AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Khel Ratna Award: ರಾಜೀವ್​ ಗಾಂಧಿ ಖೇಲ್​ ರತ್ನ ಪ್ರಶಸ್ತಿಗೆ ಹಾಕಿ ಮಾಂತ್ರಿಕ ಧ್ಯಾನ್​ ಚಂದ್​ ಹೆಸರಿಟ್ಟ ಪ್ರಧಾನಿ ಮೋದಿ; ಟ್ವಿಟರ್​​ನಲ್ಲಿ ಘೋಷಣೆ

Major Dhyan Chand Khel Ratna Award: ಕ್ರೀಡಾಕ್ಷೇತ್ರದ ಸಾಧಕರಿಗೆ ನೀಡುವ ಈ ಖೇಲ್​ ರತ್ನ ಪ್ರಶಸ್ತಿಗೆ ಭಾರತದ ಹಾಕಿ ಮಾಂತ್ರಿಕ ಧ್ಯಾನ್​ ಚಂದ್​ ನಾಮಕರಣ ಮಾಡುವಂತೆ ಅನೇಕರು ಪ್ರಧಾನಿ ಮೋದಿಗೆ ಮನವಿ ಮಾಡಿದ್ದರು. ಹಾಗಾಗಿ ಇಷ್ಟು ದಿನ ರಾಜೀವ್ ಗಾಂಧಿ ಹೆಸರಿನಲ್ಲಿದ್ದ ಪ್ರಶಸ್ತಿಗೆ ಧ್ಯಾನ್​ ಚಂದ್​ ಹೆಸರಿಡಲಾಗಿದೆ.

Khel Ratna Award: ರಾಜೀವ್​ ಗಾಂಧಿ ಖೇಲ್​ ರತ್ನ ಪ್ರಶಸ್ತಿಗೆ ಹಾಕಿ ಮಾಂತ್ರಿಕ ಧ್ಯಾನ್​ ಚಂದ್​ ಹೆಸರಿಟ್ಟ ಪ್ರಧಾನಿ ಮೋದಿ; ಟ್ವಿಟರ್​​ನಲ್ಲಿ ಘೋಷಣೆ
ಹಾಕಿ ಮಾಂತ್ರಿಕ ಧ್ಯಾನ್​ ಚಂದ್​
TV9 Web
| Updated By: Lakshmi Hegde|

Updated on:Aug 06, 2021 | 1:03 PM

Share

ರಾಜೀವ್​ ಗಾಂಧಿ ಖೇಲ್​ ರತ್ನ ಪ್ರಶಸ್ತಿ (Rajeev Gandhi Khel Ratna Award) ಇನ್ನು ಮುಂದೆ ಮೇಜರ್​ ಧ್ಯಾನ್ ಚಂದ್​ ಖೇಲ್​ರತ್ನ ಪ್ರಶಸ್ತಿ (Dhyan Chand Khel Ratna Award) ಯಾಗಿ ಕೊಡಲ್ಪಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಘೋಷಿಸಿದರು. ಟ್ವೀಟ್ ಮಾಡಿರುವ ಅವರು, ಖೇಲ್ ರತ್ನ ಪ್ರಶಸ್ತಿಗೆ, ಭಾರತೀಯ ಹಾಕಿ ದಿಗ್ಗಜ ಮೇಜರ್​ ಧ್ಯಾನ್​ ಚಂದ್ (Dhyan Chand) ಹೆಸರಿಡುವಂತೆ ಅನೇಕ ನಾಗರಿಕರಿಂದ ನನಗೆ ಮನವಿ ಬಂದಿತ್ತು. ಆ ಕೋರಿಕೆಗಳನ್ನು ಪುರಸ್ಕರಿಸಲಾಗುವುದು. ಖೇಲ್​ ರತ್ನ ಪ್ರಶಸ್ತಿಗೆ ಧ್ಯಾನ್ ಚಂದ್​ ಹೆಸರಿಡಲಾಗುವುದು. ಇನ್ನು ಮುಂದೆ ಮೇಜರ್​ ಧ್ಯಾನ್​ ಚಂದ್​ ಖೇಲ್​ ರತ್ನ ಎಂಬ ಹೆಸರಲ್ಲಿ ಈ ಪ್ರಶಸ್ತಿ ನೀಡಲಾಗುತ್ತದೆ. ಹಾಗೇ ಇಂಥದ್ದೊಂದು ವಿಚಾರವನ್ನು ಹಂಚಿಕೊಂಡ ಪ್ರತಿಯೊಬ್ಬರಿಗೂ ಧನ್ಯವಾದ ಎಂದು ಹೇಳಿದ್ದಾರೆ. 

