೆ. ಹಾಗೇ ಇಂಥದ್ದೊಂದು ವಿಚಾರವನ್ನು ಹಂಚಿಕೊಂಡ ಪ್ರತಿಯೊಬ್ಬರಿಗೂ ಧನ್ಯವಾದ ಎಂದು ಹೇಳಿದ್ದಾರೆ. 

ರಾಜೀವ್​ ಗಾಂಧಿ ಖೇಲ್​ರತ್ನ ಪ್ರಶಸ್ತಿ ಕ್ರೀಡಾಕ್ಷೇತ್ರದ ಅತ್ಯುನ್ನತ ಗೌರವವಾಗಿದೆ. ಇಲ್ಲಿ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿ ನೀಡಿ ಪುರಸ್ಕರಿಸಲಾಗುತ್ತದೆ. ಹಾಕಿ ದಿಗ್ಗಜ ಸರ್ದಾರ್​ ಸಿಂಗ್​, ಟೆನ್ನಿಸ್​ ಆಟಗಾರ್ತಿ ಸಾನಿಯಾ ಮಿರ್ಜಾ, ಕ್ರಿಕೆಟರ್ಸ್​ಗಳಾದ ಮಹೇಂದ್ರ ಸಿಂಗ್​ ಧೋನಿ, ಸಚಿನ್​ ತೆಂಡೂಲ್ಕರ್​, ವಿರಾಟ್ ಕೊಹ್ಲಿ ಮತ್ತಿತರರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇಷ್ಟು ದಿನಗಳಿಂದ ಇದು ರಾಜೀವ್​ ಗಾಂಧಿ ಖೇಲ್​ ರತ್ನ ಪ್ರಶಸ್ತಿ ಎಂದು ಕೊಡಲ್ಪಡುತ್ತಿತ್ತು. ಆದರೀಗ ರಾಜೀವ್​ ಗಾಂಧಿ ಹೆಸರನ್ನು ತೆಗೆದು, ಹಾಕಿ ದಿಗ್ಗಜ ಧ್ಯಾನ್​ ಚಂದ್​ ನಾಮಕರಣ ಮಾಡಲಾಗಿದೆ.

ಧ್ಯಾನ್​ಚಂದ್​ ಅವರು ಭಾರತದ ಅಗ್ರಗಣ್ಯ ಕ್ರೀಡಾಪಟುಗಳಲ್ಲಿಒಬ್ಬರು. ಅವರು ಭಾರತಕ್ಕೆ ಗೌರವ, ಹೆಮ್ಮೆಯನ್ನು ತಂದಿದ್ದಾರೆ. ನಮ್ಮ ರಾಷ್ಟ್ರದ ಕ್ರೀಡಾಕ್ಷೇತ್ರದ ಅತ್ಯುನ್ನತ ಪ್ರಶಸ್ತಿಯಾದ ಖೇಲ್​ ರತ್ನಕ್ಕೆ ಅವರ ಹೆಸರನ್ನಿಡುವುದು ತುಂಬ ಸರಿಯಾದ ಕೆಲಸ. ಹೀಗೊಂದು ದೃಷ್ಟಿಕೋನವನ್ನು ನನಗೆ ತಿಳಿಸಿದವರಿಗೆ ಕೃತಜ್ಞತೆಗಳು ಎಂದು ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

 

ಇದನ್ನೂ ಓದಿ: ಬೆಂಗಳೂರು ಗ್ರಾಮಾಂತರ ಎಸ್ಪಿ ಕೋನವಂಶಿ ಕೃಷ್ಣಗೆ ನೂತನ ಸಚಿವ ಎಂಟಿಬಿ ನಾಗರಾಜ್ ಫುಲ್​ ಕ್ಲಾಸ್

ಕೊರೊನಾ ನಿಯಂತ್ರಣಕ್ಕೆ ಮತ್ತೆ ಕಠಿಣ ನಿಯಮಾವಳಿ; ತಾಂತ್ರಿಕ ಸಲಹಾ ಸಮಿತಿಯಿಂದ ಶಿಫಾರಸು

Published On - 12:47 pm, Fri, 6 August 21

Follow Us
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?