ರಾಜೀವ್​ ಗಾಂಧಿ ಖೇಲ್​ರತ್ನ ಪ್ರಶಸ್ತಿ ಕ್ರೀಡಾಕ್ಷೇತ್ರದ ಅತ್ಯುನ್ನತ ಗೌರವವಾಗಿದೆ. ಇಲ್ಲಿ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿ ನೀಡಿ ಪುರಸ್ಕರಿಸಲಾಗುತ್ತದೆ. ಹಾಕಿ ದಿಗ್ಗಜ ಸರ್ದಾರ್​ ಸಿಂಗ್​, ಟೆನ್ನಿಸ್​ ಆಟಗಾರ್ತಿ ಸಾನಿಯಾ ಮಿರ್ಜಾ, ಕ್ರಿಕೆಟರ್ಸ್​ಗಳಾದ ಮಹೇಂದ್ರ ಸಿಂಗ್​ ಧೋನಿ, ಸಚಿನ್​ ತೆಂಡೂಲ್ಕರ್​, ವಿರಾಟ್ ಕೊಹ್ಲಿ ಮತ್ತಿತರರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇಷ್ಟು ದಿನಗಳಿಂದ ಇದು ರಾಜೀವ್​ ಗಾಂಧಿ ಖೇಲ್​ ರತ್ನ ಪ್ರಶಸ್ತಿ ಎಂದು ಕೊಡಲ್ಪಡುತ್ತಿತ್ತು. ಆದರೀಗ ರಾಜೀವ್​ ಗಾಂಧಿ ಹೆಸರನ್ನು ತೆಗೆದು, ಹಾಕಿ ದಿಗ್ಗಜ ಧ್ಯಾನ್​ ಚಂದ್​ ನಾಮಕರಣ ಮಾಡಲಾಗಿದೆ.

ಧ್ಯಾನ್​ಚಂದ್​ ಅವರು ಭಾರತದ ಅಗ್ರಗಣ್ಯ ಕ್ರೀಡಾಪಟುಗಳಲ್ಲಿಒಬ್ಬರು. ಅವರು ಭಾರತಕ್ಕೆ ಗೌರವ, ಹೆಮ್ಮೆಯನ್ನು ತಂದಿದ್ದಾರೆ. ನಮ್ಮ ರಾಷ್ಟ್ರದ ಕ್ರೀಡಾಕ್ಷೇತ್ರದ ಅತ್ಯುನ್ನತ ಪ್ರಶಸ್ತಿಯಾದ ಖೇಲ್​ ರತ್ನಕ್ಕೆ ಅವರ ಹೆಸರನ್ನಿಡುವುದು ತುಂಬ ಸರಿಯಾದ ಕೆಲಸ. ಹೀಗೊಂದು ದೃಷ್ಟಿಕೋನವನ್ನು ನನಗೆ ತಿಳಿಸಿದವರಿಗೆ ಕೃತಜ್ಞತೆಗಳು ಎಂದು ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

 

ಇದನ್ನೂ ಓದಿ: ಬೆಂಗಳೂರು ಗ್ರಾಮಾಂತರ ಎಸ್ಪಿ ಕೋನವಂಶಿ ಕೃಷ್ಣಗೆ ನೂತನ ಸಚಿವ ಎಂಟಿಬಿ ನಾಗರಾಜ್ ಫುಲ್​ ಕ್ಲಾಸ್

ಕೊರೊನಾ ನಿಯಂತ್ರಣಕ್ಕೆ ಮತ್ತೆ ಕಠಿಣ ನಿಯಮಾವಳಿ; ತಾಂತ್ರಿಕ ಸಲಹಾ ಸಮಿತಿಯಿಂದ ಶಿಫಾರಸು

Published On - 12:47 pm, Fri, 6 August 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